AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಜೆಡಿಎಸ್ ಪಕ್ಷ ತನ್ನ ನೆಲೆಯನ್ನು ಕಳೆದುಕೊಳ್ಳುತ್ತದೆ: ಶಾಸಕ ಯತೀಂದ್ರ ಸಿದ್ದರಾಮಯ್ಯ

ಪಾಪದ ಕೊಡ ತುಂಬುತ್ತದೆ ಎನ್ನುವ ಹೇಳಿಕೆಗೆ ತಿರುಗೇಟು ನೀಡಿದ ಶಾಸಕ ಯತೀಂದ್ರ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷ ಮತ್ತೆ ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಅಧಿಕಾರಕ್ಕೆ ಬರುತ್ತದೆ. ಸಿದ್ದರಾಮಯ್ಯ ಅವರು ಯಾವುದೇ ಪಾಪ ಮಾಡಿಲ್ಲ ಎಂದು ತಂದೆ ಪರ ಮಾತನಾಡಿದ್ದಾರೆ.

ರಾಜ್ಯದಲ್ಲಿ ಜೆಡಿಎಸ್ ಪಕ್ಷ ತನ್ನ ನೆಲೆಯನ್ನು ಕಳೆದುಕೊಳ್ಳುತ್ತದೆ: ಶಾಸಕ ಯತೀಂದ್ರ ಸಿದ್ದರಾಮಯ್ಯ
ಯತೀಂದ್ರ ಸಿದ್ದರಾಮಯ್ಯ
TV9 Web
| Edited By: |

Updated on: Jul 02, 2021 | 10:55 AM

Share

ಮೈಸೂರು: ಸಿದ್ದರಾಮಯ್ಯ ತಾವಾಗಿಯೇ ಜೆಡಿಎಸ್ ಪಕ್ಷವನ್ನು ಬಿಡಲಿಲ್ಲ. ಜೆಡಿಎಸ್​ನಲ್ಲಿ ಬೆಳೆಯುತ್ತಿರುವ ನಾಯಕರನ್ನು ಮೊಟಕುಗೊಳಿಸಲು ಉಚ್ಚಾಟನೆ ಮಾಡಲಾಗಿತ್ತು. ಹೀಗಾಗಿ ಜೆಡಿಎಸ್​ನಿಂದ ಹೊರಬಂದ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಒಳ್ಳೆಯದಾಯಿತು. ರಾಜ್ಯದಲ್ಲಿ ಜೆಡಿಎಸ್ ಪಕ್ಷ ತನ್ನ ನೆಲೆಯನ್ನು ಕಳೆದುಕೊಳ್ಳುತ್ತದೆ ಎಂದು ಕಾಂಗ್ರೆಸ್ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು ಜಿಲ್ಲೆಯ ವರುಣ ಕ್ಷೇತ್ರದ ಸೋಮೇಶ್ವರ ಗ್ರಾಮದಲ್ಲಿ ಹೇಳಿಕೆ ನೀಡಿದ್ದಾರೆ.

ಪಾಪದ ಕೊಡ ತುಂಬುತ್ತದೆ ಎನ್ನುವ ಹೇಳಿಕೆಗೆ ತಿರುಗೇಟು ನೀಡಿದ ಶಾಸಕ ಯತೀಂದ್ರ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷ ಮತ್ತೆ ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಅಧಿಕಾರಕ್ಕೆ ಬರುತ್ತದೆ. ಸಿದ್ದರಾಮಯ್ಯ ಅವರು ಯಾವುದೇ ಪಾಪ ಮಾಡಿಲ್ಲ ಎಂದು ತಂದೆ ಪರ ಮಾತನಾಡಿದ್ದಾರೆ.

ಈ ಹಿಂದೆ ಕೂಡ ಪರೋಕ್ಷವಾಗಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು ಜೆಡಿಎಸ್​ ವಿರುದ್ಧ ಅಸಮಧಾನ ಹೊರಹಾಕಿದ್ದರು ಬಸವಕಲ್ಯಾಣ ಕ್ಷೇತ್ರದ ಬೈ ಎಲೆಕ್ಷನ್ ಫಲಿತಾಂಶ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್ ಶಾಸಕ ಯತೀಂದ್ರ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಬಸವಕಲ್ಯಾಣದಲ್ಲಿ ಕಾಂಗ್ರೆಸ್ ಗೆಲ್ಲುವ ಎಲ್ಲ ಅವಕಾಶವಿತ್ತು. ಆದರೆ ಜಾತ್ಯತೀತ ಮುಖವಾಡ ಧರಿಸಿರುವ ಕೋಮುವಾದಿಗಳ ರಾಜಕೀಯ ಕುತಂತ್ರದಿಂದ ಕಾಂಗ್ರೆಸ್ ಹಿನ್ನಡೆಯಾಗಿದೆ. ನಕಲಿ ಜಾತ್ಯತೀತರ ಬಗ್ಗೆ ಮುಂದೆ ಜಾಗೃತರಾಗಿರಬೇಕೆಂದು ಜೆಡಿಎಸ್ ಬಗ್ಗೆ ಪರೋಕ್ಷವಾಗಿ ಶಾಸಕ ಯತೀಂದ್ರ ಆಕ್ರೋಶ ಹೊರಹಾಕಿದ್ದರು.

ಮಸ್ಕಿ ವಿಧಾನಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಹೆಚ್ಚಿನ ಮತ ನೀಡಿ ಗೆಲುವಿಗೆ ಕಾರಣರಾದ ಮತದಾರರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಹಾಗೂ ನಮ್ಮ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಿದ ಕಾರ್ಯಕರ್ತರಿಗೆ ಧನ್ಯವಾದಗಳು ಮತ್ತು ಜಯ ಗಳಿಸಿದ ಬಸನಗೌಡ ತುರವಿಹಾಳ ಅವರಿಗೆ ಅಭಿನಂದನೆಗಳು ಎಂದು ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ಸಿದ್ದರಾಮಯ್ಯ ರಾಜಕೀಯ ಹುಲಿ, ರಾಜ್ಯದ ಹುಲಿ, ಮೈಸೂರು ಹುಲಿ ಘೋಷಣೆ | Siddaramaiah

ಜೆಡಿಎಸ್​ ಕುಟುಂಬ ರಾಕ್ಷಸ ರಾಜಕಾರಣ ಬಿಜೆಪಿಯಲ್ಲೂ ಇದೆ: ಅರುಣ್ ಸಿಂಗ್ ಎದುರು ಗುಡುಗಿದ ಹೆಚ್​ ವಿಶ್ವನಾಥ್​ ಏನೆಲ್ಲ ಹೇಳಿದ್ರು?

ಬಸವಕಲ್ಯಾಣದಲ್ಲಿ ಕಾಂಗ್ರೆಸ್ ಗೆಲ್ಲುವ ಎಲ್ಲ ಅವಕಾಶವಿತ್ತು, ರಾಜಕೀಯ ಕುತಂತ್ರದಿಂದ ಹಿನ್ನಡೆಯಾಗಿದೆ; ಯತೀಂದ್ರ ಸಿದ್ದರಾಮಯ್ಯ ಟ್ವೀಟ್

‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
೨೫ ಪಂದ್ಯಗಳ ಬಳಿಕ ಸೋತ ಅಫ್ಘಾನಿಸ್ತಾನ್!
೨೫ ಪಂದ್ಯಗಳ ಬಳಿಕ ಸೋತ ಅಫ್ಘಾನಿಸ್ತಾನ್!
ಟಿಎಂಸಿ ಗೂಂಡಾಗಳಿಗೇ ಹೆದರಿಲ್ಲ ಇಲ್ಯಾವ ಲೆಕ್ಕ: ತೇಜಸ್ವಿ ಸೂರ್ಯ ಆಕ್ರೋಶ
ಟಿಎಂಸಿ ಗೂಂಡಾಗಳಿಗೇ ಹೆದರಿಲ್ಲ ಇಲ್ಯಾವ ಲೆಕ್ಕ: ತೇಜಸ್ವಿ ಸೂರ್ಯ ಆಕ್ರೋಶ