15 ಕ್ಷೇತ್ರಗಳಲ್ಲಿ ಉಪಚುನಾವಣೆ: ಜೆಡಿಎಸ್​ ಸ್ವತಂತ್ರವಾಗಿ ಕಣಕ್ಕೆ

ಮೈಸೂರು: ರಾಜ್ಯದಲ್ಲಿ ಅ.21ರಂದು ನಡೆಯುವ ಉಪಚುನಾವಣೆಯಲ್ಲಿ ಜೆಡಿಎಸ್​ ಪಕ್ಷ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ.  ಉಪಚುನಾವಣೆ ನಡೆಯುವ 15 ಕ್ಷೇತ್ರಗಳಲ್ಲೂ ಜೆಡಿಎಸ್​ ಸ್ಪರ್ಧಿಸಲಿದೆ. ಅಲ್ಲದೆ ಕಾಂಗ್ರೆಸ್ ಪಕ್ಷಕ್ಕೆ ಬಿಜೆಪಿಗಿಂತ ಮೊದಲ ಶತ್ರು ಜೆಡಿಎಸ್ ಪಕ್ಷ ಎಂದು ನೇರವಾಗಿ ಹೆಚ್​ಡಿ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ. ಇದೇ ವೇಳೆ ಮಾತನಾಡಿದ ಕುಮಾರಸ್ವಾಮಿ, ಕಾಂಗ್ರೆಸ್​-ಜೆಡಿಎಸ್​ ಜಗಳದಿಂದ ಬಿಜೆಪಿಗೆ ಸಹಕಾರಿಯಾಗುವುದಿಲ್ಲ. ಜೆಡಿಎಸ್‌ ಪಕ್ಷ ಹೋಗಲಿ ಅಂತ ತುಂಬಾ ಜನ ಕಾಯ್ತಿದ್ದಾರೆ ಎಂದು ಹೆಚ್​ಡಿಕೆ ವಾಗ್ದಾಳಿ […]

15 ಕ್ಷೇತ್ರಗಳಲ್ಲಿ ಉಪಚುನಾವಣೆ: ಜೆಡಿಎಸ್​ ಸ್ವತಂತ್ರವಾಗಿ ಕಣಕ್ಕೆ
ಸಾಧು ಶ್ರೀನಾಥ್​

Updated on: Sep 21, 2019 | 2:04 PM

ಮೈಸೂರು: ರಾಜ್ಯದಲ್ಲಿ ಅ.21ರಂದು ನಡೆಯುವ ಉಪಚುನಾವಣೆಯಲ್ಲಿ ಜೆಡಿಎಸ್​ ಪಕ್ಷ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ.

 ಉಪಚುನಾವಣೆ ನಡೆಯುವ 15 ಕ್ಷೇತ್ರಗಳಲ್ಲೂ ಜೆಡಿಎಸ್​ ಸ್ಪರ್ಧಿಸಲಿದೆ. ಅಲ್ಲದೆ ಕಾಂಗ್ರೆಸ್ ಪಕ್ಷಕ್ಕೆ ಬಿಜೆಪಿಗಿಂತ ಮೊದಲ ಶತ್ರು ಜೆಡಿಎಸ್ ಪಕ್ಷ ಎಂದು ನೇರವಾಗಿ ಹೆಚ್​ಡಿ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ. ಇದೇ ವೇಳೆ ಮಾತನಾಡಿದ ಕುಮಾರಸ್ವಾಮಿ, ಕಾಂಗ್ರೆಸ್​-ಜೆಡಿಎಸ್​ ಜಗಳದಿಂದ ಬಿಜೆಪಿಗೆ ಸಹಕಾರಿಯಾಗುವುದಿಲ್ಲ. ಜೆಡಿಎಸ್‌ ಪಕ್ಷ ಹೋಗಲಿ ಅಂತ ತುಂಬಾ ಜನ ಕಾಯ್ತಿದ್ದಾರೆ ಎಂದು ಹೆಚ್​ಡಿಕೆ ವಾಗ್ದಾಳಿ ನಡೆಸಿದರು.

ನನ್ನದು ಅತ್ಯಂತ ಕೆಟ್ಟ ಸರ್ಕಾರ:

ನಾನು ನೇರವಾಗಿ ಹೇಳ್ತಿದ್ದೇನೆ ನನ್ನದು ಅತ್ಯಂತ ಕೆಟ್ಟ ಸರ್ಕಾರ, ಮೈತ್ರಿ ಸರ್ಕಾರದಲ್ಲಿ ನನಗೆ ಯಾವುದೇ ಬೆಂಬಲ ಇರಲಿಲ್ಲ. ಇದರ ನಡುವೆಯೂ ನಾನು ರೈತರ ಪರ ಕೆಲಸ ಮಾಡಿದ್ದೇನೆ, ನಾನು ಯಾವುದೇ ಮೋಸ ಮಾಡಿಲ್ಲ ಎಂದು ಕಾಂಗ್ರೆಸ್​ ವಿರುದ್ಧ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಕುಮಾರಸ್ವಾಮಿ ಸಿಎಂ ಆಗಲ್ಲ, ಹೀಗಾಗಿ ಮೈಸೂರು ಭಾಗದ ನಾಯಕರೇ ಸಾಲಮನ್ನಾ ಹೇಳಿಕೆ ನೀಡಿದ್ರು. ಆದ್ರೆ ನಾನು ರೈತರ ಸಾಲ ಮನ್ನಾ ಮಾಡಿ ತೋರಿಸಿದ್ದೇನೆ. ನಾನು ಕಾಂಗ್ರೆಸ್​ ಜೊತೆ ಸರ್ಕಾರ ಮಾಡಿದ ಮೊದಲ ದಿನವೇ ನನ್ನಿಂದ ಕಾರ್ಯಕರ್ತರು ದೂರ ಆಗ್ತಾರೆಂದು ಗೊತ್ತಿತ್ತು. ಆದ್ರೂ ರೈತರ ಕಾರಣದಿಂದ ಕಾಂಗ್ರೆಸ್​ ಜೊತೆ ಸರ್ಕಾರವನ್ನು ಮುಂದುವರಿಸಿದೆ ಎಂದರು.

 ಕಾಂಗ್ರೆಸ್​-ಜೆಡಿಎಸ್​ನ ಮೈತ್ರಿ ಸರ್ಕಾರದ ವಿರುದ್ಧ ಅಸಮಾಧಾನದಿಂದ ಒಟ್ಟು 17 ಶಾಸಕರು ರಾಜೀನಾಮೆ ನೀಡಿದ್ದರು. ಈಗ 15 ಕ್ಷೇತ್ರಗಳಲ್ಲಿ ಉಪಚುನಾವಣೆಯ ದಿನಾಂಕ ನಿಗದಿಯಾಗಿದೆ.

 

Published On - 1:32 pm, Sat, 21 September 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us