AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಸಿಲನಾಡು ಎಂದು ಕರೆಸಿಕೊಳ್ಳುತ್ತಿದ್ದ ಕಲಬುರಗಿ ಇದೀಗ ಮಲೆನಾಡಿನಂತೆ ಕಂಗೊಳಿಸುತ್ತಿದೆ!

ಕಲಬುರಗಿ ಜಿಲ್ಲೆಯಲ್ಲಿ ಕೂಡಾ ಹಸಿರ ಸಿರಿ ಇದೆ. ಪುಟ್ಟ ಪುಟ್ಟ ಜಲಪಾತಗಳಿವೆ. ಅನೇಕ ಕಾಡು ಪ್ರಾಣಿಗಳಿವೆ. ಹಸಿರ ಚೆಲುವನ್ನು ನೋಡುವುದೇ ಕಣ್ಣಿಗೆ ಹಬ್ಬ. ಮನಸಿಗೆ ಆನಂದ. ಹೀಗಾಗಿ ನಮಗೆ ಮಡಿಕೇರಿ, ಮಲೆನಾಡಿಗಿಂತ ನಮ್ಮೂರ ಮಲೆನಾಡೆ ಚಂದ ಅಂತಾರೆ ಕಲಬುರಗಿ ಜಿಲ್ಲೆಯ ಜನರು.

ಬಿಸಿಲನಾಡು ಎಂದು ಕರೆಸಿಕೊಳ್ಳುತ್ತಿದ್ದ ಕಲಬುರಗಿ ಇದೀಗ ಮಲೆನಾಡಿನಂತೆ ಕಂಗೊಳಿಸುತ್ತಿದೆ!
ಹಸಿರಿನಿಂದ ಕಂಗೊಳಿಸುತ್ತಿರುವ ಕಲಬುರಗಿ
TV9 Web
| Edited By: |

Updated on: Jul 12, 2021 | 7:16 PM

Share

ಕಲಬುರಗಿ: ಬಿಸಿಲನಾಡು ಕಲಬುರಗಿ ಇದೀಗ ಅಕ್ಷರಶ ಮಲೆನಾಡಿನಂತೆ ಬದಲಾಗಿದೆ. ಸೂರ್ಯ ಕಾಣದಂತೆ ಎಲ್ಲಡೆ ಆವರಿಸಿರುವ ಮೋಡಗಳು. ನಿರಂತರವಾಗಿ ಸುರಿಯುತ್ತಿರುವ ಮಳೆ. ಮತ್ತೊಂದಡೆ ಜಿಲ್ಲೆಯಲ್ಲಿ ಬೆಳದಿರುವ ಹಸಿರ ಸಿರಿ ಜಿಲ್ಲೆಯ ಜನರಿಗೆ ಅಕ್ಷರಶ ಮಲೆನಾಡಿನ ಅನೂಭೂತಿಯನ್ನು ನೀಡುತ್ತಿದೆ. ಕಲಬುರಗಿ ಅಂದಾಕ್ಷಣ ತಟ್ಟನೆ ನೆನಪು ಆಗುತ್ತಿದ್ದುದು ಬಿಸಿಲು, ಬಿಸಿಲನಾಡು ಎಂದು. ಕಲಬುರಗಿ ನೀರು, ನೆರಳಿಲ್ಲದ ಊರು ಎಂದು ಹೆಚ್ಚಿನ ಜನರು ಅಂದುಕೊಂಡು, ಆ ಕಡೆಗೆ ಹೊರಡಲು ಹಿಂದೇಟು ಹಾಕುವುದು ಇದೆ. ಅದು ನಿಜವೂ ಹೌದು. ರಾಜ್ಯದಲ್ಲಿ ಅತಿ ಹೆಚ್ಚು ಬಿಸಿಲು ದಾಖಲಾಗುವ ಜಿಲ್ಲೆ ಕಲಬುರಗಿಯೇ ಆಗಿದೆ. ಆದರೆ, ಇದೇ ಜಿಲ್ಲೆ ಇದೀಗ ಮಲೆನಾಡಿನಂತೆ ಕಂಗೊಳಿಸುತ್ತಲೂ ಇದೆ.

ಕಲಬುರಗಿ ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಹೆಚ್ಚಿನ ಮಳೆಯಾಗುತ್ತಿದೆ. ಅದರಲ್ಲೂ ಕಳೆದ ಜುಲೈ ಎಂಟರಿಂದ ಜಿಲ್ಲೆಯ ವಾತಾವರಣವೇ ಬದಲಾಗಿ ಹೋಗಿದೆ. ಮೊದಲು, ಮುಂಜಾನೆಯಾದರೆ ಸಾಕು, ಸೂರ್ಯನ ಕಿರಣಗಳು ನೆತ್ತಿ ಸುಡುತಿದ್ದವು. ಆದರೆ ಇದೀಗ ಮೋಡ ಕವಿದ ವಾತಾವರಣದಿಂದ ಕಳೆದ ಅನೇಕ ದಿನಗಳಿಂದ ಜಿಲ್ಲೆಯ ಜನರಿಗೆ ಸೂರ್ಯನ ದರ್ಶನವೇ ಆಗಿಲ್ಲ.

ಒಂದಡೆ ಮೋಡ ಕವಿದ ವಾತಾವರಣ ಮತ್ತೊಂದೆಡೆ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆ. ಬಿಸಿಲುನಾಡಿನ ಜನರಿಗೆ ವಿಶಿಷ್ಟ ಅನುಭವ ನೀಡುತ್ತಿವೆ. ಅನೇಕರು ಮಳೆಗಾಲದಲ್ಲಿ ಮಳೆಯ ಮಜಾ ಸವಿಯಲು ಮಲೆನಾಡಿಗೆ ಹೋಗುತ್ತಿದ್ದರು. ಆದರೆ ಇದೀಗ ಜಿಲ್ಲೆಯಲ್ಲಿಯೇ ಮಲೆನಾಡಿನ ಅನುಭವ ಜನರಿಗೆ ಆಗುತ್ತಿದೆ. ಹೀಗಾಗಿ ಹೆಚ್ಚಿನ ಜನರು ಮಳೆಯ ಆನಂದವನ್ನು ಸವಿಯುತ್ತಿದ್ದಾರೆ. ಒಂದೆಡೆ ಜಿಲ್ಲೆಯಲ್ಲಿ ಮಳೆಯಿಂದಾಗಿ ಮಲೆನಾಡಾದರೆ ಮತ್ತೊಂದಡೆ ಜಿಲ್ಲೆಯಲ್ಲಿರುವ ಅರಣ್ಯ ಪ್ರದೇಶ ಇದೀಗ ಹಸಿರ ಸೀರೆಯನ್ನುಟ್ಟು ಕಂಗೊಳಿಸುತ್ತಿದ್ದು, ಮನಸಿಗೆ ಮುದ ನೀಡುತ್ತಿದೆ.

ಕಲಬುರಗಿ ಜಿಲ್ಲೆಯಲ್ಲಿ ಕೂಡಾ ಹಸಿರ ಸಿರಿ ಇದೆ. ಪುಟ್ಟ ಪುಟ್ಟ ಜಲಪಾತಗಳಿವೆ. ಅನೇಕ ಕಾಡು ಪ್ರಾಣಿಗಳಿವೆ. ಹಸಿರ ಚೆಲುವನ್ನು ನೋಡುವುದೇ ಕಣ್ಣಿಗೆ ಹಬ್ಬ. ಮನಸಿಗೆ ಆನಂದ. ಹೀಗಾಗಿ ನಮಗೆ ಮಡಿಕೇರಿ, ಮಲೆನಾಡಿಗಿಂತ ನಮ್ಮೂರ ಮಲೆನಾಡೆ ಚಂದ ಅಂತಾರೆ ಕಲಬುರಗಿ ಜಿಲ್ಲೆಯ ಜನರು.

Kalaburagi Water Body River

ಬಿಸಿಲನಾಡಿನಲ್ಲೂ ಹಸಿರು- ನೀರಿನ ತಂಪು

ಅಷ್ಟಕ್ಕೂ ಬಿಸಿಲನಾಡು ಕಲಬುರಗಿ ಜಿಲ್ಲೆಯಲ್ಲಿ ಮಲೆನಾಡಿನಂತೆ ಕಂಗೊಳಿಸುವ ಸೊಬಗು ಇರುವುದು ಚಿಂಚೋಳಿ ತಾಲೂಕಿನಲ್ಲಿ. ಜಿಲ್ಲೆಯ ಚಿಂಚೋಳಿ ತಾಲೂಕಿನ ಕುಂಚಾವರಣ ಅರಣ್ಯ ಪ್ರದೇಶ, ಜಿಲ್ಲೆಯಲ್ಲಿರುವ ಹಸಿರ ಸಿರಿಯಾಗಿದೆ. ಚಿಂಚೋಳಿಯ ಕುಂಚಾವರಂ ಅರಣ್ಯ ಪ್ರದೇಶ ಬರೋಬ್ಬರಿ ಹದಿನಾಲ್ಕು ಸಾವಿರದ ಒಂಬೈನೂರಾ ಐವತ್ತೆಂಟು ಹೆಕ್ಟರ್ ಪ್ರದೇಶದ ವ್ಯಾಪ್ತಿಯಲ್ಲಿ ಇದೆ. ಇದನ್ನು 2011 ರಲ್ಲಿ ಸಂರಕ್ಷಿತ ವನ್ಯಜೀವಿಧಾಮ ಅಂತ ಕೂಡಾ ಘೋಷಿಸಲಾಗಿದೆ.

Kalaburagi Water Body

ಚಿಂಚೋಳಿ ಸೊಬಗು

ಬೇಸಿಗೆಯಲ್ಲಿ ಬೋಳಾಗಿ ಕಾಣುವ ಕುಂಚಾವರಂ ಅರಣ್ಯ, ಮಳೆಗಾಲ ಪ್ರಾರಂಭವಾಗುತ್ತಿದ್ದಂತೆ ಸಮುದ್ರದಲ್ಲಿನ ಚಿಪ್ಪು ಅರಳಿದಂತೆ ಹಸಿರ ಸಿರಿಯನ್ನು ಹೊತ್ತು ಅರಳುತ್ತದೆ. ಕಲಬುರಗಿ ಜಿಲ್ಲೆಯಲ್ಲಿ ಮುಂಗಾರು ಮಳೆ ಕೂಡಾ ಉತ್ತಮವಾಗಿ ಆಗುತ್ತಿದ್ದು, ಜಿಲ್ಲೆಯ ಮಳೆಗೆ ಕುಂಚಾವರಂ ಅರಣ್ಯ ಪ್ರದೇಶ ಇದೀಗ ಅಕ್ಷರಶ ಮಲೆನಾಡಿನಂತೆ ಕಾಣುತ್ತಿದೆ.

ವರದಿ: ಸಂಜಯ್ ಚಿಕ್ಕಮಠ

ಇದನ್ನೂ ಓದಿ: ಕಲಬುರಗಿ: ಅಕ್ರಮ ಸಾಗಾಟಕ್ಕೆ ಸಂಗ್ರಹಿಸಿಟ್ಟಿದ್ದ ಅಂಗನವಾಡಿಯ ಆಹಾರ ಧಾನ್ಯ ತೋಟದ ಮನೆಯಲ್ಲಿ ಪತ್ತೆ

World Environment Day 2021: ಹೆಣ್ಣು ಮಗು ಹುಟ್ಟಿದರೆ 111 ಗಿಡ ನೆಡುವ ಗ್ರಾಮ, ಇದು ಪಿಪ್ಲಾಂತ್ರಿಯ ಹಸಿರು ಕ್ರಾಂತಿ

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ