Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ನೂತನ ಸಿಎಂ ಬಸವರಾಜ ಬೊಮ್ಮಾಯಿಗೆ ಕೇಂದ್ರ ನಾಯಕರಿಂದ ಅಭಿನಂದನೆ; ಫೋಟೋ ಶೇರ್​ ಮಾಡಿದ ಶೋಭಾ ಕರಂದ್ಲಾಜೆ

ಎರಡು ವರ್ಷ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ಬಿ.ಎಸ್​. ಯಡಿಯೂರಪ್ಪನವರು ರಾಜೀನಾಮೆ ನೀಡಿದ್ದಾಗಿದೆ. ಅವರ ಸ್ಥಾನಕ್ಕೀಗ ಹೊಸ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೂ ಬಂದಿದ್ದಾರೆ. ಈಗ ಕೇಂದ್ರದ ಹಲವು ನಾಯಕರು ಯಡಿಯೂರಪ್ಪನವರಿಗೆ ಟ್ವೀಟ್ ಮೂಲಕ ವಿದಾಯ ಹೇಳುತ್ತಿದ್ದರೆ, ಬಸವರಾಜ ಬೊಮ್ಮಾಯಿಯವರಿಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಟ್ವೀಟ್ ಮಾಡಿ, ಬಿ.ಎಸ್​.ಯಡಿಯೂರಪ್ಪನವರು ಕರ್ನಾಟಕ ಅಭಿವೃದ್ಧಿಗೆ ನೀಡಿದ ಕೊಡುಗೆ ಅಪಾರ. ಹಲವು ಸಾಧನೆಗಳನ್ನು ಮಾಡಿದ್ದಾರೆ. ಅದರಲ್ಲೂ ಬಿಜೆಪಿ ಪಕ್ಷದ ಸಂಘಟನೆಗೆ ಅಪಾರ ಶ್ರಮವಹಿಸಿದ್ದರು ಎಂದು ಹೇಳಿದ್ದಾರೆ. Shri @BSYBJP […]

ರಾಜ್ಯದ ನೂತನ ಸಿಎಂ ಬಸವರಾಜ ಬೊಮ್ಮಾಯಿಗೆ ಕೇಂದ್ರ ನಾಯಕರಿಂದ ಅಭಿನಂದನೆ; ಫೋಟೋ ಶೇರ್​ ಮಾಡಿದ ಶೋಭಾ ಕರಂದ್ಲಾಜೆ
ಶೋಭಾ ಕರಂದ್ಲಾಜೆ ಮತ್ತು ಜೆಪಿ ನಡ್ಡಾ
Follow us
TV9 Web
| Updated By: Lakshmi Hegde

Updated on: Jul 28, 2021 | 2:55 PM

ಎರಡು ವರ್ಷ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ಬಿ.ಎಸ್​. ಯಡಿಯೂರಪ್ಪನವರು ರಾಜೀನಾಮೆ ನೀಡಿದ್ದಾಗಿದೆ. ಅವರ ಸ್ಥಾನಕ್ಕೀಗ ಹೊಸ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೂ ಬಂದಿದ್ದಾರೆ. ಈಗ ಕೇಂದ್ರದ ಹಲವು ನಾಯಕರು ಯಡಿಯೂರಪ್ಪನವರಿಗೆ ಟ್ವೀಟ್ ಮೂಲಕ ವಿದಾಯ ಹೇಳುತ್ತಿದ್ದರೆ, ಬಸವರಾಜ ಬೊಮ್ಮಾಯಿಯವರಿಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಟ್ವೀಟ್ ಮಾಡಿ, ಬಿ.ಎಸ್​.ಯಡಿಯೂರಪ್ಪನವರು ಕರ್ನಾಟಕ ಅಭಿವೃದ್ಧಿಗೆ ನೀಡಿದ ಕೊಡುಗೆ ಅಪಾರ. ಹಲವು ಸಾಧನೆಗಳನ್ನು ಮಾಡಿದ್ದಾರೆ. ಅದರಲ್ಲೂ ಬಿಜೆಪಿ ಪಕ್ಷದ ಸಂಘಟನೆಗೆ ಅಪಾರ ಶ್ರಮವಹಿಸಿದ್ದರು ಎಂದು ಹೇಳಿದ್ದಾರೆ.

ಹಾಗೇ, ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆ ಸಲ್ಲಿಸಿದ ನಡ್ಡಾ, ಬಸವರಾಜ ಬೊಮ್ಮಾಯಿಯವರ ಕುಶಾಗ್ರಮತಿ ಮತ್ತು ವಿಶಾಲವಾದ ಅನುಭವದಿಂದ ರಾಜ್ಯ ಇನ್ನಷ್ಟು ವೇಗವಾಗಿ ಅಭಿವೃದ್ಧಿಹೊಂದುವುದರಲ್ಲಿ ಸಂದೇಹವಿಲ್ಲ ಎಂದಿದ್ದಾರೆ.

ರಾಜನಾಥ ಸಿಂಗ್​ ಅಭಿನಂದನೆ ರಕ್ಷಣಾ ಸಚಿವ ರಾಜನಾಥ ಸಿಂಗ್​ ಕೂಡ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಬೊಮ್ಮಾಯಿಯವರು ಖಂಡಿತ ಕರ್ನಾಟಕವನ್ನು ಅಭಿವೃದ್ಧಿಯ ಉತ್ತುಂಗಕ್ಕೆ ಕರೆದೊಯ್ಯುತ್ತಾರೆಂಬ ನಂಬಿಕೆಯಿದೆ ಎಂದಿದ್ದಾರೆ.

ಶೋಭಾ ಕರಂದ್ಲಾಜೆಯಿಂದ ಶುಭ ಹಾರೈಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರು ಟ್ವೀಟ್ ಮಾಡುವ ಮೂಲಕ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಶುಭ ಹಾರೈಸಿದ್ದಾರೆ. ನಿಮ್ಮಲ್ಲಿರುವ ಅಪಾರ ಆಡಳಿತಾತ್ಮಕ ಅನುಭವ ಮತ್ತು ಸಮರ್ಥ ನಾಯಕತ್ವದ ಗುಣದಿಂದ ಕರ್ನಾಟಕವನ್ನು ಇನ್ನಷ್ಟು ವೇಗವಾಗಿ ಅಭಿವೃದ್ಧಿಯೆಡೆಗೆ ಕೊಂಡೊಯ್ಯುತ್ತೀರಿ ಎಂಬ ಭರವಸೆ ಇದೆ ಎಂದಿದ್ದಾರೆ. ಹಾಗೇ, ಪ್ರಮಾಣವಚನದ ಫೋಟೋಗಳನ್ನೂ ಹಂಚಿಕೊಂಡಿದ್ದಾರೆ.

JP Nadda Rajnath Singh convey the Best Wishes to Basavaraj Bommai

ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ