AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಮಾರಸ್ವಾಮಿ ಪ್ರಚಾರದಿಂದ ದೂರ, ಗೋಪಾಲಯ್ಯ ಹಾದಿ ಸುಗಮವಾಯ್ತಾ?

ಬೆಂಗಳೂರು: ಒಂದೆಡೆ, ಅನರ್ಹ ಶಾಸಕರಿಗೆ ತಕ್ಕ ಪಾಠ ಕಲಿಸಬೇಕಿದೆ. ಶತಾಯಗತಾಯ ಅವರನ್ನ ಸೋಲಿಸಲೇಬೇಕು ಎಂದು ಬಯಸಿರುವ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಇದೀಗ, ನಿರ್ದಿಷ್ಟವಾಗಿ ಮಹಾಲಕ್ಷ್ಮಿ ಲೇಔಟ್ ನತ್ತ ಅಪ್ಪಿತಪ್ಪಿಯೂ ಹೆಜ್ಜೆ ಹಾಕಿಲ್ಲವಂತೆ. ಇದರಿಂದ ಬಿಜೆಪಿ ಅಭ್ಯರ್ಥಿಯಾಗಿ ಬದಲಾಗಿರುವ ಅನರ್ಹ ಶಾಸಕ ಕೆ ಗೋಪಾಲಯ್ಯ ಅವರ ಚುನಾವಣಾ ಹಾದಿ ಸುಗಮವಾಯ್ತು ಬಿಡಿ ಎಂದು ಕ್ಷೇತ್ರದಲ್ಲಿ ಖುದ್ದು ಜೆಡಿಎಸ್​ ಕಾರ್ಯಕರ್ತರೇ ಮಾತನಾಡಿಕೊಳ್ಳುತ್ತಿದ್ದಾರೆ. ಸಾರ್ ಪ್ರಚಾರಕ್ಕೆ ಬನ್ನಿ ಪ್ಲೀಸ್..! ಎಂದು ಜೆಡಿಎಸ್ ವರಿಷ್ಠ ದೇವೇಗೌಡ್ರಿಗೆ ಮತ್ತು ಹೆಚ್ ಡಿ […]

ಕುಮಾರಸ್ವಾಮಿ ಪ್ರಚಾರದಿಂದ ದೂರ, ಗೋಪಾಲಯ್ಯ ಹಾದಿ ಸುಗಮವಾಯ್ತಾ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 20, 2019 | 6:49 PM

Share

ಬೆಂಗಳೂರು: ಒಂದೆಡೆ, ಅನರ್ಹ ಶಾಸಕರಿಗೆ ತಕ್ಕ ಪಾಠ ಕಲಿಸಬೇಕಿದೆ. ಶತಾಯಗತಾಯ ಅವರನ್ನ ಸೋಲಿಸಲೇಬೇಕು ಎಂದು ಬಯಸಿರುವ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಇದೀಗ, ನಿರ್ದಿಷ್ಟವಾಗಿ ಮಹಾಲಕ್ಷ್ಮಿ ಲೇಔಟ್ ನತ್ತ ಅಪ್ಪಿತಪ್ಪಿಯೂ ಹೆಜ್ಜೆ ಹಾಕಿಲ್ಲವಂತೆ. ಇದರಿಂದ ಬಿಜೆಪಿ ಅಭ್ಯರ್ಥಿಯಾಗಿ ಬದಲಾಗಿರುವ ಅನರ್ಹ ಶಾಸಕ ಕೆ ಗೋಪಾಲಯ್ಯ ಅವರ ಚುನಾವಣಾ ಹಾದಿ ಸುಗಮವಾಯ್ತು ಬಿಡಿ ಎಂದು ಕ್ಷೇತ್ರದಲ್ಲಿ ಖುದ್ದು ಜೆಡಿಎಸ್​ ಕಾರ್ಯಕರ್ತರೇ ಮಾತನಾಡಿಕೊಳ್ಳುತ್ತಿದ್ದಾರೆ.

ಸಾರ್ ಪ್ರಚಾರಕ್ಕೆ ಬನ್ನಿ ಪ್ಲೀಸ್..! ಎಂದು ಜೆಡಿಎಸ್ ವರಿಷ್ಠ ದೇವೇಗೌಡ್ರಿಗೆ ಮತ್ತು ಹೆಚ್ ಡಿ ಕುಮಾರಸ್ವಾಮಿ ಅವರನ್ನ ಮಹಾಲಕ್ಷ್ಮಿ ಲೇಔಟ್ ಜೆಡಿಎಸ್ ಅಭ್ಯರ್ಥಿ ಅಂಗಾಲಾಚುತ್ತಿದ್ದಾರಂತೆ. ಪ್ರಚಾರಕ್ಕೆ ಬನ್ನಿ ಅಂತಾ ಜೆಡಿಎಸ್ ಕುಮಾರಸ್ವಾಮಿಗೆ ದುಂಬಾಲು ಬಿದ್ದಿದ್ದಾರಂತೆ. ನಾಮಿನೇಷನ್ ದಿನವೇ ನೀವು ಬರಬೇಕಾಗಿತ್ತು. ಆದ್ರೇ ದೇವೇಗೌಡರು ಮಾತ್ರ ಬಂದಿದ್ದರು. ಇನ್ನಾದರೂ ಪ್ರಚಾರಕ್ಕೆ ಬಂದು ಬಿಡಿ ಪ್ಲೀಸ್ ಅಂತಾ ಕುಮಾರಸ್ವಾಮಿಗೆ ನಾಶಿ ಮನವಿ ಮಾಡಿದ್ದಾರಂತೆ.

ನಡು ನೀರಿನಲ್ಲಿ ಕೈಬಿಡಬೇಡಿ, ಪ್ಲೀಸ್..! ಜೆಡಿಎಸ್ ಕಾರ್ಪೋರೇಟರ್ ಬಿಜೆಪಿ ಅಭ್ಯರ್ಥಿ ಪರ ಬಹಿರಂಗ ಪ್ರಚಾರಕ್ಕೆ ಬರುತ್ತಿದ್ದಂತೆ, ವಾರ್ಡ್ ಅಧ್ಯಕ್ಷರು ಗೋಪಾಲಯ್ಯ ಹಿಂದೆ ಹೋಗಿದ್ದಾರಂತೆ. ಇದರಿಂದ ಗಿರೀಶ್ ನಾಶಿ ಮತ್ತಷ್ಟು ಅಧೀರರಾಗಿದ್ದಾರೆ. ಸರ್ ನೀವು ಬಂದ್ರೆ ಜೆಡಿಎಸ್ ಕಾರ್ಯಕರ್ತರು, ಮುಖಂಡರು ನನ್ನ ಜೊತೆಗೆ ಬರಬಹುದು‌. ಇಲ್ಲದೇ ಇದ್ರೇ ಇಲ್ಲಿ ಕಷ್ಟವಾಗುತ್ತೆ. ನಡು ನೀರಿನಲ್ಲಿ ಕೈಬಿಟ್ಟ ಹಾಗೆ ಆಗುತ್ತೆ ಎಂದು ಖುದ್ದು ಅಭ್ಯರ್ಥಿ ಗಿರೀಶ್ ನಾಶಿ ವರಿಷ್ಠರ ಬಳಿ ಆತಂಕ ವ್ಯಕ್ತಪಡಿಸಿದ್ದಾರೆ.

ಕುಮಾರಸ್ವಾಮಿ, ಜೆಡಿಎಸ್ ಫ್ಲ್ಯಾಗ್, ಬ್ಯಾನರ್ ತೆಗೆದುಹಾಕಿದ ಜೆಡಿಎಸ್ ಅಭ್ಯರ್ಥಿ! ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್​ ವರಿಷ್ಠರ ನಡೆಯಿಂದ ನೊಂದಿರುವ ಗಿರೀಶ್ ನಾಶಿ ತಮ್ಮ ಮನೆಯ ಹೊರಗಡೆ ಇದ್ದ ಬ್ಯಾನರ್ ತೆಗೆದು ಹಾಕಿದ್ದಾರೆ. ಮನೆಯ ಹೊರಗಡೆ ಜೆಡಿಎಸ್ ಬ್ಯಾನರ್ ಹಾಗೂ ದೇವೇಗೌಡ ಮತ್ತು ಕುಮಾರಸ್ವಾಮಿ ಫೋಟೋಗಳು ಈ ಹಿಂದೆ ರಾರಾಜಿಸ್ತಾ ಇತ್ತು. ಆದ್ರೇ ಈಗ ಅದನ್ನು ತೆಗೆದು ಹಾಕಲಾಗಿದೆ. ಮನೆಯ ಮುಂಭಾಗ ಅವ್ರ ಫೋಟೋ ಬ್ಯಾನರ್ ಗಳನ್ನು ತೆಗೆದುಹಾಕಲಾಗಿದೆ. ಇನ್ನು ಚುನಾವಣಾ ಆಯೋಗದ ಅನುಮತಿ ಇಲ್ಲದೆ ಹಾಕಿರುವುದಕ್ಕೆ ತೆರವು ಮಾಡಿರುವ ಸಾಧ್ಯತೆ ಇದೆ ಎಂದೂ ಹೇಳಲಾಗುತ್ತಿದೆ.

Published On - 1:05 pm, Wed, 20 November 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ