AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಮಾರಸ್ವಾಮಿಗೂ ಹೇಮಾವತಿಗೂ ನಂಟು ಇನ್ನೂ ಇದ್ಯಾ -ಮಾಧುಸ್ವಾಮಿ ಪ್ರಶ್ನೆ

ಕೋಲಾರ: ಹಾಸನಕ್ಕೂ ಹೆಚ್​.ಡಿ.ಕುಮಾರಸ್ವಾಮಿ ಅವರಿಗೂ ಏನೂ ಸಂಬಂಧ? ಅವರು ಹಾಸನ ತ್ಯಜಿಸಿ ಎಷ್ಟು ವರ್ಷವಾಯ್ತು, ಕುಮಾರಸ್ವಾಮಿಗೂ ಹಾಸನಕ್ಕೂ ಇದ್ದ ನಂಟು ಹೋಗಿ ಬಹಳ ದಿನಗಳಾಗಿದೆ ಎಂದು ಸಚಿವ ಮಾಧುಸ್ವಾಮಿ ಕಿಡಿಕಾರಿದ್ದಾರೆ. ಕುಮಾರಸ್ವಾಮಿಗೆ ಹಾಸನ, ಹೇಮಾವತಿ ನಂಟು ಇನ್ನೂ ಇದ್ಯಾ? ಹಾಸನಕ್ಕೆ ಮಾಧುಸ್ವಾಮಿ ಕಾಟಾಚಾರಕ್ಕೆ ಬಂದು ಹೋಗುತ್ತಿದ್ದಾರೆ ಎಂದು ಹೆಚ್​ಡಿಕೆ ಹೇಳಿಕೆ ನೀಡಿದ್ದರು. ಈ ಸಂಬಂಧ ಪ್ರತಿಕ್ರಿಯಿಸಿದ ಅವರು, ನಾನು ಹಾಸನಕ್ಕೆ ಕೂಲಿ ಮಾಡಲು ಹೋಗ್ತಿಲ್ಲ, ಮಂತ್ರಿಗಿರಿ ಮಾಡಲು ಹೋಗ್ತಿದ್ದೇನೆ ಎಂದರು. ಕುಮಾರಸ್ವಾಮಿ ಏಕೆ ಹಾಸನದ ಬಗ್ಗೆ ಮಾತನಾಡುತ್ತಿದ್ದಾರೆ? […]

ಕುಮಾರಸ್ವಾಮಿಗೂ ಹೇಮಾವತಿಗೂ ನಂಟು ಇನ್ನೂ ಇದ್ಯಾ -ಮಾಧುಸ್ವಾಮಿ ಪ್ರಶ್ನೆ
ಸಾಧು ಶ್ರೀನಾಥ್​
|

Updated on:Oct 22, 2019 | 7:22 PM

Share

ಕೋಲಾರ: ಹಾಸನಕ್ಕೂ ಹೆಚ್​.ಡಿ.ಕುಮಾರಸ್ವಾಮಿ ಅವರಿಗೂ ಏನೂ ಸಂಬಂಧ? ಅವರು ಹಾಸನ ತ್ಯಜಿಸಿ ಎಷ್ಟು ವರ್ಷವಾಯ್ತು, ಕುಮಾರಸ್ವಾಮಿಗೂ ಹಾಸನಕ್ಕೂ ಇದ್ದ ನಂಟು ಹೋಗಿ ಬಹಳ ದಿನಗಳಾಗಿದೆ ಎಂದು ಸಚಿವ ಮಾಧುಸ್ವಾಮಿ ಕಿಡಿಕಾರಿದ್ದಾರೆ.

ಕುಮಾರಸ್ವಾಮಿಗೆ ಹಾಸನ, ಹೇಮಾವತಿ ನಂಟು ಇನ್ನೂ ಇದ್ಯಾ? ಹಾಸನಕ್ಕೆ ಮಾಧುಸ್ವಾಮಿ ಕಾಟಾಚಾರಕ್ಕೆ ಬಂದು ಹೋಗುತ್ತಿದ್ದಾರೆ ಎಂದು ಹೆಚ್​ಡಿಕೆ ಹೇಳಿಕೆ ನೀಡಿದ್ದರು. ಈ ಸಂಬಂಧ ಪ್ರತಿಕ್ರಿಯಿಸಿದ ಅವರು, ನಾನು ಹಾಸನಕ್ಕೆ ಕೂಲಿ ಮಾಡಲು ಹೋಗ್ತಿಲ್ಲ, ಮಂತ್ರಿಗಿರಿ ಮಾಡಲು ಹೋಗ್ತಿದ್ದೇನೆ ಎಂದರು. ಕುಮಾರಸ್ವಾಮಿ ಏಕೆ ಹಾಸನದ ಬಗ್ಗೆ ಮಾತನಾಡುತ್ತಿದ್ದಾರೆ? ಕುಮಾರಸ್ವಾಮಿ ಹಾಸನ ತ್ಯಜಿಸಿ ಎಷ್ಟು ವರ್ಷವಾಯಿತೆಂದು ಅವರನ್ನೇ ಕೇಳಿ. ಯಾವುದೇ ಸಣ್ಣ ಘರ್ಷಣೆ ಇಲ್ಲದೆ ಎರಡೂ ಜಿಲ್ಲೆಯಲ್ಲಿ ಹೇಮಾವತಿ ನದಿ ನೀರು ಹರಿದಿದೆ. ಇತಿಹಾಸದಲ್ಲಿ ಆ ರೀತಿಯ ಕೆಲಸ ಕುಮಾರಸ್ವಾಮಿ ಮಾಡಿಲ್ಲ ಎಂದರು.

25 ಸೀಟು ಗೆದ್ದು ಹೆದರೋಕಾಗುತ್ತಾ? ಯಾರ ಯಾವಾಗ ಸಾಯುತ್ತಾರೆ ಎಂದು ಹೇಗೆ ಹೇಳೋಕಾಗುತ್ತೆ? ಮುಂದೇ ಏನು ಆಗುತ್ತೆ ಎಂದು ಯಾರಿಗೆ ಗೊತ್ತಿರುತ್ತೆ. ಇರುವವರೆಗೂ ಸರ್ಕಾರ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. ಇದೇ ವೇಳೆ ಮಾತನಾಡಿದ ಮಾಧುಸ್ವಾಮಿ, ಲೋಕಸಭೆಯಲ್ಲಿ 25 ಸೀಟು ಗೆದ್ದು ಹೆದರಲು ಆಗುತ್ತಾ? ಸಿದ್ದರಾಮಯ್ಯನವರಿಗೆ ಭ್ರಮನಿರಸನವಾಗಿದೆ. ಸಿದ್ದರಾಮಯ್ಯನವರು ಸ್ವಕ್ಷೇತ್ರದಲ್ಲಿ ಸೋತಿರುವ ಸೋಲನ್ನು ಒಪ್ಪಿಕೊಳ್ಳಲು ಹೇಳಿ ಎಂದು ಗುಡುಗಿದರು.

ಸಚಿವ ಮಾಧುಸ್ವಾಮಿಗೆ ಮುತ್ತಿಗೆ: ಮಾಲೂರು ತಾಲೂಕಿನ ಶಿವಾರಪಟ್ಟಣ ಕೆರೆಯಲ್ಲಿ ಕೆ.ಸಿ.ವ್ಯಾಲಿ ಯೋಜನೆ ವೀಕ್ಷಣೆ ಮಾಡಿ ಪಂಪ್ ಹೌಸ್​ಗೆ ಚಾಲನೆ ನೀಡಿದರು. ಈ ವೇಳೆ ಜಿಲ್ಲೆಯ ವಿವಿಧ ಸಂಘಟನೆಗಳ‌ ಮುಖಂಡರು ಸಣ್ಣ ನೀರಾವರಿ ಸಚಿವ ಮಾಧುಸ್ವಾಮಿಗೆ ಮುತ್ತಿಗೆ ಹಾಕಿ ಕೆ.ಸಿ.ವ್ಯಾಲಿ ನೀರನ್ನು ಮೂರು ಹಂತದ ಶುದ್ಧೀಕರಣ ಖಾತ್ರಿ ಬಳಿಕ ನೀರು ಹರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಮನವಿ ಸಲ್ಲಿಸಿದರು. ಇದೇ ವೇಳೆ ಕೋಲಾರ ನಗರಕ್ಕೆ ನೀರು ಸರಬರಾಜು‌ ಮಾಡುವ ಅಮ್ಮೇರಹಳ್ಳಿ, ಮಡೇರಹಳ್ಳಿ ಹಾಗೂ ಅಮ್ಮಾನಿಕೆರೆಗಳಿಗೆ ನೀರು ಹರಿಸದಂತೆ ಒತ್ತಾಯಿಸಿದರು.

Published On - 7:10 pm, Tue, 22 October 19

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ