AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನಿವಾರ ವಿವಾದ: ಕೆಇಎ ಅಧಿಕಾರಿ ಬಾಯಲ್ಲಿ ಹೇಳಿದ್ದು ಸುತ್ತೋಲೆಯಲ್ಲಿ ಯಾಕಿಲ್ಲ?

ಕಳೆದ ವರ್ಷವೂ ಸಹ ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ್ದರು ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಈ ಜನಿವಾರ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ರಾಜ್ಯಾದ್ಯಂತ ಭಾರೀ ಚರ್ಚೆಗೆ ಮತ್ತು ಆಕ್ರೋಶಕ್ಕೆ ಕಾರಣವಾಗಿತ್ತು. ಈ ವರ್ಷದ ಸಿಇಟಿ ಪರೀಕ್ಷೆಯಲ್ಲೂ ಸಹ ಮತ್ತೆ ಜನಿವಾರ ವಿವಾದ ಮುನ್ನೆಲೆಗೆ ಬಂದಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ನಿರ್ಲಕ್ಷ್ಯ, ಎಡವಟ್ಟುಗಳಿಂದಲೇ ಈ ರೀತಿ ಮರುಕಳಿಸುತ್ತಿದೆ. ಅಷ್ಟಕ್ಕೂ ಕೆಇಎ ಎಡವಟ್ಟು ಏನು? ಎನ್ನುವ ಡಿಟೇಲ್ಸ್ ಇಲ್ಲಿದೆ.

ಜನಿವಾರ ವಿವಾದ: ಕೆಇಎ ಅಧಿಕಾರಿ ಬಾಯಲ್ಲಿ ಹೇಳಿದ್ದು ಸುತ್ತೋಲೆಯಲ್ಲಿ ಯಾಕಿಲ್ಲ?
Sacred Thread, KEA
ರಮೇಶ್ ಬಿ. ಜವಳಗೇರಾ
|

Updated on: Apr 25, 2026 | 4:38 PM

Share

ಬೆಂಗಳೂರು, (ಏಪ್ರಿಲ್ 25): ಸಿಇಟಿ ಪರೀಕ್ಷೆ ವೇಳೆ ಜನಿವಾರ ( Sacred Thread) ಕಟ್ ಮಾಡಿರುವ ವಿವಾದ ಇದೀಗ ಗಂಭೀರ ಸ್ವರೂಪ ಪಡೆದುಕೊಂಡಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಪರೀಕ್ಷಾರ್ಥಿಗಳ ಜನಿವಾರ ಕಟ್ ಮಾಡಿದ ಸಂಬಂಧ ಮಡಿವಾಳ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್‌ ಸೆಕ್ಷನ್ 299, 302ರಡಿ ಮೊಕದ್ದಮೆ ದಾಖಲಾಗಿದ್ದು, ಈ ದೂರಿನ ಮೇರೆಗೆ ಪರೀಕ್ಷಾ ಪರಿವೀಕ್ಷಕರಾದ ಸರಿತಾ, ಗಿರಿಜಾ ಹಾಗೂ ಸುಧಾಕರ್‌ ಅವರನ್ನು ಬಂಧಿಸಲಾಗಿದೆ. ಅಲ್ಲದೇ ಈ ಮೂವರನ್ನು ಸಹ ಕೆಲಸದಿಂದ ಅಮಾನತು ಮಾಡಲಾಗಿದೆ. ಆದ್ರೆ, ಮೇಲ್ನೋಟಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಿರ್ಲಕ್ಷ್ಯಕ್ಕೆ ಕೆಳ ಹಂತದ ಅಧಿಕಾರಿಗಳು ಶಿಕ್ಷೆಗೆ ಗುರಿಯಾದಂತೆ ಕಾಣುತ್ತಿದೆ. ಕಳೆದ ವರ್ಷ ಇದೇ ವಿವಾದ ಬೆಳಕಿಗೆ ಬಂದಿದ್ದರಿಂದ ಈ ಬಾರಿ ಯಾವುದೇ ಕಾರಣಕ್ಕೂ ಜನಿವಾರ ಹಾಗೂ ಕೊರಳಲ್ಲಿ ಹಾಕುವ ಲಿಂಗುವನ್ನು ತೆಗೆಸುವಂತಿಲ್ಲ ಎಂದು ಕೆಇಎ ಅಧಿಕಾರಿಗಳು ಹೇಳಿದ್ದರು. ಆದ್ರೆ, ಅದು ಬಾಯಿ ಮಾತಿಗೆ ಹೇಳಲಾಗಿದೆ ಹೊರತು ಅಧಿಕೃತವಾಗಿ ಸುತ್ತೋಲೆಯಲ್ಲಿ ಇಲ್ಲ. ಕೆಇಎ ಎಡವಟ್ಟನಿಂದಾಗಿಯೇ ಈ ವರ್ಷವೂ ಸಹ ಜನಿವಾರ ವಿವಾದ ಮರುಕಳಿಸಿದ್ದು, ಇಷ್ಟೆಲ್ಲ ರಾದ್ಧಾಂತ ಕಾರವಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೇಳಿದ್ದೇನು?

ಇನ್ನು ಈ ವರ್ಷದ ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕಣಕ್ಕೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬೆಂಗಳೂರು ನಗರ ಡಿಸಿಗೆ ಪತ್ರ ಬರೆದಿದೆ.  ವಿದ್ಯಾರ್ಥಿಗಳ ಜನಿವಾರ ತೆಗೆಸದಂತೆ ಸೂಚನೆ ನೀಡಲಾಗಿತ್ತು. ಆದ್ರೂ ಜನಿವಾರ ತೆಗೆಸಿದ್ದು ಉದ್ದೇಶಪೂರ್ವಕ ಘಟನಯಂತೆ ಕಂಡಿದೆ. ಈ ಬಗ್ಗೆ ತನಿಖೆ ನಡೆಸಿ ಕ್ರಮವಹಿಸಿದ ವಿವರ ನೀಡುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಜಿಲ್ಲಾಧಿಕಾರಿಗೆ ಬರೆದ ಪತ್ರದಲ್ಲಿ ಹೇಳಿದೆ.

ಇದನ್ನೂ ಓದಿ: ವಿದ್ಯಾರ್ಥಿಗಳ ಜನಿವಾರ ತೆಗೆಸಿದ ವಿವಾದ: CET ಪರೀಕ್ಷೆಗೆ ವಸ್ತ್ರ ಸಂಹಿತೆ ಏನು ಹೇಳುತ್ತೆ?

ಆದ್ರೆ, ಸಿಇಟಿ ಪರೀಕ್ಷೆ ವೇಳೆ ಯಾವುದನ್ನು ತರಬೇಕು? ಯಾವುದನ್ನು ನಿಷೇಧಿಸಲಾಗಿದೆ ಎನ್ನುವ ಬಗ್ಗೆ ಸುತ್ತೋಲೆ ಹೊರಡಿಸುವ ಕೆಇಎ, ಜನಿವಾರ ಹಾಗೂ ಕೊರಳಲ್ಲಿ ಹಾಕುವ ಲಿಂಗುವನ್ನು ತೆಗೆಸುವಂತಿಲ್ಲ ಎನ್ನುವ ಅಂಶವನ್ನು ಏಕೆ ಸುತ್ತೋಲೆಯಲ್ಲಿ ಉಲ್ಲೇಖಿಸಿಲ್ಲ? ಇದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ದಿವ್ಯ ನಿರ್ಲಕ್ಷ್ಯವಲ್ಲದೇ ಮತ್ತೇನು ಎಂಬ ಪ್ರಶ್ನೆಗಳು ಉದ್ಭವಿಸಿವೆ.

ಬಾಯಲ್ಲಿ ಹೇಳಿದ್ದು ಸುತ್ತೋಲೆಯಲ್ಲಿ ಯಾಕಿಲ್ಲ?

ಹೌದು…ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ದಿವ್ಯ ನಿರ್ಲಕ್ಕ್ಷ್ಯದಿಂದಲೇ ಜನಿವಾರ ವಿವಾದ ಮತ್ತೆ ಮರುಕಳಿಸಿದೆ. ಕೇವಲ ಬಾಯಿಗೆ ಮಾತಲ್ಲಿ ಹೇಳೋದು, ಸೂಚನೆ ಕೊಡುವುದಲ್ಲ. ಅಧಿಕೃತವಾಗಿ ಪ್ರಕಟಿಸುವ ಸುತ್ತೋಲೆಯಲ್ಲಿ ಪರೀಕ್ಷಾರ್ಥಿಗಳ ಜನಿವಾರ, ಕೊರಳಲ್ಲಿ ಹಾಕುವ ಲಿಂಗುವನ್ನು ತೆಗೆಯುವಂತಿಲ್ಲ ಎಂಬ ಅಂಶವನ್ನು ಕೆಇಎ ಉಲ್ಲೇಖಿಸಬಹುದಿತ್ತು. ಆ ವಸ್ತು ನಿಷೇಧ, ಇದು ನಿಷೇಧ ಅಂತೆಲ್ಲಾ ನೂರೆಂಟು ಕಟ್ಟಪ್ಪಣೆಗಳನ್ನು ಹಾಕಿ ಸುತ್ತೋಲೆಯಲ್ಲಿನ್ನು ಹೊರಡಿಸುವ ಕೆಇಎ, ಜನಿವಾರ-ಕೊರಳಿನ ಲಿಂಗು ಬಗ್ಗೆ ಏಕೆ ಉಲ್ಲೇಖಿಸಿಲ್ಲ ಎನ್ನುವುದೇ ಪ್ರಶ್ನೆ.

ಇದನ್ನೂ ಓದಿ: ಪೊಲೀಸ್​ ಠಾಣೆ ಮೆಟ್ಟಿಲೇರಿದ ಜನಿವಾರ ದಂಗಲ್: ವಿವಾದ ಬೆನ್ನಲ್ಲೇ ಮೂವರು ವಶಕ್ಕೆ

ಕಳೆದ ವರ್ಷ ಇದೇ ವಿಚಾರಕ್ಕೆ ದೊಡ್ಡ ರದ್ದಾಂತವಾಗಿತ್ತು.ರಾಜಕೀಯ ಕೆಸರೆರೆಚಾಟಕ್ಕೂ ಕಾರಣವಾಗಿತ್ತು. ಆದರೂ ಕೆಇಎ ಎಚ್ಚೆತ್ತುಕೊಂಡಿಲ್ಲ. ಹೀಗಾಗಿ ಜನಿವಾರ ಪ್ರಕರಣ ಈ ವರ್ಷವೂ ಸಹ ಮುನ್ನೆಲೆಗೆ ಬಂದಿದ್ದು, ಇದು ಕೆಇಎ ಕಾರ್ಯವೈಖರಿಯ ಹಿಡಿದ ಕನ್ನಡಿಯಾಗಿದೆ. ಅಲ್ಲದೇ ಪ್ರತಿ ವರ್ಷವೂ ಹುಟ್ಟಿಕೊಳ್ಳುವ ಈ ರೀತಿಯ ವಿವಾದಗಳಿಗೆ ಕೆಇಎ ಕಾರಣ. ಹೀಗಾಗಿ ಸರ್ಕಾರ, ಕೇವಲ ಕೆಳ ಹಂತದ ಅಧಿಕಾರಿಗಳು ಅಥವಾ ಪರೀಕ್ಷಾ ಕೇಂದ್ರ ಆಫೀರ್ಸ್​ ಮೇಲೆ ಕ್ರಮಕೈಗೊಂಡು ಕೈತೊಳೆದುಕೊಂಡರೆ ಸಾಲದು, ಯಾವುದೇ ಕಟ್ಟು ನಿಟ್ಟಿನ ಅಧಿಕೃತ ಸುತ್ತೋಲೆಯಲ್ಲಿ ತಿಳಿಸದೇ ನಿರ್ಲಕ್ಷ್ಯ ತೋರಿದ ಸಂಬಂಧಿಸಿದ ಕೆಇಎ ಅಧಿಕಾರಿಗಳ ಮೇಲೆ ಕ್ರಮಕೈಗೊಳ್ಳಬೇಕು. ಮನೆ ಯಜಮಾನನಿಗೆ ಬಿಸಿ ಮುಟ್ಟಿದಾಗ ಮಾತ್ರ ಈ ರೀತಿಯ ಪ್ರಕರಣ, ವಿವಾದಗಳು ಮತ್ತೆ ಮತ್ತೆ ಮರುಕಳುಹಿಸುವುದಿಲ್ಲ. ಹಾಗೇ ಯಾರದ್ದೋ ನಿರ್ಲಕ್ಷ್ಯಕ್ಕೆ ಇನ್ನಾರೋ ಶಿಕ್ಷೆಗೆ ಗುರಿಯಾಗುವುದು ತಪ್ಪಿದಂತಾಗುತ್ತೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?