ಜೆಡಿಎಸ್​​ ಶಾಸಕ ಶ್ರೀನಿವಾಸ ಗೌಡ ಬಿಜೆಪಿಗೆ ಸೇರುವ ಸೂಚನೆ

ಕೋಲಾರ: ಜಾತ್ಯಾತೀತ ಜನತಾ ದಳದ ಹಿರಿಯ ಶಾಸಕರೊಬ್ಬರು ಬಿಜೆಪಿಗೆ ಸೇರುವ ಸೂಚನೆ ಲಭಿಸಿದೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲವನ್ನ ಸೂಚಿಸಿದ್ದೆ. ಮೈತ್ರಿ ಧರ್ಮ ಮುರಿದು ಬಿಜೆಪಿಗೆ ಬೆಂಬಲವನ್ನು ಸೂಚಿಸಿದ್ದೆ ಎಂದು ಜೆಡಿಎಸ್ ಹಾಲಿ ಶಾಸಕ, ಮಾಜಿ ಸಚಿವ ಕೆ ಶ್ರೀನಿವಾಸ ಗೌಡ ಹೇಳಿದ್ದಾರೆ. ಜೆಡಿಎಸ್ ಕದಡಿದ ನೀರು: ರಾಜಕಾರಣ ಹರಿಯೋ ನೀರು ಬಹಿರಂಗವಾಗೇ ನಾನು BJP ಪರವಾಗಿ ಕೆಲಸ ಮಾಡಿದ್ದೇನೆ. ಬಿಜೆಪಿ ಪರವಾಗಿ ಕೆಲಸ ಮಾಡಲು ಬೇರೆ ಕಾರಣಗಳು ಇವೆ. ನಾನು 4 ಬಾರಿ ಗೆದ್ದಿದ್ದೇನೆ, ಮುಂದೆ […]

ಜೆಡಿಎಸ್​​ ಶಾಸಕ ಶ್ರೀನಿವಾಸ ಗೌಡ ಬಿಜೆಪಿಗೆ ಸೇರುವ ಸೂಚನೆ
ಸಾಧು ಶ್ರೀನಾಥ್​

Updated on: Oct 23, 2019 | 6:05 PM


ಕೋಲಾರ:
ಜಾತ್ಯಾತೀತ ಜನತಾ ದಳದ ಹಿರಿಯ ಶಾಸಕರೊಬ್ಬರು ಬಿಜೆಪಿಗೆ ಸೇರುವ ಸೂಚನೆ ಲಭಿಸಿದೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲವನ್ನ ಸೂಚಿಸಿದ್ದೆ. ಮೈತ್ರಿ ಧರ್ಮ ಮುರಿದು ಬಿಜೆಪಿಗೆ ಬೆಂಬಲವನ್ನು ಸೂಚಿಸಿದ್ದೆ ಎಂದು ಜೆಡಿಎಸ್ ಹಾಲಿ ಶಾಸಕ, ಮಾಜಿ ಸಚಿವ ಕೆ ಶ್ರೀನಿವಾಸ ಗೌಡ ಹೇಳಿದ್ದಾರೆ.

ಜೆಡಿಎಸ್ ಕದಡಿದ ನೀರು: ರಾಜಕಾರಣ ಹರಿಯೋ ನೀರು
ಬಹಿರಂಗವಾಗೇ ನಾನು BJP ಪರವಾಗಿ ಕೆಲಸ ಮಾಡಿದ್ದೇನೆ. ಬಿಜೆಪಿ ಪರವಾಗಿ ಕೆಲಸ ಮಾಡಲು ಬೇರೆ ಕಾರಣಗಳು ಇವೆ. ನಾನು 4 ಬಾರಿ ಗೆದ್ದಿದ್ದೇನೆ, ಮುಂದೆ ಏನಾಗುತ್ತೋ ಗೊತ್ತಿಲ್ಲ. ರಾಜಕಾರಣ ಹರಿಯೋ ನೀರು, ಯಾರೂ ಅಡ್ಡಿಪಡಿಸಲಾಗಲ್ಲ ಎಂದು ಕೋಲಾರದಲ್ಲಿ ಜೆಡಿಎಸ್​​ ಶಾಸಕ ಶ್ರೀನಿವಾಸ ಗೌಡ ಹೇಳಿದ್ದಾರೆ.

ಬಿಜೆಪಿಯಿಂದ 30 ಕೋಟಿ ಆಫರ್:
ಬಿಜೆಪಿ ನಾಯಕರು ತಮ್ಮ ಪಕ್ಷ ಸೇರುವಂತೆ ನನಗೆ ದುಂಬಾಲು ಬಿದ್ದಿದ್ದು 30 ಕೋಟಿ ಆಫರ್ ನೀಡಿದ್ದರು ಎಂದು ಶ್ರೀನಿವಾಸ ಗೌಡ ವಿಧಾನಸಭೆಯಲ್ಲಿ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us