AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ ವರದಿ: ರಾಜ್ಯದೆಲ್ಲೆಡೆ ಕನಿಷ್ಠ ತಾಪಮಾನ, ದಟ್ಟ ಮಂಜು ಆವರಿಸುವ ಸಾಧ್ಯತೆ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಚಳಿ ಹೆಚ್ಚಾಗಿದ್ದು, ಮಂಜು ದಟ್ಟವಾಗಿದೆ. ಬೆಳಗ್ಗೆ ಮತ್ತು ಸಂಜೆ ತೀವ್ರ ಚಳಿಯಿಂದ ಜನರು ಮನೆಯಿಂದ ಹೊರಗೆ ಬರುತ್ತಿಲ್ಲ. ಹವಾಮಾನ ಇಲಾಖೆಯ ಪ್ರಕಾರ, ಮುಂದಿನ ದಿನಗಳಲ್ಲಿ ಚಳಿ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಕನಿಷ್ಠ ತಾಪಮಾನ ಇಳಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕ ಹವಾಮಾನ ವರದಿ: ರಾಜ್ಯದೆಲ್ಲೆಡೆ ಕನಿಷ್ಠ ತಾಪಮಾನ, ದಟ್ಟ ಮಂಜು ಆವರಿಸುವ ಸಾಧ್ಯತೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jan 03, 2025 | 7:32 AM

Share

ಕರ್ನಾಟಕದ (Karnataka Weather Updates) ಬಹುತೇಕ ಜಿಲ್ಲೆಗಳಲ್ಲಿ ಮುಂಜಾನೆ ಮತ್ತು ಸಂಜೆ ಚಳಿ ಹೆಚ್ಚಾಗಿದೆ. ಕೆಲವು ಜಿಲ್ಲೆಗಳಲ್ಲಿ ಮಂಜಿನಿಂದ ಕೂಡಿದ ವಾತಾವರಣ ಇದೆ. ಬೆಳ್ಳಂ ಬೆಳಗ್ಗೆ ಜನರು ಯಾವುದೇ ಕೆಲಸ-ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಜನರು ಮನೆಯಿಂದ ಹೊರಬಾರದಂತಹ ಸ್ಥಿತಿ ನಿರ್ಮಾಣವಾಗಿದೆ. ಮುಂದಿನ ಹಲವು ದಿನಗಳವರೆಗೂ ಇದೇ ವಾತಾವರಣ ಇರಲಿದ್ದು, ಮಂಜಿನಿಂದ ಕೂಡಿದ ವಾತಾವರಣ ಕೂಡಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಂಗಳವಾರ (ಜ.07) ತಾರೀಕಿನವರೆಗೂ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಶನಿವಾರ (ಜ.04)ರವರೆಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಂಜು ಅಥವಾ ದಟ್ಟ ಮಂಜು ಇರುವ ಸಾಧ್ಯತೆಯಿದೆ. ಮುಂದಿನ ಎರಡು ದಿನಗಳವರೆಗೆ ಕನಿಷ್ಠ ತಾಪಮಾನವು 2 ಡಿಗ್ರಿ ಸೆಲ್ಸಿಯಸ್​​ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ರವಿವಾರದವರೆಗೆ (ಜ.5) ಮಂಜು ಅಥವಾ ದಟ್ಟ ಂಜು ಇರುವ ಸಾಧ್ಯತೆಯಿದೆ. ಮುಂದಿನ ಎರಡು ದಿನಗಳವರಗೆ ಕನಿಷ್ಠ ತಾಪಮಾನವು 2 ಡಿಗ್ರಿ ಸೆಲ್ಸಿಯಸ್​ ಕಡಿಮೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್​ ಇರಲಿದ್ದು, ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್​ ದಾಖಲಾಗಿದೆ. ಮೈಸೂರಿನಲ್ಲಿ ಗರಿಷ್ಠ ತಾಪಮಾನ 28 ಮತ್ತು ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್​, ಮಂಗಳೂರಿನಲ್ಲಿ ಗರಿಷ್ಠ 32 ಮತ್ತು ಕನಿಷ್ಠ 22, ಶಿವಮೊಗ್ಗದಲ್ಲಿ ಗರಿಷ್ಠ 28 ಮತ್ತು ಕನಿಷ್ಠ 14, ಬೆಳಗಾವಿಯಲ್ಲಿ ಗರಿಷ್ಠ 28 ಮತ್ತು ಕನಿಷ್ಠ 16, ಕೋಲಾರದಲ್ಲಿ ಗರಿಷ್ಠ 24 ಮತ್ತು ಕನಿಷ್ಠ 13, ತುಮಕೂರಿನಲ್ಲಿ ಗರಿಷ್ಠ 26 ಮತ್ತು ಕನಿಷ್ಠ 13 ಡಿಗ್ರಿ ಸೆಲ್ಸಿಯಸ್ ತಾಪಮಾನ​ ದಾಖಲಾಗಿದೆ.

ಉಡುಪಿಯಲ್ಲಿ ಗರಿಷ್ಠ 31 ಮತ್ತು ಕನಿಷ್ಠ 20, ಉತ್ತರ ಕನ್ನಡದಲ್ಲಿ ಗರಿಷ್ಠ 33 ಮತ್ತು ಕನಿಷ್ಠ 22, ಚಿಕ್ಕಮಗಳೂರಿನಲ್ಲಿ ಗರಿಷ್ಠ 25 ಮತ್ತು ಕನಿಷ್ಠ 12, ಹುಬ್ಬಳ್ಳಿಯಲ್ಲಿ ಗರಿಷ್ಠ 29 ಮತ್ತು ಕನಿಷ್ಠ 15 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗಿದೆ.

ಯಾದಗಿರಿ, ಕೊಪ್ಪಳ, ರಾಯಚೂರು, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಚಳಿಯ ವಾತಾವರಣವಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:31 am, Fri, 3 January 25

ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
ಗಿಲ್ಲಿ ಬಿಟ್ಟುಕೊಡಬೇಡ; ಕಾವ್ಯಾಗೆ ತಾಯಿಯ ಕಿವಿಮಾತು
ಗಿಲ್ಲಿ ಬಿಟ್ಟುಕೊಡಬೇಡ; ಕಾವ್ಯಾಗೆ ತಾಯಿಯ ಕಿವಿಮಾತು
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?