AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tv9 Kannada Digital Exclusive | ಹೊರರಾಜ್ಯದ ಕೋರ್ಟಲ್ಲಿ ಹೇಳಿಕೆ ದಾಖಲಿಸಲು ಸುಪ್ರೀಂಗೆ ಸಿಡಿ ಸಂತ್ರಸ್ತೆ ಮನವಿ ಪತ್ರ

Exclusive | ರಮೇಶ್​ ಜಾರಕಿಹೊಳಿ ಅವರ ಸೆಕ್ಸ್​ ಸಿಡಿ ಕೇಸಿನಲ್ಲಿ ಹೊಸ ತಿರುವು ಸಿಕ್ಕಿದೆ. ಸಂತ್ರಸ್ತೆ ಈಗ ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತಿದ್ದಾರೆ ಎಂದು ತಿಳಿದು ಬಂದಿದೆ. ಈ ಪತ್ರದಲ್ಲಿ ಸಂತ್ರಸ್ತ ಯುವತಿಯು ರಾಜ್ಯ ಸರ್ಕಾರ, ಎಸ್ಐಟಿ ಮತ್ತು ರಮೇಶ್ ಜಾರಕಿಹೊಳಿ ವಿರುದ್ಧ ಗುರುತರ ಆರೋಪ ಮಾಡಿದ್ದಾರೆ.

Tv9 Kannada Digital Exclusive | ಹೊರರಾಜ್ಯದ ಕೋರ್ಟಲ್ಲಿ ಹೇಳಿಕೆ ದಾಖಲಿಸಲು ಸುಪ್ರೀಂಗೆ ಸಿಡಿ ಸಂತ್ರಸ್ತೆ ಮನವಿ ಪತ್ರ
ಸುಪ್ರೀಂ ಕೋರ್ಟ್​
ಡಾ. ಭಾಸ್ಕರ ಹೆಗಡೆ
| Edited By: |

Updated on:Mar 29, 2021 | 9:04 PM

Share

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಸಂತ್ರಸ್ತ ಯುವತಿ ಕಂತುಕಂತುಗಳಲ್ಲಿ ತನ್ನ ಮುಂದಿನ ನಡೆ ಬಗ್ಗೆ ವಿಡಿಯೊ ತುಣುಕು ಬಿಡುಗಡೆ ಮಾಡುತ್ತಿದ್ದಾರೆ. ಈ ಮಧ್ಯೆ ದೇಶದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಆಕೆ ಬರೆದಿದ್ದಾರೆ ಎನ್ನುವ ಪತ್ರದ ವಿವರ ಟಿವಿ9 ಡಿಜಿಟಲ್​ಗೆ ಲಭ್ಯವಾಗಿದೆ. ಈ ಪತ್ರದಲ್ಲಿ ಸಂತ್ರಸ್ತ ಯುವತಿಯು ರಾಜ್ಯ ಸರ್ಕಾರ, ಎಸ್ಐಟಿ ಮತ್ತು ರಮೇಶ್ ಜಾರಕಿಹೊಳಿ ನನ್ನನ್ನು ಕೊಲ್ಲಬಹುದು ಎಂದು ಗುರುತರ ಆರೋಪ ಮಾಡಿದ್ದಾರೆ.

ಮಾರ್ಚ್ 28 ರಂದು ಬರೆದಿದ್ದಾರೆ ಎನ್ನುವ ಈ ಪತ್ರದ ಪ್ರಾರಂಭದಲ್ಲಿಯೇ ಅವರ ತಮ್ಮನ್ನು ‘ರೇಪ್ ವಿಕ್ಟಿಮ್’ (ಅತ್ಯಾಚಾರ ಸಂತ್ರಸ್ತೆ) ಎಂದು ಕರೆದುಕೊಂಡಿದ್ದಾರೆ. ಕಬ್ಬನ್ ಪಾರ್ಕ್ ಪೊಲೀಸ್ ಸ್ಟೇಷನ್​ನಲ್ಲಿ ದಾಖಲಾಗಿರುವ ಕೇಸು ಸಂಖ್ಯೆ ಎಫ್ಐಆರ್ 30/2021 ಪ್ರಕಾರ ರಮೇಶ ಜಾರಕಿಹೊಳಿ ಈ ರೇಪ್ ಕೇಸಿನ ಆರೋಪಿ. ಜಾರಕಿಹೊಳಿ ಬಹಳ ಪ್ರಭಾವಶಾಲಿ. ಇವರು ನನ್ನನ್ನು ಮುಗಿಸಲು ಯಾವ ಹಂತಕ್ಕೂ ಹೋಗಬಹುದು. ರಮೇಶ್ ಜಾರಕಿಹೊಳಿ ಅವರು ನನ್ನನ್ನು ಮತ್ತು ನನ್ನ ತಂದೆ ತಾಯಿಯನ್ನು ಮುಗಿಸಲೂಬಹುದು. ನಾನೆಷ್ಟೇ ಕೋರಿಕೊಂಡರೂ ಎಸ್ಐಟಿ ನನಗಾಗಲೀ ಅಥವಾ ನನ್ನ ತಂದೆ ತಾಯಿಗಾಗಲೀ ರಕ್ಷಣೆ ನೀಡಿಲ್ಲ ಎಂದು ಸಂತ್ರಸ್ತ ಯುವತಿ ಪತ್ರದಲ್ಲಿ ಹೇಳಿದ್ದಾರೆ.

ಮಾಧ್ಯಮದ ಮೂಲಕ ನಾನು ತಿಳಿದುಕೊಂಡಿದ್ದೇನೆಂದರೆ ರಮೇಶ್ ಜಾರಕಿಹೊಳಿ ಇಂದು (ಮಾರ್ಚ್​ 28) ಮತ್ತೆ ನನ್ನನ್ನು ಹೆದರಿಸಿದ್ದಾರೆ. ರಾಜಕೀಯವಾಗಿ ತುಂಬಾ ಪ್ರಭಾವಿಯಾಗಿರುವ ಅವರು ಯಾವ ಹಂತಕ್ಕೂ ಹೋಗಬಹುದಾಗಿದೆ. ಯಾಕೆಂದರೆ ರಮೇಶ್ ಜಾರಕಿಹೊಳಿ ಅವರಿಗೆ ಅಪರಾಧದ ಹಿನ್ನೆಲೆಯಿದೆ. ಅವರು ನನ್ನನ್ನು ಯಾವತ್ತು ಬೇಕಾದರೂ, ಎಲ್ಲಿ ಬೇಕಾದರೂ ಕೊಲ್ಲಿಸಬಹುದಾಗಿದೆ. ಎಸ್ಐಟಿ ಮತ್ತು ರಾಜ್ಯ ಸರ್ಕಾರ ರಮೇಶ್ ಜಾರಕಿಹೊಳಿಮಾತನ್ನೇ ಕೇಳುತ್ತಿದೆ ಎಂದು ದೂರಿದ್ದಾರೆ.

ಎಸ್ಐಟಿ, ರಾಜ್ಯ ಸರ್ಕಾರ ಮತ್ತು ರಮೇಶ್ ಜಾರಕಿಹೊಳಿ ಸೇರಿಕೊಂಡು ಯಾವ ಸಮಯದಲ್ಲಾದರೂ, ಎಲ್ಲಿ ಬೇಕಾದರೂ ನನ್ನನ್ನು ಕೊಲ್ಲಿಸಬಹುದಾಗಿದೆ. ನಾನು, ಯಾವ ನಿರ್ಬಂಧ ಮತ್ತು ಒತ್ತಡವಿಲ್ಲದೇ ನ್ಯಾಯಕ್ಕಾಗಿ ಹೋರಾಡುತ್ತಿದ್ದೇನೆ. ನನ್ನ ಕುಟುಂಬವನ್ನು ರಮೇಶ್ ಜಾರಕಿಹೊಳಿ ತಮ್ಮ ಕೈ ಮುಷ್ಟಿಯಲ್ಲಿ ಇಟ್ಟುಕೊಂಡಿದ್ದಾರೆ ಮತ್ತು ಅವರು ನನ್ನ ಕುಟುಂಬಕ್ಕೆ ತುಂಬಾ ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

Cd-Supreme-Court-Letter

ಸುಪ್ರೀಂಕೋರ್ಟ್​ಗೆ ಸಂತ್ರಸ್ತ ಯುವತಿ ಬರೆದಿರುವ ಪತ್ರ

ಇಲ್ಲಿದೆ ಹೊಸ ಟ್ವಿಸ್ಟ್ ಈ ಮೇಲಿನ ಅಂಶಗಳನ್ನು ಗಮನಿಸಿಕೊಂಡು ತಾವು ನನ್ನ ಪತ್ರವನ್ನು ಬಹಳ ಗಂಭೀರವಾಗಿ ಪರಿಗಣಿಸಬೇಕು. ಈ ಕೂಡಲೇ ನನಗೆ ಭದ್ರತೆ ಒದಗಿಸಲು ತಾವು ಆದೇಶಿಸಬೇಕು. ಈ ಕೇಸಿನ ತನಿಖೆ ಮೇಲ್ವಿಚಾರಣೆ ತಮ್ಮ ನೇತೃತ್ವದಲ್ಲಿ ನಡೆಯಬೇಕು. ಕರ್ನಾಟಕದ ಹೊರಗೆ ಬೇರೆ ರಾಜ್ಯದ ನ್ಯಾಯಾಲಯದ ಮುಂದೆ ನನ್ನ ಹೇಳಿಕೆ ನೀಡಲು ಅನುಮತಿ ನೀಡುವ ನಿರ್ದೇಶನ ನೀಡಬೇಕು ಹಾಗೂ ಆ ಮೂಲಕ ನನಗೆ ನ್ಯಾಯ ಒದಗಿಸಬೇಕೆಂದು ಕೇಳಿಕೊಳ್ಳುತ್ತೇನೆ ಎಂದು ಯುವತಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಎಂದು ತಿಳಿದುಬಂದಿದೆ.

Cd-Supreme-Court-Letter

ಸಂತ್ರಸ್ತ ಯುವತಿ ಬರೆದಿದ್ದಾರೆ ಎನ್ನಲಾದ ಪತ್ರ

ಇದನ್ನೂ ಓದಿ: ಎಸ್​ಐಟಿಗೆ ಸಡ್ಡು ಹೊಡೆದ CD ಲೇಡಿ.. ಬಿಡುಗಡೆಯಾಯ್ತು ಮತ್ತೊಂದು ವಿಡಿಯೋ! ಪೊಲೀಸ್ ಕಮಿಷನರ್ ವಿರುದ್ಧ ಭಾರಿ ಆರೋಪ

ಇದನ್ನೂ ಓದಿ:  ರಮೇಶ್ ಜಾರಕಿಹೊಳಿ CD ಪ್ರಕರಣ: ವಿಡಿಯೋದಲ್ಲಿದ್ದ ವಾಯ್ಸ್ ಸ್ಯಾಂಪಲ್ FSLಗೆ ಶಿಫ್ಟ್

Published On - 8:47 pm, Mon, 29 March 21

Follow Us
Dr Bhaskar Hegde
Dr Bhaskar Hegde

ಟಿವಿ9 ಡಿಜಿಟಲ್​ ಸಂಪಾದಕ. 28 ವರ್ಷಗಳಿಂದ ಇಂಗ್ಲಿಷ್ ಮುದ್ರಣ ಮಾಧ್ಯಮ​ ಮತ್ತು ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಸುದ್ದಿ, ದೀರ್ಘ ಲೇಖನ, ನುಡಿಚಿತ್ರ, ವಿಶ್ಲೇಷಣೆ, ಅಂಕಣ ಸ್ಕೂಪ್​ ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಎರಡು ಕಥಾ ಸಂಕಲನಗಳ ಪ್ರಕಟಣೆ. ಸಾರ್ವಜನಿಕ ನೀತಿ ಮತ್ತು ಆಡಳಿತಕ್ಕೆ ಸಂಬಂಧಿಸಿದ ವಿಷಯದಲ್ಲಿ ಸಲ್ಲಿಸಿದ ಮಹಾಪ್ರಬಂಧಕ್ಕೆ ಪಿಎಚ್​ಡಿ ಪದವಿ. ಹಿಂದೂಸ್ತಾನಿ ಸಂಗೀತ, ಕ್ರಿಕೆಟ್​, ತತ್ವಶಾಸ್ತ್ರ ಮತ್ತು ಕಾನೂನಿನ ವಿಷಯದ ತೀವ್ರ ಆಸಕ್ತಿ.

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ