AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮತ್ತೆ ಜೆಸಿಬಿ ಘರ್ಜನೆ: ಬಿಡಿಎ ಜಾಗದಲ್ಲಿ ಅಕ್ರಮ ಅಂಗಡಿ-ಮುಂಗಟ್ಟುಗಳು ಧೂಳಿಪಟ

ನಾಗರಬಾವಿ ಸಮೀಪದ ಚಂದ್ರ ಲೇಔಟ್​ನಲ್ಲಿ ಇಂದು ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ ಮಾಡಿದೆ. ಆ ಮೂಲಕ ಬಿಡಿಎ ಕಾರ್ಯಾಚರಣೆಯಿಂದ 40ಕ್ಕೂ ಹೆಚ್ಚಿನ ಅಂಗಡಿ-ಮುಂಗಟ್ಟುಗಳು ನೆಲಕ್ಕುರುಳಿವೆ. ಇತ್ತ ಬಿಡಿಎ ಹಲವು ವರ್ಷಗಳ ಬಳಿಕ ತನ್ನ ಒಡೆತನದ ಜಾಗ ಸಿಕ್ಕ ಖುಷಿಯಲ್ಲಿದ್ದರೆ, ಅತ್ತ ಅಂಗಡಿ-ಮುಂಗಟ್ಟುಗಳು ಕಳೆದುಕೊಂಡವರು ಕಣ್ಣೀರು ಹಾಕುವಂತಾಗಿದೆ.

ಬೆಂಗಳೂರಿನಲ್ಲಿ ಮತ್ತೆ ಜೆಸಿಬಿ ಘರ್ಜನೆ: ಬಿಡಿಎ ಜಾಗದಲ್ಲಿ ಅಕ್ರಮ ಅಂಗಡಿ-ಮುಂಗಟ್ಟುಗಳು ಧೂಳಿಪಟ
ಬೆಂಗಳೂರಿನಲ್ಲಿ ಮತ್ತೆ ಜೆಸಿಬಿ ಘರ್ಜನೆ: ಬಿಡಿಎ ಜಾಗದಲ್ಲಿ ಅಕ್ರಮ ಅಂಗಡಿ-ಮುಂಗಟ್ಟುಗಳು ಧೂಳಿಪಟ
ಶಾಂತಮೂರ್ತಿ
| Edited By: |

Updated on: Sep 28, 2024 | 5:45 PM

Share

ಬೆಂಗಳೂರು, ಸೆಪ್ಟೆಂಬರ್​ 28: ಅವರೆಲ್ಲಾ ಎಂದಿನಂತೆ ನಿತ್ಯ ವ್ಯಾಪಾರ ಆರಂಭಿಸಿದ್ದರು. ಮಂಗಳವಾರದ ವರೆಗೂ ಸಮಯ ಇದೆ. ಇಂದೋ, ನಾಳೆಗೋ ಜಾಗ ಖಾಲಿ ಮಾಡಿದರೆ ಆಯ್ತು ಅನ್ನೋ ಐಡಿಯಾದಲ್ಲಿದ್ದರು. ಆದರೆ ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ ಮಾಡಿದ್ದು, ಸಾಕಷ್ಟು ಜನರ ಬದುಕಿಗೆ ಪೆಟ್ಟು ಬಿದ್ದಿದೆ. ಬಿಡಿಎ (BDA) ಜಾಗದಲ್ಲಿ ಬುಲ್ಡೋಜರ್ ಸದ್ದು ಮಾಡಿದ್ದು, ಅಕ್ರಮ ಅಂಗಡಿ-ಮುಂಗಟ್ಟುಗಳು ಧೂಳಿಪಟವಾಗಿವೆ.

40ಕ್ಕೂ ಹೆಚ್ಚು ಅಂಗಡಿ-ಮುಂಗಟ್ಟು ನೆಲಸಮ

ಬೆಳ್ಳಂಬೆಳಿಗ್ಗೆ ಬಿಡಿಎ ಜೆಸಿಬಿಗಳು ನಾಗರಬಾವಿ ಸಮೀಪದ ಚಂದ್ರ ಲೇಔಟ್​ನಲ್ಲಿ ಘರ್ಜಿಸಿದ ಎಫೆಕ್ಟ್​ಗೆ ನಿನ್ನೆ ಇದ್ದ ಅಂಗಡಿಗಳೆಲ್ಲ ಇಂದು ನೆಲಸಮವಾಗಿ ಬಿಟ್ಟಿವೆ. ಬಿಡಿಎ ಜಾಗದಲ್ಲಿದ್ದ 40ಕ್ಕೂ ಹೆಚ್ಚು ಅಂಗಡಿ-ಮುಂಗಟ್ಟುಗಳನ್ನ ಬಿಡಿಎ ಕ್ಷಣ ಮಾತ್ರದಲ್ಲಿ ನೆಲಸಮ ಮಾಡಿದ್ದು, ಬಿಡಿಎ ಇತಿಹಾಸದಲ್ಲೇ ಅತಿದೊಡ್ಡ ಡೆಮಾಲಿಷನ್ ಮಾಡಿ ಕಟ್ಟಡಗಳನ್ನ ಧರೆಗುರುಳಿಸಿದೆ. ಬಂಡವಾಳ ಹಾಕಿ ಲಾಭದ ನಿರೀಕ್ಷೆಯಲ್ಲಿ ಅಂಗಡಿ ತೆಗೆದಿದ್ದವರು ಕಣ್ಣ ಮುಂದೆಯೇ ಕಟ್ಟಡಗಳು ಧ್ವಂಸವಾಗುತ್ತಿದ್ದರೂ ಏನೂ ಮಾಡಲಾಗದ ಸ್ಥಿತಿ ನಿರ್ಮಾಣವಾಗಿತ್ತು.

ಇದನ್ನೂ ಓದಿ: ಬೆಂಗಳೂರಿನಲ್ಲಿ 279 ಅನಧಿಕೃತ ಲೇಔಟ್​​ಗಳು ಪತ್ತೆ: ಈ ಸ್ಥಳಗಳಲ್ಲಿ ಜಾಗ ಖರೀದಿಸದಂತೆ ಬಿಡಿಎ ಎಚ್ಚರಿಕೆ

ಅಂದಹಾಗೇ ಒಂದಲ್ಲ, ಎರಡಲ್ಲ 9 ಎಕರೆ 13 ಗುಂಟೆಯ ಬಿಡಿಎ ಜಾಗ. ತನ್ನದೇ ಜಾಗವನ್ನ ಖಾಸಗಿ ವ್ಯಕ್ತಿ ಕಬ್ಜ ಮಾಡಿದ್ದು ಕೋರ್ಟ್ ಅಂಗಳದಲ್ಲಿ ಹಲವು ವರ್ಷಗಳಿಂದ ಜಾಗ ವಿವಾದದಲ್ಲಿತ್ತು. ವಿವಾದದ ಭೂಮಿ ಬಿಡಿಎಗೆ ಸೇರಿದೆ ಅಂತಾ ಆದೇಶ ಬಂದಿದ್ದೆ ತಡ ಪೊಲೀಸರ ಜೊತೆ ಎಂಟ್ರಿಕೊಟ್ಟ ಬಿಡಿಎ ಅಧಿಕಾರಿಗಳು ಸರ್ವೇ ನಂಬರ್ 78ರಲ್ಲಿದ್ದ 9 ಎಕರೆ ಜಾಗದ 500 ಕೋಟಿ ರೂ. ಮೌಲ್ಯದ ಜಾಗವನ್ನ ತೆಕ್ಕೆಗೆ ಪಡೆದುಕೊಂಡಿದೆ. ಬಿಡಿಎ ಎಇ ರವಿಕುಮಾರ್, ಬಿಡಿಎ ಅಧಿಕಾರಿಗಳ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಬಿಡಿಎ ಜಾಗವನ್ನ ಬಿಡಿಎ ಮತ್ತೆ ತನ್ನ ತೆಕ್ಕೆಗೆ ತೆಗೆದುಕೊಂಡಿದೆ.

ಸದ್ಯ ಬಿಡಿಎ ಕಾರ್ಯಾಚರಣೆಯಿಂದ 40ಕ್ಕೂ ಹೆಚ್ಚಿನ ಅಂಗಡಿ-ಮುಂಗಟ್ಟುಗಳು ನೆಲಕ್ಕುರುಳಿವೆ. ಇತ್ತ ತೆರವು ಮಾಡಲು ಮೊದಲೇ ನೋಟಿಸ್ ಕೊಟ್ಟಿದ್ದೇವೆ ಎನ್ನುವುದು ಬಿಡಿಎ ವಾದವಾದರೆ, ಇತ್ತ ವ್ಯಾಪಾರಿಗಳು ಮಾತ್ರ ಬಿಬಿಎಂಪಿ ಲೈಸೆನ್ಸ್ , ಫುಡ್ ಲೈಸೆನ್ಸ್ , ಎಲ್ಲಾ ಇದ್ದೂ ನಮಗೆ ಕೊಟ್ಟ ಕಾಲಾವಶಕ್ಕಿಂತ ಮೊದಲೇ ಡೆಮಾಲಿಶ್ ಮಾಡುತ್ತಿದಾರೆ ಅಂತಾ ಗೋಳಾಡಿದ್ದಾರೆ. ತೆರವು ಮಾಡಲಿ ಆದರೆ ಅಂಗಡಿಯಲ್ಲಿದ್ದ ವಸ್ತುಗಳನ್ನ ಸಾಗಿಸುವುದಕ್ಕೆ ಸ್ವಲ್ಪ ಸಮಯ ಕೊಡಬೇಕಿತ್ತು. ಈಗ ಸಾವಿರಾರು ರೂಪಾಯಿ ನಷ್ಟವಾಗಿದೆ ಎಂದು ವ್ಯಾಪಾರಿ ಜುಬೇರ್​ ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: ಯಡಿಯೂರಪ್ಪ ಮಂಜೂರು ಮಾಡಿದ್ದ ಜಾಗ 8 ವರ್ಷಗಳ ಬಳಿಕ ಪತ್ತೆ: ರುದ್ರಭೂಮಿಗೆ ಈಗ ಗುದ್ದಲಿ ಪೂಜೆ

ಬಿಡಿಎ ಮತ್ತು ಖಾಸಗಿ ವ್ಯಕ್ತಿಗಳ ನಡುವಿನ ಜಟಾಪಟಿಯಿಂದ ದಿನದ ಲಾಭದ ಲೆಕ್ಕಾಚಾರ ಹಾಕಿ ತಿಂಗಳ ಖರ್ಚು ನಿಭಾಯಿಸುತ್ತಿದ್ದ ವ್ಯಾಪಾರಸ್ಥರ ಬದುಕು ಬೀದಿಗೆ ಬಂದಿದೆ. ಸಾಲ ಸೋಲ ಮಾಡಿ ವ್ಯಾಪಾರಕ್ಕೆ ಬಂಡವಾಳ ಹಾಕಿದ್ದ ವ್ಯಾಪಾರಿಗಳು ಕಂಗಾಲಾಗಿದ್ದರೆ, ಇತ್ತ ಬಿಡಿಎ ಹಲವು ವರ್ಷಗಳ ಬಳಿಕ ತನ್ನ ಒಡೆತನದ ಜಾಗ ಸಿಕ್ಕ ಖುಷಿಯಲ್ಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ