ಭಕ್ತಿ ಭಂಡಾರದ ಐತಿಹಾಸಿಕ ಮೈಲಾರ ಜಾತ್ರೆ ಸೊಬಗು, ಹಳದಿ ಬಣ್ಣದ ರಂಗು…

ಬೀದರ್: ಜಾತ್ರೆಯ ವೈಭವ ಅಂದ್ರೆ ಬಣ್ಣಗಳ ನೋಟ ಮನಸೂರೆಗೊಳ್ಳುತ್ತೆ. ಭಕ್ತರಂತು ಕಲರ್ ಕಲರ್ ಡ್ರೆಸ್​ಗಳಲ್ಲಿ ಮಿಂಚ್ತಿರ್ತಾರೆ. ಆದ್ರೆ ಈ ಜಾತ್ರೆಯಲ್ಲಿ ಮಾತ್ರ ಭಕ್ತರಿಂದ ಹಿಡಿದು ದೇವರವರೆಗೂ ಎಲ್ಲವೂ ಹಳದಿಮಯವಾಗಿರುತ್ತೆ. ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಖಾನಪೂರ ಗ್ರಾಮದಲ್ಲಿ ಮೈಲಾರ್ ಮಲ್ಲಣ್ಣನ ಜಾತ್ರೆ ವೈಭವ ರಂಗೇರಿತ್ತು. ಒಂದು ತಿಂಗಳುಗಳ ಕಾಲ ಈ ಕ್ಷೇತ್ರದಲ್ಲಿ ವಿಜೃಂಭಣೆಯಿಂದ ಜಾತ್ರೆ ನಡೆಯುತ್ತಿದೆ. ರಾಜ್ಯ ಸೇರಿದಂತೆ ಮಹಾರಾಷ್ಟ್ರ, ತೆಲಂಗಾಣ, ಆಂಧ್ರದಿಂದ ಸಾವಿರಾರು ಸಂಖ್ಯೆಯಲ್ಲಿ ಬರೋ ಭಕ್ತರು ದೇವಸ್ಥಾನದ ಆವರಣದಲ್ಲಿಯೇ ಅಡುಗೆ ಮಾಡಿಕೊಂಡು ದೇವರ ದರ್ಶನ […]

ಭಕ್ತಿ ಭಂಡಾರದ ಐತಿಹಾಸಿಕ ಮೈಲಾರ ಜಾತ್ರೆ ಸೊಬಗು, ಹಳದಿ ಬಣ್ಣದ ರಂಗು...
ಸಾಧು ಶ್ರೀನಾಥ್​

Updated on: Dec 10, 2019 | 6:47 AM

ಬೀದರ್: ಜಾತ್ರೆಯ ವೈಭವ ಅಂದ್ರೆ ಬಣ್ಣಗಳ ನೋಟ ಮನಸೂರೆಗೊಳ್ಳುತ್ತೆ. ಭಕ್ತರಂತು ಕಲರ್ ಕಲರ್ ಡ್ರೆಸ್​ಗಳಲ್ಲಿ ಮಿಂಚ್ತಿರ್ತಾರೆ. ಆದ್ರೆ ಈ ಜಾತ್ರೆಯಲ್ಲಿ ಮಾತ್ರ ಭಕ್ತರಿಂದ ಹಿಡಿದು ದೇವರವರೆಗೂ ಎಲ್ಲವೂ ಹಳದಿಮಯವಾಗಿರುತ್ತೆ.

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಖಾನಪೂರ ಗ್ರಾಮದಲ್ಲಿ ಮೈಲಾರ್ ಮಲ್ಲಣ್ಣನ ಜಾತ್ರೆ ವೈಭವ ರಂಗೇರಿತ್ತು. ಒಂದು ತಿಂಗಳುಗಳ ಕಾಲ ಈ ಕ್ಷೇತ್ರದಲ್ಲಿ ವಿಜೃಂಭಣೆಯಿಂದ ಜಾತ್ರೆ ನಡೆಯುತ್ತಿದೆ. ರಾಜ್ಯ ಸೇರಿದಂತೆ ಮಹಾರಾಷ್ಟ್ರ, ತೆಲಂಗಾಣ, ಆಂಧ್ರದಿಂದ ಸಾವಿರಾರು ಸಂಖ್ಯೆಯಲ್ಲಿ ಬರೋ ಭಕ್ತರು ದೇವಸ್ಥಾನದ ಆವರಣದಲ್ಲಿಯೇ ಅಡುಗೆ ಮಾಡಿಕೊಂಡು ದೇವರ ದರ್ಶನ ಮಾಡುತ್ತಾರೆ. ಹಾಗೇ ದೇವರಿಗೆ ಹರಕೆ ರೂಪದಲ್ಲಿ ತೆಂಗಿನಕಾಯಿ ಹೋಳು ಮತ್ತು ಭಂಡಾರವನ್ನು ಮಿಶ್ರಣ ಮಾಡಿ ಹಾರಿಸುತ್ತಾರೆ.

ಇನ್ನು ಈ ಭಾಗದಲ್ಲಿ ಒಂದು ತಿಂಗಳ ಕಾಲ ನಡೆಯುವ ಏಕೈಕ ಜಾತ್ರೆ ಇದಾಗಿರೋದ್ರಿಂದ ಇಡೀ ಗ್ರಾಮದಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿದೆ. ಛಟ್ಟಿ ಅಮಾವಾಸ್ಯೆಯಿಂದ ಆರಂಭವಾಗುವ ಜಾತ್ರೆ ಎಳ್ಳು ಅಮಾವಾಸ್ಯೆಯವರೆಗೂ ನಡೆಯುತ್ತೆ. ಮೈಲಾರ ಮಲ್ಲಣ್ಣ ದೇವಸ್ಥಾನಕ್ಕೆ ಐತಿಹಾಸಿಕ ಹಿನ್ನೆಲೆಯೂ ಇದೆ. ರಾಕ್ಷಸರನ್ನು ಸಂಹಾರ ಮಾಡಲು ಮಲ್ಲಣ್ಣನ ರೂಪದಲ್ಲಿ ಶಿವ 11ನೇ ರೂಪ ತಾಳಿ ಮೈಲಾರದಲ್ಲಿ ನೆಲೆಸಿದ ಎನ್ನುವ ಪ್ರತೀತಿ ಇದೆ. ಹೀಗಾಗಿ ಪ್ರತೀವರ್ಷ ಲಕ್ಷಾಂತರ ಮಂದಿ ಭಕ್ತರು ಬಂದು ದೇವರ ಕೃಪೆಗೆ ಪಾತ್ರರಾಗ್ತಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us