AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ನೀರು ವಿವಾದ: ಮಧ್ಯಸ್ಥಿಕೆ ವಹಿಸುವಂತೆ ನರೇಂದ್ರ ಮೋದಿಗೆ ದೇವೇಗೌಡ ಪತ್ರ

Cauvery water dispute : ಕರ್ನಾಟಕದಲ್ಲಿ ಕಾವೇರಿ ಕಿಚ್ಚು ಜೋರಾಗಿದೆ. ಕನ್ನಡ ಪರ ಸಂಘಟನೆಗಳು ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು ಬೆಂಗಳೂರು ಹಾಗೂ ಅಖಂಡ ಕರ್ನಾಟಕ ಬಂದ್​ಗೆ ಕರೆ ಕೊಟ್ಟಿವೆ. ಇದರ ಮಧ್ಯೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದು, ಕಾವೇರಿ ನೀರಿನ ವಿವಾದದ ಮಧ್ಯೆಸ್ಥಿಕೆ ವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ.

ಕಾವೇರಿ ನೀರು ವಿವಾದ: ಮಧ್ಯಸ್ಥಿಕೆ ವಹಿಸುವಂತೆ ನರೇಂದ್ರ ಮೋದಿಗೆ ದೇವೇಗೌಡ ಪತ್ರ
ಮೋದಿ-ದೇವೇಗೌಡ (ಸಂಗ್ರಹ ಚಿತ್ರ)
ಕಿರಣ್​ ಹನಿಯಡ್ಕ
| Edited By: |

Updated on:Sep 25, 2023 | 12:29 PM

Share

ಬೆಂಗಳೂರು, (ಸೆಪ್ಟೆಂಬರ್ 26): ಮಳೆ ಇಲ್ಲದೇ ರೈತರು ಪರದಾಡುತ್ತಿದ್ದಾರೆ. ಇದರ ಮಧ್ಯೆ ಕಾವೇರಿ ನದಿ ನೀರು ಪ್ರಾಧಿಕಾರ ಹಾಗೂ ಸುಪ್ರೀಂಕೋರ್ಟ್​ ತಮಿಳುನಾಡಿಗೆ ನೀರು ಹರಿಸುವಂತೆ ಆದೇಶಿಸಿದೆ. ಇದರಿಂದ ಕಾವೇರಿ ಭಾಗದ ಜನ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದೆಲ್ಲೆಡೆ ಕಾವೇರಿ ಕಿಚ್ಚು ಜೋರಾಗಿದೆ. ಇನ್ನು ಈ ಬಗ್ಗೆ ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ(HD Devegowda) ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದು, ಕಾವೇರಿ ನದಿ ನೀರು ವಿವಾದದ(Cauvery water dispute )ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿ ನರೇಂದ್ರ ಮೋದಿಗೆ ಅವರಿಗೆ ಮನವಿ ಮಾಡಿದ್ದಾರೆ.

ಕರ್ನಾಟಕದ ರೈತರಿಗೆ ನೀರಿನ ಕೊರತೆ ಇದೆ. ಹೀಗಾಗಿ ಶೀಘ್ರವಾಗಿ ಈ ವಿವಾದ ಬಗೆಹರಿಸಬೇಕು ಎಂದು ಹೆಚ್​ಡಿ ದೇವೇಗೌಡ ಅವರು, ನರೇಂದ್ರ ಮೋದಿಗೆ ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈಗಾಗಲೇ ಜೆಡಿಎಸ್​, ಎನ್​ಡಿಎ ಮೈತ್ರಿಕೂಟಕ್ಕೆ ಸೇರಿದ್ದು, ಇದರ ಬೆನ್ನಲ್ಲೇ ಇದೀಗ ದೇವೇಗೌಡ್ರು ಮೋದಿಗೆ ವಿಶೇಷ ಮನವಿಯೊಂದನ್ನು ಮಾಡಿದ್ದಾರೆ. ಆದ್ರೆ, ದೇವೇಗೌಡ್ರ ಪತ್ರಕ್ಕೆ ನರೇಂದ್ರ ಮೋದಿ ಸ್ಪಂದಿಸುತ್ತಾರಾ? ಮಧ್ಯೆ ಪ್ರವೇಶಿಸಿ ವಿವಾದ ಬಗೆಹರಿಸುತ್ತಾರಾ? ಎನ್ನುವುದನ್ನು ಕಾದುನೋಡಬೇಕಿದೆ.

ಇದನ್ನೂ ಓದಿ: ಸೆ.26ಕ್ಕೆ ಬೆಂಗಳೂರು ಬಂದ್, ಹೋರಾಟಗಾರರಿಗೆ ಡಿಕೆ ಶಿವಕುಮಾರ್ ವಿಶೇಷ ಮನವಿ..ಏನದು?

ಮತ್ತೊಂದೆಡೆ ಣ್ಣ ನೀರಾವರಿ ಸಚಿವ ಬೋಸರಾಜು ಅವರು ಮಡಿಕೇರಿಯಲ್ಲಿ ಇಂದು ಮಾತನಾಡಿ, ಕಾವೇರಿ ನದಿ ವಿಚಾರದಲ್ಲಿ ಪ್ರಧಾನಿ ಮೋದಿ ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿದ್ದಾರೆ. ಕಾವೇರಿ ನದಿ ನೀರು ವಿಚಾರವಾಗಿ ರಾಜ್ಯದ ಸಂಸದರು ಮಾತಾಡಲಿ. ಕಾವೇರಿ ನದಿ ಸಂಬಂಧ ಪ್ರಧಾನಿ ಮೋದಿ ಸರ್ವಪಕ್ಷ ಸಭೆ ಕರೆಯಲಿ. ಕಾವೇರಿ ನೀರು ವಿಚಾರದಲ್ಲಿ ಎಲ್ಲರೂ ಪಕ್ಷಾತೀತವಾಗಿ ಹೋರಾಡಬೇಕು ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:15 pm, Mon, 25 September 23