AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಶ್ವರಪ್ಪ ಬೆನ್ನಲ್ಲೇ ಯಡಿಯೂರಪ್ಪ ವಿರುದ್ಧ ಮತ್ತೋರ್ವ ಟಿಕೆಟ್ ವಂಚಿತ ನಾಯಕ ಕೆಂಡಾಮಂಡಲ

ತಮ್ಮ ಪುತ್ರನಿಗೆ ಹಾವೇರಿ ಲೋಕಸಭಾ ಟಿಕೆಟ್ ಕೊಡಿಸುವುದಾಗಿ ಮೋಸ ಮಾಡಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಅವರು ಬಿಎಸ್ ಯಡಿಯೂರಪ್ಪ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. ಇದೀಗ ಮತ್ತೋರ್ವ ಬಿಜೆಪಿ ನಾಯಕ ಜೆಸಿ ಮಾಧುಸ್ವಾಮಿ ಅವರು ಬಿಎಸ್​ವೈ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಈಶ್ವರಪ್ಪ ಬೆನ್ನಲ್ಲೇ ಯಡಿಯೂರಪ್ಪ ವಿರುದ್ಧ ಮತ್ತೋರ್ವ ಟಿಕೆಟ್ ವಂಚಿತ ನಾಯಕ ಕೆಂಡಾಮಂಡಲ
ಬಿಎಸ್ ಯಡಿಯೂರಪ್ಪ
TV9 Web
| Edited By: |

Updated on: Mar 15, 2024 | 4:34 PM

Share

ತುಮಕೂರು, (ಮಾರ್ಚ್ 15): ಕೆಎಸ್ ಈಶ್ವರಪ್ಪ (KS Eshwarappa) ಬೆನ್ನಲ್ಲೇ ಇದೀಗ ಮಾಜಿ ಸಚಿವ ಜೆಸಿ ಮಾಧುಸ್ವಾಮಿ(JC Madhuswamy)  ಅವರು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ(BS Yediyurappa) ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ತುಮಕೂರು (Tumakuru) ಟಿಕೆಟ್​ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿರುವ ಮಾಧುಸ್ವಾಮಿ, ಯಡಿಯೂರಪ್ಪ ವಿರುದ್ಧ ಮಾಧುಸ್ವಾಮಿ ಕೆಂಡಾಮಂಡಲರಾಗಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಮಾಧುಸ್ವಾಮಿ, ಮನೆಯಲ್ಲಿ ಕುಳಿತಿದ್ದವರನ್ನ ಚುನಾವಣೆಗೆ ರೆಡಿ ಆಗಿ ಅಂದ್ರು. ಈಗ ನಡು ನೀರಿನಲ್ಲಿ ಕೈ ಬಿಟ್ಟಿದ್ದಾರೆ. ನಂಬಿಸಿ ಕೈಬಿಟ್ಟ ಯಡಿಯೂರಪ್ಪ ಮೇಲೆ ನಮಗೆ ಬೇಸರವಿದೆ ಎಂದು ಹೇಳಿದ್ದಾರೆ.

ಸೋಮಣ್ಣ ಅವಕಾಶವಾದಿ, ಅವರು ಅವಕಾಶ ಕೇಳಿದ್ದಾರೆ‌. ಸೋಮಣ್ಣ ಮೇಲೆ ನಮಗೇನು ಬೇಸರ ಇಲ್ಲ. ಆದ್ರೆ, ನಂಬಿಸಿ ಕೈಬಿಟ್ಟ ಯಡಿಯೂರಪ್ಪ ಮೇಲೆ ನಮಗೆ ಬೇಸರವಾಗಿದೆ. ಬೆಂಗಳೂರಿನಿಂದ ಎಂಎಲ್ ಸಿಗೆ ತಂದು ನಿಲ್ಲಿಸಿದ್ವಿ. ಅವನ ವಿರುದ್ಧ ಬಸವರಾಜು ಮಾಡಿದ್ರು. ಯಾರ್ಯಾರು ನನಗೆ ಅನ್ಯಾಯ ಮಾಡಿದ್ರು ಎಂದು ಪಕ್ಷಕ್ಕೆ 10 ಪೇಜ್ ಬರೆದುಕೊಟ್ಟ. ಇವತ್ತು ಅವರೇ ದೊಡ್ಡವರಾಗಿದ್ದಾರೆ. ನಾವು ಇವತ್ತು ನಿಷ್ಠಾವಂತವಾಗಿ ದುಡಿದವರೇ ಲೆಕ್ಕಕ್ಕಿಲ್ಲ ಅಂದ್ರೆ ನೋವು ಆಗಲ್ವಾ. ನಾವೇನು ಪಾರ್ಲಿಮೆಂಟ್ ನಲ್ಲಿ ಕೊಡಿ, ವಿಧಾನಸಭೆಯಲ್ಲಿ ಕೊಡಿ ಎಂದು ಕೇಳಿಲ್ಲ. ಗೌರವಯುತವಾಗಿ ವರ್ತಿಸದೇ ಇದ್ದರೆ ಹೇಗೆ? ನೋವು ಬಾದಿಸುತ್ತೆ ಅಲ್ವಾ? ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ: ಯಡಿಯೂರಪ್ಪ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ: ತನಿಖೆ ಹೊಣೆ ಸಿಐಡಿಗೆ

ನಂಬಿದವರೇ ನಮಗೆ ಕೈ ಕೊಡುತ್ತಾರೆ ಎನ್ನುವ ನೋವು. ನಾನು ಬಿಜೆಪಿಗೆ ಹೋಗಬೇಕು ಅಂದ್ರೆ ಯಡಿಯೂರಪ್ಪ ಬಿಟ್ಟು ಬೇರೆ ಕಾರಣ ಇರಲಿಲ್ಲ. ಕೆಜಿಪಿ ಪಾರ್ಟಿ ಮಾಡಿದಾಗ ಯಡಿಯೂರಪ್ಪಗೆ ಶಕ್ತಿ ಕೊಡಬೇಕು ಎಂದು ಕೆಜೆಪಿಗೆ ಹೋದವರು ನಾವು. ಯಡಿಯೂರಪ್ಪ ಬದಲಾದಂಗೆ ಅವರ ಜೊತೆ ಹೋದ್ವಿ ಅದೇ ತಪ್ಪಾ? ನಾವು ಪ್ರಶ್ನೆನೇ ಮಾಡಲಿಲ್ಲ. ಯಾಕೆ ಕೆಜಿಪಿ ಬಿಟ್ಟು ಬಿಜೆಪಿಗೆ ಹೋಗುತ್ತೀರಾ ಎಂದು ಅಂದು ಕೇಳಲಿಲ್ಲ. ಲೀಡರ್ ಒಳ್ಳೆದೋ ಕೆಟ್ಟದೋ ಅವರನ್ನ ಫಾಲೋ ಮಾಡೋಣಾ ಎಂದು ಹೋದ್ವಿ ಎಂದು ಯಡಿಯೂರಪ್ಪ ವಿರುದ್ಧ ಆಕ್ರೋಶ ಹೊರಹಾಕಿದರು.

ಮನೆಯಲ್ಲಿ ಕುಳಿತಿದ್ದವರನ್ನ ತಯಾರಾಗು ಅಂತ ಹೇಳಿ ಈಗ ನಡು ನೀರಿನಲ್ಲಿ ಕೈ ಬಿಟ್ಟಿದ್ದಾರೆ. ಸೋಮಣ್ಣ ಅವಕಾಶವಾದಿ ಅವರು ಅವಕಾಶ ಕೇಳಿದ್ದಾರೆ‌. ಅವರ ಮೇಲೆ ನಮಗೇನು ಬೇಸರ ಇಲ್ಲ‌ ನಂಬಿಸಿ ಕೈಬಿಟ್ಟ ಯಡಿಯೂರಪ್ಪನ ಮೇಲೆ ನಮಗೆ ಬೇಸರ. ನಾನು ಸೋಮಣ್ಣ ಮನೆಗೆ ಬರಬೇಡಿ ಎಂದು ಹೇಳುವಷ್ಟು ಕೆಟ್ಟ ಮನುಷ್ಯ ಅಲ್ಲ ‌. ನಾನು ಸೆಟಲ್ ಆಗಿಲ್ಲ, ನನ್ನ ಮನಸ್ಥಿತಿ ಸರಿಯಾಗಿಲ್ಲ. ನೀನು ಈ ಟೈಮ್ ನಲ್ಲಿ ಬರೋದು ಬೇಡ. ನಾಲ್ಕೈದು ದಿನ ಟೈಮ್ ಕೊಡು ಎಂದು ಹೇಳಿದ್ದೇನೆ ಎಂದು ಸ್ಪಷ್ಟಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ