AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀರಾಮಚಂದ್ರರನ್ನು ರಾಜಕೀಯಕ್ಕೆ ಎಳೆದು ತರುವ ನಿಮ್ಮ ಮನಃಸ್ಥಿತಿಯನ್ನು ಏನೆಂದು ಕರೆಯಬೇಕು? ರಾಜಣ್ಣಗೆ ಜೆಡಿಎಸ್​ ಪ್ರಶ್ನೆ

ಪಾಕಿಸ್ತಾನದ ಗಾಳಿ ಬೀಸಿದರೆ ತಪ್ಪಲ್ಲ. ಆದರೆ, ಶ್ರೀರಾಮಚಂದ್ರರ ಗಾಳಿ ಬೀಸಿದರೆ ತಪ್ಪಾ? ನಿಮ್ಮ ಅಭಿಪ್ರಾಯದ ಪ್ರಕಾರ ಶ್ರೀರಾಮಚಂದ್ರ ದೇವರ ಗಾಳಿ ಬೀಸುವುದು ಅಪರಾಧವೇ? ಇನ್ನಾವ ಗಾಳಿ ಬೀಸಬೇಕು? ದಯಮಾಡಿ ಸ್ಪಷ್ಟಪಡಿಸಿಬಿಡಿ ಎಂದು ಟ್ವೀಟ್ ಮೂಲಕ ಸಚಿವ ಕೆ.ಎನ್​.ರಾಜಣ್ಣ ವಿರುದ್ಧ ಜೆಡಿಎಸ್​ ವಾಗ್ದಾಳಿ ಮಾಡಿದೆ.

ಶ್ರೀರಾಮಚಂದ್ರರನ್ನು ರಾಜಕೀಯಕ್ಕೆ ಎಳೆದು ತರುವ ನಿಮ್ಮ ಮನಃಸ್ಥಿತಿಯನ್ನು ಏನೆಂದು ಕರೆಯಬೇಕು? ರಾಜಣ್ಣಗೆ ಜೆಡಿಎಸ್​ ಪ್ರಶ್ನೆ
ಸಚಿವ ಕೆ.ಎನ್​.ರಾಜಣ್ಣ
Sunil MH
| Updated By: ಗಂಗಾಧರ​ ಬ. ಸಾಬೋಜಿ|

Updated on: May 01, 2024 | 6:49 PM

Share

ಬೆಂಗಳೂರು, ಮೇ 1: ಸಚಿವರಾದ ಕೆ.ಎನ್​.ರಾಜಣ್ಣನವರೇ, (KN Rajanna) ಪಾಕಿಸ್ತಾನದ ಗಾಳಿ ಬೀಸಿದರೆ ತಪ್ಪಲ್ಲ ಆದರೆ ಶ್ರೀರಾಮಚಂದ್ರರ ಗಾಳಿ ಬೀಸಿದರೆ ತಪ್ಪಾ ಎಂದು ಪ್ರಶ್ನಿಸುವ ಮೂಲಕ ಸಚಿವ ಕೆ.ಎನ್.ರಾಜಣ್ಣ ವಿರುದ್ಧ ಟ್ವೀಟ್ ಮೂಲಕ ಜೆಡಿಎಸ್ (JDS)​ ವಾಗ್ದಾಳಿ ಮಾಡಿದೆ. ಕುಮಾರಸ್ವಾಮಿ ಸತ್ಯ ಹರಿಶ್ಚಂದ್ರನ ‌ಮನೆಯಲ್ಲಿ ಬಾಡಿಗೆ ಇದ್ದವರು. ಅವರಿಗೆ ಶ್ರೀರಾಮಚಂದ್ರನ ಗಾಳಿ ಬೀಸಿದೆ. ಹೀಗಾಗಿ ಅವರ ಬಗ್ಗೆ ನಾನು ಮಾತನಾಡುವುದಿಲ್ಲ ಎಂಬ ಕೆ.ಎನ್.ರಾಜಣ್ಣ ಹೇಳಿಕೆಗೆ ಇದೀಗ ಜೆಡಿಎಸ್ ತಿರುಗೇಟು ನೀಡಿದೆ.

ಪಾಕಿಸ್ತಾನದ ಗಾಳಿ ಬೀಸಿದರೆ ತಪ್ಪಲ್ಲ. ಆದರೆ, ಶ್ರೀರಾಮಚಂದ್ರರ ಗಾಳಿ ಬೀಸಿದರೆ ತಪ್ಪಾ? ನಿಮ್ಮ ಅಭಿಪ್ರಾಯದ ಪ್ರಕಾರ ಶ್ರೀರಾಮಚಂದ್ರ ದೇವರ ಗಾಳಿ ಬೀಸುವುದು ಅಪರಾಧವೇ? ಇನ್ನಾವ ಗಾಳಿ ಬೀಸಬೇಕು? ದಯಮಾಡಿ ಸ್ಪಷ್ಟಪಡಿಸಿಬಿಡಿ.

ಜೆಡಿಎಸ್ ಟ್ವೀಟ್​ 

ಕುಮಾರಸ್ವಾಮಿ ಸತ್ಯ ಹರಿಶ್ಚಂದ್ರ ಮನೆಯಲ್ಲಿ ಬಾಡಿಗೆಗೆ ಇದ್ದವರು. ಇವರ ಮೇಲೆ ಶ್ರೀರಾಮಚಂದ್ರರ ಗಾಳಿ ಬೀಸಿದೆ ಎಂದರೇನು ಸಚಿವರೇ? ಸತ್ಯ ಹರಿಶ್ಚಂದ್ರ ಹಾಗೂ ಶ್ರೀರಾಮ ದೇವರನ್ನು ರಾಜಕೀಯಕ್ಕೆ ಎಳೆದು ತರುವ ನಿಮ್ಮ ಮನಃಸ್ಥಿತಿಯನ್ನು ತೋರಿಸುತ್ತದೆ ಏನೆಂದು ಕರೆಯಬೇಕು? ಸತ್ಯ ದ್ರೋಹವಾ? ರಾಮ ದ್ರೋಹವಾ? #ಸತ್ಯದ್ವೇಷಿ, ರಾಮದ್ರೋಹಿ, ಕಾಂಗ್ರೆಸ್ ಎಂದು ಟ್ವೀಟ್ ಮಾಡಲಾಗಿದೆ.

ಪ್ರಜ್ವಲ್ ಸ್ಟೇ ತೆಗೆದುಕೊಂಡಾಗ ನನಗೆ ಅನುಮಾನ ಇತ್ತು: ಕೆ.ಎನ್.ರಾಜಣ್ಣ

ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ವಿಚಾರವಾಗಿ ಬಾಗಲಕೋಟೆಯಲ್ಲಿ ಸಚಿವ ಕೆ.ಎನ್.ರಾಜಣ್ಣ ಪ್ರತಿಕ್ರಿಯಿಸಿದ್ದು, ಈ ಘಟನೆ ನಿನ್ನೆ ಮೊನ್ನೆಯದ್ದಲ್ಲ. ಆರು ತಿಂಗಳ ಮುಂಚೆಯೇ ಪ್ರಜ್ವಲ್ ಸ್ಟೇ ತೆಗೆದುಕೊಂಡಿದ್ದಾರೆ. ಪ್ರಜ್ವಲ್ ಸ್ಟೇ ತೆಗೆದುಕೊಂಡಾಗ ನನಗೆ ಅನುಮಾನ ಇತ್ತು. ಸುಮ್ಮನೆ ಯಾರು ಸ್ಟೇ ತೆಗೆದುಕೊಳ್ಳಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಎಸ್‌ಐಟಿ ನೋಟಿಸ್​: ವಿಚಾರಣೆಗೆ ಹಾಜರಾಗಲು ಸಮಯ ಕೇಳಿದ ಪ್ರಜ್ವಲ್‌, ಎಷ್ಟು ದಿನ?

ಅಸಹಾಯಕ ಮಹಿಳೆಯರ ದುರ್ಬಳಕೆ ಖಂಡನೀಯ. ಮನೆ‌ಗೆಲಸದ ಮಹಿಳೆಯನ್ನೂ ಇವರು ಬಳಸಿಕೊಂಡಿದ್ದಾರೆ. ವಿಡಿಯೋ ಮಾಡಿಕೊಂಡಿದ್ದು ಒಂದು ಭಯಾನಕ ದುಷ್ಕೃತ್ಯ. ಆದರೆ, ಅದನ್ನು ಹೊರ ಹಾಕಿದ್ದು ಕೂಡ ಅಷ್ಟೇ ಭಯಾನಕ ಎಂದು ಕಿಡಿಕಾರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ