AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಮಾರಸ್ವಾಮಿಗೂ ಹೇಮಾವತಿಗೂ ನಂಟು ಇನ್ನೂ ಇದ್ಯಾ -ಮಾಧುಸ್ವಾಮಿ ಪ್ರಶ್ನೆ

ಕೋಲಾರ: ಹಾಸನಕ್ಕೂ ಹೆಚ್​.ಡಿ.ಕುಮಾರಸ್ವಾಮಿ ಅವರಿಗೂ ಏನೂ ಸಂಬಂಧ? ಅವರು ಹಾಸನ ತ್ಯಜಿಸಿ ಎಷ್ಟು ವರ್ಷವಾಯ್ತು, ಕುಮಾರಸ್ವಾಮಿಗೂ ಹಾಸನಕ್ಕೂ ಇದ್ದ ನಂಟು ಹೋಗಿ ಬಹಳ ದಿನಗಳಾಗಿದೆ ಎಂದು ಸಚಿವ ಮಾಧುಸ್ವಾಮಿ ಕಿಡಿಕಾರಿದ್ದಾರೆ. ಕುಮಾರಸ್ವಾಮಿಗೆ ಹಾಸನ, ಹೇಮಾವತಿ ನಂಟು ಇನ್ನೂ ಇದ್ಯಾ? ಹಾಸನಕ್ಕೆ ಮಾಧುಸ್ವಾಮಿ ಕಾಟಾಚಾರಕ್ಕೆ ಬಂದು ಹೋಗುತ್ತಿದ್ದಾರೆ ಎಂದು ಹೆಚ್​ಡಿಕೆ ಹೇಳಿಕೆ ನೀಡಿದ್ದರು. ಈ ಸಂಬಂಧ ಪ್ರತಿಕ್ರಿಯಿಸಿದ ಅವರು, ನಾನು ಹಾಸನಕ್ಕೆ ಕೂಲಿ ಮಾಡಲು ಹೋಗ್ತಿಲ್ಲ, ಮಂತ್ರಿಗಿರಿ ಮಾಡಲು ಹೋಗ್ತಿದ್ದೇನೆ ಎಂದರು. ಕುಮಾರಸ್ವಾಮಿ ಏಕೆ ಹಾಸನದ ಬಗ್ಗೆ ಮಾತನಾಡುತ್ತಿದ್ದಾರೆ? […]

ಕುಮಾರಸ್ವಾಮಿಗೂ ಹೇಮಾವತಿಗೂ ನಂಟು ಇನ್ನೂ ಇದ್ಯಾ -ಮಾಧುಸ್ವಾಮಿ ಪ್ರಶ್ನೆ
ಸಾಧು ಶ್ರೀನಾಥ್​
|

Updated on:Oct 22, 2019 | 7:22 PM

Share

ಕೋಲಾರ: ಹಾಸನಕ್ಕೂ ಹೆಚ್​.ಡಿ.ಕುಮಾರಸ್ವಾಮಿ ಅವರಿಗೂ ಏನೂ ಸಂಬಂಧ? ಅವರು ಹಾಸನ ತ್ಯಜಿಸಿ ಎಷ್ಟು ವರ್ಷವಾಯ್ತು, ಕುಮಾರಸ್ವಾಮಿಗೂ ಹಾಸನಕ್ಕೂ ಇದ್ದ ನಂಟು ಹೋಗಿ ಬಹಳ ದಿನಗಳಾಗಿದೆ ಎಂದು ಸಚಿವ ಮಾಧುಸ್ವಾಮಿ ಕಿಡಿಕಾರಿದ್ದಾರೆ.

ಕುಮಾರಸ್ವಾಮಿಗೆ ಹಾಸನ, ಹೇಮಾವತಿ ನಂಟು ಇನ್ನೂ ಇದ್ಯಾ? ಹಾಸನಕ್ಕೆ ಮಾಧುಸ್ವಾಮಿ ಕಾಟಾಚಾರಕ್ಕೆ ಬಂದು ಹೋಗುತ್ತಿದ್ದಾರೆ ಎಂದು ಹೆಚ್​ಡಿಕೆ ಹೇಳಿಕೆ ನೀಡಿದ್ದರು. ಈ ಸಂಬಂಧ ಪ್ರತಿಕ್ರಿಯಿಸಿದ ಅವರು, ನಾನು ಹಾಸನಕ್ಕೆ ಕೂಲಿ ಮಾಡಲು ಹೋಗ್ತಿಲ್ಲ, ಮಂತ್ರಿಗಿರಿ ಮಾಡಲು ಹೋಗ್ತಿದ್ದೇನೆ ಎಂದರು. ಕುಮಾರಸ್ವಾಮಿ ಏಕೆ ಹಾಸನದ ಬಗ್ಗೆ ಮಾತನಾಡುತ್ತಿದ್ದಾರೆ? ಕುಮಾರಸ್ವಾಮಿ ಹಾಸನ ತ್ಯಜಿಸಿ ಎಷ್ಟು ವರ್ಷವಾಯಿತೆಂದು ಅವರನ್ನೇ ಕೇಳಿ. ಯಾವುದೇ ಸಣ್ಣ ಘರ್ಷಣೆ ಇಲ್ಲದೆ ಎರಡೂ ಜಿಲ್ಲೆಯಲ್ಲಿ ಹೇಮಾವತಿ ನದಿ ನೀರು ಹರಿದಿದೆ. ಇತಿಹಾಸದಲ್ಲಿ ಆ ರೀತಿಯ ಕೆಲಸ ಕುಮಾರಸ್ವಾಮಿ ಮಾಡಿಲ್ಲ ಎಂದರು.

25 ಸೀಟು ಗೆದ್ದು ಹೆದರೋಕಾಗುತ್ತಾ? ಯಾರ ಯಾವಾಗ ಸಾಯುತ್ತಾರೆ ಎಂದು ಹೇಗೆ ಹೇಳೋಕಾಗುತ್ತೆ? ಮುಂದೇ ಏನು ಆಗುತ್ತೆ ಎಂದು ಯಾರಿಗೆ ಗೊತ್ತಿರುತ್ತೆ. ಇರುವವರೆಗೂ ಸರ್ಕಾರ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. ಇದೇ ವೇಳೆ ಮಾತನಾಡಿದ ಮಾಧುಸ್ವಾಮಿ, ಲೋಕಸಭೆಯಲ್ಲಿ 25 ಸೀಟು ಗೆದ್ದು ಹೆದರಲು ಆಗುತ್ತಾ? ಸಿದ್ದರಾಮಯ್ಯನವರಿಗೆ ಭ್ರಮನಿರಸನವಾಗಿದೆ. ಸಿದ್ದರಾಮಯ್ಯನವರು ಸ್ವಕ್ಷೇತ್ರದಲ್ಲಿ ಸೋತಿರುವ ಸೋಲನ್ನು ಒಪ್ಪಿಕೊಳ್ಳಲು ಹೇಳಿ ಎಂದು ಗುಡುಗಿದರು.

ಸಚಿವ ಮಾಧುಸ್ವಾಮಿಗೆ ಮುತ್ತಿಗೆ: ಮಾಲೂರು ತಾಲೂಕಿನ ಶಿವಾರಪಟ್ಟಣ ಕೆರೆಯಲ್ಲಿ ಕೆ.ಸಿ.ವ್ಯಾಲಿ ಯೋಜನೆ ವೀಕ್ಷಣೆ ಮಾಡಿ ಪಂಪ್ ಹೌಸ್​ಗೆ ಚಾಲನೆ ನೀಡಿದರು. ಈ ವೇಳೆ ಜಿಲ್ಲೆಯ ವಿವಿಧ ಸಂಘಟನೆಗಳ‌ ಮುಖಂಡರು ಸಣ್ಣ ನೀರಾವರಿ ಸಚಿವ ಮಾಧುಸ್ವಾಮಿಗೆ ಮುತ್ತಿಗೆ ಹಾಕಿ ಕೆ.ಸಿ.ವ್ಯಾಲಿ ನೀರನ್ನು ಮೂರು ಹಂತದ ಶುದ್ಧೀಕರಣ ಖಾತ್ರಿ ಬಳಿಕ ನೀರು ಹರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಮನವಿ ಸಲ್ಲಿಸಿದರು. ಇದೇ ವೇಳೆ ಕೋಲಾರ ನಗರಕ್ಕೆ ನೀರು ಸರಬರಾಜು‌ ಮಾಡುವ ಅಮ್ಮೇರಹಳ್ಳಿ, ಮಡೇರಹಳ್ಳಿ ಹಾಗೂ ಅಮ್ಮಾನಿಕೆರೆಗಳಿಗೆ ನೀರು ಹರಿಸದಂತೆ ಒತ್ತಾಯಿಸಿದರು.

Published On - 7:10 pm, Tue, 22 October 19

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ