AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯದಿಂದ ಕುಮಾರಸ್ವಾಮಿ ಸ್ಪರ್ಧೆ ಖಚಿತ, ನಾಮಪತ್ರ ಸಲ್ಲಿಕೆಗೆ ಮುಹೂರ್ತ ಫಿಕ್ಸ್

ಅವರನ್ನ ಬಿಟ್ಟು ಇವರನ್ನ ಬಿಟ್ಟು ಮತ್ಯಾರು ಎನ್ನುವ ಗೊಂದಲಗಳ ಮಧ್ಯೆ ಈ ಬಾರಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಎಚ್​ಡಿ ಕುಮಾರಸ್ವಾಮಿ ಸ್ಪರ್ಧೆ ಮಾಡುವುದು ಖಚಿತವಾಗಿದೆ. ಪುಟ್ಟರಾಜು, ನಿಖಿಲ್ ಕುಮಾರಸ್ವಾಮಿ ಹೆಸರುಗಳು ಹೇಳಿಬಂದಿದ್ದವು. ಅಂತಿಮವಾಗಿ ಎಚ್​ಡಿಕೆ ಸ್ಪರ್ಧೆ ನಿಶ್ಚಿತವಾಗಿದ್ದು, ನಾಮಪತ್ರ ಸಲ್ಲಿಕೆಗೂ ಸಹ ಮುಹೂರ್ತ ಫಿಕ್ಸ್ ಆಗಿದೆ.

ಮಂಡ್ಯದಿಂದ ಕುಮಾರಸ್ವಾಮಿ ಸ್ಪರ್ಧೆ ಖಚಿತ, ನಾಮಪತ್ರ ಸಲ್ಲಿಕೆಗೆ ಮುಹೂರ್ತ ಫಿಕ್ಸ್
TV9 Web
| Edited By: |

Updated on: Mar 28, 2024 | 10:10 PM

Share

ಬೆಂಗಳೂರು.ಮಂಡ್ಯ, (ಮಾರ್ಚ್ 28): ಈ ಬಾರಿ ಮಂಡ್ಯ ಲೋಕಸಭಾ (Mandya Loksabha) ಕ್ಷೇತ್ರದಿಂದ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಎಚ್​ಡಿ ಕುಮಾರಸ್ವಾಮಿ(HD Kumaraswamy ) ಸ್ಪರ್ಧೆ ಮಾಡುವುದು ಖಚಿತವಾಗಿದೆ. ಇನ್ನೂ ಅಧಿಕೃತವಾಗಿ ಮಂಡ್ಯ ಸೇರಿದಂತೆ ಕೋಲಾರ, ಹಾಸನ ಲೋಕಸಭಾ ಕ್ಷೇತ್ರಗಳಿಗೆ ಜೆಡಿಎಸ್​ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ. ಆದರೂ ಯಾರ್ಯಾರು ಸ್ಪರ್ಧಿಸುತ್ತಾರೆ ಎನ್ನುವುದು ಅಂತಿಮವಾಗಿದೆ. ಅದರಂತೆ ಮಂಡ್ಯದಿಂದ ಕುಮಾರಸ್ವಾಮಿ ಕಣಕ್ಕಿಳಿಯಲಿದ್ದು, ಏಪ್ರಿಲ್.4ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಬಾರಿಯೂ ಸಹ ಮಂಡ್ಯ ಲೋಕಸಭಾ ಚುನಾವಣೆ ರಂಗೇರಲಿದೆ.

ಕರ್ನಾಟಕದಲ್ಲಿ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧಿಸಲಿದೆ. ಹಾಸನ, ಕೋಲಾರ ಮತ್ತು ಮಂಡ್ಯ ಕ್ಷೇತ್ರಗಳಲ್ಲಿ ಜೆಡಿಎಸ್​ ಸ್ಪರ್ಧಿಸಲಿದೆ. ಇದೀಗ ಮಂಡ್ಯ ಜೆಡಿಎಸ್ ಅಭ್ಯರ್ಥಿಯಾಗಿ ಎಚ್​ಡಿ ಕುಮಾರಸ್ವಾಮಿ ಅವರು ಏಪ್ರಿಲ್ 4ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಅದೇ ರೀತಿಯಾಗಿ ಉಳಿದ ಎರಡು ಕ್ಷೇತ್ರಗಳಾದ ಹಾಸನದಲ್ಲಿ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಕೋಲಾರ ಕ್ಷೇತ್ರದಿಂದ ಮಲ್ಲೇಶ್ ಬಾಬು ಸ್ಪರ್ಧಿಸಲಿದ್ದಾರೆ. ಕಳೆದ ಚುನಾವಣೆಯಲ್ಲಿ ಪುತ್ರ ನಿಖಿಲ್ ಕುಮಾರಸ್ವಾಮಿ ಸೋಲುಕಂಡಿದ್ದರು. ಆದ್ರೆ, ಈ ಬಾರಿ ಸ್ವತಃ ಕುಮಾರಸ್ವಾಮಿ ಕಣಕ್ಕಿಳಿಯುತ್ತಿರುವುದು ಈ ಬಾರಿ ಮತ್ತೆ ಮಂಡ್ಯ ಲೋಕಸಭಾ ಕ್ಷೇತ್ರ ಭಾರೀ ಸದ್ದು ಮಾಡುವುದಂತೂ ಸತ್ಯ. ಆದ್ರೆ, ಹಾಲಿ ಸಂಸದೆ ಸುಮಲತಾ ಅಂಬರೀಶ್ ನಡೆ ಏನು ಎನ್ನುವುದು ಕುತೂಹಲಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಕೋಲಾರ ಕಾಂಗ್ರೆಸ್​ ಶಾಸಕರ ಸಂಧಾನ ಸಭೆ ಯಶಸ್ವಿ: ಹಾಗಾದ್ರೆ ಲೋಕಸಭೆ ಟಿಕೆಟ್ ಯಾರಿಗೆ..?

ಯಾಕಂದ್ರೆ, ಕಳೆದ ಬಾರಿ ನಿಖಿಲ್ ವಿರುದ್ಧ ಗೆಲುವು ಸಾಧಿಸಿರುವ ಸುಮಲತಾ ಅಂಬರೀಶ್ ಬಳಿಕ ಬಿಜೆಪಿಗೆ ಬೆಂಬಲ ಘೋಷಿಸಿದ್ದರು. ಇದೀಗ ರಾಜಕೀಯ ಎದುರಾಳಿಯಾದ ಜೆಡಿಎಸ್​ ಸಹ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದೆ. ಹೀಗಾಗಿ ಈ ಬಾರಿ ಸುಮಲತಾ ಅಂಬರೀಶ್​ಗೆ ಟಿಕೆಟ್ ಕೈತಪ್ಪಿದ್ದು, ರಾಜಕೀಯ ಬದ್ಧ ವೈರಿಗೆ ಟಿಕೆಟ್​ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಸುಮಲತಾ ಅಂಬರೀಶ್ ಅವರು ಜೆಡಿಎಸ್​ಗೆ ಬೆಂಬಲಿಸುವುದರೊಂದಿಗೆ ಮೈತ್ರಿ ಪಾಲನೆ ಮಾಡುತ್ತಾರಾ? ಅಥವಾ ಮತ್ತೆ ಪಕ್ಷೇತರವಾಗಿ ಕಣಕ್ಕಿಳಿಯುತ್ತಾರಾ? ಎನ್ನುವುದು ಮಿಲಿಯನ್ ಡಾಲರ್ ಪ್ರಶ್ನೆಯಾಗಿದೆ.

ಇನ್ನು ಕಾಂಗ್ರೆಸ್​​ನಿಂದ ಸ್ಟಾರ್ ಚಂದ್ರ ಅವರು ಕಣದಲ್ಲಿದ್ದು, ಈಗಾಗಲೇ ಮಂಡ್ಯದಲ್ಲಿ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ಇನ್ನು ಸಚಿವ ಚಲುವರಾಯಸ್ವಾಮಿ ಸೇರಿದಂತೆ ಜಿಲ್ಲೆಯ ಕಾಂಗ್ರೆಸ್ ಶಾಸಕರು ಸೇರಿಕೊಂಡು ಈ ಬಾರಿ ಕುಮಾರಸ್ವಾಮಿಯನ್ನು ಸೋಲಿಸಲು ಇನ್ನಿಲ್ಲದ ರಣತಂತ್ರ ಹೆಣೆಯುತ್ತಿದ್ದಾರೆ.

ಇತ್ತ ಜಿಲ್ಲೆಯ ಜೆಡಿಎಸ್​ ನಾಯಕರು ಸಹ ಕಳೆದ ಬಾರಿ ಚುನಾವಣೆಯಲ್ಲಾದ ಯಡವಟ್ಟು ಮತ್ತೆ ಮಾಡದಂತೆ ಬಹಳ ಎಚ್ಚರಿಕೆ ಚುನಾವಣೆ ಹೋರಾಡಲು ತೀರ್ಮಾನಿಸಿದ್ದು, ಕುಮಾರಸ್ವಾಮಿಯನ್ನು ಗೆಲ್ಲಿಸಲೇಬೇಕೆಂದು ಪಣತೊಟ್ಟಿದ್ದಾರೆ. ಆದ್ರೆ, ಕೆಲ ಬಿಜೆಪಿ ನಾಯಕರು ಕುಮಾರಸ್ವಾಮಿಗೆ ಬೆಂಬಲಿಸುತ್ತಾರಾ ಎನ್ನುವುದೇ ದೊಡ್ಡ ಪ್ರಶ್ನೆಯಾಗಿದೆ. ಎಲ್​ಆರ್ ಶಿವರಾಮೇಗೌಡ, ನಾರಾಯಣಗೌಡ, ಸುಮಲತಾ ಸೇರಿದಂತೆ ಇನ್ನೂ ಕೆಲ ಬಿಜೆಪಿ ನಾಯಕರು ಕುಮಾರಸ್ವಾಮಿ ಅಂದ್ರೆ ಸಾಕು ಉರಿದು ಬೀಳುತ್ತಾರೆ. ಹೀಗಾಗಿ ಅವರ ನಡೆ ಎನ್ನುವುದು ಕಾದುನೋಡಬೇಕಿದೆ.   ​

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ