AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

15 ಕ್ಷೇತ್ರಗಳಲ್ಲಿ ಉಪಚುನಾವಣೆ: ಜೆಡಿಎಸ್​ ಸ್ವತಂತ್ರವಾಗಿ ಕಣಕ್ಕೆ

ಮೈಸೂರು: ರಾಜ್ಯದಲ್ಲಿ ಅ.21ರಂದು ನಡೆಯುವ ಉಪಚುನಾವಣೆಯಲ್ಲಿ ಜೆಡಿಎಸ್​ ಪಕ್ಷ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ.  ಉಪಚುನಾವಣೆ ನಡೆಯುವ 15 ಕ್ಷೇತ್ರಗಳಲ್ಲೂ ಜೆಡಿಎಸ್​ ಸ್ಪರ್ಧಿಸಲಿದೆ. ಅಲ್ಲದೆ ಕಾಂಗ್ರೆಸ್ ಪಕ್ಷಕ್ಕೆ ಬಿಜೆಪಿಗಿಂತ ಮೊದಲ ಶತ್ರು ಜೆಡಿಎಸ್ ಪಕ್ಷ ಎಂದು ನೇರವಾಗಿ ಹೆಚ್​ಡಿ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ. ಇದೇ ವೇಳೆ ಮಾತನಾಡಿದ ಕುಮಾರಸ್ವಾಮಿ, ಕಾಂಗ್ರೆಸ್​-ಜೆಡಿಎಸ್​ ಜಗಳದಿಂದ ಬಿಜೆಪಿಗೆ ಸಹಕಾರಿಯಾಗುವುದಿಲ್ಲ. ಜೆಡಿಎಸ್‌ ಪಕ್ಷ ಹೋಗಲಿ ಅಂತ ತುಂಬಾ ಜನ ಕಾಯ್ತಿದ್ದಾರೆ ಎಂದು ಹೆಚ್​ಡಿಕೆ ವಾಗ್ದಾಳಿ […]

15 ಕ್ಷೇತ್ರಗಳಲ್ಲಿ ಉಪಚುನಾವಣೆ: ಜೆಡಿಎಸ್​ ಸ್ವತಂತ್ರವಾಗಿ ಕಣಕ್ಕೆ
ಸಾಧು ಶ್ರೀನಾಥ್​
|

Updated on:Sep 21, 2019 | 2:04 PM

Share

ಮೈಸೂರು: ರಾಜ್ಯದಲ್ಲಿ ಅ.21ರಂದು ನಡೆಯುವ ಉಪಚುನಾವಣೆಯಲ್ಲಿ ಜೆಡಿಎಸ್​ ಪಕ್ಷ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ.

 ಉಪಚುನಾವಣೆ ನಡೆಯುವ 15 ಕ್ಷೇತ್ರಗಳಲ್ಲೂ ಜೆಡಿಎಸ್​ ಸ್ಪರ್ಧಿಸಲಿದೆ. ಅಲ್ಲದೆ ಕಾಂಗ್ರೆಸ್ ಪಕ್ಷಕ್ಕೆ ಬಿಜೆಪಿಗಿಂತ ಮೊದಲ ಶತ್ರು ಜೆಡಿಎಸ್ ಪಕ್ಷ ಎಂದು ನೇರವಾಗಿ ಹೆಚ್​ಡಿ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ. ಇದೇ ವೇಳೆ ಮಾತನಾಡಿದ ಕುಮಾರಸ್ವಾಮಿ, ಕಾಂಗ್ರೆಸ್​-ಜೆಡಿಎಸ್​ ಜಗಳದಿಂದ ಬಿಜೆಪಿಗೆ ಸಹಕಾರಿಯಾಗುವುದಿಲ್ಲ. ಜೆಡಿಎಸ್‌ ಪಕ್ಷ ಹೋಗಲಿ ಅಂತ ತುಂಬಾ ಜನ ಕಾಯ್ತಿದ್ದಾರೆ ಎಂದು ಹೆಚ್​ಡಿಕೆ ವಾಗ್ದಾಳಿ ನಡೆಸಿದರು.

ನನ್ನದು ಅತ್ಯಂತ ಕೆಟ್ಟ ಸರ್ಕಾರ: ನಾನು ನೇರವಾಗಿ ಹೇಳ್ತಿದ್ದೇನೆ ನನ್ನದು ಅತ್ಯಂತ ಕೆಟ್ಟ ಸರ್ಕಾರ, ಮೈತ್ರಿ ಸರ್ಕಾರದಲ್ಲಿ ನನಗೆ ಯಾವುದೇ ಬೆಂಬಲ ಇರಲಿಲ್ಲ. ಇದರ ನಡುವೆಯೂ ನಾನು ರೈತರ ಪರ ಕೆಲಸ ಮಾಡಿದ್ದೇನೆ, ನಾನು ಯಾವುದೇ ಮೋಸ ಮಾಡಿಲ್ಲ ಎಂದು ಕಾಂಗ್ರೆಸ್​ ವಿರುದ್ಧ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಕುಮಾರಸ್ವಾಮಿ ಸಿಎಂ ಆಗಲ್ಲ, ಹೀಗಾಗಿ ಮೈಸೂರು ಭಾಗದ ನಾಯಕರೇ ಸಾಲಮನ್ನಾ ಹೇಳಿಕೆ ನೀಡಿದ್ರು. ಆದ್ರೆ ನಾನು ರೈತರ ಸಾಲ ಮನ್ನಾ ಮಾಡಿ ತೋರಿಸಿದ್ದೇನೆ. ನಾನು ಕಾಂಗ್ರೆಸ್​ ಜೊತೆ ಸರ್ಕಾರ ಮಾಡಿದ ಮೊದಲ ದಿನವೇ ನನ್ನಿಂದ ಕಾರ್ಯಕರ್ತರು ದೂರ ಆಗ್ತಾರೆಂದು ಗೊತ್ತಿತ್ತು. ಆದ್ರೂ ರೈತರ ಕಾರಣದಿಂದ ಕಾಂಗ್ರೆಸ್​ ಜೊತೆ ಸರ್ಕಾರವನ್ನು ಮುಂದುವರಿಸಿದೆ ಎಂದರು.

 ಕಾಂಗ್ರೆಸ್​-ಜೆಡಿಎಸ್​ನ ಮೈತ್ರಿ ಸರ್ಕಾರದ ವಿರುದ್ಧ ಅಸಮಾಧಾನದಿಂದ ಒಟ್ಟು 17 ಶಾಸಕರು ರಾಜೀನಾಮೆ ನೀಡಿದ್ದರು. ಈಗ 15 ಕ್ಷೇತ್ರಗಳಲ್ಲಿ ಉಪಚುನಾವಣೆಯ ದಿನಾಂಕ ನಿಗದಿಯಾಗಿದೆ.

Published On - 1:32 pm, Sat, 21 September 19

ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್