ಪ್ರಜ್ವಲ್ ರೇವಣ್ಣ ವಿಷಯದಲ್ಲಿ ನಮ್ಮ ಪಕ್ಷ ಯಾವತ್ತೋ ನಿಲುವು ಪ್ರಕಟಿಸಿ ಅಮಾನತು ಮಾಡಿದೆ: ಜಿಟಿ ದೇವೇಗೌಡ

ಈಗ ಪ್ರಜ್ವಲ್ ವಾಪಸ್ಸು ಬಂದಿದ್ದಾರೆ ಮತ್ತು ಅವರ ಬಂಧನವಾಗಿದೆ, ತಮ್ಮ ಕೆಲಸ ಅಲ್ಲಿಗೆ ಮುಗಿಯಿತು ಅಂತ ಅಂತ ದೇವೇಗೌಡರು ಯಾಕೆ ಹೇಳಿದರೋ? ಪಕ್ಷದ ಕಳವಳ ಇರೋದು ಸಂತ್ರಸ್ತೆಯರ ಬಗ್ಗೆ, ಸರ್ಕಾರ ಅವರ ಭವಿಷ್ಯದ ಬಗ್ಗೆ ಇದುವರೆಗೆ ತನ್ನ ನಿಲುವು ಪ್ರಕಟಿಸಿಲ್ಲ ಎಂದು ದೇವೇಗೌಡ ಹೇಳಿದರು.

ಪ್ರಜ್ವಲ್ ರೇವಣ್ಣ ವಿಷಯದಲ್ಲಿ ನಮ್ಮ ಪಕ್ಷ ಯಾವತ್ತೋ ನಿಲುವು ಪ್ರಕಟಿಸಿ ಅಮಾನತು ಮಾಡಿದೆ: ಜಿಟಿ ದೇವೇಗೌಡ
|

Updated on: May 31, 2024 | 4:06 PM

ಹಾಸನ: ನಗರದಲ್ಲಿಂದು ಮಾಧ್ಯಮ ಗೋಷ್ಠಿಯೊಂದನ್ನು ನಡೆಸಿ ಮಾತಾಡಿದ ಜೆಡಿಎಸ್ ಮುಖಂಡ ಜಿಟಿ ದೇವೇಗೌಡ (GT Devegowda) ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯು ಎಲ್ಲ 28 ಸ್ಥಾನಗಳಲ್ಲಿ ಜಯಭೇರಿ ಬಾರಿಸಲಿದೆ ಎಂದು ಹೇಳಿದರು. ಹಾಸನ (Hassan) ಮತ್ತು ಮಂಡ್ಯ (Mandya) ಕ್ಷೇತ್ರಗಳಲ್ಲಿ ಕಾರ್ಯಕರ್ತರ ನಡುವೆ ಕೆಲವು ಭಿನ್ನಾಭಿಪ್ರಾಯಗಳಿದ್ದಿದ್ದು ನಿಜ ಆದರೆ ಮತದಾನ ದಿನ ಹತ್ತಿರ ಬರುತ್ತಿದ್ದಂತೆಯೇ ಅವರು ಎಲ್ಲವನ್ನು ಮರೆತು ಒಗ್ಗಟ್ಟಾಗಿ ಕೆಲಸ ಮಾಡಿದರು ಎಂದು ಹೇಳಿದರು. ಪ್ರಜ್ವಲ್ ರೇವಣ್ಣ ಪ್ರಕರಣ ಚುನಾವಣೆಯ ಮೇಲೆ ಯಾವುದೇ ಪರಿಣಾಮ ಬೀರಿಲ್ಲ ಎಂದ ದೇವೇಗೌಡ, ಸಂಸದನ ವಿಷಯದಲ್ಲಿ ಮೊದಲ ದಿನವೇ ತಮ್ಮ ಪಕ್ಷ ಎಲ್ಲವನ್ನು ಸ್ಪಷ್ಟಪಡಿಸಿದೆ, ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ ಮತ್ತು ಪ್ರಕರಣ ಮತ್ತು ಪಕ್ಷದ ನಡುವೆ ಯಾವುದೇ ಸಂಬಂಧವಿಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ ಎಂದರು. ಈಗ ಪ್ರಜ್ವಲ್ ವಾಪಸ್ಸು ಬಂದಿದ್ದಾರೆ ಮತ್ತು ಅವರ ಬಂಧನವಾಗಿದೆ, ತಮ್ಮ ಕೆಲಸ ಅಲ್ಲಿಗೆ ಮುಗಿಯಿತು ಅಂತ ಅಂತ ದೇವೇಗೌಡರು ಯಾಕೆ ಹೇಳಿದರೋ? ಪಕ್ಷದ ಕಳವಳ ಇರೋದು ಸಂತ್ರಸ್ತೆಯರ ಬಗ್ಗೆ, ಸರ್ಕಾರ ಅವರ ಭವಿಷ್ಯದ ಬಗ್ಗೆ ಇದುವರೆಗೆ ತನ್ನ ನಿಲುವು ಪ್ರಕಟಿಸಿಲ್ಲ ಎಂದು ದೇವೇಗೌಡ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಬಿಜೆಪಿಯಲ್ಲಿರುವ ಒಗ್ಗಟ್ಟು, ಶಿಸ್ತು ಜೆಡಿಎಸ್ ಪಕ್ಷದಲ್ಲಿಲ್ಲ: ಜಿಟಿ ದೇವೇಗೌಡ, ಜೆಡಿಎಸ್ ಶಾಸಕ

Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್