AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿ ಭಾನುವಾರ ರಾಜ್ಯಾದ್ಯಂತ ಲಾಕ್​ಡೌನ್​!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ದಿನದಿಂದ ದಿನಕ್ಕೆ ಮಿತಿ ಮೀರುತ್ತಿದೆ. ಹಾಗಾಗಿ ರಾಜ್ಯವ್ಯಾಪಿ ಭಾನುವಾರ ಲಾಕ್​ಡೌನ್ ಮಾಡಲು ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ. ಸರ್ಕಾರಿ ನೌಕರರಿಗೆ 5 ದಿನ ಮಾತ್ರ ಕೆಲಸ ನಾಳೆ ಅಂದ್ರೆ ಭಾನುವಾರ ರಾತ್ರಿ 8ರಿಂದ ಬೆಳಗ್ಗೆ 5ರವರೆಗೆ ಕರ್ಫ್ಯೂ ಜಾರಿಗೊಳಿಸಲು ನಿರ್ಧರಿಸಲಾಗಿದೆ. ಜುಲೈ 5ರ ಭಾನುವಾರದಿಂದ ಪ್ರತಿ ಭಾನುವಾರ ಲಾಕ್​ಡೌನ್ ಮಾಡಲಾಗುತ್ತೆ. ಅಲ್ಲದೆ, ಸರ್ಕಾರಿ ನೌಕರರಿಗೆ ವಾರದಲ್ಲಿ ಐದು ದಿನ ಮಾತ್ರ ಕೆಲಸ ಮಾಡಲು ಸಚಿವರು, ಅಧಿಕಾರಿಗಳ ಸಭೆಯಲ್ಲಿ ಸಿಎಂ […]

ಪ್ರತಿ ಭಾನುವಾರ ರಾಜ್ಯಾದ್ಯಂತ ಲಾಕ್​ಡೌನ್​!
ಸಾಧು ಶ್ರೀನಾಥ್​
| Edited By: |

Updated on:Jun 27, 2020 | 7:31 PM

Share

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ದಿನದಿಂದ ದಿನಕ್ಕೆ ಮಿತಿ ಮೀರುತ್ತಿದೆ. ಹಾಗಾಗಿ ರಾಜ್ಯವ್ಯಾಪಿ ಭಾನುವಾರ ಲಾಕ್​ಡೌನ್ ಮಾಡಲು ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ.

ಸರ್ಕಾರಿ ನೌಕರರಿಗೆ 5 ದಿನ ಮಾತ್ರ ಕೆಲಸ ನಾಳೆ ಅಂದ್ರೆ ಭಾನುವಾರ ರಾತ್ರಿ 8ರಿಂದ ಬೆಳಗ್ಗೆ 5ರವರೆಗೆ ಕರ್ಫ್ಯೂ ಜಾರಿಗೊಳಿಸಲು ನಿರ್ಧರಿಸಲಾಗಿದೆ. ಜುಲೈ 5ರ ಭಾನುವಾರದಿಂದ ಪ್ರತಿ ಭಾನುವಾರ ಲಾಕ್​ಡೌನ್ ಮಾಡಲಾಗುತ್ತೆ. ಅಲ್ಲದೆ, ಸರ್ಕಾರಿ ನೌಕರರಿಗೆ ವಾರದಲ್ಲಿ ಐದು ದಿನ ಮಾತ್ರ ಕೆಲಸ ಮಾಡಲು ಸಚಿವರು, ಅಧಿಕಾರಿಗಳ ಸಭೆಯಲ್ಲಿ ಸಿಎಂ BSY ನಿರ್ಧಾರ ಮಾಡಿದ್ದಾರೆ.

ಶನಿವಾರ ಕೂಡಾ ಲಾಕ್​ಡೌನ್​ಗೆ ಸಿಎಂ ಒಲವು ಭಾನುವಾರದ ಜೊತೆ ಶನಿವಾರ ಕೂಡಾ ಲಾಕ್​ಡೌನ್ ಮಾಡುವ ಬಗ್ಗೆ ಇಂದಿನ ಸಭೆಯಲ್ಲಿ ಸಿಎಂ ಒಲವು ತೋರಿಸಿದ್ದಾರೆ. ಆದರೆ ತಕ್ಷಣಕ್ಕೆ ವಾರದಲ್ಲಿ ಎರಡು ದಿನ ಲಾಕ್​ಡೌನ್ ಬೇಡ, ಒಂದೆರಡು ಭಾನುವಾರ ಲಾಕ್​ಡೌನ್ ಮಾಡಲಾಗುತ್ತೆ. ಕೊರೊನಾ ಸೋಂಕು ಪ್ರಮಾಣ ತಹಬದಿಗೆ ಬಂದರೆ ನಂತರ ಶನಿವಾರ ಮತ್ತು ಭಾನುವಾರ ಎರಡು ದಿನ ಲಾಕ್​ಡೌನ್ ಮಾಡಬಹುದು.

ಅಗಲೂ ನಿಯಂತ್ರಣ ‌ಸಾಧ್ಯವಾಗದಿದ್ದಲ್ಲಿ ಮತ್ತೆ ಱಂಡಮ್ ಟೆಸ್ಟ್ ಮಾಡುವುದು, ವೈದ್ಯಕೀಯ ಸೌಲಭ್ಯ ಹೆಚ್ಚು ಮಾಡುವತ್ತ ಗಮನ ಹರಿಸಬಹುದು. ಈ ಸಂಬಂಧ ಇಂದಿ‌ನ ಸಭೆಯಲ್ಲಿ ಸಿಎಂಗೆ ಅಧಿಕಾರಿಗಳು ಸಲಹೆ ನೀಡಿದ್ದಾರೆ. ಹೀಗಾಗಿ ಸದ್ಯ ಭಾನುವಾರ ಮಾತ್ರ ಲಾಕ್​ಡೌನ್ ಮಾಡುವ ಬಗ್ಗೆ ಸಿಎಂ ಒಪ್ಪಿಗೆ ಸೂಚಿಸಿದ್ದಾರೆ.

ಭಾನುವಾರ ಮದ್ಯ ಸಿಗಲ್ಲ ಪ್ರತಿ ಭಾನುವಾರ ಲಾಕ್​ಡೌನ್ ಇರುವ ಹಿನ್ನೆಲೆಯಲ್ಲಿ ಜುಲೈ 5ರಿಂದ ರಾಜ್ಯದಲ್ಲಿ ಭಾನುವಾರದಂದು ಮದ್ಯ ಸಿಗಲ್ಲ. ನಾಳೆಯಿಂದಲೇ ಮದ್ಯ ಮಾರಾಟದ ಅವಧಿ 1 ಗಂಟೆ ಕಡಿತವಾಗಲಿದೆ. ರಾತ್ರಿ 9ಗಂಟೆಯ ಬದಲು ರಾತ್ರಿ 8 ಗಂಟೆಗೆ ಮದ್ಯದಂಗಡಿ ಬಂದ್ ಆಗಲಿದೆ.

ಅಗತ್ಯಸೇವೆ ಹೊರತುಪಡಿಸಿ ಉಳಿದೆಲ್ಲಾ ಬಂದ್ ಭಾನುವಾರದಂದು ಆಟೋ, ಟ್ಯಾಕ್ಸಿ, ಕ್ಯಾಬ್‌, ಬಸ್‌ ಯಾವುದೂ ಓಡಾಡಲ್ಲ. ಅಂಗಡಿ-ಮುಂಗಟ್ಟುಗಳು ಎಲ್ಲವೂ ಬಂದ್ ಆಗಲಿದೆ. ಮೆಡಿಕಲ್ ಶಾಪ್, ದಿನಸಿ ಅಂಗಡಿ, ಹಾಲು ಸೇರಿದಂತೆ ಅಗತ್ಯ ಸೇವೆಗಳನ್ನ ಹೊರತುಪಡಿಸಿ ಉಳಿದೆಲ್ಲವೂ ಬಂದ್‌ ಆಗಲಿದೆ.

Published On - 7:06 pm, Sat, 27 June 20

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ