AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೃದ್ಧೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಇತರರಿಗೂ ಮಾದರಿಯಾದ ಹಾವೇರಿಯ ಕಾಗಿನೆಲೆ ಪಿಎಸ್ಐ

ವೃದ್ಧೆ ನೋಡುವುದಕ್ಕೆ ಹುಚ್ಚಿಯಂತಾಗಿದ್ದು, ಅನಾಥಳಾಗಿ ವಾಸ ಮಾಡುತ್ತಿದ್ದಳು. ಇದನ್ನು ಗಮನಿಸಿ ಪಿಎಸ್ಐ ಸರ್ ಗಮನಕ್ಕೆ ಬಂದಾಗ ಅವರು ತಕ್ಷಣಕ್ಕೆ ಸ್ಥಳಕ್ಕೆ ದಾವಿಸಿ ವೃದ್ಧೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿದ್ದಾರೆ. ಪಿಎಸ್ಐ ಅವರ ಕಾರ್ಯ ಶ್ಲಾಘನೀಯ ಎಂದು ಸ್ಥಳೀಯರಾದ ಉಮೇಶ್​ ಎಂಬುವವರು ಮೆಚ್ಚುಗೆ ವ್ಯಕ್ತಪಡಿಸಿದರು.

ವೃದ್ಧೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಇತರರಿಗೂ ಮಾದರಿಯಾದ ಹಾವೇರಿಯ ಕಾಗಿನೆಲೆ ಪಿಎಸ್ಐ
ವೃದ್ಧೆಯನ್ನು ವಿಚಾರಿಸುತ್ತಿರುವ ಪಿಎಸ್ಐ ಡಿ.ಕೆ.ಬಳಿಗಾರ
Follow us
sandhya thejappa
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Mar 09, 2021 | 2:34 PM

ಹಾವೇರಿ: ಖಾಕಿ ತೊಟ್ಟಿರುವ ಪೊಲೀಸರು ಅಂದರೆ ಇತ್ತೀಚಿನ ದಿನಗಳಲ್ಲಿ ಮಾನವೀಯತೆ ಇಲ್ಲದವರು ಎಂಬ ಭಾವನೆ ಮೂಡುವಂತಾಗಿದೆ. ಆದರೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕಾಗಿನೆಲೆ ಪಿಎಸ್ಐ ಖಾಕಿಯಲ್ಲೂ ಮಾನವೀಯತೆ ಇದೆ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ಕಾಗಿನೆಲೆ ಗ್ರಾಮದಲ್ಲಿ ಅರವತ್ತೈದು ವರ್ಷದ ವೃದ್ಧೆಯೊಬ್ಬಳು ಅನಾಥವಾಗಿ ಎಲ್ಲೆಂದರಲ್ಲಿ ವಾಸ ಮಾಡುತ್ತಿದ್ದಾರೆ ಎಂದು ಮಾಹಿತಿದಾರರೊಬ್ಬರು ಪಿಎಸ್ಐಗೆ ತಿಳಿಸುತ್ತಾರೆ. ಅದರಂತೆ ತಕ್ಷಣ ಸ್ಥಳಕ್ಕೆ ದಾವಿಸಿದ ಪಿಎಸ್ಐ ಡಿ.ಕೆ.ಬಳಿಗಾರ ವೃದ್ಧೆಯ ಮಾಹಿತಿ ಕಲೆ ಹಾಕಿದರು.

ಅನಾಥವಾಗಿದ್ದ ವೃದ್ಧೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿದರು. ಅರವತ್ತೈದು ವರ್ಷದ ವೃದ್ಧೆ ಗೌರಮ್ಮನನ್ನು ಕಂಡು ವಿಚಾರಿಸಿದ ಪಿಎಸ್ಐ ಕೂಡಲೆ ಖಾಸಗಿ ವಾಹನದ ವ್ಯವಸ್ಥೆ ಮಾಡಿ ವೃದ್ಧೆಯನ್ನು ಶಿಗ್ಗಾಂವಿ ಪಟ್ಟಣದಲ್ಲಿರುವ ವೃದ್ಧಾಶ್ರಮಕ್ಕೆ ಸೇರಿಸಿದರು. ಗೌರಮ್ಮಳ ಪತಿ ಹಲವು ವರ್ಷಗಳ ಹಿಂದೆ ಮೃತಪಟ್ಟಿದ್ದಾರೆ. ಪತಿಯ ಮರಣದ ನಂತರ ಗೌರಮ್ಮ ಅಲ್ಲಿ ಇಲ್ಲಿ ವಾಸ ಮಾಡಿಕೊಂಡು ಅನಾಥೆಯಂತೆ ಜೀವನ ಸಾಗಿಸುತ್ತಿದ್ದಳು. ಮಾಹಿತಿದಾರರೊಬ್ಬರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಧಾವಿಸಿದ ಪಿಎಸ್ಐ ಬಳಿಗಾರ ವೃದ್ಧೆಯನ್ನು ವೃದ್ಧಾಶ್ರಮಕ್ಕೆ ಸೇರಿಸುವ ಕೆಲಸವನ್ನು ಮಾಡಿದ್ದಾರೆ.

ಮಕ್ಕಳಿದ್ದರು ಅನಾಥೆ ಮೂಲತಃ ತಿಮ್ಮಾಪುರ ಗ್ರಾಮದವಳಾದ ವೃದ್ಧೆ ಗೌರಮ್ಮಳ ಪತಿ ಕಳೆದ ಕೆಲವು ವರ್ಷಗಳ ಹಿಂದೆ ಮೃತಪಟ್ಟಿದ್ದಾರೆ. ಗೌರಮ್ಮಳಿಗೆ ಇಬ್ಬರು ಗಂಡು ಮತ್ತು ಒಬ್ಬ ಹೆಣ್ಣು ಮಗಳು ಸೇರಿದಂತೆ ಒಟ್ಟು ಮೂವರು ಮಕ್ಕಳಿದ್ದಾರೆ. ಆದರೆ ಯಾವುದೋ ಕಾರಣಕ್ಕೆ ಗೌರಮ್ಮಳೆ ಮನೆಬಿಟ್ಟು ಬಂದು ಅಲ್ಲಿ ಇಲ್ಲಿ ವಾಸ ಮಾಡಿಕೊಂಡಿದ್ದಾಳೋ ಅಥವಾ ಮಕ್ಕಳೆ ವೃದ್ಧೆಯನ್ನು ಆರೈಕೆ ಮಾಡಲಾಗದೆ ಮನೆಯಿಂದ ಹೊರಗೆ ಹಾಕಿದ್ದಾರೋ ಗೊತ್ತಿಲ್ಲ. ಗೌರಮ್ಮ ಮಾತ್ರ ಥೇಟ್ ಅನಾಥಳಂತೆ ಕಾಗಿನೆಲೆ ಗ್ರಾಮ ಸೇರಿದಂತೆ ಅಲ್ಲಲ್ಲಿ ವಾಸವಾಗಿದ್ದಳು.

ಅನಾಥವಾಗಿ ಕಂಡ ವೃದ್ಧೆ

ವೃದ್ಧಾಶ್ರಮಕ್ಕೆ ಸೇರಿಸಿದ ಕಾಗಿನೆಲೆ ಪಿಎಸ್ಐ ಡಿ.ಕೆ.ಬಳಿಗಾರ

ವೃದ್ಧೆ ನೋಡುವುದಕ್ಕೆ ಹುಚ್ಚಿಯಂತಾಗಿದ್ದು, ಅನಾಥಳಾಗಿ ವಾಸ ಮಾಡುತ್ತಿದ್ದಳು. ಇದನ್ನು ಗಮನಿಸಿ ಪಿಎಸ್ಐ ಸರ್ ಗಮನಕ್ಕೆ ಬಂದಾಗ ಅವರು ತಕ್ಷಣಕ್ಕೆ ಸ್ಥಳಕ್ಕೆ ದಾವಿಸಿ ವೃದ್ಧೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿದ್ದಾರೆ. ಪಿಎಸ್ಐ ಅವರ ಕಾರ್ಯ ಶ್ಲಾಘನೀಯ ಎಂದು ಸ್ಥಳೀಯರಾದ ಉಮೇಶ್​ ಎಂಬುವವರು ಮೆಚ್ಚುಗೆ ವ್ಯಕ್ತಪಡಿಸಿದರು.

ತಂದೆ, ತಾಯಿ ದೇವರಿಗೆ ಸಮಾನ. ಪ್ರತಿಯೊಬ್ಬರು ತಂದೆ, ತಾಯಿಯರ ಪಾಲನೆ ಪೋಷಣೆ ಮಾಡಬೇಕು. ಇತ್ತೀಚಿನ ದಿನಗಳಲ್ಲಿ ಹೆತ್ತ ತಂದೆ, ತಾಯಿಯರಿಗೆ ತುತ್ತು ಅನ್ನ ಹಾಕಲು ಕೆಲವು ಮಕ್ಕಳು ಹಿಂದೇಟು ಹಾಕುತ್ತಿರುವುದು ಕಳವಳಕಾರಿವಿಚಾರ. ಯಾರೂ ಕೂಡ ಹೆತ್ತವರನ್ನು ಮನೆಯಿಂದ ಹೊರಗೆ ಹಾಕುವ ಕೆಲಸ ಮಾಡಬಾರದು. ವೃದ್ಧ ತಂದೆ ತಾಯಿಗಳನ್ನು ಆರೈಕೆ ಮಾಡಬೇಕಾದದ್ದು ಪ್ರತಿಯೊಬ್ಬರ ಮಕ್ಕಳ ಕರ್ತವ್ಯ ಎಂದು ವೃದ್ಧಾಶ್ರಮಕ್ಕೆ ಸೇರಿಸಿದ ಕಾಗಿನೆಲೆ ಪಿಎಸ್ಐ ಡಿ.ಕೆ.ಬಳಿಗಾರ ಹೇಳಿದರು.

ಇದನ್ನೂ ಓದಿ

ಹಸುಗಳ ಹಾಲು ಕರೆಯುವ ಸ್ಪರ್ಧೆ: ನಾ ಮುಂದು ತಾ ಮುಂದು ಎಂದು ಬಂದ ಪಶುಪಾಲಕರು

ಬೆಳೆ ಕಳೆದುಕೊಳ್ಳುವ ಭೀತಿಯಲ್ಲಿ ರಾಯಚೂರು ರೈತರು: ನೀರು ಬಿಡುಗಡೆಗೆ ರೈತರ ಆಗ್ರಹ

Published On - 11:39 am, Tue, 9 March 21

ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಸೇನಾ ಭಾಷೆಯಲ್ಲಿ ಡಿ ಡೇ, ಎಚ್ ಫ್ಯಾಕ್ಟರ್ ಅಂದರೆ ಏನು? ಇಲ್ಲಿದೆ ನೋಡಿ
ಸೇನಾ ಭಾಷೆಯಲ್ಲಿ ಡಿ ಡೇ, ಎಚ್ ಫ್ಯಾಕ್ಟರ್ ಅಂದರೆ ಏನು? ಇಲ್ಲಿದೆ ನೋಡಿ
ಡಿ ಡೇ ಮತ್ತು ಹೆಚ್ ಫ್ಯಾಕ್ಟರ್ ಪದಗಳ ವಿವರಣೆ ನೀಡಿದ ಕರ್ನಲ್ ಹರಿ
ಡಿ ಡೇ ಮತ್ತು ಹೆಚ್ ಫ್ಯಾಕ್ಟರ್ ಪದಗಳ ವಿವರಣೆ ನೀಡಿದ ಕರ್ನಲ್ ಹರಿ