AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂನ್ ತಿಂಗಳ ವಿದ್ಯುತ್ ಬಿಲ್​ನಲ್ಲಿ ಗೊಂದಲ: ಕ್ಯಾಶ್​ಬ್ಯಾಕ್ ಮಾಡಲಾಗುವುದು ಎಂದ ಕೆ.ಜೆ.ಜಾರ್ಜ್

Gruha Jyothi Scheme: ಜೂನ್ ತಿಂಗಳ ವಿದ್ಯುತ್ ಬಿಲ್​ನಲ್ಲಿ ಕೆಲವು ಗ್ರಾಹಕರನ್ನು ಗೊಂದಲಕ್ಕೀಡು ಮಾಡಿದೆ. ಇದಕ್ಕೆ ಕಾರಣ, ಜುಲೈ ತಿಂಗಳ ಕೆಲವು ದಿನಗಳ ಶುಲ್ಕ ಕೂಡ ಸೇರ್ಪಡೆಯಾಗಿರುವುದು. ಈ ಬಗ್ಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸ್ಪಷ್ಟನೆ ನಿಡಿದ್ದಾರೆ.

ಜೂನ್ ತಿಂಗಳ ವಿದ್ಯುತ್ ಬಿಲ್​ನಲ್ಲಿ ಗೊಂದಲ: ಕ್ಯಾಶ್​ಬ್ಯಾಕ್ ಮಾಡಲಾಗುವುದು ಎಂದ ಕೆ.ಜೆ.ಜಾರ್ಜ್
ಇಂಧನ ಸಚಿವ ಕೆ.ಜೆ.ಜಾರ್ಜ್
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Jul 30, 2023 | 9:35 PM

Share

ಚಿಕ್ಕಮಗಳೂರು, ಜುಲೈ 30: ಜೂನ್ ತಿಂಗಳಿನ ವಿದ್ಯುತ್ ಬಿಲ್​ನಲ್ಲಿ ಜುಲೈ ತಿಂಗಳ ಕೆಲವು ದಿನಗಳ ಶುಲ್ಕ ಕೂಡ ಸೇರ್ಪಡೆಯಾಗಿದ್ದರೆ ಹೆಚ್ಚುವರಿ ದಿನಗಳ ಹಣ ನಿಮಗೆ ಮರುಪಾವತಿಯಾಗಲಿದೆ. ಈ ಗೊಂದಲದಲ್ಲಿರುವ ಗ್ರಾಹಕರು ಯಾವುದೇ ಬಾಕಿ ಇರಿಸಿಲ್ಲವೆಂದರೆ ಮಾತ್ರ ಹಣ ವಾಪಸ್ ಸಿಗಲಿದೆ. ಒಂದೊಮ್ಮೆ ವಿದ್ಯುತ್ ಬಿಲ್ ಬಾಕಿ ಇರಿಸಿದ್ದರೆ ಮರುಪಾವತಿ ಆಗುವುದಿಲ್ಲ. ಈ ಬಗ್ಗೆ ಇಂಧನ ಸಚಿವ ಕೆ.ಜೆ.ಜಾರ್ಜ್ (K.J.George) ಮಾಹಿತಿ ನೀಡಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಕೆ.ಜೆ. ಜಾರ್ಜ್, ಜೂನ್ ತಿಂಗಳ ವಿದ್ಯುತ್ ಬಿಲ್​ನಲ್ಲಿ ಸ್ವಲ್ಪ ಗೊಂದಲಗಳಿತ್ತು. ಆ ತಿಂಗಳ ಬಿಲ್​ನಲ್ಲಿ ಜುಲೈ ತಿಂಗಳ ಕೆಲವು ದಿನಗಳು ಸೇರಿಕೊಂಡಿವೆ. ಈ ಸಮಸ್ಯೆ ಕೆಲವರಿಗೆ ಮಾತ್ರ ಆಗಿದೆ. ಅಂತಹ ಗ್ರಾಹಕರಿಗೆ ಕ್ರೆಡಿಟ್ ಕೊಡುತ್ತೇವೆ. ಬಾಕಿ ಮೊತ್ತ ಇಲ್ಲದಿದ್ದರೆ ನಾಲ್ಕು ತಿಂಗಳ ಬಳಿಕ ಹಣ ಹಿಂದಿರುಗಿಸುತ್ತೇವೆ. ಜುಲೈ ತಿಂಗಳ ಬಿಲ್ ಕಟ್ಟಿದರೆ ವಾಪಸ್ ಹಣ ನೀಡುತ್ತೇವೆ ಎಂದರು.

ಇದನ್ನೂ ಓದಿ: ಗೃಹಜ್ಯೋತಿ ಯೋಜನೆ: ಆಗಸ್ಟ್​ನಿಂದ ಗ್ರಾಹಕರ ಕೈಸೇರಲಿದೆ ಶೂನ್ಯ ವಿದ್ಯುತ್ ಬಿಲ್

ಜುಲೈ ಒಂದರಿಂದ ಗೃಹಜ್ಯೋತಿ ಯೋಜನೆ ಜಾರಿಯಾಗಿದೆ. ಆದರೆ ಇದಕ್ಕೆ ಅಧಿಕೃತವಾಗಿ ಚಾಲನೆಯನ್ನು ಅಗಸ್ಟ್ 5 ಕ್ಕೆ ನೀಡಲಾಗುವುದು. ಇದಕ್ಕಾಗಿ ಕಲಬುರಗಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದರು.

ಗೃಹಜ್ಯೋತಿ ಯೋಜನೆಯ ಲಾಭ ಪಡೆಯಲು ನೋಂದಣಿಗೆ ಅವಕಾಶ ನೀಡಲಾಗಿತ್ತು. ಅದರಂತೆ, 1 ಕೋಟಿ 40 ಲಕ್ಷ ಮಂದಿ ಅರ್ಜಿ ಸಲ್ಲಿಸಿದ್ದಾರೆ. ಜೂನ್ 25 ರ ಒಳಗಾಗಿ ಅರ್ಜಿ ಸಲ್ಲಿಕೆ ಮಾಡಿರುವ ಫಲಾನುಭವಿಗಳಿಗೆ ಜುಲೈ ತಿಂಗಳಿನಿಂದ ಶೂನ್ಯ ವಿದ್ಯುತ್ ಬಿಲ್ ಸಿಗಲಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ