AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ತೂರು ಕೋಡಿ ವೃತ್ತಕ್ಕೆ ಮಧುಕರ್ ಶೆಟ್ಟಿ ಹೆಸರಿಡಲು ನಿರಾಕರಣೆ: ಶಂಕರ್​ ಬಿದರಿ ಆಕ್ರೋಶ

ಹಿರಿಯ IPS ಅಧಿಕಾರಿ ಮಧುಕರ್ ಶೆಟ್ಟಿ ನಿಧನದ ನಂತರ ನಗರದ ವರ್ತೂರು ಕೋಡಿ ವೃತ್ತಕ್ಕೆ ಅವರ ಹೆಸರು ನಾಮಕರಣ ಮಾಡಲು ಪಾಲಿಕೆಯಲ್ಲಿ ನಿರ್ಧರಿಸಲಾಗಿತ್ತು. ಸರ್ಕಾರ ಇದಕ್ಕೆ ಒಪ್ಪಿರಲಿಲ್ಲ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

ವರ್ತೂರು ಕೋಡಿ ವೃತ್ತಕ್ಕೆ ಮಧುಕರ್ ಶೆಟ್ಟಿ ಹೆಸರಿಡಲು ನಿರಾಕರಣೆ: ಶಂಕರ್​ ಬಿದರಿ ಆಕ್ರೋಶ
ಮಧುಕರ್ ಶೆಟ್ಟಿ
ರಾಜೇಶ್ ದುಗ್ಗುಮನೆ
| Edited By: |

Updated on: Dec 25, 2020 | 5:03 PM

Share

ಬೆಂಗಳೂರು: ವರ್ತೂರು ಕೋಡಿ ವೃತ್ತಕ್ಕೆ ಮೃತ IPS ಅಧಿಕಾರಿ ದಿ.ಮಧುಕರ್ ಶೆಟ್ಟಿ ಹೆಸರು ನಾಮಕರಣ ಮಾಡುವ ಬಿಬಿಎಂಪಿ ಪ್ರಸ್ತಾವಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿಲ್ಲ. ಈ ವಿಚಾರಕ್ಕೆ ಸಂಬಂಧಿಸಿದಂತೆ ನಿವೃತ್ತ ಐಪಿಎಸ್​ ಅಧಿಕಾರಿ ಶಂಕರ್​ ಬಿದರಿ ಅಸಮಾಧಾನ ಹೊರ ಹಾಕಿದ್ದಾರೆ.

ಮಧುಕರ್​ ಶೆಟ್ಟಿ ತತ್ವ ಸಿದ್ಧಾಂತಗಳನ್ನು ಪಾಲಿಸಿಕೊಂಡು ಬಂದವರು. ಆದರೆ, ಅವರು ಈಗ ನಮ್ಮೊಂದಿಗಿಲ್ಲ. ನನಗೆ ಮಗನಿಗಿಂತಲೂ ಹೆಚ್ಚು. ವರ್ತೂರು ಕೋಡಿ ವೃತ್ತಕ್ಕೆ ಮೃತ IPS ಅಧಿಕಾರಿ ದಿ.ಮಧುಕರ್ ಶೆಟ್ಟಿ ಹೆಸರು ನಾಮಕರಣ ಮಾಡುಲು ಬಿಬಿಎಂಪಿ ಕೌನ್ಸಿಲ್ ಸಭೆಯಲ್ಲಿ ನಿರ್ಣಯ ಮಾಡಲಾಗಿತ್ತು. ಆದರೆ, ಬಿಬಿಎಂಪಿ ನಿರ್ಣಯಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿಲ್ಲ. ಇದಕ್ಕೆ ಕಾರಣವೇನು ಎಂಬುದನ್ನು ತಿಳಿಯಬೇಕಿದೆ ಎಂದು ಶಂಕರ್​ ಬಿದರಿ ಹೇಳಿದ್ದಾರೆ.

ಇಂದು ಕರ್ನಾಟಕವನ್ನು ಬಿಜೆಪಿ ಸರ್ಕಾರ ಆಳುತ್ತಿದೆ. ಯಾವುದೇ ರಾಜಕಾರಣಿಯಿಂದಾಗಲೀ ಅಥವಾ ಪಕ್ಷದಿಂದಾಗಲೀ ಮಧುಕರ್​ ಶೆಟ್ಟಿ ಎಂದಿಗೂ ಸಹಾಯ ಕೇಳಿದವರಲ್ಲ. ತಮ್ಮದೇ ಆದ ಬಂಟ್​ ಸಮುದಾಯದ ಬೆಂಬಲ ಬೆಳೆಸಲಿಲ್ಲ. ಆದರೂ ಅವರು ಎಂದೆಂದಿಗೂ ಬಂಟ್ ಸಮುದಾಯವು ಹೆಮ್ಮೆಪಡುವ ಅಧಿಕಾರಿಯಾಗಿ ಉಳಿಯುತ್ತಾರೆ. ಅವರ ಬಂಟ್​ ಸಮುದಾಯ ಸಣ್ಣ ಕಮ್ಯುನಿಟಿ ಆಗಿದೆ ಮತ್ತು ಮತ್ತು ಈಗಿರುವ ರಾಜ್ಯ ಸರ್ಕಾರದಲ್ಲಿ ರಾಜಕೀಯ ದುರ್ಬಲವಾಗಿದೆ, ಎಂದು ಶಂಕರ್​ ಬಿದರಿ ಕಿಡಿಕಾರಿದ್ದಾರೆ.

ಈಗಿರುವ ಸರ್ಕಾರದಲ್ಲಿ ಪ್ರಾಮಾಣಿಕ ಅಧಿಕಾರಿಗಳ ಬಗ್ಗೆ ಯಾವುದೇ ಕಾಳಜಿ ಮತ್ತು ಗೌರವವಿಲ್ಲ. ಪ್ರಾಮಾಣಿಕ ಅಧಿಕಾರಿಗಳನ್ನು ಯಾವಾಗಲೂ ಸ್ಮರಣೆ ಮಾಡುವಂತೆ ನೋಡಿಕೊಳ್ಳುವ ಉದ್ದೇಶ ಈ ಸರ್ಕಾರಕ್ಕೆ ಇಲ್ಲ ಅವರ ಸರ್ಕಾರದ ವಿರುದ್ಧ ಸಿಟ್ಟಾಗಿದ್ದಾರೆ.

ಈ ಹಿಂದೆ ರಾಜ್ಯದಲ್ಲಿ ಆಳ್ವಿಕೆ ಮಾಡಿದ್ದ ಮುಖ್ಯಮಂತ್ರಿಗಳಾದ ಕಡಿದಾಳ್ ಮಂಜಪ್ಪ, ನಿಜಲಿಂಗಪ್ಪ, ರಾಮಕೃಷ್ಣ ಹೆಗಡೆ, ವೀರೇಂದ್ರ ಪಾಟೀಲ್​, ಬೊಮ್ಮಾಯಿ ಪ್ರಾಮಾಣಿಕ ಅಧಿಕಾರಿಗಳನ್ನು ಗೌರವಿಸಿದ್ದರು. ಟ್ರಾಫಿಕ್​ ಹೆಡ್​ ಕಾನ್​​ಸ್ಟೇಬಲ್​ ತಿಮ್ಮಯ್ಯ ಹೆಸರನ್ನು ವೃತ್ತವೊಂದಕ್ಕೆ ಇಡುವ ಮನವಿ ಇಟ್ಟಾಗ ಮುಖ್ಯಮಂತ್ರಿ ಎಚ್​​.ಡಿ. ದೇವೇಗೌಡ ಸಮ್ಮತಿ ನೀಡಿದ್ದರು. ಆಗಿನ್ನೂ ತಿಮ್ಮಯ್ಯ ಅವರ ಶವವನ್ನೂ ಸುಟ್ಟಿರಲಿಲ್ಲ ಎಂದು ಶಂಕರ್​ ಬಿದರಿ ಹಳೆಯ ಘಟನೆಗಳನ್ನು ನೆನೆದಿದ್ದಾರೆ.

ಮಧುಕರ್​ ಶೆಟ್ಟಿ ತುಂಬಾನೇ ಒಳ್ಳೆಯವರು. ಮಗ ತಂದೆಗೆ ಎಷ್ಟು ಗೌರವ ನೀಡುತ್ತಾರೋ ಅಷ್ಟೇ ನನಗೂ ನೀಡುತ್ತಿದ್ದರು. ನನಗೆ ಇಂದು ತುಂಬಾನೇ ಬೇಸರವಾಗುತ್ತಿದೆ. ಪ್ರಾಮಾಣಿಕರು ಶೀಘ್ರವೇ ಅಧಿಕಾರಕ್ಕೆ ಬರುತ್ತಾರೆ ಮತ್ತು ಅವರು ಮಧುಕರ್​ ಶೆಟ್ಟಿಗೆ ಗೌರವ ನೀಡುತ್ತಾರೆ ಎನ್ನುವ ವಿಶ್ವಾಸ ನನ್ನದು ಎಂಬುದು ಶಂಕರ್​ ಬಿದರಿ ಮಾತು.

ಹಿರಿಯ IPS ಅಧಿಕಾರಿ ಮಧುಕರ್ ಶೆಟ್ಟಿ ನಿಧನದ ನಂತರ ನಗರದ ವರ್ತೂರು ಕೋಡಿ ವೃತ್ತಕ್ಕೆ ಅವರ ಹೆಸರು ನಾಮಕರಣ ಮಾಡಲು ಪಾಲಿಕೆಯಲ್ಲಿ ನಿರ್ಧರಿಸಲಾಗಿತ್ತು. ಸರ್ಕಾರಕ್ಕೆ ಬಿಬಿಎಂಪಿ ಪ್ರಸ್ತಾವನೆ ಸಹ ಸಲ್ಲಿಸಿತ್ತು. ಆದರೆ, ಇದೀಗ ನಗರಾಭಿವೃದ್ಧಿ ಇಲಾಖೆಯಿಂದ ಪತ್ರ ಬಂದಿದ್ದು, ಬಿಬಿಎಂಪಿ ನಿರ್ಣಯಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿಲ್ಲ ಎಂದು ತಿಳಿಸಲಾಗಿತ್ತು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ #JusticeForMadhukarShetty ಎನ್ನುವ ಹ್ಯಾಶ್​ಟ್ಯಾಗ್​ ಬಳಸಿ ಜನರು ಟ್ವೀಟ್​ ಮಾಡುತ್ತಿದ್ದಾರೆ.

ವರ್ತೂರು ಕೋಡಿ ವೃತ್ತಕ್ಕೆ ಮಧುಕರ್ ಶೆಟ್ಟಿ ಹೆಸರು: ಒಪ್ಪಿಗೆ ನೀಡಲು ಸರ್ಕಾರ ನಕಾರ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು