AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನರ ಮನೆ ಬಾಗಿಲಿಗೆ ಬಂದು ಲಸಿಕೆ ಹಾಕಲು ನಿರ್ಧಾರ; ಕಲಬುರಗಿ ಜಿಲ್ಲಾಡಳಿತದ ಯೋಜನೆಗೆ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಸಾಥ್

ಜನರ ಮನೆಬಾಗಿಲಿಗೆ ಹೋಗಿ ಲಸಿಕೆ ಹಾಕಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಅದಕ್ಕಾಗಿ ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್​ಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿ ವಿ ವಿ ಜೋತ್ಸ್ನಾ, ತಿಳಿಸಿದ್ದಾರೆ.

ಜನರ ಮನೆ ಬಾಗಿಲಿಗೆ ಬಂದು ಲಸಿಕೆ ಹಾಕಲು ನಿರ್ಧಾರ; ಕಲಬುರಗಿ ಜಿಲ್ಲಾಡಳಿತದ ಯೋಜನೆಗೆ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಸಾಥ್
ಕಲಬುರಗಿ ಜಿಲ್ಲಾಡಳಿತದ ಯೋಜನೆಗೆ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಸಾಥ್
Follow us
TV9 Web
| Updated By: preethi shettigar

Updated on:Jun 16, 2021 | 9:26 AM

ಕಲಬುರಗಿ: ಜಿಲ್ಲೆಯಲ್ಲಿ ಕೊವಿಡ್ ನಿರೋಧಕ ಲಸಿಕೆ ಬಗ್ಗೆ ಎಷ್ಟೇ ಜಾಗೃತಿ ಮೂಡಿಸಿದರು ಕೂಡಾ ಗ್ರಾಮೀಣ ಭಾಗದ ಜನರು ಇನ್ನು ಕೂಡಾ ನಿರೀಕ್ಷಿತ ಮಟ್ಟದಲ್ಲಿ ಲಸಿಕೆ ಹಾಕಿಸಿಕೊಳ್ಳಲು ಮುಂದೆ ಬರುತ್ತಿಲ್ಲಾ. ಜಿಲ್ಲೆಯ ಕೆಲ ತಾಂಡಾ ಮತ್ತು ಹಳ್ಳಿಗಳಲ್ಲಿ ಇನ್ನು ಒಬ್ಬರು ಕೂಡಾ ಲಸಿಕೆ ಹಾಕಿಸಿಕೊಂಡಿಲ್ಲಾ. ಹೀಗಾಗಿ ಜನರ ಮನೆಬಾಗಿಲಿಗೆ ಹೋಗಿ ಲಸಿಕೆ ಹಾಕಲು ಜಿಲ್ಲಾಡಳಿತ ಮುಂದಾಗಿದೆ. ಜಿಲ್ಲಾಡಳಿತದ ಈ ಯೋಜನೆಗೆ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ( NEKRTC) ಹೆಗಲು ನೀಡಿದ್ದು, ಲಸಿಕಾ ಬಸ್​ಗಳನ್ನು ಸಿದ್ಧಗೊಳಿಸಿದೆ.

ಲಸಿಕೆ ಹಾಕಿಸಿಕೊಳ್ಳಲು ಗ್ರಾಮೀಣ ಭಾಗದ ಜನರ ಹಿಂದೇಟು ಲಸಿಕೆ ಹಾಕಿಸಿಕೊಂಡರೆ ಜ್ವರ ಬರುತ್ತದೆ. ಬೇರೆ ರೀತಿಯ ಸಮಸ್ಯೆಗಳು ಬರುತ್ತವೆ ಎನ್ನುವ ಕಲಬುರಗಿ ಜನರಲ್ಲಿ ಇದೆ. ಜತೆಗೆ ಇನ್ನು ಕೆಲವರಿಗೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬಂದು ಹೋಗಲು ಸರಿಯಾದ ವಾಹನಗಳ ವ್ಯವಸ್ಥೆ ಇಲ್ಲಾ. ಬಸ್​ಗಳು ಬಂದಾಗಿರೋದರಿಂದ ಜನರಿಗೆ ಮನೆಯಿಂದ ಹೊರಬರಲು ತೊಂದರೆಯಾಗುತ್ತಿದೆ. ಅದರಲ್ಲೂ ಕೂಡಾ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ 1 ಹಳ್ಳಿ, 10 ತಾಂಡಾ ಮತ್ತು ಅಫಜಲಪುರ ತಾಲೂಕಿನ 11 ಹಳ್ಳಿ 4 ತಾಂಡಾಗಳ ಜನರು ಇಲ್ಲಿವರಗೆ ಲಸಿಕೆಯನ್ನೆ ಹಾಕಿಸಿಕೊಂಡಿಲ್ಲಾ. ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಗ್ರಾಮಗಳು ದೂರ ಇರುವುದರಿಂದ ಜನರು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಹಾಕಿಸಿಕೊಂಡಿಲ್ಲಾ. ಹೀಗಾಗಿ ಜಿಲ್ಲೆಯಲ್ಲಿ 21 ಲಕ್ಷ ಜನರಿಗೆ ಲಸಿಕೆ ಹಾಕಬೇಕು. ಆದರೆ ಇಲ್ಲಿವರಗೆ ಸರಿಸುಮಾರು 4 ಲಕ್ಷ ಜನರು ಮಾತ್ರ ಲಸಿಕೆ ಪಡೆದಿದ್ದಾರೆ.

ಜನರ ಮನೆ ಬಾಗಿಲಿಗೆ ಲಸಿಕಾ ವಾಹನ ಗ್ರಾಮೀಣ ಭಾಗದ ಜನರು ಲಸಿಕಾ ಕೇಂದ್ರಕ್ಕೆ ಬಂದು ಹೋಗಲು ಸರಿಯಾದ ವ್ಯವಸ್ಥೆಗಳು ಇಲ್ಲದೇ ಇರುವುದರಿಂದಾಗಿ, ಜನರ ಮನೆ ಬಾಗಿಲಿಗೆ ಹೋಗಿ ಲಸಿಕೆ ಹಾಕುವ ಮೂಲಕ ಗ್ರಾಮೀಣ ಭಾಗದಲ್ಲಿ ಲಸಿಕಾಕರಣಕ್ಕೆ ವೇಗವನ್ನು ನೀಡಲು ಜಿಲ್ಲಾಡಳಿತ ಮುಂದಾಗಿದೆ. ಅದಕ್ಕಾಗಿ ಈಶಾನ್ಯ ಕರ್ನಾಟಕ ಬಸ್​ಗಳನ್ನು ನೀಡುವಂತೆ ಸಂಸ್ಥೆಯ ಅಧ್ಯಕ್ಷ ರಾಜಕುಮಾರ್ ಪಾಟೀಲ್ ತೇಲ್ಕೂರ್ ಅವರಿಗೆ ಜಿಲ್ಲಾಡಳಿತ ಮನವಿ ಮಾಡಿತ್ತು. ಮನವಿಯನ್ನು ಪರಿಗಣಿಸಿರುವ ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆ, ಕೇವಲ 24 ಗಂಟೆಯಲ್ಲಿ ಎರಡು ಬಸ್​ಗಳನ್ನು ಲಸಿಕಾ ವಾಹನಗಳನ್ನಾಗಿ ಪರಿವರ್ತಿಸಿದೆ.

ಇಂದು ಕಲಬುರಗಿ ಜಿಲ್ಲಾಡಳಿತಕ್ಕೆ ಎರಡು ಬಸ್​ಗಳನ್ನು ಸಂಸ್ಥೆಯಿಂದ ನೀಡಲಾಗುತ್ತಿದ್ದು, ನಾಳೆ ಲಸಿಕಾ ಬಸ್​ಗಳಿಗೆ ಚಾಲನೆ ಸಿಗಲಿದೆ. ಬಸ್​ಗಳು ಗ್ರಾಮೀಣ ಭಾಗದಲ್ಲಿ, ಅದರಲ್ಲೂ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ದೂರದಲ್ಲಿರುವ ಹಳ್ಳಿಗಳು, ತಾಂಡಾಗಳಿಗೆ ಮೊದಲು ಹೋಗಲಿವೆ. ಜನರ ಮನೆ ಬಾಗಿಲಿಗೆ ವ್ಯಾಕ್ಸಿನ್ ಹೋಗಲಿದ್ದು, ಸದ್ಯ ಎರಡು ಬಸ್​ಗಳನ್ನು ಪ್ರಾಯೋಗಿಕವಾಗಿ ನೀಡಲಾಗಿದೆ.

ಕೆಲ ಹಳ್ಳಿಗಳು ಮತ್ತು ತಾಂಡಾಗಳು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದೂರದಲ್ಲಿವೆ. ಅನೇಕರಿಗೆ ಆಸ್ಪತ್ರೆಗೆ ಬಂದು ಲಸಿಕೆ ಹಾಕಿಸಿಕೊಂಡು ಹೋಗಲು ಸಾಧ್ಯವಾಗುತ್ತಿಲ್ಲಾ. ಹೀಗಾಗಿ ಜನರ ಮನೆಬಾಗಿಲಿಗೆ ಹೋಗಿ ಲಸಿಕೆ ಹಾಕಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಅದಕ್ಕಾಗಿ ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್​ಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿ ವಿ ವಿ ಜೋತ್ಸ್ನಾ, ತಿಳಿಸಿದ್ದಾರೆ.

ಆಸ್ಪತ್ರೆ ರೀತಿ ಸಿದ್ಧವಾಗಿರುವ ಬಸ್​ಗಳು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕಲಬುರಗಿ ನಗರದ ವರ್ಕ್ ಶಾಪ್​ನಲ್ಲಿ ಎರಡು ಲಸಿಕಾ ಬಸ್​ಗಳನ್ನು ಸಿದ್ಧಗೊಳಿಸಲಾಗಿದೆ. ವಿಶೇಷವೆಂದರೆ, ಆಸ್ಪತ್ರೆಯಲ್ಲಿ ವ್ಯಾಕ್ಸಿನ್ ಕೇಂದ್ರದ ರೀತಿಯಲ್ಲಿಯೇ ಬಸ್​ಗಳನ್ನು ಸಿದ್ಧಪಡಿಸಲಾಗಿದೆ. ಆಸ್ಪತ್ರೆಯಲ್ಲಿರುವಂತೆ ನೋಂದಣಿ, ವೇಟಿಂಗ್​ ರೂಮ್, ಲಸಿಕಾ ಕೋಣೆ, ಅಬ್ಸ್​​ರ್​ವೇಶನ್ ರೂಮ್​ನಂತೆ ಬಸ್​ನಲ್ಲಿ ಕೂಡಾ ವ್ಯವಸ್ಥೆ ಮಾಡಲಾಗಿದೆ. ಬಸ್​ನಲ್ಲಿ ಓರ್ವ ವೈದ್ಯ ಮತ್ತು ನರ್ಸಿಂಗ್ ಸ್ಟಾಫ್ ಕೂಡಾ ಇರಲಿದ್ದಾರೆ.

ಬಸ್​ನ ಚಾಲಕ ಕೂಡಾ ಸಂಸ್ಥೆಯವರೇ ಇರಲಿದ್ದಾರೆ. ಬಸ್​ನ ಡಿಸೆಲ್ ಕೂಡಾ ಸಂಸ್ಥೆ ವತಿಯಿಂದಲೇ ಹಾಕಲಾಗುತ್ತಿದೆ. ಆರೋಗ್ಯ ಇಲಾಖೆಯವರು ವ್ಯಾಕ್ಸಿನ್ ಮತ್ತು ಆರೋಗ್ಯ ಸಿಬ್ಬಂಧಿಯನ್ನು ಮಾತ್ರ ನೀಡಲಿದ್ದಾರೆ. ಬಸ್​ಗಳು ಮುಂಜಾನೆ ಆರು ಗಂಟೆಯಿಂದ ರಾತ್ರಿವರಗೆ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಸಂಚರಿಸಲಿವೆ. ಕಳೆದ ತಿಂಗಳು ಸಂಸ್ಥೆ, ಆಕ್ಸಿಜನ್ ಬಸ್​ಗಳನ್ನು ಸಿದ್ಧ ಮಾಡಿ ಜಿಲ್ಲಾಡಳಿತಕ್ಕೆ ನೀಡಿತ್ತು. ಅವು ಕೂಡಾ ಗ್ರಾಮೀಣ ಭಾಗದಲ್ಲಿ ಸಂಚರಿಸುತ್ತಿವೆ. ಇದೀಗ ಲಸಿಕಾ ಬಸ್​ಗಳನ್ನು ಸಿದ್ಧ ಮಾಡಿ, ಕಲಬುರಗಿ ಜಿಲ್ಲಾಡಳಿತಕ್ಕೆ ನೀಡಿವೆ.

ಜಿಲ್ಲಾಡಳಿತ ನಮ್ಮ ಸಂಸ್ಥೆಗೆ ಲಸಿಕಾ ವಾಹನಗಳನ್ನು ಸಿದ್ಧಗೊಳಿಸಿ ನೀಡಲು ಹೇಳಿತ್ತು. ಅದರಂತೆ ಕೇವಲ 24 ಗಂಟೆಯಲ್ಲಿ ನಮ್ಮ ಸಿಬ್ಬಂದಿ, ಸಾರಿಗೆ ಬಸ್​ಗಳನ್ನು ಲಸಿಕಾ ಬಸ್​ಗಳನ್ನಾಗಿ ಮಾರ್ಪಾಟು ಮಾಡಿದ್ದಾರೆ. ಜಿಲ್ಲಾಡಳಿತ ಕೇಳಿದರೆ ಇನ್ನು ಕೂಡಾ ಹೆಚ್ಚಿನ ಬಸ್​ಗಳನ್ನು ನೀಡುತ್ತೇವೆ. ಗ್ರಾಮೀಣ ಭಾಗದ ಜನರಿಗೆ ಲಸಿಕೆಗಳು ಸಿಗಲು ನಮ್ಮ ಸಂಸ್ಥೆ ಕೂಡಾ ಪ್ರಯತ್ನ ಮಾಡುತ್ತಿದೆ ಎಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷರಾದ ರಾಜುಕಮಾರ್ ಪಾಟೀಲ್ ತಿಳಿಸಿದ್ದಾರೆ.

ಇದನ್ನೂ ಓದಿ:

ಕೊರೊನಾ ಲಸಿಕೆ ವಿತರಣೆಯಲ್ಲಿ ಮೈಸೂರು ಜಿಲ್ಲೆ ರಾಜ್ಯಕ್ಕೆ ನಂ.1; ಇದೀಗ ಬೀದಿಬದಿ ವ್ಯಾಪಾರಿಗಳು, ವಿಶೇಷ ಚೇತನರಿಗಾಗಿ ಲಸಿಕೆ ಅಭಿಯಾನ ಆರಂಭ

Corona Vaccine: ಕೊವಿಡ್ ಲಸಿಕೆ ಪಡೆಯಲು ಆನ್​ಲೈನ್ ರಿಜಿಸ್ಟ್ರೇಶನ್ ಅಥವಾ ಬುಕಿಂಗ್ ಕಡ್ಡಾಯವಲ್ಲ: ಕೇಂದ್ರ ಸರ್ಕಾರ

Published On - 9:12 am, Wed, 16 June 21

ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ