ಜೈಲಿನಿಂದ ಹೊರಬಂದು ಖಡಕ್​ ಆಗಿ ಮಾತನಾಡಿದ ಸೂರಜ್ ರೇವಣ್ಣ, ಏನಂದ್ರು ನೋಡಿ..

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಜೆಡಿಎಸ್​ ವಿಧಾನಪರಿಷತ್ ಸದಸ್ಯ ಸೂರಜ್​ ರೇವಣ್ಣ ಅವರಿಗೆ ನಿನ್ನೆ(ಜುಲೈ 22) ಜಾಮೀನು ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಸೂರಜ್ ರೇವಣ್ಣ ಅವರು ಇಂದು (ಜುಲೈ 23) ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಿಂದ ಬಿಡುಗಡೆಯಾದರು. ಇನ್ನು ಜೈಲಿನಿಂದ ಆಚೆ ಬಂದ ಸೂರಜ್ ರೇವಣ್ಣ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಏನೆಲ್ಲಾ ಹೇಳಿದ್ದಾರೆ ಎನ್ನುವ ವಿವರ ಇಲ್ಲಿದೆ.

ಜೈಲಿನಿಂದ ಹೊರಬಂದು ಖಡಕ್​ ಆಗಿ ಮಾತನಾಡಿದ ಸೂರಜ್ ರೇವಣ್ಣ,  ಏನಂದ್ರು ನೋಡಿ..
ಸೂರಜ್ ರೇವಣ್ಣ
Follow us
Shivaprasad
| Updated By: ರಮೇಶ್ ಬಿ. ಜವಳಗೇರಾ

Updated on:Jul 23, 2024 | 4:10 PM

ಬೆಂಗಳೂರು, (ಜುಲೈ 23): ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಜೆಡಿಎಸ್​ ವಿಧಾನಪರಿಷತ್ ಸದಸ್ಯ ಸೂರಜ್​ ರೇವಣ್ಣ ಅವರಿಗೆ ಜಾಮೀನು ಸಿಕ್ಕಿದ್ದು, ಇಂದು(ಜುಲೈ 23) ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಇನ್ನು ಜೈಲಿನಿಂದ ಆಚೆಬಂದ ಬಳಿಕ ಸೂರಜ್ ಅವರು ಮೊಲದ ಬಾರಿಗೆ ನಾಧ್ಯಮಗಳ ಜೊತೆ ಮಾತನಾಡಿದ್ದು, ಕುಟುಂಬದ ವಿರುದ್ಧ ಷಡ್ಯಂತ್ರ ಮಾಡಿ ತೇಜೋವಧೆ ಮಾಡಿದ್ದಾರೆ. ತೇಜೋವಧೆ ಮಾಡುವ ದುರುದ್ದೇಶದಿಂದ ಕೇಸ್ ದಾಖಲಿಸಿದ್ದಾರೆ. ನಾವು ಯಾವುದಕ್ಕೂ ಹೆದರಿಕೊಂಡು ಎಲ್ಲಿಗೂ ಓಡಿಹೋಗಲ್ಲ 2-3 ದಿನದಲ್ಲಿ ಎಲ್ಲದಕ್ಕೂ ಸ್ಪಷ್ಟನೆ ಕೊಡ್ತೇನೆ ಎಂದು ಸ್ಪಷ್ಟಪಡಿಸಿದರು.

ಪರಪ್ಪನ ಅಗ್ರಹಾರ ಜೈಲಿನಿಂದ ಆಚೆಬಂದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸೂರಜ್​, ತನಿಖಾಧಿಕಾರಿಗಳಿಗೆ ಸಹಕಾರ ನೀಡಿದ್ದೇನೆ. ಕಾನೂನು ನ್ಯಾಯಾಂಗದ ಮೇಲೆ ಸಂಪೂರ್ಣ ವಿಶ್ವಾಸವಿದೆ. ಇದು ಕೇಸ್ ಅಲ್ಲ, ಷಡ್ಯಂತ್ರ ಕುತಂತ್ರ. ಶಿವಕುಮಾರ್ ಆಪ್ತ ಸಹಾಯಕನಲ್ಲ, ಕಾರು ಚಾಲಕನೂ ಅಲ್ಲ. ನಮಗೆ ಲೋಕೇಶ್ ಅಂತಾ ಒಬ್ಬನೇ ಕಾರು ಚಾಲಕ. ಹಾಸನದಲ್ಲಿ ರೇವಣ್ಣರಿಗಾಗಲಿ ನಮಗಾಗಲಿ ಕಪ್ಪುಚುಕ್ಕೆ ಇಲ್ಲ. ರಾಜಕೀಯವಾಗಿ ನಮ್ಮನ್ನು ಕುಗ್ಗಿಸುವ ಷಡ್ಯಂತ್ರ ನಡೆಯುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಅಸಹಜ ಲೈಂಗಿಕ ದೌರ್ಜನ್ಯ ಕೇಸ್: ಸೂರಜ್ ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು

ಇದು ಕೇಸ್ ಅಲ್ಲ ಇದು ಷಡ್ಯಂತ್ರ ಕುತಂತ್ರ. ಕಾನೂನು ನ್ಯಾಯಾಂಗದ ಮೇಲೆ ಸಂಪೂರ್ಣ ವಿಶ್ವಾಸವಿದೆ. ಇದರಿಂದ ಪರಿಪೂರ್ಣವಾಗಿ ಹೊರಬರುತ್ತೇನೆ. ರಾಜಕೀಯವಾಗಿ ಹಾಸನ ಜಿಲ್ಲೆಯಲ್ಲಿ ನಮ್ಮನ್ನು ಕುಗ್ಗಿಸುವ ಷಡ್ಯಂತ್ರ ಅಷ್ಟೇ. ಮೊದಲ ದಿನದಿಂದಲೂ ತನಿಖೆಗೆ ಸಹಕರಿಸಿದ್ದೇನೆ. ನಾನೇನು ಹೆದರಿಕೊಂಡು ಎಲ್ಲಿಯೋ ಓಡಿಹೋಗಲ್ಲ ಎಂದು ಖಡಕ್ ಆಗಿ ಹೇಳಿದರು.

ನಮ್ಮ ಕುಟುಂಬ ಮತ್ತು ಹಾಸನ ಜಿಲ್ಲೆಯ ರಾಜಕಾರಣವನ್ನ ಕುಸಿತಗೊಳಿಸಬೇಕು ಅಂದುಕೊಂಡಿದ್ದಾರೆ. ಯಾರು ಎಂಬುವ ಬಗ್ಗೆ ಎಲ್ಲದಕ್ಕೂ ಸದ್ಯದಲ್ಲೇ ಉತ್ತರವನ್ನ ಕೊಡ್ತೀನಿ. ಮೊದಲನೇ ದಿನದಿಂದಲೂ ತನಿಖೆಗೆ ಸಹಕರಿಸುತ್ತೇದ್ದೇನೆ. ನಾನು ಯಾವುದೇ ತಪ್ಪು ಮಾಡಿಲ್ಲ, ನಾನು ಓಡೋಗೋದಿಲ್ಲ. ನನಗೆ ನ್ಯಾಯಾಂಗ ಮತ್ತು ಕಾನೂನಿನ ಮೇಲೆ ಸಂಪೂರ್ಣ ನಂಬಿಕೆ ಇದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:45 pm, Tue, 23 July 24

ಸತ್ತವರ ಹೆಸರಲ್ಲಿ ಅರ್ಚನೆ! ಸಂಕಲ್ಪ ಮಾಡಿಸಬಹುದಾ? ವಿಡಿಯೋ ನೋಡಿ
ಸತ್ತವರ ಹೆಸರಲ್ಲಿ ಅರ್ಚನೆ! ಸಂಕಲ್ಪ ಮಾಡಿಸಬಹುದಾ? ವಿಡಿಯೋ ನೋಡಿ
ಈ ರಾಶಿಯವರು ಮದುವೆ ಮತ್ತು ಮನೆ ವಿಷಯಗಳಲ್ಲಿ ಇಂದು ಶುಭ ಸುದ್ದಿ ಕೇಳುವರು
ಈ ರಾಶಿಯವರು ಮದುವೆ ಮತ್ತು ಮನೆ ವಿಷಯಗಳಲ್ಲಿ ಇಂದು ಶುಭ ಸುದ್ದಿ ಕೇಳುವರು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?