AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಚಿಕನ್ ಊಟ ಸೇವಿಸಿ ಜವಾಹರ್ ನವೋದಯ ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಚಿಕನ್ ಊಟ ಸೇವಿಸಿ ನವೋದಯ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಆಂಧ್ರದ ಪಶ್ಚಿಮ ಗೋದಾವರಿ ಜಿಲ್ಲೆಯ ಪೆದವೇಗಿಯಲ್ಲಿ ನಡೆದಿದೆ.

ರಾಯಚೂರು: ಚಿಕನ್ ಊಟ ಸೇವಿಸಿ ಜವಾಹರ್ ನವೋದಯ ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು
ರಾಯಚೂರು: ಚಿಕನ್ ಊಟ ಸೇವಿಸಿ ನವೋದಯ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ
ಭೀಮೇಶ್​​ ಪೂಜಾರ್
| Updated By: ಕಿರಣ್ ಹನುಮಂತ್​ ಮಾದಾರ್|

Updated on:Aug 06, 2023 | 12:33 PM

Share

ರಾಯಚೂರು, ಆ.6: ಚಿಕನ್ ಊಟ ಸೇವಿಸಿ ಜವಾಹರ್ ನವೋದಯ ಶಾಲೆಯ (Jawahar Navodaya Vidyalaya) ವಿದ್ಯಾರ್ಥಿಗಳು(Students) ಅಸ್ವಸ್ಥರಾದ ಘಟನೆ ಆಂಧ್ರದ ಪಶ್ಚಿಮ ಗೋದಾವರಿ ಜಿಲ್ಲೆಯ ಪೆದವೇಗಿಯಲ್ಲಿ ನಡೆದಿದೆ. ಶಾಲಾ ವತಿಯಿಂದ ಕ್ರಿಕೆಟ್ ಪಂದ್ಯವಾಡಲು ರಾಯಚೂರು, ಕೊಪ್ಪಳ, ಬೆಳಗಾವಿ, ವಿಜಯಪುರ, ಬೆಂಗಳೂರು ಕೊಡಗು ಸೇರಿ ವಿವಿಧ ಜಿಲ್ಲೆಯ ಮಕ್ಕಳು ಪೆದವೇಗಿಗೆ ತೆರಳಿದ್ದರು. ನಿನ್ನೆ(ಆ.5) ರಾತ್ರಿ ಊಟ ಸೇವಿಸಿದ್ದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಕೂಡಲೇ ವಿದ್ಯಾರ್ಥಿಗಳಿಗೆ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕ್ರಿಕೆಟ್​ ಆಡಲು ಆಂಧ್ರಕ್ಕೆ ತೆರಳಿದ್ದ ವಿದ್ಯಾರ್ಥಿಗಳು

ಆಂಧ್ರದ ವೆಸ್ಟ್ ಗೋದಾವರಿ ಜಿಲ್ಲೆಯ ಪೆದವೇಗಿಯಲ್ಲಿ ಆಯೋಜಿಸಲಾಗಿದ್ದ ಅಂಡರ್​-14, 17, 19 ಮಾದರಿಯ ಕ್ರಿಕೆಟ್ ಪಂದ್ಯಾವಳಿಗೆ ವಿದ್ಯಾರ್ಥಿಗಳು ಹೋಗಿದ್ದರು. ಇದೇ ಅಲ್ಲಿನ ಸಿಬ್ಬಂದಿ ಶನಿವಾರ ರಾತ್ರಿ ಎಲ್ಲಾ ವಿದ್ಯಾರ್ಥಿಗಳಿಗೆ ಚಿಕನ್ ಊಟ ನೀಡಿದ್ದರು. ಚಿಕನ್‌ ಸೇವಿಸಿದ ಬಳಿಕ ಫುಡ್ ಪಾಯ್ಸನ್ ಆಗಿ ರಾಜ್ಯದ 30 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸೇರಿ ಒಟ್ಟು‌ 80 ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ.

ಇದನ್ನೂ ಓದಿ:Chamarajanagar News: ಚಾಮರಾಜನಗರ ಗರಗನಹಳ್ಳಿಯ ಶಾಲೆಯಲ್ಲಿ ಊಟ ಸೇವಿಸಿದ ಬಳಿಕ 7 ಮಕ್ಕಳು ಅಸ್ವಸ್ಥ

ದೇವಸ್ಥಾನದ ಬೀಗ ಮುರಿದು ಹುಂಡಿ ಕದ್ದ ಕಳ್ಳರು

ದಾವಣಗೆರೆ: ಜಗಳೂರಿನಲ್ಲಿ ಮತ್ತೆ ಕಳ್ಳರ ಕೈಚಳಕ ಹೆಚ್ಚಾಗಿದೆ. ದೇವಸ್ಥಾನದ ಬೀಗ ಮುರಿದು ಹುಂಡಿ ಕಳ್ಳತನ ಮಾಡಿದ ಘಟನೆ ನಡೆದಿದೆ. ಹೌದು, ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣದ ಅಂಬೇಡ್ಕರ ಸರ್ಕಲ್ ಬಳಿಯ ಗಣೇಶ್ ದೇವಸ್ಥಾನದಲ್ಲಿ. ನಿನ್ನೆ(ಆ.5) ಸಂಜೆ ಪೂಜೆ ಮುಗಿಸಿ ದೇವಸ್ಥಾನಕ್ಕೆ ಬೀಗ ಹಾಕಿ ಹೋಗಿದ್ದರು. ಬೆಳಿಗ್ಗೆ ಬರುತ್ತಿದ್ದಂತೆ ಬೀಗ ಒಡೆದು ಹಾಕಲಾಗಿದ್ದು, ಜೊತೆಗೆ ಹುಂಡಿ ಕೂಡ ಕಳ್ಳತನವಾಗಿತ್ತು. ಸ್ಥಳಕ್ಕೆ ಜಗಳೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ನಿರಂತರವಾಗಿ ನಡೆದ ದೇವಸ್ಥಾನದ ಹುಂಡಿ ಕಳ್ಳತನಕ್ಕೆ ಸೂಕ್ತ ಕ್ರಮ‌ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:22 pm, Sun, 6 August 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ