AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

​ದಕ್ಷಿಣ ಶಿಕ್ಷಕರ ಕ್ಷೇತ್ರದ ಫಲಿತಾಂಶ ಪ್ರಕಟ: ಕಾಂಗ್ರೆಸ್​ ಧೂಳಿಪಟ, ಇತಿಹಾಸ ನಿರ್ಮಿಸಿದ ಮೈತ್ರಿ ಅಭ್ಯರ್ಥಿ

ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ನಡೆದಿದ್ದ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಆಡಳಿತರೂಢ ಕಾಂಗ್ರೆಸ್​ ಹೀನಾಯ ಸೋಲನುಭವಿಸಿದೆ. ಬಿಜೆಪಿ, ಜೆಡಿಎಸ್​​ ಮೈತ್ರಿ ಅಭ್ಯರ್ಥಿ ಮೊದಲ ಪ್ರಾಶಸ್ತ್ಯದ ಮತಗಳಲ್ಲೇ ಗೆಲುವಿನ ನಗೆ ಬೀರಿದ್ದಾರೆ. ಈ ಮೂಲಕ ಮೈಸೂರು ಲೋಕಸಭೆ ಬೆನ್ನಲ್ಲೇ ಇದೀಗ ದಕ್ಷಿಣ ಶಿಕ್ಷಕರ ಚುನಾವಣೆಯಲ್ಲೂ ಸಿದ್ದರಾಮಯ್ಯಗೆ ತೀವ್ರ ಮುಖಭಂಗವಾಗಿದೆ.

​ದಕ್ಷಿಣ ಶಿಕ್ಷಕರ ಕ್ಷೇತ್ರದ ಫಲಿತಾಂಶ ಪ್ರಕಟ: ಕಾಂಗ್ರೆಸ್​ ಧೂಳಿಪಟ, ಇತಿಹಾಸ ನಿರ್ಮಿಸಿದ ಮೈತ್ರಿ ಅಭ್ಯರ್ಥಿ
ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ವಿವೇಕಾನಂದ
ರಾಮ್​, ಮೈಸೂರು
| Edited By: |

Updated on: Jun 06, 2024 | 6:49 PM

Share

ಮೈಸೂರು, (ಜೂನ್ 06): ತೀವ್ರ ಕುತೂಹಲ ಮೂಡಿಸಿದ್ದ ವಿಧಾನಪರಿಷತ್‌ನ ದಕ್ಷಿಣ ಶಿಕ್ಷಕರ ಕ್ಷೇತ್ರದ ಫಲಿತಾಂಶ (South Teachers Constituency Election Result) ಪ್ರಕಟವಾಗಿದ್ದು, ಜೆಡಿಎಸ್​- ಬಿಜೆಪಿ ಮೈತ್ರಿ ಅಭ್ಯರ್ಥಿ ವಿವೇಕಾನಂದ ಅವರು ಮೊದಲ ಪ್ರಾಶಸ್ತ್ಯ ಮತಗಳಲ್ಲಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ ವಿರುದ್ಧ ವಿವೇಕಾನಂದ ಅವರು ಬರೋಬ್ಬರಿ 4622 ಮತಗಳ ಭಾರೀ ಅಂತರಿಂದ ಮೊದಲ ಪ್ರಾಶಸ್ತ್ಯದಲ್ಲೇ ಗೆಲುವು ಸಾಧಿಸಿದ್ದಾರೆ. ಈ ಮೂಲಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣಾ ಇತಿಹಾಸದಲ್ಲಿ ಮೊದಲ ಪ್ರಾಶಸ್ತ್ಯ ಮತದಲ್ಲಿ ಗೆದ್ದ ವಿವೇಕಾನಂದ ಹೊಸ ದಾಖಲೆ ಬರೆದಿದ್ದಾರೆ.

ಬಿಜೆಪಿ-ಜೆಡಿಎಸ್​ ಮೈತ್ರಿ ಅಭ್ಯರ್ಥಿ ವಿವೇಕಾನಂದ ಅವರು ಒಟ್ಟು 10823 ಮತಗಳು ಪಡೆದುಕೊಂಡಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡಗೆ 6201 ಮತಗಳು ಸಿಕ್ಕಿವೆ. ಇನ್ನು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು 84 ಮತಗಳನ್ನು ಪಡೆದುಕೊಂಡಿದ್ದಾರೆ. ಇದರೊಂದಿಗೆ ಬಿಜೆಪಿ-ಜೆಡಿಎಸ್​ ಮೈತ್ರಿ ಅಭ್ಯರ್ಥಿ ವಿವೇಕಾನಂದ ಬರೋಬ್ಬರಿ 4622 ಮತಗಳ ಭಾರೀ ಅಂತರಿಂದ ಮೊದಲ ಪ್ರಾಶಸ್ತ್ಯ ಮತಗಳಲ್ಲೇ ಗೆಲುವು ಸಾಧಿಸಿದ್ದಾರೆ.

ಇದನ್ನೂ ಓದಿ: ವಿಧಾನಸಭೆಯಿಂದ ವಿಧಾನಪರಿಷತ್‌ಗೆ 11 ಸದಸ್ಯರು ಅವಿರೋಧ ಆಯ್ಕೆ: ಯಾರ್ಯಾರು? ಇಲ್ಲಿದೆ ಪಟ್ಟಿ

ಈ ಮೂಲಕ ಮರಿತಿಬ್ಬೇಗೌಡ ಅವರ ಗೆಲುವಿನ ನಾಗಾಲೋಟಕ್ಕೆ ಈ ಬಾರಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ವಿವೇಕಾನಂದ ಬ್ರೇಕ್ ಹಾಕಿದ್ದಾರೆ. ಕಳೆದ ಬಾರಿ  ಮರಿತಿಬ್ಬೇಗೌಡ ಅವರು ಜೆಡಿಎಸ್‌ನಿಂದ ಗೆದ್ದು ನಂತರದ ದಿನಗಳಲ್ಲಿ ಪಕ್ಷಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್‌ ಸೇರಿದ್ದರು. ಈ ಬಾರಿ ಕಾಂಗ್ರೆಸ್​ನಿಂದ ಸ್ಪರ್ಧೆ ಮಾಡಿ ಸೋಲುಕಂಡಿದ್ದಾರೆ.

ಇನ್ನು 1049 ಶಿಕ್ಷಕರ ಮತಗಳು ಕುಲಗೆಟ್ಟಿರುವುದು ವಿಪರ್ಯಾಸ. ಯಾಕಂದ್ರೆ, ಶಿಕ್ಷಕರು ವಿದ್ಯಾವಂತರು. ಮಕ್ಕಳಿಗೆ ಪಾಠ ಹೇಳಿಕೊಡುವಂತವರು. ಅವರಿಗೇ ಚುನಾವಣೆಯಲ್ಲಿ ಮತದಾನ ಮಾಡಲು ಬಂದಿಲ್ಲ. ಹೀಗಾಗಿ ಶಿಕ್ಷಕರು ಚಲಾಯಿಸಿದ್ದ 1049 ಮತಗಳು ತಿರಸ್ಕೃತಗೊಂಡಿವೆ.

ಸಿದ್ದರಾಮಯ್ಯಗೆ ಮುಖಭಂಗ

ಈ ಫಲಿತಾಂಶದದೊಂದಿಗೆ ಸಿಎಂ ಸಿದ್ದರಾಮಯ್ಯ ಅವರು ತವರು ಜಿಲ್ಲೆ ಮೈಸೂರಿನಲ್ಲಿ 2 ಚುನಾವಣೆಗಳಲ್ಲಿ ಕಾಂಗ್ರೆಸ್‌ಗೆ ಸೋಲಾಗಿದೆ. ಮೈಸೂರು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ, ಬಿಜೆಪಿ ಯದವೀರ್ ಒಡೆಯರ್ ವಿರುದ್ಧ ಸೋಲುಕಂಡಿದ್ದರು. ಇದೀಗ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲೂ ಸಹ ಕಾಂಗ್ರೆಸ್​ ಮರಿತಿಬ್ಬೇಗೌಡ ಪರಾಭವಗೊಂಡಿದ್ದಾರೆ. ಇದರೊಂದಿಗೆ ಸಿಎಂ ತವರಿನಲ್ಲಿ ಎರಡು ಚುನಾವಣೆಗಳಲ್ಲಿ ಕಾಂಗ್ರೆಸ್‌ ಧೂಳಿಪಟವಾಗಿದೆ. ಈ ಮೂಲಕ ಸಿದ್ದರಾಮಯ್ಯಗೆ ತೀವ್ರ ಮುಖಭಂಗವಾದಂತಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಚರಂಡಿ ನೀರಲ್ಲಿ ಸ್ನಾನ ಮಾಡಿ, ಅದೇ ನೀರಿನಲ್ಲಿ ಆಹಾರ ಅದ್ದಿ ತಿಂದ ಪುನೀತ್
ಚರಂಡಿ ನೀರಲ್ಲಿ ಸ್ನಾನ ಮಾಡಿ, ಅದೇ ನೀರಿನಲ್ಲಿ ಆಹಾರ ಅದ್ದಿ ತಿಂದ ಪುನೀತ್
ನಿಮಗೆ ಲವ್ ಮ್ಯಾರೇಜ್ ಆಗುತ್ತೋ, ಅರೆಂಜ್ ಮ್ಯಾರೇಜ್ ಆಗುತ್ತೋ?
ನಿಮಗೆ ಲವ್ ಮ್ಯಾರೇಜ್ ಆಗುತ್ತೋ, ಅರೆಂಜ್ ಮ್ಯಾರೇಜ್ ಆಗುತ್ತೋ?
ಇಂದು ಈ ರಾಶಿಯವರ ವ್ಯಾಪಾರ, ವ್ಯವಹಾರಗಳು ಚೆನ್ನಾಗಿರುತ್ತೆ!
ಇಂದು ಈ ರಾಶಿಯವರ ವ್ಯಾಪಾರ, ವ್ಯವಹಾರಗಳು ಚೆನ್ನಾಗಿರುತ್ತೆ!
ಇವಿಎಂ ತೆರೆದ ಆರೋಪ; ಕೊಲ್ಕತ್ತಾದಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ಪ್ರತಿಭಟನೆ
ಇವಿಎಂ ತೆರೆದ ಆರೋಪ; ಕೊಲ್ಕತ್ತಾದಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ಪ್ರತಿಭಟನೆ
ಮಗು ಅತ್ತರೆ ತಾಯಿ ಮದ್ಯ ಕುಡಿಸುತ್ತಾರೆ; ವಿವಾದಕ್ಕೀಡಾದ ಧೀರೇಂದ್ರ ಶಾಸ್ತ್ರಿ
ಮಗು ಅತ್ತರೆ ತಾಯಿ ಮದ್ಯ ಕುಡಿಸುತ್ತಾರೆ; ವಿವಾದಕ್ಕೀಡಾದ ಧೀರೇಂದ್ರ ಶಾಸ್ತ್ರಿ
‘ಕೆಡಿ’ ಸಿನಿಮಾ ನೋಡಿ ದರ್ಶನ್ ನೆನಪು ಮಾಡಿಕೊಂಡ ರಕ್ಷಿತಾ ಪ್ರೇಮ್
‘ಕೆಡಿ’ ಸಿನಿಮಾ ನೋಡಿ ದರ್ಶನ್ ನೆನಪು ಮಾಡಿಕೊಂಡ ರಕ್ಷಿತಾ ಪ್ರೇಮ್
ರಜತ್ ಪಟಿದಾರ್ ದೌರ್ಬಲ್ಯ ಬಟಾಬಯಲು
ರಜತ್ ಪಟಿದಾರ್ ದೌರ್ಬಲ್ಯ ಬಟಾಬಯಲು
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
ಮಧ್ಯಪ್ರದೇಶದ ಬಾರ್ಗಿ ಡ್ಯಾಂನಲ್ಲಿ ಬಿರುಗಾಳಿಯಿಂದ ಹಡಗು ಮುಳುಗಿ 4 ಜನ ಸಾವು
ಮಧ್ಯಪ್ರದೇಶದ ಬಾರ್ಗಿ ಡ್ಯಾಂನಲ್ಲಿ ಬಿರುಗಾಳಿಯಿಂದ ಹಡಗು ಮುಳುಗಿ 4 ಜನ ಸಾವು