Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನತಾದರ್ಶನ ವೇಳೆ ಸಿಎಂ ಬೊಮ್ಮಾಯಿ ಎದುರೇ ನೊಂದವರನ್ನು ಎಳೆದು ಹೊರಗೆ ಹಾಕಲು ಮುಂದಾದ ಪೊಲೀಸರು!

CM Basavaraj Bommai: ಬೆಳಗ್ಗೆಯಿಂದ ಮಳೆಯಲ್ಲೇ ಸಿಎಂ ನಿವಾಸದ ಎದುರು ಅಭ್ಯರ್ಥಿಗಳು ನಿಂತಿದ್ದರು. ಆದರೆ ತುರ್ತಾಗಿ ಹೋಗಬೇಕಿದ್ದರಿಂದ ಸರಿಯಾಗಿ ಸಮಸ್ಯೆ ಕೇಳಲು ಆಗದೆ ಸಿಎಂ ಬೊಮ್ಮಾಯಿ ಮನೆಯಿಂದ ಹೊರಟಿದ್ದಾರೆ. ಇದೇ ವೇಳೆ ಪೊಲೀಸರು ಅಭ್ಯರ್ಥಿಗಳಿಗೆ ತಮ್ಮ ಸಮಸ್ಯೆ ಹೇಳಿಕೊಳ್ಳಲು ಬಿಡದೇ ಅಡ್ಡಿಪಡಿಸಿದ್ದಾರೆ. ಅಕ್ಷರಶ: ಸಿಎಂ ಬೊಮ್ಮಾಯಿ ಎದುರೇ ನೊಂದ ಅಭ್ಯರ್ಥಿಗಳನ್ನು ಪೊಲೀಸರು ಎಳೆದು ಹೊರಗೆ ಹಾಕಲು ಮುಂದಾಗಿದ್ದಾರೆ.

ಜನತಾದರ್ಶನ ವೇಳೆ ಸಿಎಂ ಬೊಮ್ಮಾಯಿ ಎದುರೇ ನೊಂದವರನ್ನು ಎಳೆದು ಹೊರಗೆ ಹಾಕಲು ಮುಂದಾದ ಪೊಲೀಸರು!
ಸಿಎಂ ಬಸವರಾಜ ಬೊಮ್ಮಾಯಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Nov 18, 2021 | 11:05 AM

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿವಾಸದ ಎದುರು ಇಂದು ಜನತಾದರ್ಶನ ನಡೆದಿತ್ತು. ಆದರೆ ನೊಂದವರು ತಮ್ಮ ಸಮಸ್ಯೆ ಹೇಳಿಕೊಳ್ಳಲು ಮುಂದಾದಾಗ ಪೊಲೀಸರಿಂದ ಅಡ್ಡಿಯಾಗಿದೆ. ಇನ್ನು ಸಿಎಂ ಬೊಮ್ಮಾಯಿ ಅವರು ಪ್ರವಾಸಕ್ಕೆ ತುರ್ತಾಗಿ ಹೋಗಬೇಕಿದ್ದರಿಂದ ಸರಿಯಾಗಿ ಸಮಸ್ಯೆ ಕೇಳದ ಮನೆಯಿಂದ ಹೊರಟಿದ್ದಾರೆ. ವಸತಿ ಶಾಲಾ ಶಿಕ್ಷಕರ ನೇಮಕಾತಿ ವಿಳಂಬ ಸಮಸ್ಯೆ ಹೇಳಿಕೊಳ್ಳಲು ಅಭ್ಯರ್ಥಿಗಳು ಇಂದು ಸಿಎಂ ಬೊಮ್ಮಾಯಿ ನಿವಾಸದ ಎದುರು ಜನತಾದರ್ಶನಕ್ಕೆ ಬಂದಿದ್ದರು. ಮೊರಾರ್ಜಿ ವಸತಿ ಶಾಲಾ ಶಿಕ್ಷಕರ ಹುದ್ದೆಗೆ ಹೆಚ್ಚುವರಿ ನೇಮಕಾತಿ ಲಿಸ್ಟ್ ಪ್ರಕಟ ವಿಳಂಬವಾಗುತ್ತಿರುವ ಬಗ್ಗೆ ನೊಂದ ಅಭ್ಯರ್ಥಿಗಳು ಸಿಎಂ ಬಳಿ ಸಮಸ್ಯೆ ಹೇಳಿಕೊಳ್ಳಲು ಬಂದಿದ್ದರು.

ಬೆಳಗ್ಗೆಯಿಂದ ಮಳೆಯಲ್ಲೇ ಸಿಎಂ ನಿವಾಸದ ಎದುರು ಅಭ್ಯರ್ಥಿಗಳು ನಿಂತಿದ್ದರು. ಆದರೆ ತುರ್ತಾಗಿ ಹೋಗಬೇಕಿದ್ದರಿಂದ ಸರಿಯಾಗಿ ಸಮಸ್ಯೆ ಕೇಳಲು ಆಗದೆ ಸಿಎಂ ಬೊಮ್ಮಾಯಿ ಮನೆಯಿಂದ ಹೊರಟಿದ್ದಾರೆ. ಇದೇ ವೇಳೆ ಪೊಲೀಸರು ಅಭ್ಯರ್ಥಿಗಳಿಗೆ ತಮ್ಮ ಸಮಸ್ಯೆ ಹೇಳಿಕೊಳ್ಳಲು ಬಿಡದೇ ಅಡ್ಡಿಪಡಿಸಿದ್ದಾರೆ. ಅಕ್ಷರಶ: ಸಿಎಂ ಬೊಮ್ಮಾಯಿ ಎದುರೇ ನೊಂದ ಅಭ್ಯರ್ಥಿಗಳನ್ನು ಪೊಲೀಸರು ಎಳೆದು ಹೊರಗೆ ಹಾಕಲು ಮುಂದಾಗಿದ್ದಾರೆ. ಆಗ ಅಭ್ಯರ್ಥಿಗಳು ಜೋರಾಗಿ ಕೂಗಾಡಿ, ತಮ್ಮ ನೋವು ತೋಡಿಕೊಂಡಿದ್ದಾರೆ. ಕೊನೆಗೆ ಕಾರು ಹತ್ತಿದ್ದ ಸಿಎಂ ಬೊಮ್ಮಾಯಿ, ಕಾರಿನಿಂದ ಇಳಿದು ಬಂದು, ಸಮಸ್ಯೆ ಆಲಿಸಿ, ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

ಸಿಎಂ ಜನತಾ ದರ್ಶನದಲ್ಲಿ ಸಮಸ್ಯೆ ಹೇಳ್ಕೊಳ್ಳೋರಿಗೆ ಪೊಲೀಸರ ಅಡ್ಡಿ |Students |Tv9 kannada

Also Read:

‘ಆರು ಕೋಟಿ ಜನರ ಪರವಾಗಿ ಪುನೀತ್​ಗೆ ಅಂದು ಮುತ್ತು ಕೊಟ್ಟಿದ್ದೆ’: ಸಿಎಂ ಬೊಮ್ಮಾಯಿ ಭಾವುಕ ನುಡಿ

(Janata darshan by chief minister basavaraj bommai teacher manhandled by security police at cm house)

Published On - 10:58 am, Thu, 18 November 21

‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ