AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಚಿಕನ್ ಊಟ ಸೇವಿಸಿ ಜವಾಹರ್ ನವೋದಯ ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಚಿಕನ್ ಊಟ ಸೇವಿಸಿ ನವೋದಯ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಆಂಧ್ರದ ಪಶ್ಚಿಮ ಗೋದಾವರಿ ಜಿಲ್ಲೆಯ ಪೆದವೇಗಿಯಲ್ಲಿ ನಡೆದಿದೆ.

ರಾಯಚೂರು: ಚಿಕನ್ ಊಟ ಸೇವಿಸಿ ಜವಾಹರ್ ನವೋದಯ ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು
ರಾಯಚೂರು: ಚಿಕನ್ ಊಟ ಸೇವಿಸಿ ನವೋದಯ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ
ಭೀಮೇಶ್​​ ಪೂಜಾರ್
| Edited By: |

Updated on:Aug 06, 2023 | 12:33 PM

Share

ರಾಯಚೂರು, ಆ.6: ಚಿಕನ್ ಊಟ ಸೇವಿಸಿ ಜವಾಹರ್ ನವೋದಯ ಶಾಲೆಯ (Jawahar Navodaya Vidyalaya) ವಿದ್ಯಾರ್ಥಿಗಳು(Students) ಅಸ್ವಸ್ಥರಾದ ಘಟನೆ ಆಂಧ್ರದ ಪಶ್ಚಿಮ ಗೋದಾವರಿ ಜಿಲ್ಲೆಯ ಪೆದವೇಗಿಯಲ್ಲಿ ನಡೆದಿದೆ. ಶಾಲಾ ವತಿಯಿಂದ ಕ್ರಿಕೆಟ್ ಪಂದ್ಯವಾಡಲು ರಾಯಚೂರು, ಕೊಪ್ಪಳ, ಬೆಳಗಾವಿ, ವಿಜಯಪುರ, ಬೆಂಗಳೂರು ಕೊಡಗು ಸೇರಿ ವಿವಿಧ ಜಿಲ್ಲೆಯ ಮಕ್ಕಳು ಪೆದವೇಗಿಗೆ ತೆರಳಿದ್ದರು. ನಿನ್ನೆ(ಆ.5) ರಾತ್ರಿ ಊಟ ಸೇವಿಸಿದ್ದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಕೂಡಲೇ ವಿದ್ಯಾರ್ಥಿಗಳಿಗೆ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕ್ರಿಕೆಟ್​ ಆಡಲು ಆಂಧ್ರಕ್ಕೆ ತೆರಳಿದ್ದ ವಿದ್ಯಾರ್ಥಿಗಳು

ಆಂಧ್ರದ ವೆಸ್ಟ್ ಗೋದಾವರಿ ಜಿಲ್ಲೆಯ ಪೆದವೇಗಿಯಲ್ಲಿ ಆಯೋಜಿಸಲಾಗಿದ್ದ ಅಂಡರ್​-14, 17, 19 ಮಾದರಿಯ ಕ್ರಿಕೆಟ್ ಪಂದ್ಯಾವಳಿಗೆ ವಿದ್ಯಾರ್ಥಿಗಳು ಹೋಗಿದ್ದರು. ಇದೇ ಅಲ್ಲಿನ ಸಿಬ್ಬಂದಿ ಶನಿವಾರ ರಾತ್ರಿ ಎಲ್ಲಾ ವಿದ್ಯಾರ್ಥಿಗಳಿಗೆ ಚಿಕನ್ ಊಟ ನೀಡಿದ್ದರು. ಚಿಕನ್‌ ಸೇವಿಸಿದ ಬಳಿಕ ಫುಡ್ ಪಾಯ್ಸನ್ ಆಗಿ ರಾಜ್ಯದ 30 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸೇರಿ ಒಟ್ಟು‌ 80 ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ.

ಇದನ್ನೂ ಓದಿ:Chamarajanagar News: ಚಾಮರಾಜನಗರ ಗರಗನಹಳ್ಳಿಯ ಶಾಲೆಯಲ್ಲಿ ಊಟ ಸೇವಿಸಿದ ಬಳಿಕ 7 ಮಕ್ಕಳು ಅಸ್ವಸ್ಥ

ದೇವಸ್ಥಾನದ ಬೀಗ ಮುರಿದು ಹುಂಡಿ ಕದ್ದ ಕಳ್ಳರು

ದಾವಣಗೆರೆ: ಜಗಳೂರಿನಲ್ಲಿ ಮತ್ತೆ ಕಳ್ಳರ ಕೈಚಳಕ ಹೆಚ್ಚಾಗಿದೆ. ದೇವಸ್ಥಾನದ ಬೀಗ ಮುರಿದು ಹುಂಡಿ ಕಳ್ಳತನ ಮಾಡಿದ ಘಟನೆ ನಡೆದಿದೆ. ಹೌದು, ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣದ ಅಂಬೇಡ್ಕರ ಸರ್ಕಲ್ ಬಳಿಯ ಗಣೇಶ್ ದೇವಸ್ಥಾನದಲ್ಲಿ. ನಿನ್ನೆ(ಆ.5) ಸಂಜೆ ಪೂಜೆ ಮುಗಿಸಿ ದೇವಸ್ಥಾನಕ್ಕೆ ಬೀಗ ಹಾಕಿ ಹೋಗಿದ್ದರು. ಬೆಳಿಗ್ಗೆ ಬರುತ್ತಿದ್ದಂತೆ ಬೀಗ ಒಡೆದು ಹಾಕಲಾಗಿದ್ದು, ಜೊತೆಗೆ ಹುಂಡಿ ಕೂಡ ಕಳ್ಳತನವಾಗಿತ್ತು. ಸ್ಥಳಕ್ಕೆ ಜಗಳೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ನಿರಂತರವಾಗಿ ನಡೆದ ದೇವಸ್ಥಾನದ ಹುಂಡಿ ಕಳ್ಳತನಕ್ಕೆ ಸೂಕ್ತ ಕ್ರಮ‌ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:22 pm, Sun, 6 August 23

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ