ಈಶ್ವರಪ್ಪ ಬೆನ್ನಲ್ಲೇ ಯಡಿಯೂರಪ್ಪ ವಿರುದ್ಧ ಮತ್ತೋರ್ವ ಟಿಕೆಟ್ ವಂಚಿತ ನಾಯಕ ಕೆಂಡಾಮಂಡಲ

ತಮ್ಮ ಪುತ್ರನಿಗೆ ಹಾವೇರಿ ಲೋಕಸಭಾ ಟಿಕೆಟ್ ಕೊಡಿಸುವುದಾಗಿ ಮೋಸ ಮಾಡಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಅವರು ಬಿಎಸ್ ಯಡಿಯೂರಪ್ಪ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. ಇದೀಗ ಮತ್ತೋರ್ವ ಬಿಜೆಪಿ ನಾಯಕ ಜೆಸಿ ಮಾಧುಸ್ವಾಮಿ ಅವರು ಬಿಎಸ್​ವೈ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಈಶ್ವರಪ್ಪ ಬೆನ್ನಲ್ಲೇ ಯಡಿಯೂರಪ್ಪ ವಿರುದ್ಧ ಮತ್ತೋರ್ವ ಟಿಕೆಟ್ ವಂಚಿತ ನಾಯಕ ಕೆಂಡಾಮಂಡಲ
ಬಿಎಸ್ ಯಡಿಯೂರಪ್ಪ
Follow us
| Updated By: ರಮೇಶ್ ಬಿ. ಜವಳಗೇರಾ

Updated on: Mar 15, 2024 | 4:34 PM

ತುಮಕೂರು, (ಮಾರ್ಚ್ 15): ಕೆಎಸ್ ಈಶ್ವರಪ್ಪ (KS Eshwarappa) ಬೆನ್ನಲ್ಲೇ ಇದೀಗ ಮಾಜಿ ಸಚಿವ ಜೆಸಿ ಮಾಧುಸ್ವಾಮಿ(JC Madhuswamy)  ಅವರು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ(BS Yediyurappa) ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ತುಮಕೂರು (Tumakuru) ಟಿಕೆಟ್​ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿರುವ ಮಾಧುಸ್ವಾಮಿ, ಯಡಿಯೂರಪ್ಪ ವಿರುದ್ಧ ಮಾಧುಸ್ವಾಮಿ ಕೆಂಡಾಮಂಡಲರಾಗಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಮಾಧುಸ್ವಾಮಿ, ಮನೆಯಲ್ಲಿ ಕುಳಿತಿದ್ದವರನ್ನ ಚುನಾವಣೆಗೆ ರೆಡಿ ಆಗಿ ಅಂದ್ರು. ಈಗ ನಡು ನೀರಿನಲ್ಲಿ ಕೈ ಬಿಟ್ಟಿದ್ದಾರೆ. ನಂಬಿಸಿ ಕೈಬಿಟ್ಟ ಯಡಿಯೂರಪ್ಪ ಮೇಲೆ ನಮಗೆ ಬೇಸರವಿದೆ ಎಂದು ಹೇಳಿದ್ದಾರೆ.

ಸೋಮಣ್ಣ ಅವಕಾಶವಾದಿ, ಅವರು ಅವಕಾಶ ಕೇಳಿದ್ದಾರೆ‌. ಸೋಮಣ್ಣ ಮೇಲೆ ನಮಗೇನು ಬೇಸರ ಇಲ್ಲ. ಆದ್ರೆ, ನಂಬಿಸಿ ಕೈಬಿಟ್ಟ ಯಡಿಯೂರಪ್ಪ ಮೇಲೆ ನಮಗೆ ಬೇಸರವಾಗಿದೆ. ಬೆಂಗಳೂರಿನಿಂದ ಎಂಎಲ್ ಸಿಗೆ ತಂದು ನಿಲ್ಲಿಸಿದ್ವಿ. ಅವನ ವಿರುದ್ಧ ಬಸವರಾಜು ಮಾಡಿದ್ರು. ಯಾರ್ಯಾರು ನನಗೆ ಅನ್ಯಾಯ ಮಾಡಿದ್ರು ಎಂದು ಪಕ್ಷಕ್ಕೆ 10 ಪೇಜ್ ಬರೆದುಕೊಟ್ಟ. ಇವತ್ತು ಅವರೇ ದೊಡ್ಡವರಾಗಿದ್ದಾರೆ. ನಾವು ಇವತ್ತು ನಿಷ್ಠಾವಂತವಾಗಿ ದುಡಿದವರೇ ಲೆಕ್ಕಕ್ಕಿಲ್ಲ ಅಂದ್ರೆ ನೋವು ಆಗಲ್ವಾ. ನಾವೇನು ಪಾರ್ಲಿಮೆಂಟ್ ನಲ್ಲಿ ಕೊಡಿ, ವಿಧಾನಸಭೆಯಲ್ಲಿ ಕೊಡಿ ಎಂದು ಕೇಳಿಲ್ಲ. ಗೌರವಯುತವಾಗಿ ವರ್ತಿಸದೇ ಇದ್ದರೆ ಹೇಗೆ? ನೋವು ಬಾದಿಸುತ್ತೆ ಅಲ್ವಾ? ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ: ಯಡಿಯೂರಪ್ಪ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ: ತನಿಖೆ ಹೊಣೆ ಸಿಐಡಿಗೆ

ನಂಬಿದವರೇ ನಮಗೆ ಕೈ ಕೊಡುತ್ತಾರೆ ಎನ್ನುವ ನೋವು. ನಾನು ಬಿಜೆಪಿಗೆ ಹೋಗಬೇಕು ಅಂದ್ರೆ ಯಡಿಯೂರಪ್ಪ ಬಿಟ್ಟು ಬೇರೆ ಕಾರಣ ಇರಲಿಲ್ಲ. ಕೆಜಿಪಿ ಪಾರ್ಟಿ ಮಾಡಿದಾಗ ಯಡಿಯೂರಪ್ಪಗೆ ಶಕ್ತಿ ಕೊಡಬೇಕು ಎಂದು ಕೆಜೆಪಿಗೆ ಹೋದವರು ನಾವು. ಯಡಿಯೂರಪ್ಪ ಬದಲಾದಂಗೆ ಅವರ ಜೊತೆ ಹೋದ್ವಿ ಅದೇ ತಪ್ಪಾ? ನಾವು ಪ್ರಶ್ನೆನೇ ಮಾಡಲಿಲ್ಲ. ಯಾಕೆ ಕೆಜಿಪಿ ಬಿಟ್ಟು ಬಿಜೆಪಿಗೆ ಹೋಗುತ್ತೀರಾ ಎಂದು ಅಂದು ಕೇಳಲಿಲ್ಲ. ಲೀಡರ್ ಒಳ್ಳೆದೋ ಕೆಟ್ಟದೋ ಅವರನ್ನ ಫಾಲೋ ಮಾಡೋಣಾ ಎಂದು ಹೋದ್ವಿ ಎಂದು ಯಡಿಯೂರಪ್ಪ ವಿರುದ್ಧ ಆಕ್ರೋಶ ಹೊರಹಾಕಿದರು.

ಮನೆಯಲ್ಲಿ ಕುಳಿತಿದ್ದವರನ್ನ ತಯಾರಾಗು ಅಂತ ಹೇಳಿ ಈಗ ನಡು ನೀರಿನಲ್ಲಿ ಕೈ ಬಿಟ್ಟಿದ್ದಾರೆ. ಸೋಮಣ್ಣ ಅವಕಾಶವಾದಿ ಅವರು ಅವಕಾಶ ಕೇಳಿದ್ದಾರೆ‌. ಅವರ ಮೇಲೆ ನಮಗೇನು ಬೇಸರ ಇಲ್ಲ‌ ನಂಬಿಸಿ ಕೈಬಿಟ್ಟ ಯಡಿಯೂರಪ್ಪನ ಮೇಲೆ ನಮಗೆ ಬೇಸರ. ನಾನು ಸೋಮಣ್ಣ ಮನೆಗೆ ಬರಬೇಡಿ ಎಂದು ಹೇಳುವಷ್ಟು ಕೆಟ್ಟ ಮನುಷ್ಯ ಅಲ್ಲ ‌. ನಾನು ಸೆಟಲ್ ಆಗಿಲ್ಲ, ನನ್ನ ಮನಸ್ಥಿತಿ ಸರಿಯಾಗಿಲ್ಲ. ನೀನು ಈ ಟೈಮ್ ನಲ್ಲಿ ಬರೋದು ಬೇಡ. ನಾಲ್ಕೈದು ದಿನ ಟೈಮ್ ಕೊಡು ಎಂದು ಹೇಳಿದ್ದೇನೆ ಎಂದು ಸ್ಪಷ್ಟಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
‘ರೇಣುಕಾ ಸ್ವಾಮಿ ಮಾಡಿದ್ದು ದೊಡ್ಡ ತಪ್ಪು, ಅದನ್ನು ಯಾರೂ ಗಮನಿಸ್ತಿಲ್ಲ’
‘ರೇಣುಕಾ ಸ್ವಾಮಿ ಮಾಡಿದ್ದು ದೊಡ್ಡ ತಪ್ಪು, ಅದನ್ನು ಯಾರೂ ಗಮನಿಸ್ತಿಲ್ಲ’
ಸಿದ್ದರಾಮಯ್ಯರೆಡೆ ವಿಜಯಾನಂದ ಕಾಶಪ್ಪನವರ್ ಧೋರಣೆ ಬದಲಾಗಿದೆಯೇ?
ಸಿದ್ದರಾಮಯ್ಯರೆಡೆ ವಿಜಯಾನಂದ ಕಾಶಪ್ಪನವರ್ ಧೋರಣೆ ಬದಲಾಗಿದೆಯೇ?
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ