AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

8 ತಿಂಗಳ ಬಳಿಕ ಕಲಬುರಗಿ-ಬೆಂಗಳೂರು ವಿಮಾನ ಸಂಚಾರ ನಾಳೆಯಿಂದ ಆರಂಭ

Kalaburagi Bengaluru Flight Service: ಕಲಬುರಗಿ-ಬೆಂಗಳೂರು ವಿಮಾನ ಸಂಚಾರ ಜೂನ್ 10 ರಿಂದ ಪುನರಾರಂಭಗೊಳ್ಳುತ್ತಿದೆ. ಸ್ಟಾರ್ ಏರ್ ಸಂಸ್ಥೆಯ 76 ಸೀಟುಗಳ ವಿಮಾನ ವಾರದ ಏಳೂ ದಿನ ಸಂಚಾರ ಮಾಡಲಿದೆ. ಇದರೊಂದಿಗೆ, ಕಳೆದ ಎಂಟು ತಿಂಗಳಿನಿಂದ ಸ್ಥಗಿತಗೊಂಡಿದ್ದ ವಿಮಾನ ಸಂಚಾರ ಪುನರ್ ಆರಂಭವಾದಂತಾಗಲಿದೆ.

8 ತಿಂಗಳ ಬಳಿಕ ಕಲಬುರಗಿ-ಬೆಂಗಳೂರು ವಿಮಾನ ಸಂಚಾರ ನಾಳೆಯಿಂದ ಆರಂಭ
ಕಲಬುರಗಿ ವಿಮಾನ ನಿಲ್ದಾಣImage Credit source: tv9
ಗಣಪತಿ ಶರ್ಮಾ
|

Updated on: Jun 09, 2026 | 7:44 AM

Share

ಕಲಬುರಗಿ, ಜೂನ್ 9: ಕಲಬುರಗಿ (Kalaburagi) ಮತ್ತು ರಾಜಧಾನಿ ಬೆಂಗಳೂರು ನಡುವೆ ಸಂಚರಿಸುವ ವಿಮಾನ ಪ್ರಯಾಣಿಕರಿಗೆ ಕೊನೆಗೂ ಸಂತಸದ ಸುದ್ದಿ ಸಿಕ್ಕಿದೆ. ಕಳೆದ 8 ತಿಂಗಳುಗಳಿಂದ ಸ್ಥಗಿತಗೊಂಡಿದ್ದ ಕಲಬುರಗಿ-ಬೆಂಗಳೂರು ನಡುವಿನ ವಿಮಾನ ಸೇವೆ ಜೂನ್ 10ರಿಂದ (ನಾಳೆಯಿಂದ) ಅಧಿಕೃತವಾಗಿ ಪುನರಾರಂಭಗೊಳ್ಳಲಿದೆ ಎಂದು ಕಲಬುರಗಿ ವಿಮಾನ ನಿಲ್ದಾಣದ ನಿರ್ದೇಶಕ ಕಿಶೋರ್ ಕಿಲ್ಲಂಪಳ್ಳಿ ತಿಳಿಸಿದ್ದಾರೆ. ರಾಜ್ಯ ಸರ್ಕಾರವು ಆರ್ಥಿಕ ನೆರವು ವಿಸ್ತರಿಸಿದ ಬೆನ್ನಲ್ಲೇ ಸ್ಟಾರ್ ಏರ್ (Star Air) ಸಂಸ್ಥೆಯು ವಾರದ ಏಳೂ ದಿನಗಳೂ ಈ ಮಾರ್ಗದಲ್ಲಿ ವಿಮಾನ ಯಾನ ಸೇವೆ ನೀಡಲು ಮುಂದೆ ಬಂದಿದೆ.

ಮುಖ್ಯಾಂಶಗಳು

  • ಜೂನ್ 10ರಿಂದ ವಿಮಾನ ಸೇವೆ ಪುನರಾರಂಭ.
  • ವಾರದ ಏಳೂ ದಿನ ಸ್ಟಾರ್ ಏರ್ ಸಂಚಾರ.
  • ರನ್‌ವೇ ನವೀಕರಣ, ಪ್ರಯಾಣಿಕರಿಗೆ ಹೆಚ್ಚಿನ ಸೌಲಭ್ಯ.

ಕಲಬುರಗಿ ಬೆಂಗಳೂರು ವಿಮಾನ ಸಂಚಾರದ ಟೈಮಿಂಗ್ಸ್

ಈ ಎರಡು ನಗರಗಳ ನಡುವೆ ಸ್ಟಾರ್ ಏರ್ ಸಂಸ್ಥೆಯ 76 ಆಸನಗಳ ಸಾಮರ್ಥ್ಯದ ‘ಎಂಬ್ರೇಯರ್ 175 (E175)’ ಅತ್ಯಾಧುನಿಕ ವಿಮಾನ ಸಂಚರಿಸಲಿದೆ. ಪ್ರತಿದಿನ ಬೆಳಗ್ಗೆ 6:30ಕ್ಕೆ ಬೆಂಗಳೂರಿನಿಂದ ಹೊರಡುವ ವಿಮಾನವು 7:40ಕ್ಕೆ ಕಲಬುರಗಿ ತಲುಪಲಿದೆ. ತದನಂತರ 30 ನಿಮಿಷಗಳ ಬಿಡುವಿನ ನಂತರ, ಬೆಳಗ್ಗೆ 8:10ಕ್ಕೆ ಕಲಬುರಗಿಯಿಂದ ಹೊರಟು ಬೆಂಗಳೂರಿಗೆ ವಾಪಸ್ ಆಗಲಿದೆ. ಈ ಮುಂಜಾನೆಯ ಸಮಯದ ಸೇವೆಯು ಉದ್ಯಮಿಗಳು, ಸರ್ಕಾರಿ ಅಧಿಕಾರಿಗಳು ಹಾಗೂ ತುರ್ತು ಕೆಲಸದ ನಿಮಿತ್ತ ರಾಜಧಾನಿಗೆ ತೆರಳುವ ಸಾರ್ವಜನಿಕರಿಗೆ ಭಾರಿ ಅನುಕೂಲ ಕಲ್ಪಿಸಲಿದೆ.

8 ತಿಂಗಳ ಸುದೀರ್ಘ ಕಾಯುವಿಕೆಗೆ ತೆರೆ

ಕಲಬುರಗಿ ಮತ್ತು ಬೆಂಗಳೂರು ನಡುವೆ ಕೊನೆಯ ವಿಮಾನ ಸಂಚಾರ 2025 ರ ಅಕ್ಟೋಬರ್ 8 ರಂದು ಸಂಚರಿಸಿತ್ತು. ಆ ಬಳಿಕ ವಿಮಾನ ನಿಲ್ದಾಣದ ಸೇವೆ ಕೇವಲ ಹೆಲಿಕಾಪ್ಟರ್‌ಗಳು ಮತ್ತು ವಿಶೇಷ ಚಾರ್ಟರ್ಡ್ ವಿಮಾನಗಳಿಗಷ್ಟೇ ಸೀಮಿತವಾಗಿತ್ತು. ಎರಡು ವಾರಗಳ ಹಿಂದಷ್ಟೇ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯದ (DGCA) ಅಧಿಕಾರಿಗಳು ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ, ತಾಂತ್ರಿಕ ಸಿದ್ಧತೆಗಳನ್ನು ಸಮಗ್ರವಾಗಿ ಪರಿಶೀಲಿಸಿ ಕಾರ್ಯಾಚರಣೆಗೆ ಗ್ರೀನ್ ಸಿಗ್ನಲ್ ನೀಡಿದ್ದರು. ವಿಮಾನ ಸಂಚಾರ ಇಲ್ಲದಿದ್ದರೂ ನಿಲ್ದಾಣದ 3 ಕಿಲೋಮೀಟರ್ ಉದ್ದದ ರನ್‌ವೇಯನ್ನು ಸಂಪೂರ್ಣವಾಗಿ ನವೀಕರಿಸಲಾಗಿದ್ದು, ಸುತ್ತಮುತ್ತಲಿನ 9 ಕಿಲೋಮೀಟರ್ ರಸ್ತೆಯನ್ನು ಅಭಿವೃದ್ಧಿಪಡಿಸಿ ಬೀದಿದೀಪಗಳನ್ನು ಅಳವಡಿಸಲಾಗಿದೆ.

ವಿಮಾನ ನಿಲ್ದಾಣಕ್ಕೆ ವಿಶೇಷ ಬಸ್ ಸೇವೆ ಹಾಗೂ ‘ಫ್ಲೈಬ್ರರಿ’!

ವಿಮಾನ ನಿಲ್ದಾಣಕ್ಕೆ ಬರುವ ಪ್ರಯಾಣಿಕರ ಅನುಕೂಲಕ್ಕಾಗಿ ಕಲಬುರಗಿ ನಗರದಿಂದ ಮುಂಜಾನೆ 5:30ಕ್ಕೆ ಹಾಗೂ ವಿಮಾನ ನಿಲ್ದಾಣದಿಂದ ಬೆಳಗ್ಗೆ 8:15ಕ್ಕೆ ವಿಶೇಷ ಬಸ್ ಸೌಕರ್ಯ ಕಲ್ಪಿಸುವಂತೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ (KKRTC) ಕೋರಲಾಗಿದೆ. ಇದರೊಂದಿಗೆ ಪ್ರಯಾಣಿಕರ ಜ್ಞಾನಾರ್ಜನೆಗಾಗಿ ವಿಮಾನ ನಿಲ್ದಾಣದಲ್ಲಿ ‘ಫ್ಲೈಬ್ರರಿ (ಗ್ರಂಥಾಲಯ)’ ಸೌಲಭ್ಯವನ್ನು ಕೂಡ ಆರಂಭಿಸಲಾಗುತ್ತಿದೆ.

ಇದನ್ನೂ ಓದಿ: ಆರೇ ವರ್ಷಕ್ಕೇ ಕಲಬುರಗಿ ಬೆಂಗಳೂರು ವಿಮಾನ ಸಂಚಾರ ಬಂದ್‌! ಸ್ತಬ್ಧವಾಯ್ತು ಕಲಬುರಗಿ ವಿಮಾನ ನಿಲ್ದಾಣ

2020 ರಿಂದ 2025 ರ ಅವಧಿಯಲ್ಲಿ ಈ ಮಾರ್ಗದಲ್ಲಿ ಒಟ್ಟು 5,792 ಬಾರಿ ವಿಮಾನ ಸಂಚಾರ ನಡೆದಿದ್ದು, 2.83 ಲಕ್ಷಕ್ಕೂ ಅಧಿಕ ಪ್ರಯಾಣಿಕರು ಪ್ರಯಾಣ ಬೆಳೆಸಿದ್ದಾರೆ. ಸದ್ಯ ಸ್ಥಳೀಯರಿಂದ ಮುಂಬೈ, ದೆಹಲಿ, ತಿರುಪತಿ ಹಾಗೂ ಗೋವಾ ನಗರಗಳಿಗೂ ವಿಮಾನ ಸಂಪರ್ಕ ಕಲ್ಪಿಸುವಂತೆ ಬೇಡಿಕೆ ಕೇಳಿಬಂದಿದ್ದು, ವಿಮಾನಯಾನ ಸಂಸ್ಥೆಗಳು ಮುಂದೆ ಬಂದರೆ ಆ ಮಾರ್ಗಗಳಲ್ಲೂ ಸೇವೆ ಆರಂಭಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು