ಪಾಕ್ ಪರ ಘೋಷಣೆ ಕೇಸ್: ಕಾಶ್ಮೀರಿ ವಿದ್ಯಾರ್ಥಿಗಳ ಬೇಲ್ ವಿಚಾರಣೆ ಏನಾಯ್ತು?

ಹುಬ್ಬಳ್ಳಿ: ಹುಬ್ಬಳ್ಳಿಯ KLE ಕಾಲೇಜಿನಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ವಿಚಾರ ಸಂಬಂಧ ಮಾರ್ಚ್ 7ರವರೆಗೆ ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಲಾಗಿದೆ. ಪ್ರಕರಣ 2ನೇ ಜೆಎಂಎಫ್‌ಸಿ ಕೋರ್ಟ್‌ಗೆ ವರ್ಗಾವಣೆಯಾಗಿರುವ ಹಿನ್ನೆಲೆ ನ್ಯಾಯಾಧೀಶರು ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿದ್ದಾರೆ. ಸದ್ಯ ಆರೋಪಿಗಳು ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಾರೆ. ಆರೋಪಿಗಳಿಂದ ಮಾರ್ಚ್ 5ರಂದು ಜಾಮೀನಿಗೆ ತಕರಾರು ಅರ್ಜಿ ಸಲ್ಲಿಕೆ ಮಾಡುವ ಸಾಧ್ಯತೆ ಇದೆ. ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಇಂದು ಮುಕ್ತಾಯಗೊಂಡಿತ್ತು. ಈ ಹಿನ್ನೆಲೆ ಹುಬ್ಬಳ್ಳಿಯ 3ನೇ JMFC ನ್ಯಾಯಾಲಯ […]

ಪಾಕ್ ಪರ ಘೋಷಣೆ ಕೇಸ್:  ಕಾಶ್ಮೀರಿ ವಿದ್ಯಾರ್ಥಿಗಳ ಬೇಲ್ ವಿಚಾರಣೆ ಏನಾಯ್ತು?
ಸಾಧು ಶ್ರೀನಾಥ್​

Updated on: Mar 02, 2020 | 12:19 PM

ಹುಬ್ಬಳ್ಳಿ: ಹುಬ್ಬಳ್ಳಿಯ KLE ಕಾಲೇಜಿನಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ವಿಚಾರ ಸಂಬಂಧ ಮಾರ್ಚ್ 7ರವರೆಗೆ ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಲಾಗಿದೆ. ಪ್ರಕರಣ 2ನೇ ಜೆಎಂಎಫ್‌ಸಿ ಕೋರ್ಟ್‌ಗೆ ವರ್ಗಾವಣೆಯಾಗಿರುವ ಹಿನ್ನೆಲೆ ನ್ಯಾಯಾಧೀಶರು ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿದ್ದಾರೆ. ಸದ್ಯ ಆರೋಪಿಗಳು ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಾರೆ. ಆರೋಪಿಗಳಿಂದ ಮಾರ್ಚ್ 5ರಂದು ಜಾಮೀನಿಗೆ ತಕರಾರು ಅರ್ಜಿ ಸಲ್ಲಿಕೆ ಮಾಡುವ ಸಾಧ್ಯತೆ ಇದೆ.

ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಇಂದು ಮುಕ್ತಾಯಗೊಂಡಿತ್ತು. ಈ ಹಿನ್ನೆಲೆ ಹುಬ್ಬಳ್ಳಿಯ 3ನೇ JMFC ನ್ಯಾಯಾಲಯ ಮೂವರು ಆರೋಪಿಗಳನ್ನ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿತ್ತು. ಕಾಶ್ಮೀರ ಮೂಲದ ಬಾಸಿತ್ ಸೋಫಿ, ತಾಲಿಬ್ ಮಜೀದ್ ಹಾಗೂ ಅಮೀರ ಮೋಯಿನುದ್ದೀನ ಪಾಕ್ ಪರ ಘೋಷಣೆ ಕೂಗಿದ್ದ ದೇಶದ್ರೋಹಿಗಳು.

ಇವರನ್ನು ನ್ಯಾಯಾಂಗ ಬಂಧನದ ಅವಧಿ ಮುಗಿದರೂ ಆರೋಪಿಗಳನ್ನ ಕೋರ್ಟ್ ಗೆ ಕರೆತರೋದು ಡೌಟ್ ಆಗಿತ್ತು. ಈ ಹಿಂದೆ ಆರೋಪಿಗಳನ್ನ ಕೋರ್ಟ್ ಗೆ ಕರೆತಂದಾಗ ಹಿಂದೂಪರ ಸಂಘಟನೆಗಳಿಂದ ಹಲ್ಲೆ ನಡೆದಿತ್ತು. ಹೀಗಾಗಿ ವಿಡಿಯೋ ಕಾಲ್ ಮೂಲಕ ವಿಚಾರಣೆ ನಡೆಸಿ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಲಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us