ಜೂನ್ ತಿಂಗಳ ವಿದ್ಯುತ್ ಬಿಲ್​ನಲ್ಲಿ ಗೊಂದಲ: ಕ್ಯಾಶ್​ಬ್ಯಾಕ್ ಮಾಡಲಾಗುವುದು ಎಂದ ಕೆ.ಜೆ.ಜಾರ್ಜ್

Gruha Jyothi Scheme: ಜೂನ್ ತಿಂಗಳ ವಿದ್ಯುತ್ ಬಿಲ್​ನಲ್ಲಿ ಕೆಲವು ಗ್ರಾಹಕರನ್ನು ಗೊಂದಲಕ್ಕೀಡು ಮಾಡಿದೆ. ಇದಕ್ಕೆ ಕಾರಣ, ಜುಲೈ ತಿಂಗಳ ಕೆಲವು ದಿನಗಳ ಶುಲ್ಕ ಕೂಡ ಸೇರ್ಪಡೆಯಾಗಿರುವುದು. ಈ ಬಗ್ಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸ್ಪಷ್ಟನೆ ನಿಡಿದ್ದಾರೆ.

ಜೂನ್ ತಿಂಗಳ ವಿದ್ಯುತ್ ಬಿಲ್​ನಲ್ಲಿ ಗೊಂದಲ: ಕ್ಯಾಶ್​ಬ್ಯಾಕ್ ಮಾಡಲಾಗುವುದು ಎಂದ ಕೆ.ಜೆ.ಜಾರ್ಜ್
ಇಂಧನ ಸಚಿವ ಕೆ.ಜೆ.ಜಾರ್ಜ್
Edited By: Rakesh Nayak Manchi

Updated on: Jul 30, 2023 | 9:35 PM

ಚಿಕ್ಕಮಗಳೂರು, ಜುಲೈ 30: ಜೂನ್ ತಿಂಗಳಿನ ವಿದ್ಯುತ್ ಬಿಲ್​ನಲ್ಲಿ ಜುಲೈ ತಿಂಗಳ ಕೆಲವು ದಿನಗಳ ಶುಲ್ಕ ಕೂಡ ಸೇರ್ಪಡೆಯಾಗಿದ್ದರೆ ಹೆಚ್ಚುವರಿ ದಿನಗಳ ಹಣ ನಿಮಗೆ ಮರುಪಾವತಿಯಾಗಲಿದೆ. ಈ ಗೊಂದಲದಲ್ಲಿರುವ ಗ್ರಾಹಕರು ಯಾವುದೇ ಬಾಕಿ ಇರಿಸಿಲ್ಲವೆಂದರೆ ಮಾತ್ರ ಹಣ ವಾಪಸ್ ಸಿಗಲಿದೆ. ಒಂದೊಮ್ಮೆ ವಿದ್ಯುತ್ ಬಿಲ್ ಬಾಕಿ ಇರಿಸಿದ್ದರೆ ಮರುಪಾವತಿ ಆಗುವುದಿಲ್ಲ. ಈ ಬಗ್ಗೆ ಇಂಧನ ಸಚಿವ ಕೆ.ಜೆ.ಜಾರ್ಜ್ (K.J.George) ಮಾಹಿತಿ ನೀಡಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಕೆ.ಜೆ. ಜಾರ್ಜ್, ಜೂನ್ ತಿಂಗಳ ವಿದ್ಯುತ್ ಬಿಲ್​ನಲ್ಲಿ ಸ್ವಲ್ಪ ಗೊಂದಲಗಳಿತ್ತು. ಆ ತಿಂಗಳ ಬಿಲ್​ನಲ್ಲಿ ಜುಲೈ ತಿಂಗಳ ಕೆಲವು ದಿನಗಳು ಸೇರಿಕೊಂಡಿವೆ. ಈ ಸಮಸ್ಯೆ ಕೆಲವರಿಗೆ ಮಾತ್ರ ಆಗಿದೆ. ಅಂತಹ ಗ್ರಾಹಕರಿಗೆ ಕ್ರೆಡಿಟ್ ಕೊಡುತ್ತೇವೆ. ಬಾಕಿ ಮೊತ್ತ ಇಲ್ಲದಿದ್ದರೆ ನಾಲ್ಕು ತಿಂಗಳ ಬಳಿಕ ಹಣ ಹಿಂದಿರುಗಿಸುತ್ತೇವೆ. ಜುಲೈ ತಿಂಗಳ ಬಿಲ್ ಕಟ್ಟಿದರೆ ವಾಪಸ್ ಹಣ ನೀಡುತ್ತೇವೆ ಎಂದರು.

ಇದನ್ನೂ ಓದಿ: ಗೃಹಜ್ಯೋತಿ ಯೋಜನೆ: ಆಗಸ್ಟ್​ನಿಂದ ಗ್ರಾಹಕರ ಕೈಸೇರಲಿದೆ ಶೂನ್ಯ ವಿದ್ಯುತ್ ಬಿಲ್

ಜುಲೈ ಒಂದರಿಂದ ಗೃಹಜ್ಯೋತಿ ಯೋಜನೆ ಜಾರಿಯಾಗಿದೆ. ಆದರೆ ಇದಕ್ಕೆ ಅಧಿಕೃತವಾಗಿ ಚಾಲನೆಯನ್ನು ಅಗಸ್ಟ್ 5 ಕ್ಕೆ ನೀಡಲಾಗುವುದು. ಇದಕ್ಕಾಗಿ ಕಲಬುರಗಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದರು.

ಗೃಹಜ್ಯೋತಿ ಯೋಜನೆಯ ಲಾಭ ಪಡೆಯಲು ನೋಂದಣಿಗೆ ಅವಕಾಶ ನೀಡಲಾಗಿತ್ತು. ಅದರಂತೆ, 1 ಕೋಟಿ 40 ಲಕ್ಷ ಮಂದಿ ಅರ್ಜಿ ಸಲ್ಲಿಸಿದ್ದಾರೆ. ಜೂನ್ 25 ರ ಒಳಗಾಗಿ ಅರ್ಜಿ ಸಲ್ಲಿಕೆ ಮಾಡಿರುವ ಫಲಾನುಭವಿಗಳಿಗೆ ಜುಲೈ ತಿಂಗಳಿನಿಂದ ಶೂನ್ಯ ವಿದ್ಯುತ್ ಬಿಲ್ ಸಿಗಲಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Ashwith Mavinaguni

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More
Follow Us