ಶಿವಮೊಗ್ಗ: ಗ್ಯಾರಂಟಿ ಫಲಾಮಿಭವಿಗಳ ಸಮಾವೇಶದಲ್ಲಿ ಜೆಡಿಎಸ್ ಶಾಸಕಿ ಕಾಂಗ್ರೆಸ್ ನಾಯಕರೊಂದಿಗೆ ಆತ್ಮೀಯವಾಗಿ ಹರಟಿದರು!

ನಗರದ ಅಲ್ಲಮ ಪ್ರಭು ಫ್ರೀಡಂ ಪಾರ್ಕ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಾಗರದ ಶಾಸಕ ಬೇಳೂರು ಗೋಪಾಲಕೃಷ್ಣ, ಶಿವಮೊಗ್ಗ ಗ್ರಾಮೀಣ ಕ್ಷೇತ್ರದ ಜೆಡಿಎಸ್ ಶಾಸಕಿ ಶಾರದ ಪೂರ್ಯನಾಯ್ಕ್ ಮತ್ತು ಜಿಲ್ಲಾ ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು.

ಶಿವಮೊಗ್ಗ: ಗ್ಯಾರಂಟಿ ಫಲಾಮಿಭವಿಗಳ ಸಮಾವೇಶದಲ್ಲಿ ಜೆಡಿಎಸ್ ಶಾಸಕಿ ಕಾಂಗ್ರೆಸ್ ನಾಯಕರೊಂದಿಗೆ ಆತ್ಮೀಯವಾಗಿ ಹರಟಿದರು!
|

Updated on: Feb 24, 2024 | 4:39 PM

ಶಿವಮೊಗ್ಗ: ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ (Madhu Bangarappa) ಮಾಧ್ಯಮಗಳೊಂದಿಎಗ ಮಾತಾಡುವಾಗ ಸ್ವಲ್ಪ ಜೋರು ಎಂದೆನಿಸದರೂ ಜಿಲ್ಲೆಯಲ್ಲಿ ಓಡಾಡಿಕೊಂಡು ಕೆಲಸ ಮಾಡುತ್ತಿದ್ದಾರೆ. ಅವರ ಮತ್ತು ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ (BY Raghavendra) ಕಾರ್ಯವಿಧಾನ ಭಿನ್ನವಾಗಿರುವುದರಿಂದ ವೈಮನಸ್ಸುಗಳು ಏಳುತ್ತಿರುತ್ತವೆ ಅದು ಬೇರೆ ವಿಚಾರ. ಅದನ್ನು ಮತ್ತಿನ್ಯಾವತ್ತಾದರು ಚರ್ಚೆ ಮಾಡೋಣ; ಇಬ್ಬರ ತಂದೆಗಳು ರಾಜ್ಯದ ಮುಖ್ಯಮಂತ್ರಿಯಾಗಿದ್ದವರು, ಹಾಗಾಗಿ ಅದೆಲ್ಲ ಇದ್ದಿದ್ದೇ! ಓಕೆ ಮಧು ಬಂಗಾರಪ್ಪ ಇಂದು ತಮ್ಮ ಸರ್ಕಾರದ 5 ಗ್ಯಾರಂಟಿ ಯೋಜನೆ ಫಲಾನುಭವಿಗಳ (guarantee scheme beneficiaries) ಸಮಾವೇಶ ಏರ್ಪಡಿಸಿದ್ದರು. ನಗರದ ಅಲ್ಲಮ ಪ್ರಭು ಫ್ರೀಡಂ ಪಾರ್ಕ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಾಗರದ ಶಾಸಕ ಬೇಳೂರು ಗೋಪಾಲಕೃಷ್ಣ, ಶಿವಮೊಗ್ಗ ಗ್ರಾಮೀಣ ಕ್ಷೇತ್ರದ ಜೆಡಿಎಸ್ ಶಾಸಕಿ ಶಾರದ ಪೂರ್ಯನಾಯ್ಕ್ ಮತ್ತು ಜಿಲ್ಲಾ ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು. ಶಿವಕುಮಾರ್ ಮತ್ತು ಮಧು ಬಂಗಾರಪ್ಪ ಅವರ ನಡುವೆ ಕೂತಿದ್ದ ಶಾರದಾ ಅವರ ಜೊತೆ ಇಬ್ಬರು ಕಾಂಗ್ರೆಸ್ ನಾಯಕರು ಏನನ್ನೋ ಮಾತಾಡುತ್ತಾರೆ. ಮಧು ಅವರಂತೂ ತಮ್ಮ ಸ್ಥಳದಿಂದ ಎದ್ದು ಶಿವಕುಮಾರ್ ಅವರಿಗೆ ಏನೋ ಹೇಳಿದಾಗ ಶಾಸಕಿ ಮುಗಳ್ನಗುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us