AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂನ್ ತಿಂಗಳ ವಿದ್ಯುತ್ ಬಿಲ್​ನಲ್ಲಿ ಗೊಂದಲ: ಕ್ಯಾಶ್​ಬ್ಯಾಕ್ ಮಾಡಲಾಗುವುದು ಎಂದ ಕೆ.ಜೆ.ಜಾರ್ಜ್

Gruha Jyothi Scheme: ಜೂನ್ ತಿಂಗಳ ವಿದ್ಯುತ್ ಬಿಲ್​ನಲ್ಲಿ ಕೆಲವು ಗ್ರಾಹಕರನ್ನು ಗೊಂದಲಕ್ಕೀಡು ಮಾಡಿದೆ. ಇದಕ್ಕೆ ಕಾರಣ, ಜುಲೈ ತಿಂಗಳ ಕೆಲವು ದಿನಗಳ ಶುಲ್ಕ ಕೂಡ ಸೇರ್ಪಡೆಯಾಗಿರುವುದು. ಈ ಬಗ್ಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸ್ಪಷ್ಟನೆ ನಿಡಿದ್ದಾರೆ.

ಜೂನ್ ತಿಂಗಳ ವಿದ್ಯುತ್ ಬಿಲ್​ನಲ್ಲಿ ಗೊಂದಲ: ಕ್ಯಾಶ್​ಬ್ಯಾಕ್ ಮಾಡಲಾಗುವುದು ಎಂದ ಕೆ.ಜೆ.ಜಾರ್ಜ್
ಇಂಧನ ಸಚಿವ ಕೆ.ಜೆ.ಜಾರ್ಜ್
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Jul 30, 2023 | 9:35 PM

Share

ಚಿಕ್ಕಮಗಳೂರು, ಜುಲೈ 30: ಜೂನ್ ತಿಂಗಳಿನ ವಿದ್ಯುತ್ ಬಿಲ್​ನಲ್ಲಿ ಜುಲೈ ತಿಂಗಳ ಕೆಲವು ದಿನಗಳ ಶುಲ್ಕ ಕೂಡ ಸೇರ್ಪಡೆಯಾಗಿದ್ದರೆ ಹೆಚ್ಚುವರಿ ದಿನಗಳ ಹಣ ನಿಮಗೆ ಮರುಪಾವತಿಯಾಗಲಿದೆ. ಈ ಗೊಂದಲದಲ್ಲಿರುವ ಗ್ರಾಹಕರು ಯಾವುದೇ ಬಾಕಿ ಇರಿಸಿಲ್ಲವೆಂದರೆ ಮಾತ್ರ ಹಣ ವಾಪಸ್ ಸಿಗಲಿದೆ. ಒಂದೊಮ್ಮೆ ವಿದ್ಯುತ್ ಬಿಲ್ ಬಾಕಿ ಇರಿಸಿದ್ದರೆ ಮರುಪಾವತಿ ಆಗುವುದಿಲ್ಲ. ಈ ಬಗ್ಗೆ ಇಂಧನ ಸಚಿವ ಕೆ.ಜೆ.ಜಾರ್ಜ್ (K.J.George) ಮಾಹಿತಿ ನೀಡಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಕೆ.ಜೆ. ಜಾರ್ಜ್, ಜೂನ್ ತಿಂಗಳ ವಿದ್ಯುತ್ ಬಿಲ್​ನಲ್ಲಿ ಸ್ವಲ್ಪ ಗೊಂದಲಗಳಿತ್ತು. ಆ ತಿಂಗಳ ಬಿಲ್​ನಲ್ಲಿ ಜುಲೈ ತಿಂಗಳ ಕೆಲವು ದಿನಗಳು ಸೇರಿಕೊಂಡಿವೆ. ಈ ಸಮಸ್ಯೆ ಕೆಲವರಿಗೆ ಮಾತ್ರ ಆಗಿದೆ. ಅಂತಹ ಗ್ರಾಹಕರಿಗೆ ಕ್ರೆಡಿಟ್ ಕೊಡುತ್ತೇವೆ. ಬಾಕಿ ಮೊತ್ತ ಇಲ್ಲದಿದ್ದರೆ ನಾಲ್ಕು ತಿಂಗಳ ಬಳಿಕ ಹಣ ಹಿಂದಿರುಗಿಸುತ್ತೇವೆ. ಜುಲೈ ತಿಂಗಳ ಬಿಲ್ ಕಟ್ಟಿದರೆ ವಾಪಸ್ ಹಣ ನೀಡುತ್ತೇವೆ ಎಂದರು.

ಇದನ್ನೂ ಓದಿ: ಗೃಹಜ್ಯೋತಿ ಯೋಜನೆ: ಆಗಸ್ಟ್​ನಿಂದ ಗ್ರಾಹಕರ ಕೈಸೇರಲಿದೆ ಶೂನ್ಯ ವಿದ್ಯುತ್ ಬಿಲ್

ಜುಲೈ ಒಂದರಿಂದ ಗೃಹಜ್ಯೋತಿ ಯೋಜನೆ ಜಾರಿಯಾಗಿದೆ. ಆದರೆ ಇದಕ್ಕೆ ಅಧಿಕೃತವಾಗಿ ಚಾಲನೆಯನ್ನು ಅಗಸ್ಟ್ 5 ಕ್ಕೆ ನೀಡಲಾಗುವುದು. ಇದಕ್ಕಾಗಿ ಕಲಬುರಗಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದರು.

ಗೃಹಜ್ಯೋತಿ ಯೋಜನೆಯ ಲಾಭ ಪಡೆಯಲು ನೋಂದಣಿಗೆ ಅವಕಾಶ ನೀಡಲಾಗಿತ್ತು. ಅದರಂತೆ, 1 ಕೋಟಿ 40 ಲಕ್ಷ ಮಂದಿ ಅರ್ಜಿ ಸಲ್ಲಿಸಿದ್ದಾರೆ. ಜೂನ್ 25 ರ ಒಳಗಾಗಿ ಅರ್ಜಿ ಸಲ್ಲಿಕೆ ಮಾಡಿರುವ ಫಲಾನುಭವಿಗಳಿಗೆ ಜುಲೈ ತಿಂಗಳಿನಿಂದ ಶೂನ್ಯ ವಿದ್ಯುತ್ ಬಿಲ್ ಸಿಗಲಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ