AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನತಾ ಜಲಧಾರೆ ಸಮಾರೋಪ ಸಮಾರಂಭ; 5 ಲಕ್ಷ ಜನರಿಗೆ ಊಟೋಪಚಾರ ವ್ಯವಸ್ಥೆ; ಖುದ್ದು ಹೆಚ್​ಡಿ ಕುಮಾರಸ್ವಾಮಿ ಪರಿಶೀಲನೆ

ಜೆಡಿಎಸ್ ಜನತಾ ಜಲಧಾರೆ ಸಮಾವೇಶ ಸಮಾರೋಪ ಸಮಾರಂಭ 5 ಲಕ್ಷ ಜನರಿಗೆ ಊಟೋಪಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. 3000 ಬಾಣಸಿಗರು ಅಡುಗೆ ತಯಾರಿಯಲ್ಲಿ ತೊಡಗಿದ್ದಾರೆ. ಇನ್ನು ಊಟ ಬಡಿಸಲು 2000 ಸಾವಿರ ಸಿಬ್ಬಂದಿ ಇದ್ದಾರೆ.

ಜನತಾ ಜಲಧಾರೆ ಸಮಾರೋಪ ಸಮಾರಂಭ; 5 ಲಕ್ಷ ಜನರಿಗೆ ಊಟೋಪಚಾರ ವ್ಯವಸ್ಥೆ; ಖುದ್ದು ಹೆಚ್​ಡಿ ಕುಮಾರಸ್ವಾಮಿ ಪರಿಶೀಲನೆ
ಜನತಾ ಜಲಧಾರೆ ಸಮಾರೋಪ ಸಮಾರಂಭ
TV9 Web
| Updated By: ವಿವೇಕ ಬಿರಾದಾರ|

Updated on:May 13, 2022 | 3:10 PM

Share

ಬೆಂಗಳೂರು: ಜಾತ್ಯತೀತ ಜನತಾದಳ (ಜೆಡಿಎಸ್) (JDS)  ಹಮ್ಮಿಕೊಂಡಿದ್ದ ಜನತಾ ಜಲಧಾರೆ (Janata Jaladhare) ಸಮಾವೇಶ ಸಮಾರೋಪ ಸಮಾವೇಶದಲ್ಲಿ, 5 ಲಕ್ಷ ಜನರಿಗೆ ಊಟೋಪಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ನಾಳೆ (14 ಮೇ) ನಡೆಯುವ ಸಮಾವೇಶಕ್ಕೆ  ಕರ್ನಾಟಕ ರಾಜ್ಯದ ಇತಿಹಾಸದಲ್ಲೇ ಕಂಡು ಕೇಳರಿಯದ ರೀತಿಯಲ್ಲಿ ಸಿದ್ಧತೆಗಳು ನಡೆಯುತ್ತಿದೆ. ಸಮಾವೇಶದಲ್ಲಿ ಒಟ್ಟು 5 ಲಕ್ಷ ಜನರಿಗೆ ಅಡುಗೆ ವ್ಯವಸ್ಥೆ ಮಾಡಿಸಲಾಗಿದೆ. 3000 ಬಾಣಸಿಗರು ಅಡುಗೆ ತಯಾರಿಯಲ್ಲಿ ತೊಡಗಿದ್ದಾರೆ. ಇನ್ನು ಊಟ ಬಡಿಸಲು 2000 ಸಾವಿರ ಸಿಬ್ಬಂದಿ ಇದ್ದಾರೆ.

ಅಡುಗೆ ಬಡಿಸುವ ವ್ಯವಸ್ಥೆಯನ್ನು ಅತ್ಯಂತ ವ್ಯವಸ್ಥಿತವಾಗಿ ಸಜ್ಜುಗೊಳಿಸಿದ್ದು, ಬೆಳಗ್ಗೆ 10 ಗಂಟೆಯಿಂದಲೇ ಜನರಿಗೆ ಫಲಾವ್ ಮತ್ತು ಜಿಲೇಬಿಯನ್ನು ನೀಡಲಾಗುತ್ತಿದೆ. ಸಂಜೆ 4 ಗಂಟೆಗೆ ಉಪ್ಪಿಟ್ಟು ಕೇಸರಿಬಾತ್ ಕೊಡಲಾಗುವುದು. ಜತೆಯಲ್ಲಿ ಮಜ್ಜಿಗೆಯನ್ನು ನೀಡಲಾಗುವುದು. ಸಮಾವೇಶದ ಅಡುಗೆ ನೇತೃತ್ವವನ್ನು ಸತೀಶ್ ಅವರ ನೇತೃತ್ವದ ಎ.ಎಸ್. ಕೇಟರಿಂಗ್ ವಹಿಸಿಕೊಂಡಿದ್ದು, ಬೃಹತ್ ಪ್ರಮಾಣದಲ್ಲಿ ಆಗುತ್ತಿರುವ ಅಡುಗೆ ತಯಾರಿ ಕೆಲಸವನ್ನು ಕುದ್ದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಪರಿಶೀಲಿಸಿದ್ದಾರೆ.

ಸಮಾವೇಶದ ಸ್ಥಳದಲ್ಲಿ ಅಡುಗೆ ತಯಾರಿಸುವ ಕಾಯಕವೇ ಎಲ್ಲರ ಗಮನವನ್ನು ಸೆಳೆದಿದ್ದು, ಸಮಾವೇಶದ ಬಗ್ಗೆ ಭಾರೀ ನಿರೀಕ್ಷೆ ಸೃಷ್ಟಿ ಮಾಡಿದೆ

ಕಳೆದ ತಿಂಗಳು ಎಪ್ರೀಲ್ 16ರಂದು ಹನುಮ ಜಯಂತಿ ದಿನದಂದು ಜನತಾ ಜಲಧಾರೆ ಪ್ರಾರಂಭವಾಗಿದೆ. ಈ ಜನತಾ ಜಲಧಾರೆ ಸಮಾರೋಪ ಸಮಾವೇಶದಲ್ಲಿ ರಾಜ್ಯದಲ್ಲಿ ನೀರಾವರಿ ಯೋಜನೆಗಳನ್ನು ಜಾರಿ ಮಾಡುವ ನಿಟ್ಟಿನಲ್ಲಿ ಗಂಗಾ ಮಾತೆಯ ಸಾಕ್ಷಿಯಾಗಿ ಸಂಕಲ್ಪ ಮಾಡಲಾಗುವುದು. ಸಮಾವೇಶವು ನೆಲಮಂಗಲ ಸಮೀಪದ ಬಾವಿಕೆರೆ ಬಳಿಯ ಬೆಂಗಳೂರು-ಹಾಸನ ರಾಷ್ಟ್ರೀಯ ಹೆದ್ದಾರಿ ಪಕ್ಕದ ಮೈದಾನದಲ್ಲಿ ಮಧ್ಯಾಹ್ನ 3 ಗಂಟೆಗೆ ಕಾರ್ಯಕ್ರಮ ಪ್ರಾರಂಭವಾಗಲಿದೆ.

ಸಮಾವೇಶದಲ್ಲಿ ಮಾಜಿ ಪ್ರಧಾನ ಮಂತ್ರಿ ಹೆಚ್.ಡಿ. ದೇವೆಗೌಡ (HD Devegouda), ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ, ಪಕ್ಷದ ಕೋರ್ ಕಮಿಟಿ ಅಧ್ಯಕ್ಷ ಬಂಡೆಪ್ಪ ಖಾಷೆಂಪೂರ್, ಪಕ್ಷದ ರಾಷ್ಟ್ರೀಯ ಸಂಸದೀಯ ಮಂಡಳಿ ಅಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ (HD Kumarswamy) ಸೇರಿದಂತೆ ಪಕ್ಷದ ಎಲ್ಲ ಶಾಸಕರು, ಮುಖಂಡರು, ಮುಂದಿನ ವಿಧಾನಸಭೆ ಚುನಾವಣೆಯ ಅಭ್ರ‍್ಥಿಗಳ ಭಾಗಿಯಾಗಲಿದ್ದಾರೆ.

ಸಮಾವೇಶದ ವಿಶೇಷತೆ

ಜನತಾ ಜಲಧಾರೆ ಸಮಾರೋಪ ಸಮಾವೇಶದಲ್ಲಿ ಗಂಗಾ ಪೂಜೆ ಮತ್ತು ಗಂಗಾ ಆರತಿ ನೆರವೇರಲಿದೆ. ಸಮಾವೇಶದಲ್ಲಿ ಗಂಗಾ ಪೂಜೆ ಮತ್ತು ಗಂಗಾ ಆರತಿ ಸಂಜೆ 6:30 ಕ್ಕೆ ನಡೆಯಲಿದೆ. ಈ ಸಂಬಂಧ ವಾರಣಾಸಿಯಿಂದ 20 ಪಂಡಿತರ ವಿಶೇಷ ತಂಡ ವಾರಣಾಸಿಯಿಂದ ಬರುತ್ತಿದ್ದಾರೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:52 am, Fri, 13 May 22

ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ