AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂನ್ ತಿಂಗಳ ವಿದ್ಯುತ್ ಬಿಲ್​ನಲ್ಲಿ ಗೊಂದಲ: ಕ್ಯಾಶ್​ಬ್ಯಾಕ್ ಮಾಡಲಾಗುವುದು ಎಂದ ಕೆ.ಜೆ.ಜಾರ್ಜ್

Gruha Jyothi Scheme: ಜೂನ್ ತಿಂಗಳ ವಿದ್ಯುತ್ ಬಿಲ್​ನಲ್ಲಿ ಕೆಲವು ಗ್ರಾಹಕರನ್ನು ಗೊಂದಲಕ್ಕೀಡು ಮಾಡಿದೆ. ಇದಕ್ಕೆ ಕಾರಣ, ಜುಲೈ ತಿಂಗಳ ಕೆಲವು ದಿನಗಳ ಶುಲ್ಕ ಕೂಡ ಸೇರ್ಪಡೆಯಾಗಿರುವುದು. ಈ ಬಗ್ಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸ್ಪಷ್ಟನೆ ನಿಡಿದ್ದಾರೆ.

ಜೂನ್ ತಿಂಗಳ ವಿದ್ಯುತ್ ಬಿಲ್​ನಲ್ಲಿ ಗೊಂದಲ: ಕ್ಯಾಶ್​ಬ್ಯಾಕ್ ಮಾಡಲಾಗುವುದು ಎಂದ ಕೆ.ಜೆ.ಜಾರ್ಜ್
ಇಂಧನ ಸಚಿವ ಕೆ.ಜೆ.ಜಾರ್ಜ್
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: Rakesh Nayak Manchi|

Updated on: Jul 30, 2023 | 9:35 PM

Share

ಚಿಕ್ಕಮಗಳೂರು, ಜುಲೈ 30: ಜೂನ್ ತಿಂಗಳಿನ ವಿದ್ಯುತ್ ಬಿಲ್​ನಲ್ಲಿ ಜುಲೈ ತಿಂಗಳ ಕೆಲವು ದಿನಗಳ ಶುಲ್ಕ ಕೂಡ ಸೇರ್ಪಡೆಯಾಗಿದ್ದರೆ ಹೆಚ್ಚುವರಿ ದಿನಗಳ ಹಣ ನಿಮಗೆ ಮರುಪಾವತಿಯಾಗಲಿದೆ. ಈ ಗೊಂದಲದಲ್ಲಿರುವ ಗ್ರಾಹಕರು ಯಾವುದೇ ಬಾಕಿ ಇರಿಸಿಲ್ಲವೆಂದರೆ ಮಾತ್ರ ಹಣ ವಾಪಸ್ ಸಿಗಲಿದೆ. ಒಂದೊಮ್ಮೆ ವಿದ್ಯುತ್ ಬಿಲ್ ಬಾಕಿ ಇರಿಸಿದ್ದರೆ ಮರುಪಾವತಿ ಆಗುವುದಿಲ್ಲ. ಈ ಬಗ್ಗೆ ಇಂಧನ ಸಚಿವ ಕೆ.ಜೆ.ಜಾರ್ಜ್ (K.J.George) ಮಾಹಿತಿ ನೀಡಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಕೆ.ಜೆ. ಜಾರ್ಜ್, ಜೂನ್ ತಿಂಗಳ ವಿದ್ಯುತ್ ಬಿಲ್​ನಲ್ಲಿ ಸ್ವಲ್ಪ ಗೊಂದಲಗಳಿತ್ತು. ಆ ತಿಂಗಳ ಬಿಲ್​ನಲ್ಲಿ ಜುಲೈ ತಿಂಗಳ ಕೆಲವು ದಿನಗಳು ಸೇರಿಕೊಂಡಿವೆ. ಈ ಸಮಸ್ಯೆ ಕೆಲವರಿಗೆ ಮಾತ್ರ ಆಗಿದೆ. ಅಂತಹ ಗ್ರಾಹಕರಿಗೆ ಕ್ರೆಡಿಟ್ ಕೊಡುತ್ತೇವೆ. ಬಾಕಿ ಮೊತ್ತ ಇಲ್ಲದಿದ್ದರೆ ನಾಲ್ಕು ತಿಂಗಳ ಬಳಿಕ ಹಣ ಹಿಂದಿರುಗಿಸುತ್ತೇವೆ. ಜುಲೈ ತಿಂಗಳ ಬಿಲ್ ಕಟ್ಟಿದರೆ ವಾಪಸ್ ಹಣ ನೀಡುತ್ತೇವೆ ಎಂದರು.

ಇದನ್ನೂ ಓದಿ: ಗೃಹಜ್ಯೋತಿ ಯೋಜನೆ: ಆಗಸ್ಟ್​ನಿಂದ ಗ್ರಾಹಕರ ಕೈಸೇರಲಿದೆ ಶೂನ್ಯ ವಿದ್ಯುತ್ ಬಿಲ್

ಜುಲೈ ಒಂದರಿಂದ ಗೃಹಜ್ಯೋತಿ ಯೋಜನೆ ಜಾರಿಯಾಗಿದೆ. ಆದರೆ ಇದಕ್ಕೆ ಅಧಿಕೃತವಾಗಿ ಚಾಲನೆಯನ್ನು ಅಗಸ್ಟ್ 5 ಕ್ಕೆ ನೀಡಲಾಗುವುದು. ಇದಕ್ಕಾಗಿ ಕಲಬುರಗಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದರು.

ಗೃಹಜ್ಯೋತಿ ಯೋಜನೆಯ ಲಾಭ ಪಡೆಯಲು ನೋಂದಣಿಗೆ ಅವಕಾಶ ನೀಡಲಾಗಿತ್ತು. ಅದರಂತೆ, 1 ಕೋಟಿ 40 ಲಕ್ಷ ಮಂದಿ ಅರ್ಜಿ ಸಲ್ಲಿಸಿದ್ದಾರೆ. ಜೂನ್ 25 ರ ಒಳಗಾಗಿ ಅರ್ಜಿ ಸಲ್ಲಿಕೆ ಮಾಡಿರುವ ಫಲಾನುಭವಿಗಳಿಗೆ ಜುಲೈ ತಿಂಗಳಿನಿಂದ ಶೂನ್ಯ ವಿದ್ಯುತ್ ಬಿಲ್ ಸಿಗಲಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ