
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ದಿನದಿಂದ ದಿನಕ್ಕೆ ಮಿತಿ ಮೀರುತ್ತಿದೆ. ಹಾಗಾಗಿ ರಾಜ್ಯವ್ಯಾಪಿ ಭಾನುವಾರ ಲಾಕ್ಡೌನ್ ಮಾಡಲು ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ.
ಸರ್ಕಾರಿ ನೌಕರರಿಗೆ 5 ದಿನ ಮಾತ್ರ ಕೆಲಸ
ನಾಳೆ ಅಂದ್ರೆ ಭಾನುವಾರ ರಾತ್ರಿ 8ರಿಂದ ಬೆಳಗ್ಗೆ 5ರವರೆಗೆ ಕರ್ಫ್ಯೂ ಜಾರಿಗೊಳಿಸಲು ನಿರ್ಧರಿಸಲಾಗಿದೆ. ಜುಲೈ 5ರ ಭಾನುವಾರದಿಂದ ಪ್ರತಿ ಭಾನುವಾರ ಲಾಕ್ಡೌನ್ ಮಾಡಲಾಗುತ್ತೆ. ಅಲ್ಲದೆ, ಸರ್ಕಾರಿ ನೌಕರರಿಗೆ ವಾರದಲ್ಲಿ ಐದು ದಿನ ಮಾತ್ರ ಕೆಲಸ ಮಾಡಲು ಸಚಿವರು, ಅಧಿಕಾರಿಗಳ ಸಭೆಯಲ್ಲಿ ಸಿಎಂ BSY ನಿರ್ಧಾರ ಮಾಡಿದ್ದಾರೆ.
ಶನಿವಾರ ಕೂಡಾ ಲಾಕ್ಡೌನ್ಗೆ ಸಿಎಂ ಒಲವು
ಭಾನುವಾರದ ಜೊತೆ ಶನಿವಾರ ಕೂಡಾ ಲಾಕ್ಡೌನ್ ಮಾಡುವ ಬಗ್ಗೆ ಇಂದಿನ ಸಭೆಯಲ್ಲಿ ಸಿಎಂ ಒಲವು ತೋರಿಸಿದ್ದಾರೆ. ಆದರೆ ತಕ್ಷಣಕ್ಕೆ ವಾರದಲ್ಲಿ ಎರಡು ದಿನ ಲಾಕ್ಡೌನ್ ಬೇಡ, ಒಂದೆರಡು ಭಾನುವಾರ ಲಾಕ್ಡೌನ್ ಮಾಡಲಾಗುತ್ತೆ. ಕೊರೊನಾ ಸೋಂಕು ಪ್ರಮಾಣ ತಹಬದಿಗೆ ಬಂದರೆ ನಂತರ ಶನಿವಾರ ಮತ್ತು ಭಾನುವಾರ ಎರಡು ದಿನ ಲಾಕ್ಡೌನ್ ಮಾಡಬಹುದು.
ಅಗಲೂ ನಿಯಂತ್ರಣ ಸಾಧ್ಯವಾಗದಿದ್ದಲ್ಲಿ ಮತ್ತೆ ಱಂಡಮ್ ಟೆಸ್ಟ್ ಮಾಡುವುದು, ವೈದ್ಯಕೀಯ ಸೌಲಭ್ಯ ಹೆಚ್ಚು ಮಾಡುವತ್ತ ಗಮನ ಹರಿಸಬಹುದು. ಈ ಸಂಬಂಧ ಇಂದಿನ ಸಭೆಯಲ್ಲಿ ಸಿಎಂಗೆ ಅಧಿಕಾರಿಗಳು ಸಲಹೆ ನೀಡಿದ್ದಾರೆ. ಹೀಗಾಗಿ ಸದ್ಯ ಭಾನುವಾರ ಮಾತ್ರ ಲಾಕ್ಡೌನ್ ಮಾಡುವ ಬಗ್ಗೆ ಸಿಎಂ ಒಪ್ಪಿಗೆ ಸೂಚಿಸಿದ್ದಾರೆ.
ಭಾನುವಾರ ಮದ್ಯ ಸಿಗಲ್ಲ
ಪ್ರತಿ ಭಾನುವಾರ ಲಾಕ್ಡೌನ್ ಇರುವ ಹಿನ್ನೆಲೆಯಲ್ಲಿ ಜುಲೈ 5ರಿಂದ ರಾಜ್ಯದಲ್ಲಿ ಭಾನುವಾರದಂದು ಮದ್ಯ ಸಿಗಲ್ಲ. ನಾಳೆಯಿಂದಲೇ ಮದ್ಯ ಮಾರಾಟದ ಅವಧಿ 1 ಗಂಟೆ ಕಡಿತವಾಗಲಿದೆ. ರಾತ್ರಿ 9ಗಂಟೆಯ ಬದಲು ರಾತ್ರಿ 8 ಗಂಟೆಗೆ ಮದ್ಯದಂಗಡಿ ಬಂದ್ ಆಗಲಿದೆ.
ಅಗತ್ಯಸೇವೆ ಹೊರತುಪಡಿಸಿ ಉಳಿದೆಲ್ಲಾ ಬಂದ್
ಭಾನುವಾರದಂದು ಆಟೋ, ಟ್ಯಾಕ್ಸಿ, ಕ್ಯಾಬ್, ಬಸ್ ಯಾವುದೂ ಓಡಾಡಲ್ಲ. ಅಂಗಡಿ-ಮುಂಗಟ್ಟುಗಳು ಎಲ್ಲವೂ ಬಂದ್ ಆಗಲಿದೆ. ಮೆಡಿಕಲ್ ಶಾಪ್, ದಿನಸಿ ಅಂಗಡಿ, ಹಾಲು ಸೇರಿದಂತೆ ಅಗತ್ಯ ಸೇವೆಗಳನ್ನ ಹೊರತುಪಡಿಸಿ ಉಳಿದೆಲ್ಲವೂ ಬಂದ್ ಆಗಲಿದೆ.
Published On - 7:06 pm, Sat, 27 June 20