AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಸಚಿವರ ತವರು ಜಿಲ್ಲೆಯಲ್ಲೇ ಕೊವಿಡ್ ಆಸ್ಪತ್ರೆಗೆ ಅಳವಡಿಸಿದ್ದ ಜಂಬೋ ಆಕ್ಸಿಜನ್ ಸಿಲಿಂಡರ್‌ಗಳ ಕಳ್ಳತನ

ಕೊರೊನಾ ಸೋಂಕಿತರಿಗೆ ಆಕ್ಸಿಜನ್ ಬೇಡಿಕೆ ಹೆಚ್ಚಾದ ಕಾರಣಕ್ಕೆ ಆಸ್ಪತ್ರೆಯ ಸಿಬ್ಬಂದಿಗಳೇ ಶಾಮಿಲಾಗಿ ಕಳ್ಳತನ ಮಾಡಿರುವ ಶಂಕೆ ಸದ್ಯ ವ್ಯಕ್ತವಾಗಿದ್ದು, ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಆರೋಗ್ಯ ಸಚಿವರ ತವರು ಜಿಲ್ಲೆಯಲ್ಲೇ ಕೊವಿಡ್ ಆಸ್ಪತ್ರೆಗೆ ಅಳವಡಿಸಿದ್ದ ಜಂಬೋ ಆಕ್ಸಿಜನ್ ಸಿಲಿಂಡರ್‌ಗಳ ಕಳ್ಳತನ
ಆಕ್ಸಿಜನ್ ಸಿಲಿಂಡರ್‌
preethi shettigar
|

Updated on: May 08, 2021 | 11:14 AM

Share

ಚಿಕ್ಕಬಳ್ಳಾಪುರ: ಕೊವಿಡ್ ಆಸ್ಪತ್ರೆಗೆ ಅಳವಡಿಸಿದ್ದ ಜಂಬೋ ಆಕ್ಸಿಜನ್ ಸಿಲಿಂಡರ್‌ಗಳನ್ನು ಕಳ್ಳತನ ಮಾಡಿರುವ ಘಟನೆ ಚಿಕ್ಕಬಳ್ಳಾಪುರದ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಅವರ ತವರು ಕ್ಷೇತ್ರದಲ್ಲಿ ಕಳ್ಳತನವಾಗಿದ್ದು, ಖಾಸಗಿ ಆಸ್ಪತ್ರೆಗಳ ಮೇಲೆ ಅನುಮಾನ ವ್ಯಕ್ತಪಡಿಸಲಾಗಿದೆ. ಈ ಸಂಬಂಧ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಜಿಲ್ಲಾ ಸರ್ಜನ್ ಡಾ.ಪಿ.ವಿ.ರಮೇಶ ಸಿಲೆಂಡರ್​ಗಳನ್ನು ಹುಡುಕಿಕೊಡುವಂತೆ ನಗರದ ಠಾಣೆಗೆ ದೂರು ನೀಡಿದ್ದಾರೆ.

ಕೊರೊನಾ ಎರಡನೇ ಅಲೆ ದೇಶದಾದ್ಯಂತ ಹಬ್ಬಿದ್ದು, ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ. ಇದರ ಜೊತೆಗೆ ಸಾವಿನ ಸಂಖ್ಯೆಯಲ್ಲಿ ಕೂಡ ಏರಿಕೆ ಕಂಡುಬಂದಿದೆ. ಹೀಗಿರುವಾಗಲೇ ಆಕ್ಸಿಜನ್ ಕೊರತೆ ಕಂಡುಬಂದಿದ್ದು, ಎಲ್ಲೇಡೆ ಹಾಹಾಕಾರ ಸೃಷ್ಟಿಯಾಗಿದೆ. ಕೊರೊನಾ ಸೋಂಕಿತರಿಗೆ ಆಕ್ಸಿಜನ್ ಬೇಡಿಕೆ ಹೆಚ್ಚಾದ ಕಾರಣಕ್ಕೆ ಆಸ್ಪತ್ರೆಯ ಸಿಬ್ಬಂದಿಗಳೇ ಶಾಮಿಲಾಗಿ ಕಳ್ಳತನ ಮಾಡಿರುವ ಶಂಕೆ ಸದ್ಯ ವ್ಯಕ್ತವಾಗಿದ್ದು, ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಚಿಕ್ಕಬಳ್ಳಾಪುರ ಆಸ್ಪತ್ರೆಯಲ್ಲಿ ಈ ಹಿಂದೆ ಸೋಂಕಿನಿಂದ ಮೃತಪಟ್ಟವರ ಚಿನ್ನಾಭರಣ ಕಳ್ಳತನ ಚಿಕ್ಕಬಳ್ಳಾಪುರ ಜಿಲ್ಲಾ ಕೊವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮಹಿಳೆಯೊಬ್ಬರು ಸಾವನ್ನಪ್ಪಿದ್ದರು. ಇಂದು (ಮೇ 2) ಬೆಳಗಿನ ಜಾವ ಜಿಲ್ಲಾ ಕೊವಿಡ್ ಆಸ್ಪತ್ರೆಯಲ್ಲಿ ಅಂದಾರ್ಲಹಳ್ಳಿ ಗ್ರಾಮದ 48 ವರ್ಷದ ಲಕ್ಷ್ಮಮ್ಮ ಎಂಬ ಮಹಿಳೆ ಮೃತಪಡುತ್ತಾರೆ. ಶವ ಪಡೆಯಲು ಮೃತಳ ಸಂಬಂಧಿಕರು ಆಸ್ಪತ್ರೆಗೆ ಬಂದಾಗ ಕಳ್ಳತನ ಪ್ರಕರಣ ಬೆಳಕಿಗೆ ಬರುತ್ತದೆ. ಈ ಅಮಾನವೀಯ ಘಟನೆಯನ್ನು ಖಂಡಿಸಿ ಆಸ್ಪತ್ರೆಯ ಸಿಬ್ಬಂದಿಗಳ ವಿರುದ್ಧ ಮೃತಳ ಸಂಬಂಧಿಕರು ನಗರ ಠಾಣೆ ಪೊಲೀಸರಿಗೆ ದೂರನ್ನು ನೀಡಿದ್ದಾರೆ.

ಇದನ್ನೂ ಓದಿ:

ಕೋಲಾರ ಜಿಲ್ಲಾಸ್ಪತ್ರೆಯ ಎಲ್ಲ ಬೆಡ್​ಗಳನ್ನೂ ಆಕ್ಸಿಜನ್‌ ಬೆಡ್‌ಗಳನ್ನಾಗಿ ಪರಿವರ್ತನೆ ಮಾಡಲಾಗುವುದು; ಡಿಸಿಎಂ ಡಾ ಅಶ್ವತ್ಥನಾರಾಯಣ

ಮೊಬೈಲ್​ ಚಾರ್ಜ್​ ಹಾಕೋಕೂ ದುಡ್ಡು ಕೊಡ್ಬೇಕು, ಡೈಪರ್​ ತಂದುಕೊಟ್ರೆ ಅದನ್ನೂ ಮಾರ್ತಾರೆ​, ಇವರೇ ನಮ್ಮಪ್ಪನ್ನ ಸಾಯಿಸಿದ್ದು: ಮಕ್ಕಳ ಆಕ್ರೋಶ

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ