ಕಲಬುರಗಿ: ಹಾಡಹಗಲೇ ಚಿನ್ನದಂಗಡಿಗೆ ನುಗ್ಗಿ ಮಾಲೀಕನ ತಲೆಗೆ ಗನ್​ ಇಟ್ಟು ದರೋಡೆ

ಕಲಬುರಗಿಯ ಸರಾಫ್ ಬಜಾರ್‌ನಲ್ಲಿರುವ ಚಿನ್ನದ ಅಂಗಡಿಯಲ್ಲಿ ಹಗಲು ದರೋಡೆ ನಡೆದಿದೆ. 2-3 ಕೆಜಿ ಚಿನ್ನಾಭರಣವನ್ನು ಖದೀಮರು ದೋಚಿಕೊಂಡು ಪರಾರಿಯಾಗಿದ್ದಾರೆ. ಬ್ರಹ್ಮಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಐದು ವಿಶೇಷ ತಂಡಗಳನ್ನು ರಚಿಸಿ ತನಿಖೆ ಆರಂಭಿಸಿದ್ದಾರೆ. ಈ ಘಟನೆಯಿಂದಾಗಿ ನಗರದಲ್ಲಿ ಆತಂಕ ಮನೆ ಮಾಡಿದೆ.

ಕಲಬುರಗಿ: ಹಾಡಹಗಲೇ ಚಿನ್ನದಂಗಡಿಗೆ ನುಗ್ಗಿ ಮಾಲೀಕನ ತಲೆಗೆ ಗನ್​ ಇಟ್ಟು ದರೋಡೆ
ಸಾಂದರ್ಭಿಕ ಚಿತ್ರ
Edited By: ವಿವೇಕ ಬಿರಾದಾರ

Updated on: Jul 11, 2025 | 3:43 PM

ಕಲಬುರಗಿ, ಜುಲೈ 11: ಕಲಬುರಗಿ (Kalaburagi) ನಗರದ ಸರಾಫ್ ಬಜಾರ್​​ನಲ್ಲಿರುವ ಮಾಲೀಕ್ ಚಿನ್ನದ ಅಂಗಡಿಗೆ (Jewelry Shop) ಹಾಡಹಗಲೇ ಖದೀಮರು ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ ಮಾಡಿದ್ದಾರೆ. ಸಿನೀಮಿಯ ಶೈಲಿಯಲ್ಲಿ ಅಂಗಡಿಗೆ ನುಗ್ಗಿದ ಖದೀಮರು 2-3 ಕೆಜಿ ಚಿನ್ನಾಭರಣವನ್ನು ದೋಚಿಕೊಂಡು ಪರಾರಿಯಾಗಿದ್ದಾರೆ. ತಲೆಗೆ ಕ್ಯಾಪ್​​, ಮುಖಕ್ಕೆ ಮಾಸ್ಕ್ ಧರಿಸಿಕೊಂಡು ಬಂದಿದ್ದ ನಾಲ್ವರು ಅಂಗಡಿ ಮಾಲೀಕನಿಗೆ ಗನ್​​ ತೋರಿಸಿ ಬೆದರಿಸಿ, ದರೋಡೆ ಮಾಡಿದ್ದಾರೆ.

ಮಧ್ಯಾಹ್ನ 12.30ರಿಂದ 1 ಗಂಟೆಯ ನಡುವೆ ದರೋಡೆಯಾಗಿದೆ. ಖದೀಮರು ಚಿನ್ನದಂಗಡಿಗೆ ನುಗ್ಗಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಲಬುರಗಿ ನಗರದ ಬ್ರಹ್ಮಪುರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪ್ರಕರಣ ದಾಖಲಿಸಿಕೊಂಡಿರುವ ಬ್ರಹ್ಮಪುರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ನೋಡಿ: ಕಲಬುರಗಿ: ಎಟಿಎಂನಲ್ಲಿರುವ ಸಿಸಿಟಿವಿ ಕೆಮೆರಾಗಳಿಗೆ ಕಪ್ಪುಮಸಿ ಸ್ಪ್ರೇ ಮಾಡಿ ₹ 18 ಲಕ್ಷ ದರೋಡೆ

ಇದನ್ನೂ ಓದಿ
ಬೆಂಗಳೂರು: ಏಕಾಏಕಿ ಶಾಪ್​ಗೆ ನುಗ್ಗಿ 2 ಕೋಟಿ ರೂ ದೋಚಿದ ದುಷ್ಕರ್ಮಿಗಳು
ಕರ್ನಾಟಕದಲ್ಲಿ ಮತ್ತೊಂದು ದರೋಡೆ: ಕೋಲಾರದಲ್ಲಿ SBI ಎಟಿಎಂ ದೋಚಿದ ಖದೀಮರು!
ಕಲಬುರಗಿ APMC ವರ್ತಕರಿಗೆ 15 ಕೋಟಿ ರೂ. ಪಂಗನಾಮ ಹಾಕಿದ ದಾಲ್​ ಮಿಲ್‌ ಮಾಲೀಕ
ಬೀದರ್​ ಬೆನ್ನಲ್ಲೇ ಕಲಬುರಗಿಯಲ್ಲಿ ATMಗೆ ಕನ್ನ: ದರೋಡೆ ಕೇಸ್​ ಹೆಚ್ಚಳ!

ಪ್ರಕರಣ ಸಂಬಂಧ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಮಾತನಾಡಿ, ಮಾಲೀಕನ ತಲೆಗೆ ಗನ್ ಇಟ್ಟು ದರೋಡೆ ಮಾಡಿದ್ದಾರೆ. ದರೋಡೆ ಪ್ರಕರಣದ ತನಿಖೆಗೆ ಐದು ವಿಶೇಷ ತಂಡ ರಚನೆ ಮಾಡಿದ್ದೇವೆ. ಆದಷ್ಟು ಬೇಗ ದರೋಡೆಕೋರರ ಬಂಧನ ಮಾಡುತ್ತೇವೆ. ಅಂಗಡಿಯಲ್ಲಿದ್ದ 2-3 ಕೆಜಿ ಚಿನ್ನ ದರೋಡೆಯಾಗಿದೆ. ಈ ಅಂಗಡಿಯವರು ಪ್ರತಿನಿತ್ಯ 15-20 ಗ್ರಾಂ ಚಿನ್ನಾಭರಣ ಮಾರಟ ಮಾಡುತ್ತಿದ್ದರು ಎಂದು ಹೇಳಿದರು.

ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು

ಘಟನೆ ಕುರಿತು ಪ್ರತ್ಯಕ್ಷದರ್ಶಿ ರಾಜಶೇಖರ್ ಮಾತನಾಡಿ, ದರೋಡೆಯಾದ ಬಳಿಕ ಅಂಗಡಿ ಮಾಲೀಕ ಕಿರುಚಿಕೊಂಡರು. ಕಿರುಚಿದ್ದನ್ನು ಕೇಳಿ ನಾನು ಓಡಿ ಹೋಗಿ ನೋಡಿದೆ. ಅಂಗಡಿ ಮಾಲೀಕರ ಕೈಕಾಲು ಕಟ್ಟಲಾಗಿತ್ತು. ನಾನು ಓಡಿ ಹೋಗವಷ್ಟರಲ್ಲಿ ದರೋಡೆಕೋರರು ಪರಾರಿಯಾಗಿದ್ದರು. ಹಾಡಹಗಲೇ ಈ ರೀತಿಯಾಗಿದ್ದು ನಮ್ಮಲ್ಲಿ ಭಯ ಮೂಡಿಸಿದೆ. ನಮಗಂತೂ ಸಾಕಷ್ಟು ಆತಂಕವಾಗಿದೆ. ಪ್ರತಿನಿತ್ಯ ಇಲ್ಲೇ ಇರುತ್ತಿದ್ದೆವು, ಇಲ್ಲಿಯವರೆಗೂ ಈ ರೀತಿ ಆಗಿರಲಿಲ್ಲ ಎಂದು ಹೇಳಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:42 pm, Fri, 11 July 25

Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
Follow Us