AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಬಾಲಾಪರಾಧಿಯಿಂದ ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ

ಸೋಂಕಿತ ಬಾಲಕನನ್ನು ಕೊವಿಡ್ ಆಸ್ಪತ್ರೆಗೆ ಕರೆದೊಯ್ಯಲು BBMP ಆರೋಗ್ಯ ಸಿಬ್ಬಂದಿ ಬಂದಿದ್ದರು. ಆರೋಗ್ಯ ಸಿಬ್ಬಂದಿಯ ಜೊತೆ ತೆರಳಲು ನಿರಾಕರಿಸಿದ ಬಾಲಕ ಗಲಾಟೆ ಶುರು ಮಾಡಿದ್ದು, ಈ ವೇಳೆ ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸಲು ಯತ್ನಸಿದ್ದಾನೆ.

ಬೆಂಗಳೂರಿನಲ್ಲಿ ಬಾಲಾಪರಾಧಿಯಿಂದ ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ
ಕೊರೊನಾ ಸೋಂಕಿತ ಬಾಲಾಪರಾಧಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿರುವುದು
preethi shettigar
|

Updated on: Apr 12, 2021 | 4:56 PM

Share

ಬೆಂಗಳೂರು: ಬಾಲಾಪರಾಧಿ ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ಮಾಡಲು ಯತ್ನಿಸಿದ ಘಟನೆ ಮಡಿವಾಳದ ಬಾಲಾಪರಾಧಿಗಳ ಪುನಶ್ಚೇತನ ಕೇಂದ್ರದಲ್ಲಿ ನಡೆದಿದೆ. ಕೇಂದ್ರದಲ್ಲಿದ್ದ ಓರ್ವ ಬಾಲಾಪರಾಧಿಗೆ ಕೊವಿಡ್ ಸೋಂಕು ದೃಢಪಟ್ಟಿತ್ತು. ಈ ಕಾರಣದಿಂದಾಗಿ ಸೋಂಕಿತ ಬಾಲಕನನ್ನು ಕೊವಿಡ್ ಆಸ್ಪತ್ರೆಗೆ ಕರೆದೊಯ್ಯಲು BBMP ಆರೋಗ್ಯ ಸಿಬ್ಬಂದಿ ಬಂದಿದ್ದರು. ಆರೋಗ್ಯ ಸಿಬ್ಬಂದಿಯ ಜೊತೆ ತೆರಳಲು ನಿರಾಕರಿಸಿದ ಬಾಲಕ ಗಲಾಟೆ ಶುರು ಮಾಡಿದ್ದು, ಈ ವೇಳೆ ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸಲು ಯತ್ನಸಿದ್ದಾನೆ.

ಸಿಕ್ಕಸಿಕ್ಕ ವಸ್ತುಗಳನ್ನು ಆರೋಗ್ಯ ಸಿಬ್ಬಂದಿಯ ಮೇಲೆ ಎಸೆದ ಯುವಕ, ಅವಾಚ್ಯ ಶಬ್ದಗಳಿಂದ ಆರೋಗ್ಯ ಸಿಬ್ಬಂದಿಯನ್ನು ನಿಂದಿಸಿದ್ದಾನೆ. ಬಳಿಕ ಸ್ಥಳಕ್ಕೆ ಬಂದ ಪೊಲೀಸರು ಸೋಂಕಿತ ಬಾಲಕನಿಗೆ 2ರಿಂದ 3 ಗಂಟೆಗಳ ಕಾಲ ಮನವೊಲಿಸಿದ್ದಾರೆ. ಭದ್ರತೆಯೊಂದಿಗೆ ಆಂಬುಲೆನ್ಸ್‌ನಲ್ಲಿ ಕರೆದೊಯ್ದ ಸಿಬ್ಬಂದಿಗಳು ಬೆಂಗಳೂರಿನ ಹಜ್ ಭವನದಲ್ಲಿ ಸೋಂಕಿತ ಬಾಲಕನಿಗೆ ಚಿಕಿತ್ಸೆ ನೀಡಿದ್ದಾರೆ.

ಚೀನಾದಲ್ಲಿ ಬಾಲಾಪರಾಧಿಗಳ ವಯೋಮಿತಿ 14 ರಿಂದ 12 ವರ್ಷಕ್ಕೆ ಇಳಿಕೆ ಚೀನಾ ದೇಶ ತನ್ನ ಅಪರಾಧ ಕಾನೂನಿನಲ್ಲಿ ಕೆಲ ಬದಲಾವಣೆಗಳನ್ನು ತರಲು ಮುಂದಾಗಿತ್ತು. ಅಪ್ರಾಪ್ತ ವಯಸ್ಸಿನ ಮಕ್ಕಳಿಂದ ನಡೆಯುತ್ತಿರುವ ಅಪರಾಧಗಳನ್ನು ತಡೆಯುವ ನಿಟ್ಟಿನಲ್ಲಿ ಕಾನೂನು ತಿದ್ದುಪಡಿ ಮಾಡಲಾಗಿತ್ತು. ಈ ಮೊದಲು 14 ವರ್ಷಗಳಿಗಿಂತ ದೊಡ್ಡವರು ಅಪರಾಧ ಮಾಡಿದರೆ ಅಂಥವರನ್ನು ಅಪರಾಧಿ ಎಂದು ಪರಿಗಣಿಸಲಾಗುತ್ತಿತ್ತು. ನಂತರ ಅಪರಾಧದ ವಯಸ್ಸಿನ ಮಿತಿಯನ್ನು 12 ವರ್ಷಗಳಿಗೆ ಇಳಿಕೆ ಮಾಡಲಾಗಿದೆ.

ಚೀನಾದ ಕೆಲ ಅಪರಾಧಗಳಿಗೆ ಈ ನಿಯಮ ಅನ್ವಯವಾಗಲಿದೆ. ಉದ್ದೇಶಪೂರ್ವಕ ಹತ್ಯೆ, ಹಲ್ಲೆಯಿಂದ ಆದ ಸಾವು ಅಥವಾ ಅಂಗವೈಕಲ್ಯ, ಹಿಂಸಾಚಾರ ಕೃತ್ಯಗಳು ಅಪರಾಧವೆಂದು ಪರಿಗಣನೆಯಾಗಲಿದೆ. ಈ ಅಪರಾಧಗಳಿಗೆ ಹೊರತಾಗಿ ಇತರ ಕೃತ್ಯಗಳನ್ನು ಎಸಗಿದರೆ, ಅಂತಹ ಮಕ್ಕಳಿಗೆ ಶಿಕ್ಷೆ ನೀಡಲಾಗುವುದಿಲ್ಲ. ಬದಲಾಗಿ, ಅವರಿಗೆ ತಪ್ಪನ್ನು ತಿದ್ದಿಕೊಳ್ಳುವಂತೆ ಶಿಕ್ಷಣ ನೀಡಲಾಗುವುದು ಎಂದು ತಿಳಿಸಲಾಗಿತ್ತು.

ಈ ಮೊದಲು, ಚೀನಾದಲ್ಲಿ 14 ರಿಂದ 16 ವರ್ಷದವರೆಗಿನ ಮಕ್ಕಳಿಗೆ ಕ್ರಿಮಿನಲ್ ಅಪರಾಧದ ಶಿಕ್ಷೆ ಅನ್ವಯವಾಗುತ್ತಿತ್ತು. ಈಗ ಮಕ್ಕಳ ಅಪರಾಧದ ವಯಸ್ಸನ್ನು 12 ರಿಂದ 14 ವರ್ಷದೊಳಗೆ ತರಲಾಗಿದೆ. ಚೀನಾದಲ್ಲಿ ಇತ್ತೀಚೆಗೆ ಕೆಲವಾರು ಬಾಲಾಪರಾಧಗಳು ದಾಖಲಾದ ಹಿನ್ನೆಲೆಯಲ್ಲಿ ಈ ಕ್ರಮವನ್ನು ಕೈಗೊಳ್ಳಲಾಗಿದೆ.

ಇದನ್ನೂ ಓದಿ:

West Bengal Elections 2021: ಟಿಎಂಸಿ ಕಾರ್ಯಕರ್ತರಿಂದ ಹಲ್ಲೆಗೊಳಗಾಗಿದ್ದರು ಎನ್ನಲಾದ ಬಿಜೆಪಿ ಕಾರ್ಯಕರ್ತನ 85 ವರ್ಷದ ವೃದ್ಧತಾಯಿ ನಿಧನ

ಹೋಲಾ ಮೊಹಲ್ಲಾ ಮೆರವಣಿಗೆ ನಿರಾಕರಿಸಿದ್ದಕ್ಕೆ ರೊಚ್ಚಿಗೆದ್ದ ಸಿಖ್​ ಯುವಕರು; ಕತ್ತಿ ಹಿಡಿದು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ, ವಾಹನಗಳೆಲ್ಲ ಪುಡಿಪುಡಿ

((juvenile delinquent attacked on health worker in Bangalore)

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!