AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿ ಭಾನುವಾರ ರಾಜ್ಯಾದ್ಯಂತ ಲಾಕ್​ಡೌನ್​!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ದಿನದಿಂದ ದಿನಕ್ಕೆ ಮಿತಿ ಮೀರುತ್ತಿದೆ. ಹಾಗಾಗಿ ರಾಜ್ಯವ್ಯಾಪಿ ಭಾನುವಾರ ಲಾಕ್​ಡೌನ್ ಮಾಡಲು ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ. ಸರ್ಕಾರಿ ನೌಕರರಿಗೆ 5 ದಿನ ಮಾತ್ರ ಕೆಲಸ ನಾಳೆ ಅಂದ್ರೆ ಭಾನುವಾರ ರಾತ್ರಿ 8ರಿಂದ ಬೆಳಗ್ಗೆ 5ರವರೆಗೆ ಕರ್ಫ್ಯೂ ಜಾರಿಗೊಳಿಸಲು ನಿರ್ಧರಿಸಲಾಗಿದೆ. ಜುಲೈ 5ರ ಭಾನುವಾರದಿಂದ ಪ್ರತಿ ಭಾನುವಾರ ಲಾಕ್​ಡೌನ್ ಮಾಡಲಾಗುತ್ತೆ. ಅಲ್ಲದೆ, ಸರ್ಕಾರಿ ನೌಕರರಿಗೆ ವಾರದಲ್ಲಿ ಐದು ದಿನ ಮಾತ್ರ ಕೆಲಸ ಮಾಡಲು ಸಚಿವರು, ಅಧಿಕಾರಿಗಳ ಸಭೆಯಲ್ಲಿ ಸಿಎಂ […]

ಪ್ರತಿ ಭಾನುವಾರ ರಾಜ್ಯಾದ್ಯಂತ ಲಾಕ್​ಡೌನ್​!
ಸಾಧು ಶ್ರೀನಾಥ್​
| Updated By: |

Updated on:Jun 27, 2020 | 7:31 PM

Share

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ದಿನದಿಂದ ದಿನಕ್ಕೆ ಮಿತಿ ಮೀರುತ್ತಿದೆ. ಹಾಗಾಗಿ ರಾಜ್ಯವ್ಯಾಪಿ ಭಾನುವಾರ ಲಾಕ್​ಡೌನ್ ಮಾಡಲು ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ.

ಸರ್ಕಾರಿ ನೌಕರರಿಗೆ 5 ದಿನ ಮಾತ್ರ ಕೆಲಸ ನಾಳೆ ಅಂದ್ರೆ ಭಾನುವಾರ ರಾತ್ರಿ 8ರಿಂದ ಬೆಳಗ್ಗೆ 5ರವರೆಗೆ ಕರ್ಫ್ಯೂ ಜಾರಿಗೊಳಿಸಲು ನಿರ್ಧರಿಸಲಾಗಿದೆ. ಜುಲೈ 5ರ ಭಾನುವಾರದಿಂದ ಪ್ರತಿ ಭಾನುವಾರ ಲಾಕ್​ಡೌನ್ ಮಾಡಲಾಗುತ್ತೆ. ಅಲ್ಲದೆ, ಸರ್ಕಾರಿ ನೌಕರರಿಗೆ ವಾರದಲ್ಲಿ ಐದು ದಿನ ಮಾತ್ರ ಕೆಲಸ ಮಾಡಲು ಸಚಿವರು, ಅಧಿಕಾರಿಗಳ ಸಭೆಯಲ್ಲಿ ಸಿಎಂ BSY ನಿರ್ಧಾರ ಮಾಡಿದ್ದಾರೆ.

ಶನಿವಾರ ಕೂಡಾ ಲಾಕ್​ಡೌನ್​ಗೆ ಸಿಎಂ ಒಲವು ಭಾನುವಾರದ ಜೊತೆ ಶನಿವಾರ ಕೂಡಾ ಲಾಕ್​ಡೌನ್ ಮಾಡುವ ಬಗ್ಗೆ ಇಂದಿನ ಸಭೆಯಲ್ಲಿ ಸಿಎಂ ಒಲವು ತೋರಿಸಿದ್ದಾರೆ. ಆದರೆ ತಕ್ಷಣಕ್ಕೆ ವಾರದಲ್ಲಿ ಎರಡು ದಿನ ಲಾಕ್​ಡೌನ್ ಬೇಡ, ಒಂದೆರಡು ಭಾನುವಾರ ಲಾಕ್​ಡೌನ್ ಮಾಡಲಾಗುತ್ತೆ. ಕೊರೊನಾ ಸೋಂಕು ಪ್ರಮಾಣ ತಹಬದಿಗೆ ಬಂದರೆ ನಂತರ ಶನಿವಾರ ಮತ್ತು ಭಾನುವಾರ ಎರಡು ದಿನ ಲಾಕ್​ಡೌನ್ ಮಾಡಬಹುದು.

ಅಗಲೂ ನಿಯಂತ್ರಣ ‌ಸಾಧ್ಯವಾಗದಿದ್ದಲ್ಲಿ ಮತ್ತೆ ಱಂಡಮ್ ಟೆಸ್ಟ್ ಮಾಡುವುದು, ವೈದ್ಯಕೀಯ ಸೌಲಭ್ಯ ಹೆಚ್ಚು ಮಾಡುವತ್ತ ಗಮನ ಹರಿಸಬಹುದು. ಈ ಸಂಬಂಧ ಇಂದಿ‌ನ ಸಭೆಯಲ್ಲಿ ಸಿಎಂಗೆ ಅಧಿಕಾರಿಗಳು ಸಲಹೆ ನೀಡಿದ್ದಾರೆ. ಹೀಗಾಗಿ ಸದ್ಯ ಭಾನುವಾರ ಮಾತ್ರ ಲಾಕ್​ಡೌನ್ ಮಾಡುವ ಬಗ್ಗೆ ಸಿಎಂ ಒಪ್ಪಿಗೆ ಸೂಚಿಸಿದ್ದಾರೆ.

ಭಾನುವಾರ ಮದ್ಯ ಸಿಗಲ್ಲ ಪ್ರತಿ ಭಾನುವಾರ ಲಾಕ್​ಡೌನ್ ಇರುವ ಹಿನ್ನೆಲೆಯಲ್ಲಿ ಜುಲೈ 5ರಿಂದ ರಾಜ್ಯದಲ್ಲಿ ಭಾನುವಾರದಂದು ಮದ್ಯ ಸಿಗಲ್ಲ. ನಾಳೆಯಿಂದಲೇ ಮದ್ಯ ಮಾರಾಟದ ಅವಧಿ 1 ಗಂಟೆ ಕಡಿತವಾಗಲಿದೆ. ರಾತ್ರಿ 9ಗಂಟೆಯ ಬದಲು ರಾತ್ರಿ 8 ಗಂಟೆಗೆ ಮದ್ಯದಂಗಡಿ ಬಂದ್ ಆಗಲಿದೆ.

ಅಗತ್ಯಸೇವೆ ಹೊರತುಪಡಿಸಿ ಉಳಿದೆಲ್ಲಾ ಬಂದ್ ಭಾನುವಾರದಂದು ಆಟೋ, ಟ್ಯಾಕ್ಸಿ, ಕ್ಯಾಬ್‌, ಬಸ್‌ ಯಾವುದೂ ಓಡಾಡಲ್ಲ. ಅಂಗಡಿ-ಮುಂಗಟ್ಟುಗಳು ಎಲ್ಲವೂ ಬಂದ್ ಆಗಲಿದೆ. ಮೆಡಿಕಲ್ ಶಾಪ್, ದಿನಸಿ ಅಂಗಡಿ, ಹಾಲು ಸೇರಿದಂತೆ ಅಗತ್ಯ ಸೇವೆಗಳನ್ನ ಹೊರತುಪಡಿಸಿ ಉಳಿದೆಲ್ಲವೂ ಬಂದ್‌ ಆಗಲಿದೆ.

Published On - 7:06 pm, Sat, 27 June 20

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ