AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರವನ್ನು ಚೀನಾಕ್ಕೆ ಹೋಲಿಸಿದ ಹೆಚ್​ಡಿಕೆ; ಅನ್ನಕ್ಕೆ ಮಣ್ಣು ಹುಯ್ಯುವ ಹೀನ ಕೆಲಸ ಎಂದು ಕಿಡಿ

ಬೆಳಗಾವಿ ಗಡಿ ಪ್ರದೇಶದ ಗ್ರಾಮಗಳಲ್ಲಿ ಮರಾಠಿ ಮಾತನಾಡುವ ಜನರಿಗಾಗಿ ಹಮ್ಮಿಕೊಂಡಿರುವ ಆರೋಗ್ಯ ವಿಮೆ ಯೋಜನೆಯನ್ನು ಮಹಾರಾಷ್ಟ್ರ ಸರ್ಕಾರ 865 ಗ್ರಾಮಗಳಿಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿರುವುದಕ್ಕೆ ಜೆಡಿಎಸ್ ನಾಯಕ ಹೆಚ್​​ಡಿ ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಾರಾಷ್ಟ್ರವನ್ನು ಚೀನಾಕ್ಕೆ ಹೋಲಿಸಿದ ಹೆಚ್​ಡಿಕೆ; ಅನ್ನಕ್ಕೆ ಮಣ್ಣು ಹುಯ್ಯುವ ಹೀನ ಕೆಲಸ ಎಂದು ಕಿಡಿ
ಹೆಚ್​​ಡಿ ಕುಮಾರಸ್ವಾಮಿ
ಗಣಪತಿ ಶರ್ಮಾ
|

Updated on: Apr 05, 2023 | 4:44 PM

Share

ಮುಖ್ಯಾಂಶಗಳು

  • ಬೆಳಗಾವಿ ಗಡಿಯಲ್ಲಿ ಮಹಾರಾಷ್ಟ್ರ ಸರ್ಕಾರ ಆರೋಗ್ಯ ವಿಮೆ ಯೋಜನೆ ವಿಸ್ತರಿಸಿದ್ದಕ್ಕೆ ಹೆಚ್​ಡಿಕೆ ಕಿಡಿ.
  • ಮಹಾರಾಷ್ಟ್ರವನ್ನು ಚೀನಾಕ್ಕೆ ಹೋಲಿಸಿ ಸರಣಿ ಟ್ವೀಟ್.
  • ಮಹಾರಾಷ್ಟ್ರದಲ್ಲಿರುವ ಬಿಜೆಪಿ ಡಬಲ್ ಎಂಜಿನ್ ಸರ್ಕಾರ ಪದೇಪದೆ ಕಾಲುಕೆರೆದು ಕಿತಾಪತಿ ಮಾಡುತ್ತಿದೆ ಎಂದ ಕುಮಾರಸ್ವಾಮಿ.

ಬೆಂಗಳೂರು: ಬೆಳಗಾವಿ (Belagavi) ಗಡಿ ಪ್ರದೇಶದ ಗ್ರಾಮಗಳಲ್ಲಿ ಮರಾಠಿ ಮಾತನಾಡುವ ಜನರಿಗಾಗಿ ಹಮ್ಮಿಕೊಂಡಿರುವ ಆರೋಗ್ಯ ವಿಮೆ ಯೋಜನೆಯನ್ನು ಮಹಾರಾಷ್ಟ್ರ (Maharashtra) ಸರ್ಕಾರ 865 ಗ್ರಾಮಗಳಿಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿರುವುದಕ್ಕೆ ಜೆಡಿಎಸ್ ನಾಯಕ ಹೆಚ್​​ಡಿ ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರವನ್ನು ಚೀನಾಕ್ಕೆ ಹೋಲಿಸಿ ಸರಣಿ ಟ್ವೀಟ್ ಮಾಡಿರುವ ಅವರು, ನೆರೆ ರಾಜ್ಯವು ಅನ್ನಕ್ಕೆ ಮಣ್ಣು ಹುಯ್ಯುವ ಹೀನ ಕೆಲಸ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜತೆಗೆ, ಮಹಾರಾಷ್ಟ್ರ ಸರ್ಕಾರದ ನಿರ್ಧಾರವನ್ನು ಖಂಡಿಸಿದ್ದಾರೆ. ಬೆಳಗಾವಿ ಗಡಿ ಪ್ರದೇಶಗಳಲ್ಲಿನ ಆರೋಗ್ಯ ವಿಮೆ ಯೋಜನೆ ವಿಸ್ತರಣೆ ಬಗ್ಗೆ ಮಹಾರಾಷ್ಟ್ರ ಸರ್ಕಾರ ಏಪ್ರಿಲ್ 3ರಂದು ನಿರ್ಣಯ ಕೈಗೊಂಡಿತ್ತಲ್ಲದೆ, ಆದೇಶ ಹೊರಡಿಸಿತ್ತು.

ಮಹಾರಾಷ್ಟ್ರದಲ್ಲಿರುವ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರ ಪದೇಪದೆ ಕಾಲುಕೆರೆದು ಕಿತಾಪತಿ ಮಾಡುತ್ತಿದೆ. ಚೀನಾ ಮನಸ್ಥಿತಿಯ ಆ ರಾಜ್ಯವು ಕರ್ನಾಟಕವನ್ನು ಶತ್ರುವಿನಂತೆ ನೋಡುತ್ತಿದೆ. ಕೇಂದ್ರ ಬಿಜೆಪಿ ಸರ್ಕಾರ ಇದನ್ನೆಲ್ಲಾ ನೋಡಿಕೊಂಡು ಮೌನವಾಗಿದೆ. ಒಕ್ಕೂಟ ವ್ಯವಸ್ಥೆಯ ಅವಸಾನಕ್ಕೆ ಇದೇ ಕಾರಣವಾಗಬಹುದು. ಒಂದಲ್ಲ ಎರಡಲ್ಲ, ಪ್ರತಿಯೊಂದು ವಿಷಯದಲ್ಲೂ ಮಹಾರಾಷ್ಟ್ರವು ಕರ್ನಾಟಕವನ್ನು ಕೆರಳಿಸುತ್ತದೆ. ರಾಜ್ಯದ ಗಡಿ ಒಳಗಿರುವ 865 ಗ್ರಾಮಗಳ ಜನರಿಗೆ ಆರೋಗ್ಯ ವಿಮೆ ಜಾರಿ ಮಾಡಿದ ಆ ರಾಜ್ಯ ಸರ್ಕಾರದ ನಡೆ ಒಕ್ಕೂಟ ವ್ಯವಸ್ಥೆಯನ್ನು ಒಡೆಯುವ ನೇರ, ಧೂರ್ತ ಪ್ರಯತ್ನ ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಮಹಾರಾಷ್ಟ್ರವು ಒಕ್ಕೂಟ ವ್ಯವಸ್ಥೆಯ ಎಲ್ಲಾ ಎಲ್ಲೆಗಳನ್ನು ಮೀರಿ ಅಹಂಕಾರದಿಂದ ವರ್ತಿಸುತ್ತಿದೆ. ಬಿಜೆಪಿಯ ಕೇಂದ್ರ ಸ್ರಾಕರವು ‘ಶಿಂಧೆ ಸೂತ್ರದ ಗೊಂಬೆ’ಯಾಗಿ ಅಂತಹ ರಾಜಕಾರಣಕ್ಕೆ ಕರ್ನಾಟಕವನ್ನು ಬಲಿ ಕೊಡಲು ಹೊರಟಿದೆಯಾ ಎನ್ನುವ ಅನುಮಾನ ನನ್ನದು. ಇಲ್ಲವಾದರೆ, ಮಹಾರಾಷ್ಟ್ರ ಈ ಪರಿಯ ಉದ್ಧಟತನ ತೋರುತ್ತಿದ್ದರೂ ಮೋದಿ ಸರ್ಕಾರದ ಮೌನವೇಕೆ? ಕರ್ನಾಟಕದಲ್ಲಿ ಇಡೀ ಭಾರತವೇ ಅಡಗಿದೆ. ಕಾಶ್ಮೀರದಿಂದ ಕನ್ಯಾಕಮಾರಿಯವರೆಗೆ, ಗುಜರಾತಿನಿಂದ ಒಡಿಶಾವರೆಗೆ ಎಲ್ಲ ಕಡೆಯಿಂದಲೂ ಅನ್ನ ಅರಸಿಕೊಂಡು ಬಂದವರಿಗೆ ಆಶ್ರಯ ನೀಡಿದೆ. ಆ ಅನ್ನಕ್ಕೆ ಮಣ್ಣು ಹುಯ್ಯುವ ಹೀನ ಕೆಲಸವನ್ನು ಮಹಾರಾಷ್ಟ್ರ ಎಗ್ಗಿಲ್ಲದೆ ಮಾಡುತ್ತಿದೆ. ಕನ್ನಡಿಗರು ಸುಮ್ಮನಿರುವ ಕಾಲ ಮುಗಿದಿದೆ ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: Belagavi News: ಬೆಳಗಾವಿ ಗಡಿ ಪ್ರದೇಶದ 865 ಗ್ರಾಮಗಳಿಗೆ ಆರೋಗ್ಯ ಯೋಜನೆ ವಿಸ್ತರಿಸಿದ ಮಹಾರಾಷ್ಟ್ರ

ಭಾರತ ಸ್ವತಂತ್ರ್ಯಗೊಂಡಾಗ ಎಲ್ಲರಿಗಿಂತ ಮೊದಲೇ ಒಕ್ಕೂಟ ವ್ಯವಸ್ಥೆಗೆ ಒಳಪಟ್ಟವರು ನಾವು. ನಮ್ಮ ಉದಾರತೆಯೇ ನಮಗೆ ಇಂದು ಮುಳುವಾಗಿದೆಯಾ? ನೆಲ, ಜಲ, ಭಾಷೆ, ಅನುದಾನ ಸೇರಿ ಪ್ರತಿ ವಿಷಯದಲ್ಲೂ ಕನ್ನಡಿಗರು ಮಲತಾಯಿ ಮಕ್ಕಳಾಗಿದ್ದಾರೆ! ಇನ್ನೆಷ್ಟು ದಿನ ಈ ಅನ್ಯಾಯ ಎಂದು ಹೆಚ್​​ಡಿಕೆ ಪ್ರಶ್ನಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ