AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ಗೆ ಕೌಂಟರ್‌ ಕೊಡಲು ಸಜ್ಜಾಗಿದ್ದ ಜೆಡಿಎಸ್‌ ಸಮಾವೇಶ ಮುಂದೂಡಿಕೆ: ಇಲ್ಲಿದೆ ಕಾರಣ

ಮಾಜಿ ಪ್ರಧಾನಿ ಹೆಚ್​​​ಡಿ ದೇವೇಗೌಡರ ತವರು ಜಿಲ್ಲೆ ಹಾಸನದಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶ ನಡೆಸಿ ಶಕ್ತಿ ಪ್ರದರ್ಶನ ಮಾಡಿದ ಬೆನ್ನಲ್ಲೇ, ಅದೇ ರೀತಿಯಲ್ಲಿ ಆಡಳಿತ ಪಕ್ಷಕ್ಕೆ ಕೌಂಟರ್ ಕೊಡಲು ಜೆಡಿಎಸ್ ಮುಂದಾಗಿದೆ. ಕಾಂಗ್ರೆಸ್ ಸಮಾವೇಶದ ಬೆನ್ನಲ್ಲೇ ಎಚ್ಚೆತ್ತ ದಳಪತಿಗಳು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಅಭಿನಂದನಾ ಕಾರ್ಯಕ್ರಮದ ಹೆಸರಿನಲ್ಲಿ ನಡೆಸಲು ಮುಂದಾಗಿರುವ ಬೃಹತ್ ಸಮಾವೇಶವನ್ನು ಮುಂದೂಡಲಾಗಿದೆ.

ಕಾಂಗ್ರೆಸ್​ಗೆ ಕೌಂಟರ್‌ ಕೊಡಲು ಸಜ್ಜಾಗಿದ್ದ ಜೆಡಿಎಸ್‌ ಸಮಾವೇಶ ಮುಂದೂಡಿಕೆ: ಇಲ್ಲಿದೆ ಕಾರಣ
ಪ್ರಶಾಂತ್​ ಬಿ.
| Updated By: ರಮೇಶ್ ಬಿ. ಜವಳಗೇರಾ|

Updated on:Dec 08, 2024 | 5:20 PM

Share

ಮಂಡ್ಯ, (ಡಿಸೆಂಬರ್ 08): ಕಾಂಗ್ರೆಸ್​ನ ಹಾಸನದ ಬೃಹತ್ ಸಮಾವೇಶಕ್ಕೆ ಪ್ರತಿಯಾಗಿ ಜೆಡಿಎಸ್​​ನಿಂದ ನಡೆಯಬೇಕಿದ್ದ ಸಮಾವೇಶ ಮುಂದೂಡಿಕೆಯಾಗಿದೆ. ಹಾಸನದಲ್ಲಿ ಕಾಂಗ್ರೆಸ್​​ ನಡೆಸಿದ್ದ ಜನಕಲ್ಯಾಣ ಸಮಾವೇಶಕ್ಕೆ ಕೌಂಟರ್​ ಕೊಡಲು ಜೆಡಿಎಸ್​​, ಕೇಂದ್ರ ಸಚಿವ ಕುಮಾರಸ್ವಾಮಿಗೆ ಅಭಿನಂದನೆ ಹೆಸರಿನಲ್ಲಿ ಬಹತ್ ಸಮಾವೇಶ ಮಾಡಲು ಮುಂದಾಗಿದ್ದು, ಇದೇ ಇದೇ ಡಿಸೆಂಬರ್ 15ರಂದು ಮಂಡ್ಯದಲ್ಲಿ ನಡೆಯಬೇಕಿದ್ದ ಬೃಹತ್ ಸಮಾವೇಶವನ್ನು ಮುಂದೂಡಿಕೆಯಾಗಿದೆ. ಕನ್ನಡ ಸಾಹಿತ್ಯ ಸಮ್ಮೇಳನ ಹಿನ್ನೆಲೆಯಲ್ಲಿ ಜೆಡಿಎಸ್​ ಸಮಾವೇಶ ಮುಂಡೂಡಿಕೆ ಮಾಡಲಾಗಿದೆ ಎಂದು ಸ್ವತಃ ಮಾಜಿ ಸಚಿವ ಪುಟ್ಟರಾಜು ಮಾಹಿತಿ ನೀಡಿದ್ದಾರೆ.

ಇಂದು(ಡಿಸೆಂಬರ್ 08) ಮದ್ದೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪುಟ್ಟಸ್ವಾಮಿ, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ‌ ಹಿನ್ನೆಲೆಯಲ್ಲಿ ಇದೇ ಡಿಸೆಂಬರ್ 15ರಂದು ಕುಮಾರಸ್ವಾಮಿ ಅಭಿನಂದನಾ ಸಮಾರಂಭ ಮುಂದೂಡಿಕೆ ಮಾಡಲಾಗಿದೆ. ಕುಮಾರಸ್ವಾಮಿಯವರ ಸೂಚನೆ ಮೇರೆಗೆ ಮುಂದೂಡಿದ್ದೇವೆ. ಸಮಾರಂಭ ಮುಂದೂಡಿಕೆಗೆ ಬೇರೆ ಯಾವುದೇ ಕಾರಣ ಇಲ್ಲ. ಯಾವುದೇ ಗೊಂದಲ ಆಗಬಾರದೆಂದು ಮುಂದೂಡಿದ್ದೇವೆ. ಸಮ್ಮೇಳನ ಮುಗಿದ ಮೇಲೆ ದಿನಾಂಕ ನಿಗದಿ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಕಾಂಗ್ರೆಸ್ ಸಮಾವೇಶಕ್ಕೆ ಕೌಂಟರ್ ಕೊಡಲು ಜೆಡಿಎಸ್ ಸಜ್ಜು: ಮಂಡ್ಯದಲ್ಲಿ ಬೃಹತ್ ಸಮಾವೇಶಕ್ಕೆ ಸಿದ್ಧತೆ

ಸಾಹಿತ್ಯ ಸಮ್ಮೇಳನದ ಸಭೆಗಳಲ್ಲಿ ಕುಮಾರಸ್ವಾಮಿ ಭಾಗವಹಿಸದಿರುವ ಬಗ್ಗೆ ಮಾತನಾಡಿದ ಪುಟ್ಟಸ್ವಾಮಿ, ನಾವೆಲ್ಲ ಸಭೆಗಳಲ್ಲಿ ಭಾಗವಹಿಸಿದ್ದೇವೆ . ಕೇಂದ್ರ ಮಂತ್ರಿಗಳು ಬರಲು ಸಾಧ್ಯವಾಗಿಲ್ಲ. ಸಂಸತ್ ಅಧಿವೇಶನ ಇರುವ ಹಿನ್ನೆಲೆಯಲ್ಲಿ ಭಾಗವಹಿಸಿಲ್ಲ. ಜಿಲ್ಲಾಡಳಿತ ಕರೆದಿದ್ದಾರೆ ನಾವು ಹೋಗಿದ್ದೇವೆ . ನಮಗೆ ವಹಿಸಿರುವ ಜವಾಬ್ದಾರಿ ಮಾಡುತ್ತಿದ್ದೇವೆ. ನಾವು ನಾಡುನುಡಿಯ ಕೆಲಸ ಮಾಡಿದ್ದೇವೆ . ಸಾಹಿತ್ಯ ಸಮ್ಮೇಳನ ಚೆನ್ನಾಗಿ ಮಾಡಲಿ. 1.30 ಕ್ಕೆ ಬರಲು ಹೇಳಿ 4 ಗಂಟೆಗೆ ಬರುತ್ತಾರೆ ಎಂದು ಜಿಲ್ಲಾಉಸ್ತುವಾರಿ ಸಚಿವ ಚಲುವರಾಯಸ್ವಾಮಿಗೆ ಟಾಂಗ್ ಕೊಟ್ಟರು.

ಜೆಡಿಎಸ್​​ ಕಾರ್ಯಕ್ರಮದ ಬಗ್ಗೆ ಸಚಿವ ಚಲುವರಾಯಸ್ವಾಮಿ ವ್ಯಂಗ್ಯದ ಬಗ್ಗೆ ಪ್ರತಿಕ್ರಿಯಿಸಿದ ಪುಟ್ಟರಾಜು, ಇಂತಹ ಜಿಲ್ಲಾ ಮಂತ್ರಿಗಳನ್ನ ಬಹಳ ನೋಡಿದ್ದೇವೆ. ಚಲುವರಾಯಸ್ವಾಮಿ ಚುನಾವಣೆಯಲ್ಲಿ ಸೋತಿಲ್ವಾ? ಸಮ್ಮಿಶ್ರವಾಗಿ ಚುನಾವಣೆ ಮಾಡಿದ್ದಾಗ ಇವರು ಏನು ಮಾಡಿದ್ರು. ಜನರ ತೀರ್ಮಾನ ಒಪ್ಪಿದ್ದೇವೆ . ನಮಗೂ ಮಾತನಾಡಲು ಬರುತ್ತದೆ. ಹೊಸ ಡಾಂಬರು ಬೇಡ, ಗುಂಡಿ ಬಿದ್ದಿರುವುದನ್ನ ಮುಚ್ಚಲಿ ಎಂದು ತಿರುಗೇಟು ನೀಡಿದರು.

ಕಾಂಗ್ರೆಸ್ ನಲ್ಲಿ ಇದೀಗ ಏನು ಆಗುತ್ತಿದೆ ನೋಡಿ. ಇದನ್ನ ಚಲುವರಾಯಸ್ವಾಮಿ ಹೇಳಬೇಕು. ಇದು ಬಹಳ ದಿನ ನಡೆಯುವುದಿಲ್ಲ. ಲಘುವಾಗಿ ಮಾತನಾಡಬೇಡಿ. ಗೌರವ ಇಟ್ಟುಕೊಂಡು ಮಾತನಾಡಿ. ಇದು ಕೊನೆಯಾಗದೇ ಇದ್ದರೇ ನಾವು ಮಾತನಾಡುತ್ತೇವೆ . ನಾವು ನಾಯಕನ ಹತ್ತಿರ ಸೈ ಅನ್ನಿಸಿಕೊಳ್ಳಲು ಕೆಲಸ ಮಾಡುತ್ತೇವೆ. ಅದರಲ್ಲಿ ತಪ್ಪೇನೂ ಇದೆ. ನಮ್ಮದು ದೇವೇಗೌಡರ ಮನೆ ಮಾತ್ರ. ಅವರು ಸಿದ್ದರಾಮಯ್ಯ ಜೊತೆ ಇರಬೇಕಾ, ಶಿವಕುಮಾರ್ ಜೊತೆ ಇರಬೇಕಾ ಎಂಬ ಗೊಂದಲದಲ್ಲಿ ಇದ್ದಾರೆ. ನಮ್ಮ ಪಕ್ಷದ ಗೊಂದಲದ ಬಗ್ಗೆ ಇವರು ಯಾಕೆ ಮಾತನಾಡುತ್ತಾರೆ. ನಮ್ಮದು ಯಾಕೆ ಹುಡುಕುತ್ತಾರೆ. ವಿಧಾನಸಭೆ ಚುನಾವಣೆಯಲ್ಲಿ ಜಸ್ಟ್ ಪಾಸಾಗಿದ್ದಾರೆ. ಮುಂದಿನ ಚುನಾವಣೆಯಲ್ಲಿ ಗೊತ್ತಾಗುತ್ತದೆ ಎಂದು ಚಲುವರಾಯಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು.

ಇನ್ನು ಇದೇ ವೇಳೆ ನಿಖಿಲ್ ಗೆ ಜೆಡಿಎಸ್ ರಾಜ್ಯಾಧ್ಯಕ್ಷ ಪಟ್ಟ ನೀಡುವ ಬಗ್ಗೆ ಮಾತನಾಡಿದ ಪುಟ್ಟರಾಜು, ದೇವೇಗೌಡರ ತೀರ್ಮಾನ ಮಾಡುತ್ತಾರೆ . ಕಾಂಗ್ರೆಸ್ ನಲ್ಲೂ ವಂಶರಾಜಕಾರಣ ಇದೆ. ಜವಾಹರ್ ಲಾಲ್ ನೆಹರು ಕುಟುಂಬದಲ್ಲಿ ಕೂಡ ಕುಟುಂಬ ರಾಜಕಾರಣ ಇದೆ. ದೇವೇಗೌಡರ ಕುಟುಂಬ ರಾಜಕಾರಣ ಮಾಡಿದ್ರೆ ತಪ್ಪೇನು? ಎಂದು ಸಮರ್ಥಿಸಿಕೊಂಡರು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 5:17 pm, Sun, 8 December 24

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್