ಮೃತ ಸೋಂಕಿತರ ಆಭರಣ, ಬೆಲೆಬಾಳುವ ವಸ್ತು, ಮೊಬೈಲ್​ ಮಾಯ; ಆಸ್ಪತ್ರೆಯಲ್ಲಿ ಕಳ್ಳತನ ನಡೆಯುತ್ತಿದೆ ಎಂಬ ಆರೋಪ

|

Updated on: Apr 24, 2021 | 8:17 AM

ಸೋಂಕಿತರು ಆಸ್ಪತ್ರೆಗೆ ಸೇರಿದ ನಂತರ ಕುಟುಂಬಸ್ಥರ ಸಂಪರ್ಕಕ್ಕೆ ಬರುವುದಿಲ್ಲವಾದ್ದರಿಂದ ಒಳಗೆ ಏನಾಗುತ್ತಿದೆ ಎನ್ನುವುದೇ ಹೆಚ್ಚಿನವರಿಗೆ ತಿಳಿಯುತ್ತಿಲ್ಲ. ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟರೆ ಅವರ ಬಳಿ ಇರುವ ಬೆಲೆಬಾಳುವ ವಸ್ತು, ಆಭರಣ, ಮೊಬೈಲ್ ಇತ್ಯಾದಿಗಳನ್ನೆಲ್ಲಾ ಅವರೇ ಇಟ್ಟುಕೊಳ್ಳುತ್ತಾರೆ ಎಂಬ ಆರೋಪ ಕೇಳಿಬಂದಿದೆ.

ಮೃತ ಸೋಂಕಿತರ ಆಭರಣ, ಬೆಲೆಬಾಳುವ ವಸ್ತು, ಮೊಬೈಲ್​ ಮಾಯ; ಆಸ್ಪತ್ರೆಯಲ್ಲಿ ಕಳ್ಳತನ ನಡೆಯುತ್ತಿದೆ ಎಂಬ ಆರೋಪ
ಪ್ರಾತಿನಿಧಿಕ ಚಿತ್ರ
Follow us on

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಪ್ರಮಾಣ ದಿನೇ ದಿನೇ ಏರುಗತಿಯಲ್ಲಿ ಸಾಗುತ್ತಿದ್ದು, ಆರೋಗ್ಯ ವ್ಯವಸ್ಥೆಗೆ ಸೋಂಕು ನಿಯಂತ್ರಿಸುವುದೇ ಸವಾಲಾಗಿದೆ. ಎಷ್ಟೋ ಜನ ಗಂಭೀರ ಸ್ಥಿತಿಗೆ ತಲುಪಿ ವೈದ್ಯಕೀಯ ಸೌಲಭ್ಯದ ಕೊರತೆಯಿಂದಾಗಿ ಸಾವಿಗೀಡಾಗುತ್ತಿದ್ದಾರೆ. ಆದರೆ, ಇದನ್ನೇ ಬಂಡವಾಳವಾಗಿಸಿಕೊಂಡು ಹಲವೆಡೆ ಸೋಂಕಿತರ ಶವ ರವಾನಿಸಲು ದುಪ್ಪಟ್ಟು ಹಣ ವಸೂಲಿ ಮಾಡಲಾಗುತ್ತಿದೆ, ಶವ ಸಂಸ್ಕಾರಕ್ಕೆ ಹಣ ಕೀಳಲಾಗುತ್ತಿದೆ ಎಂಬ ಆರೋಪಗಳೂ ಕೇಳಿಬಂದಿವೆ. ಇದಕ್ಕೆ ಪುಷ್ಠಿ ನಿಡುವಂತೆ ಬೆಂಗಳೂರಿನ ಆಸ್ಪತ್ರೆಗಳ ಇನ್ನೊಂದು ಕರಾಳ ಮುಖದ ಬಗ್ಗೆ ಮೃತರ ಸಂಬಂಧಿಗಳು ಬಾಯಿಬಿಟ್ಟಿದ್ದು, ಮೃತರಿಗೆ ಸಂಬಂಧಿಸಿದ ಬೆಲೆಬಾಳುವ ವಸ್ತುಗಳನ್ನು ಆಸ್ಪತ್ರೆಯಲ್ಲಿ ಕದಿಯಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಸೋಂಕಿತರು ಆಸ್ಪತ್ರೆಗೆ ಸೇರಿದ ನಂತರ ಕುಟುಂಬಸ್ಥರ ಸಂಪರ್ಕಕ್ಕೆ ಬರುವುದಿಲ್ಲವಾದ್ದರಿಂದ ಒಳಗೆ ಏನಾಗುತ್ತಿದೆ ಎನ್ನುವುದೇ ಹೆಚ್ಚಿನವರಿಗೆ ತಿಳಿಯುತ್ತಿಲ್ಲ. ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟರೆ ಅವರ ಬಳಿ ಇರುವ ಬೆಲೆಬಾಳುವ ವಸ್ತು, ಆಭರಣ, ಮೊಬೈಲ್ ಇತ್ಯಾದಿಗಳನ್ನೆಲ್ಲಾ ಅವರೇ ಇಟ್ಟುಕೊಳ್ಳುತ್ತಾರೆ. ಕುಟುಂಬಸ್ಥರು ಕೇಳಿದರೆ ಆಸ್ಪತ್ರೆಗೆ ಬರುವಾಗ ಏನೂ ಇರಲಿಲ್ಲ ಎಂದು ಸಬೂಬು ನೀಡುತ್ತಾರೆ ಎಂಬ ಆರೋಪ ಕೇಳಿಬಂದಿದೆ.

ಅತ್ತಿಬೆಲೆ ಬಳಿ ಇರುವ ಆಕ್ಸ್‌ಫರ್ಡ್‌ ಆಸ್ಪತ್ರೆಯಲ್ಲಿ ಮೊನ್ನೆ ಓರ್ವ ವ್ಯಕ್ತಿ ಸೋಂಕಿಗೆ ಬಲಿಯಾಗಿದ್ದು, ಅವರ ಮಗಳು ಈ ಬಗ್ಗೆ ಆರೋಪಿಸಿದ್ದಾರೆ. ತಂದೆಯನ್ನು ಆಸ್ಪತ್ರೆಗೆ ಸೇರಿಸುವಾಗ ಬಂಗಾರದ ಆಭರಣಗಳು ಹಾಗೂ ಮೊಬೈಲ್ ಅವರ ಬಳಿ ಇತ್ತು. ಆದರೆ, ಮೃತಪಟ್ಟ ನಂತರ ಅವೆಲ್ಲವೂ ಕಣ್ಮರೆಯಾಗಿದೆ. ಕೇಳಿದರೆ ಅವರ ಮೈಮೇಲೆ ಏನೂ ಇರಲಿಲ್ಲ ಎಂದು ಸಮಜಾಯಿಷಿ ಕೊಡುತ್ತಾರೆ. ಆಸ್ಪತ್ರೆಗಳಲ್ಲಿ ಕಳ್ಳತನವಾಗುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

(Jewellery and valuable things on the dead body of covid patient stolen by hospital staff alleges Family members in Bangalore)

ಇದನ್ನೂ ಓದಿ:
Corona Positive Report : ಕಣ್ಣಲ್ಲೇ ಅಳೆದು ಕೊರೊನಾ ಪಾಸಿಟಿವ್‌ ರಿಪೋರ್ಟ್‌ ಕೊಡ್ತಾರೆ ಆನೆಕಲ್‌ನ ಆಕ್ಷಫರ್ಡ್‌ ಆಸ್ಪತ್ರೆಯಲ್ಲಿ 

ಗರ್ಭಿಣಿ ಮಹಿಳೆಯರಿಗೆ ಸಿಗ್ತಿಲ್ಲ ಕೊರೊನಾ ಚಿಕಿತ್ಸೆ.. ಇದು ಎರಡು ಜೀವಗಳ ಪ್ರಶ್ನೆ ಸಾರ್ ಎಂದು ಕುಟುಂಬಸ್ಥರ ಕಣ್ಣೀರು

Published On - 8:14 am, Sat, 24 April 21