AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ಷಕ್ಕೆ ಎರಡು ಬಾರಿ ತುಂಬುವ ರಾಜ್ಯದ ಏಕೈಕ ಜಲಾಶಯ ಕಬಿನಿಯಲ್ಲಿ ದಿನೇ ದಿನೇ ನೀರಿನ ಮಟ್ಟ ಕುಸಿತ

ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದಲ್ಲಿ ದಿನೇ ದಿನೇ ನೀರಿನ ಮಟ್ಟ ಕುಸಿಯುತ್ತಿದೆ. ಕಬಿನಿ ಜಲಾಶಯದಿಂದ ಬೆಂಗಳೂರು, ಮೈಸೂರಿಗೆ ನೀರು ಪೂರೈಕೆಯಾಗುತ್ತೆ. 70 ಅಡಿಗೆ ಜಲಾಶಯದ ನೀರಿನ ಮಟ್ಟ ಕುಸಿದಿದೆ. ಇದು 84 ಅಡಿ ಗರಿಷ್ಠ ಸಾಮರ್ಥ್ಯದ ಜಲಾಶಯ.

ವರ್ಷಕ್ಕೆ ಎರಡು ಬಾರಿ ತುಂಬುವ ರಾಜ್ಯದ ಏಕೈಕ ಜಲಾಶಯ ಕಬಿನಿಯಲ್ಲಿ ದಿನೇ ದಿನೇ ನೀರಿನ ಮಟ್ಟ ಕುಸಿತ
ಕಬಿನಿ
ದಿಲೀಪ್​, ಚೌಡಹಳ್ಳಿ
| Edited By: |

Updated on: Feb 26, 2024 | 12:52 PM

Share

ಮೈಸೂರು, ಫೆ.26: ಸರಿಯಾದ ಪ್ರಮಾಣದಲ್ಲಿ ಮಳೆ ಆಗದ ಹಿನ್ನಲೆ ರಾಜ್ಯದಲ್ಲಿ ನೀರಿನ ಕೊರತೆ ಉಂಟಾಗಿದೆ. ಬೇಸಿಗೆ ಆರಂಭಕ್ಕೂ ಮುನ್ನವೇ ರಾಜ್ಯದ ಡ್ಯಾಂಗಳ ನೀರಿನ ಮಟ್ಟ ಕಡಿಮೆ ಆಗಿದೆ. ಮೈಸೂರು ಜಿಲ್ಲೆಯ ಕಬಿನಿ (Kabini) ಜಲಾಶಯದಲ್ಲಿ ದಿನೇ ದಿನೇ ನೀರಿನ ಮಟ್ಟ ಕುಸಿದಿದೆ. ಸದ್ಯ 70 ಅಡಿಗೆ ಜಲಾಶಯದ ನೀರಿನ ಮಟ್ಟ ಕುಸಿದಿದೆ. ಇದು 84 ಅಡಿ ಗರಿಷ್ಠ ಸಾಮರ್ಥ್ಯದ ಜಲಾಶಯ. ಸದ್ಯ ಕಬಿನಿ ಜಲಾಶಯದಲ್ಲಿ 12 ಟಿಎಂಸಿ ನೀರು ಸಂಗ್ರಹಣೆಯಾಗಿದೆ.

19.52TMC ನೀರು ಸಂಗ್ರಹಣೆ ಸಾಮರ್ಥ್ಯ ಹೊಂದಿರುವ, ವರ್ಷಕ್ಕೆ ಎರಡು ಬಾರಿ ತುಂಬುವ ರಾಜ್ಯದ ಏಕೈಕ ಜಲಾಶಯ ಕಬಿಸಿ. ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದಲ್ಲಿ ಕುಡಿಯಲು‌ ಕೇವಲ 8.5 ಟಿಎಂಸಿ ನೀರು ಮಾತ್ರ ಲಭ್ಯವಿದೆ. ಉಳಿದ 3.5TMC ನೀರು ಡೆಡ್ ಸ್ಟೊರೇಜ್. ಕಬಿನಿ ಜಲಾಶಯದಿಂದ ಬೆಂಗಳೂರು, ಮೈಸೂರಿಗೆ ನೀರು ಪೂರೈಕೆಯಾಗುತ್ತೆ. ಕಬಿನಿ ಜಲಾಶಯದಿಂದ ಪ್ರತಿದಿನ 500 ಕ್ಯೂಸೆಕ್ ನೀರು ಬಿಡುಗಡೆಯಾಗುತ್ತೆ. ಬೆಂಗಳೂರಿಗೆ 300 ಕ್ಯೂಸೆಕ್, ಮೈಸೂರು, ಚಾಮರಾಜನಗರಕ್ಕೆ 200 ಕ್ಯೂಸೆಕ್ ನೀರು ಬಿಡುಗಡೆ ಆಗುತ್ತೆ. ಸದ್ಯ ಜೂನ್ ತಿಂಗಳವರೆಗೆ ಕುಡಿಯುವ ನೀರಿಗೆ ತೊಂದರೆ ಇಲ್ಲ. ಆದರೆ ಜೂನ್ ನಂತರ ನೀರಿನ ಸಮಸ್ಯೆ ಎದುರಾಗಬಹುದು.

ಇದನ್ನೂ ಓದಿ: Drinking Water Crisis; ಚಿಕ್ಕೋಡಿಯಲ್ಲಿ ಜೀವ ಪಣಕ್ಕಿಟ್ಟು ಮೆಟ್ಟಿಲ್ಲಿಲ್ಲದ ಬಾವಿಗೆ ಇಳಿದು ನೀರು ತರುವ ಸ್ಥಿತಿ

ತುಂಗಭದ್ರಾ ಜಲಾಶಯದಲ್ಲಿ ನೀರು ಖಾಲಿ ಖಾಲಿ

ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಬಳಿ, ತುಂಗಭದ್ರಾ ನದಿಗೆ ಅಡ್ಡಲಾಗಿ ಡ್ಯಾಂ ನಿರ್ಮಿಸಲಾಗಿದೆ. ದಶಕಗಳ ಹಿಂದೆಯೇ ನಿರ್ಮಾಣವಾಗಿರುವ ಈ ಡ್ಯಾಂ, ಕೊಪ್ಪಳ, ರಾಯಚೂರು, ಬಳ್ಳಾರಿ, ವಿಜಯನಗರ ಜಿಲ್ಲೆಯ ಜನರಿಗೆ ಕುಡಿಯುವ ನೀರು ಮತ್ತು ಕೃಷಿಗೆ ಪ್ರಮುಖ ಆಧಾರವಾಗಿದೆ. ಅನೇಕ ಕಾರ್ಖಾನೆಗಳಿಗೆ ಕೂಡಾ ಇದೇ ನೀರನ್ನು ಬಳಸಲಾಗುತ್ತಿದೆ. ಕಳೆದ ಮೂರ್ನಾಲ್ಕು ವರ್ಷ ತುಂಬಿ ಹರಿದಿದ್ದ ತುಂಗಭದ್ರಾ ನದಿ, ಈ ಬಾರಿ ಬರಗಾಲದ ಹೊಡೆತಕ್ಕೆ ಸಿಲುಕಿದೆ. ಇದರ ಪರಿಣಾಮ, ಈಗಾಗಲೇ ತುಂಗಭದ್ರಾ ನದಿ ಬರಿದಾಗಿದ್ದು, ಖಾಲಿ ಖಾಲಿಯಾಗಿದೆ. ಇನ್ನೊಂದೆಡೆ ಡ್ಯಾಂ ಕೂಡಾ ಬೇಸಿಗೆ ಆರಂಭಕ್ಕೂ ಮುನ್ನವೇ ಖಾಲಿಯಾಗುವ ಹಂತಕ್ಕೆ ಬಂದಿದೆ. ಇದು ನಾಲ್ಕು ಜಿಲ್ಲೆಯ ಜನರು ಕಂಗಾಲಾಗುವಂತೆ ಮಾಡಿದೆ. ಕೊಪ್ಪಳ,ರಾಯಚೂರು, ಬಳ್ಳಾರಿ, ವಿಜಯನಗರ ಜಿಲ್ಲೆಗಳು ಬಿಸಿಲನಾಡು ಅಂತ ಕರೆಸಿಕೊಳ್ಳುವ ಪ್ರದೇಶ. ಬೇಸಿಗೆಯಲ್ಲಿ ಈ ಭಾಗದಲ್ಲಿ ಎಷ್ಟು ನೀರು ಇದ್ರು ಕಡಿಮೆಯೇ. ಆದ್ರೆ ಇದೇ ಭಾಗದಲ್ಲಿ ಇದೀಗ ಬೇಸಿಗೆ ಆರಂಭಕ್ಕೂ ಮುನ್ನವೇ ಜಲ ತತ್ವಾರ ಆರಂಭವಾಗಿದೆ. ಇದರ ನಡುವೆ ಡ್ಯಾಂ ಖಾಲಿಯಾಗುತ್ತಿರುವುದು ಜನರ ಆತಂಕವನ್ನು ಹೆಚ್ಚಿಸಿದೆ. ಇನ್ನು 105.79 ಟಿಎಂಸಿ ನೀರು ಸಾಮರ್ಥ್ಯದ ತುಂಗಭದ್ರಾ ಜಲಾಶಯದಲ್ಲಿ ಸದ್ಯ ಇರೋದು ಕೇವಲ 9.11 ಟಿಎಂಸಿ ನೀರು ಮಾತ್ರ. ಇದೇ ಸಮಯದಲ್ಲಿ ಕಳೆದ ವರ್ಷ ಡ್ಯಾಂ ನಲ್ಲಿ 34.22 ಟಿಎಂಸಿ ನೀರು ಇತ್ತು. ಆದ್ರೆ ಈ ಬಾರಿ ಬರಗಾಲದಿಂದ ಡ್ಯಾಂ ಒಮ್ಮೆಯೂ ಸಂಪೂರ್ಣವಾಗಿ ತುಂಬಿಲ್ಲಾ. ಡ್ಯಾಂ ನೀರು ಖಾಲಿಯಾಗುವ ಹಂತಕ್ಕೆ ಬಂದಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Dileep CP
Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್