AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಿಗಳಲ್ಲಿ ಉನ್ನತ ಹುದ್ದೆಗಳಿಗೆ ಪಿಎಚ್​ಡಿ ಕಡ್ಡಾಯದಿಂದ ವಿನಾಯಿತಿ ನೀಡಿ; ಪ್ರಧಾನಿ ಮೋದಿಗೆ ಹೆಚ್​​ಡಿ ದೇವೇಗೌಡ ಮನವಿ

ವಿಶ್ವವಿದ್ಯಾಲಯಗಳಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಹಾಗೂ ಅಸೋಸಿಯೇಟ್ ಪ್ರೊಫೆಸರ್​​ನಂಥ ಉನ್ನತ ಹುದ್ದೆಗಳಿಗೆ ಪಿಎಚ್​​ಡಿ ಕಡ್ಡಾಯಗೊಳಿಸಿರುವುದರಿಂದ ವಿನಾಯಿತಿ ನೀಡಬೇಕು ಎಂದು ಜೆಡಿಎಸ್ ವರಿಷ್ಠ ಹೆಚ್​​ಡಿ ದೇವೇಗೌಡ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ವಿವಿಗಳಲ್ಲಿ ಉನ್ನತ ಹುದ್ದೆಗಳಿಗೆ ಪಿಎಚ್​ಡಿ ಕಡ್ಡಾಯದಿಂದ ವಿನಾಯಿತಿ ನೀಡಿ; ಪ್ರಧಾನಿ ಮೋದಿಗೆ ಹೆಚ್​​ಡಿ ದೇವೇಗೌಡ ಮನವಿ
ನರೇಂದ್ರ ಮೋದಿ & ಹೆಚ್​​ಡಿ ದೇವೇಗೌಡ
Ganapathi Sharma
|

Updated on:Jun 30, 2023 | 9:19 PM

Share

ಬೆಂಗಳೂರು: ವಿಶ್ವವಿದ್ಯಾಲಯಗಳಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಹಾಗೂ ಅಸೋಸಿಯೇಟ್ ಪ್ರೊಫೆಸರ್​​ನಂಥ ಉನ್ನತ ಹುದ್ದೆಗಳಿಗೆ ಪಿಎಚ್​​ಡಿ ಕಡ್ಡಾಯಗೊಳಿಸಿರುವುದರಿಂದ ವಿನಾಯಿತಿ ನೀಡಬೇಕು. ಹೊಸ ನಿಯಮದಿಂದಾಗಿ ದಶಕಗಳ ಹಿಂದೆಯೇ ನೇಮಕವಾಗಿರುವ ಅಸಿಸ್ಟೆಂಟ್ ಪ್ರೊಫೆಸರ್ ಹಾಗೂ ಅಸೋಸಿಯೇಟ್ ಪ್ರೊಫೆಸರ್​ಗಳಿಗೆ ಸಮಸ್ಯೆಯಾಗುತ್ತಿದೆ ಎಂದು ಜೆಡಿಎಸ್ ವರಿಷ್ಠ ಹೆಚ್​​ಡಿ ದೇವೇಗೌಡ (HD Deve Gowda) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. 2018ರಲ್ಲಿ ವಿಶ್ವವಿದ್ಯಾಲಯ ಧನಸಹಾಯ ಆಯೋಗ (UGC) ಹೊರಡಿಸಿದ್ದ ಅಧಿಸೂಚನೆಯನ್ನು ಉಲ್ಲೇಖಿಸಿ ಅವರು ಪ್ರಧಾನಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಪ್ರತಿಯನ್ನು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೂ ಕಳುಹಿಸಿದ್ದಾರೆ.

ಯುಜಿಸಿ ಮಾರ್ಗಸೂಚಿ ಅಡಿಯಲ್ಲಿ ಬರುವ ಕರ್ನಾಟಕದ ವಿಶ್ವವಿದ್ಯಾಲಯಗಳು, ಸರ್ಕಾರಿ ಕಾಲೇಜುಗಳು ಮತ್ತು ಸರ್ಕಾರಿ ಅನುದಾನಿತ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ, ಯುಜಿಸಿ ಆದೇಶದಿಂದ ತೊಂದರೆ ಅನುಭವಿಸುತ್ತಿರುವ ಸಹಾಯಕ ಪ್ರಾಧ್ಯಾಪಕರಿಂದ ಸಮಸ್ಯೆಗಳ ಕುರಿತಾದ ಅಹವಾಲುಗಳನ್ನು ಕೇಳಿದ್ದೇನೆ. ಯುಜಿಸಿ ಹೊರಡಿಸಿದ್ದ ಮಾರ್ಗಸೂಚಿಗಳು ವಿಶೇಷವಾಗಿ 2003, 2006, 2007 ಮತ್ತು 2009 ರಲ್ಲಿ ನೇಮಕಗೊಂಡ ಅಧ್ಯಾಪಕರ ಮೇಲೆ ಪರಿಣಾಮ ಬೀರಿವೆ. ಅವರ ಸಮಸ್ಯೆಗಳ ಕುರಿತು ಇಲ್ಲಿ ಉಲ್ಲೇಖಿಸಿದ್ದು, ದಯವಿಟ್ಟು ಅವುಗಳನ್ನು ಪರಿಶೀಲಿಸಿ ಮತ್ತು ಸಂಬಂಧಪಟ್ಟವರಿಗೆ ನಿರ್ದೇಶನಗಳನ್ನು ನೀಡಿ ಎಂದು ದೇವೇಗೌಡರು ಮನವಿ ಮಾಡಿದ್ದಾರೆ.

ಯಾವುದೇ ವಿಶ್ವವಿದ್ಯಾಲಯದಲ್ಲಿ ಅರೆಕಾಲಿಕ ಪಿಎಚ್‌ಡಿಯನ್ನು ಮೂರು ವರ್ಷಗಳಲ್ಲಿ ಪೂರ್ಣಗೊಳಿಸಲಾಗುವುದಿಲ್ಲ. ಸಂಶೋಧನಾ ದಾಖಲಾತಿ ಪ್ರಕ್ರಿಯೆ ಮತ್ತು ಕೋರ್ಸ್ ಕೆಲಸವು ಎರಡು ವರ್ಷಗಳನ್ನು ತೆಗೆದುಕೊಳ್ಳುತ್ತದೆ. ಪಿಎಚ್‌ಡಿ ಪೂರ್ಣಗೊಳಿಸಲು ಸುಮಾರು 5-8 ವರ್ಷಗಳ ಅಗತ್ಯವಿದೆ. ಕರ್ನಾಟಕ ರಾಜ್ಯದ ಬಹುತೇಕ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ವಿಶೇಷವಾಗಿ ವಾಣಿಜ್ಯ, ಇಂಗ್ಲಿಷ್ ಮತ್ತು ಕೆಲವು ವಿಜ್ಞಾನ ವಿಷಯಗಳಿಗೆ ಸಂಶೋಧನಾ ಮಾರ್ಗದರ್ಶಿಗಳ ಕೊರತೆಯಿದೆ. ಸಂಶೋಧನಾ ವಿದ್ವಾಂಸರು ಪಿಎಚ್‌ಡಿ ಪಡೆಯಲು ಒತ್ತಾಯಿಸಲಾಗುತ್ತದೆ. ಇತರ ರಾಜ್ಯಗಳಲ್ಲಿ ಅವಕಾಶವಿದ್ದರೂ, ಬೇರೆ ರಾಜ್ಯದಲ್ಲಿ ನೋಂದಣಿ ಮಾಡಿಕೊಂಡವರು ಶೋಷಣೆಗೆ ಒಳಗಾಗಿದ್ದಾರೆ. ಅಸ್ತಿತ್ವದಲ್ಲಿರುವ ಫ್ಯಾಕಲ್ಟಿಗಳಿಗಾಗಿ ನಡೆಸಲಾಗುತ್ತಿದ್ದ ಫ್ಯಾಕಲ್ಟಿ ಡೆವಲಪ್ಮೆಂಟ್ ಪ್ರೋಗ್ರಾಂ (FDP) ಅನ್ನು ಯುಜಿಸಿ ತೆಗೆದುಹಾಕಿದೆ.

ಇದನ್ನೂ ಓದಿ: SSLC Supplementary Result 2023: ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯಲ್ಲಿ 65,511 ವಿದ್ಯಾರ್ಥಿಗಳು ಫೇಲ್

ಯುಜಿಸಿಯ 2018ರ ನಿಯಮಾವಳಿಯನ್ನು ಕರ್ನಾಟಕದಲ್ಲಿ 2021ರ ಮಾರ್ಚ್​ 16 ರಂದು ಜಾರಿಗೆ ತರಲಾಯಿತು. ಎರಡು ವರ್ಷಗಳಲ್ಲಿ ಪಿಎಚ್‌ಡಿ ಪೂರ್ಣಗೊಳಿಸಲು ಪ್ರಾಯೋಗಿಕವಾಗಿ ಅಸಾಧ್ಯವಾಗಿದೆ. ಆದರೂ ಪಿಎಚ್‌ಡಿ ಕಡ್ಡಾಯ ನಿಯಮ ಪಾಲಿಸಲು ಕೇವಲ 2 ವರ್ಷ ಮತ್ತು 4 ತಿಂಗಳ ಸಮಯವನ್ನು ನೀಡಲಾಯಿತು ಎಂದು ದೇವೇಗೌಡರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯು (AICTE) ಕಡ್ಡಾಯ ಪಿಎಚ್​ಡಿ ನಿಯಮದಿಂದ ವಿನಾಯಿತಿ ನೀಡಿದೆ. ಯುಜಿಸಿ ಕೂಡ ಇದನ್ನೇ ಅನುಸರಿಸಬೇಕು. ಕರ್ನಾಟಕದಲ್ಲಿ ಹೆಚ್ಚಿನ ಸಂಖ್ಯೆಯ ಆಕಾಂಕ್ಷಿಗಳು ಸಂಶೋಧನಾ ಕಾರ್ಯವನ್ನು ಕೈಗೊಳ್ಳಲು ಸಾಕಷ್ಟು ಮಾರ್ಗದರ್ಶಿಗಳು ಲಭ್ಯವಿಲ್ಲ. ಆದರೆ, ಅವರು ನಿಗದಿತ ಸಮಯದೊಳಗೆ ಅಸೋಸಿಯೇಟ್ ಪ್ರೊಫೆಸರ್ ಹುದ್ದೆಯನ್ನು ಪಡೆಯಲು ಅದನ್ನು ಪೂರ್ಣಗೊಳಿಸಬೇಕಾಗಿದೆ. ಮೇಲಿನ ಷರತ್ತುಗಳು ಕರ್ನಾಟಕದ ವಿಶ್ವವಿದ್ಯಾಲಯಗಳು, ಸರ್ಕಾರಿ ಕಾಲೇಜುಗಳು ಮತ್ತು ಸರ್ಕಾರಿ ಅನುದಾನಿತ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಮುಖ ಪ್ರಾಧ್ಯಾಪಕರ ಮೇಲೆ ಹೆಚ್ಚು ಪರಿಣಾಮ ಬೀರುತ್ತಿವೆ. ಆದ್ದರಿಂದ ಕಡ್ಡಾಯ ಪಿಎಚ್‌ಡಿ ನೀತಿಯಿಂದ ವಿನಾಯಿತಿ ನೀಡುವಂತೆ ಯುಜಿಸಿ ಅಧ್ಯಕ್ಷರಿಗೆ ದಯಮಾಡಿ ನಿರ್ದೇಶಿಸಬೇಕೆಂದು ವಿನಂತಿಸುತ್ತೇನೆ ಎಂದು ಪ್ರಧಾನಿ ಮೋದಿ ಅವರನ್ನು ದೇವೇಗೌಡರು ಕೋರಿದ್ದಾರೆ.

ಶಿಕ್ಷಣಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:19 pm, Fri, 30 June 23

ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?
ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ದಿನಸಿ ಸಾಲ ವಾಪಾಸ್ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ!
ದಿನಸಿ ಸಾಲ ವಾಪಾಸ್ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ!
ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ: ಅಶೋಕ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ: ಅಶೋಕ
ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಅಸಹಾಯಕ ತಂದೆ
ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಅಸಹಾಯಕ ತಂದೆ
ಗಜಲಕ್ಷ್ಮಿ, ಮಹಾಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ಚಾಮುಂಡೇಶ್ವರಿ
ಗಜಲಕ್ಷ್ಮಿ, ಮಹಾಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ಚಾಮುಂಡೇಶ್ವರಿ
ಸ್ಟಂಟ್ ಮಾಡಲು ಹೋಗಿ ಕಾರಿನ ಸಮೇತ 300 ಅಡಿ ಆಳದ ಕಂದಕಕ್ಕೆ ಬಿದ್ದ ವ್ಯಕ್ತಿ
ಸ್ಟಂಟ್ ಮಾಡಲು ಹೋಗಿ ಕಾರಿನ ಸಮೇತ 300 ಅಡಿ ಆಳದ ಕಂದಕಕ್ಕೆ ಬಿದ್ದ ವ್ಯಕ್ತಿ
ಸೇತುವೆ ಲೋಕಾರ್ಪಣೆಗೊಂಡು ಎರಡು ಗಂಟೆಯಲ್ಲೇ ಮುಚ್ಚಿದ್ದೇಕೆ?
ಸೇತುವೆ ಲೋಕಾರ್ಪಣೆಗೊಂಡು ಎರಡು ಗಂಟೆಯಲ್ಲೇ ಮುಚ್ಚಿದ್ದೇಕೆ?
ಲಿಫ್ಟ್​ ಬಾಗಿಲು ಹಾಕಿದ್ದೇಕೆಂದು ಗದರಿ ಬಾಲಕನ ಕೈ ಕಚ್ಚಿದ ವ್ಯಕ್ತಿ
ಲಿಫ್ಟ್​ ಬಾಗಿಲು ಹಾಕಿದ್ದೇಕೆಂದು ಗದರಿ ಬಾಲಕನ ಕೈ ಕಚ್ಚಿದ ವ್ಯಕ್ತಿ