AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆ ಬಳಿ ಅಫಘಾತ: ಕಲಬುರಗಿ ಮೂಲದ ಮೂವರು ರಾಮ ಭಕ್ತರ ಸಾವು

ಅಯೋಧ್ಯೆ ಬಳಿ ನಿನ್ನೆ ರಾತ್ರಿ ಲಾರಿ ಮತ್ತು ಟಿಟಿ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಲಬುರಗಿ ಮೂಲದ ಮೂವರು ರಾಮ ಭಕ್ತರು ಸಾವನ್ನಪ್ಪಿದ್ದಾರೆ. ಒಂದೇ ಕುಟುಂಬದ 22 ಜನ ಕಾಶಿ ವಿಶ್ವನಾಥನ ದರ್ಶನ ಮುಗಿಸಿ ಟಿಟಿಯಲ್ಲಿ ಉತ್ತರ ಪ್ರದೇಶದ ಅಯೋಧ್ಯೆಗೆ ತೆರಳುತ್ತಿದ್ದಾಗ ದುರಂತ ಸಂಭವಿಸಿದೆ. 

ಅಯೋಧ್ಯೆ ಬಳಿ ಅಫಘಾತ: ಕಲಬುರಗಿ ಮೂಲದ ಮೂವರು ರಾಮ ಭಕ್ತರ ಸಾವು
ಅಯೋಧ್ಯೆ ಬಳಿ ಲಾರಿ-ಟಿಟಿ ನಡುವೆ ಮುಖಾಮುಖಿ ಡಿಕ್ಕಿ: ಕಲಬುರಗಿ ಮೂಲದ ಮೂವರು ಸಾವು
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on:May 25, 2024 | 4:00 PM

Share

ಕಲಬುರಗಿ, ಮೇ 25: ನಿನ್ನೆ ರಾತ್ರಿ ಅಯೋಧ್ಯೆ (Ayodhya) ಬಳಿ ಲಾರಿ ಮತ್ತು ಟಿಟಿ ನಡುವೆ ಮುಖಾಮುಖಿ ಡಿಕ್ಕಿ (Accident) ಹೊಡೆದ ಪರಿಣಾಮ ಕಲಬುರಗಿ ಮೂಲದ ಮೂವರು ರಾಮ ಭಕ್ತರು ಸಾವನ್ನಪ್ಪಿದ್ದಾರೆ. ಇನ್ನುಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಶಿವರಾಜ್, ಕಾಶಿನಾಥ್ ಹಾಗೂ ತಂಗೆಮ್ಮ ಮೃತ ದುರ್ದೈವಿಗಳು. ಗಾಯಾಳುಗಳಿಗೆ ಅಯೋಧ್ಯೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಒಂದೇ ಕುಟುಂಬದ 22 ಜನ ಕಾಶಿ ವಿಶ್ವನಾಥನ ದರ್ಶನ ಮುಗಿಸಿ ಟಿಟಿಯಲ್ಲಿ ಉತ್ತರ ಪ್ರದೇಶದ ಅಯೋಧ್ಯೆದಲ್ಲಿರುವ ರಾಮಲಲ್ಲಾ ನೋಡಲು ತೆರಳುತ್ತಿದ್ದಾಗ ದುರಂತ ಸಂಭವಿಸಿದೆ.

ಸುಗ್ಲಾಬಾಯಿ, ಅನುರಪ್ಪ, ರಾಜಾರಾಂ, ತಾರಾವತಿ, ಪ್ರೀತಿ, ಶಿವಲೀಲಾ, ಚಂದ್ರಕಾಂತ, ಇಂದು, ಚಂದ್ರಮ್ಮ, ಮಹದೇವ್ ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ಜಿಲ್ಲಾ ಆಸ್ಪತ್ರೆಯ ತುರ್ತು ವೈದ್ಯಾಧಿಕಾರಿ ಆಶಿಶ್ ಪಾಠಕ್ ಪ್ರತಿಕ್ರಿಯಿಸಿದ್ದು, ಪರಿಸ್ಥಿತಿ ಗಂಭೀರವಾಗಿರುವುದರಿಂದ ದರ್ಶನ್ ನಗರದ ವೈದ್ಯಕೀಯ ಕಾಲೇಜಿಗೆ ರೋಗಿಯನ್ನು ರವಾನಿಸಲಾಗಿದೆ. ಉಳಿದ ರೋಗಿಗಳು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ.

ನೇಣುಬಿಗಿದುಕೊಂಡು ಅನುಮಾನಸ್ಪದವಾಗಿ ವ್ಯಕ್ತಿ ಆತ್ಮಹತ್ಯೆ: ಕೊಲೆ ಶಂಕೆ ಅರೋಪ

ನೆಲಮಂಗಲ: ಅನುಮಾನಸ್ಪದವಾಗಿ ವ್ಯಕ್ತಿ ಆಲದ ಮರಕ್ಕೆ ನೇಣುಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕು ಸಮೀಪದ ಪಾಲನಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದೆ. ಸಂಬಂಧಿಗಳಿಂದ ಕೊಲೆ ಶಂಕೆ ಅರೋಪ ಕೇಳಿಬಂದಿದೆ. ಚಿಕ್ಕನರಸಯ್ಯ(59) ಮೃತ ವ್ಯಕ್ತಿ.

ಇದನ್ನೂ ಓದಿ: ಬಾತ್​​ ರೂಮ್​ನ​ಲ್ಲಿ ಯುವತಿ ಶವ ಪತ್ತೆ ಕೇಸ್​: ಪ್ರಬುದ್ಧಳ ಕೈ ಕೋಯ್ದು ಕೊಲೆಗೈದ ಬಾಲಕ

ಕಳದ 6 ವರ್ಷಗಳಿಂದ ವೆಂಕಟರಮಣಪ್ಪ ಅವರ ತೋಟದಲ್ಲಿ ಮೃತ ಚಿಕ್ಕನರಸಯ್ಯ ಕೆಲಸ ಮಾಡುತ್ತಿದ್ದ. ತೋಟದ ಮಾಲಿಕರೆ ಕೊಲೆ ಮಾಡಿರುವ ಬಗ್ಗೆ ಶಂಕೆ ಸಂಬಂಧಿಗಳು ವ್ಯಕ್ತಪಡಿಸುತ್ತಿದ್ದಾರೆ. ಪೊಲೀಸರಿಂದ ತೋಟದ ಮಾಲಕ ವೆಂಕಟರಮಣಪ್ಪ ವಿಚಾರಣೆ ಮಾಡಲಾಗಿದ್ದು, ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದುಬಾರಿ ಬೈಕ್​ಗಳನ್ನ ಕಳುವು ಮಾಡ್ತಿದ್ದ ಮೂವರ ಅಪ್ರಾಪ್ತ ಬಾಲಕರ ಬಂಧನ

ದುಬಾರಿ ಬೈಕ್​ಗಳನ್ನ ಕಳುವು ಮಾಡ್ತಿದ್ದ ಅಪ್ರಾಪ್ತ ಬಾಲಕರನ್ನು ಪೊಲೀಸರು ಬಂಧಿಸಲಾಗಿದೆ. ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬನ್ನೇರುಘಟ್ಟ ಠಾಣೆ ಪೊಲೀಸರಿಂದ ಮೂವರು ಅಪ್ರಾಪ್ತರನ್ನು ಅರೆಸ್ಟ್​ ಮಾಡಲಾಗಿದೆ.

ಇದನ್ನೂ ಓದಿ: ನ್ಯಾಯಾಧೀಶರು ಮತ್ತು ವೈದ್ಯ ತಂಡದ ಸಮಕ್ಷಮ ಆದಿಲ್ ದೇಹದ ಪಂಚನಾಮೆ ನಡೆಸಲಾಗುವುದು: ಉಮಾ ಪ್ರಶಾಂತ್, ಎಸ್ ಪಿ

ರಾತ್ರಿ ವೇಳೆ ಮನೆ ಮುಂದೆ ನಿಲ್ಲಿಸಿದ್ದ ಬೈಕ್​ಗಳನ್ನು ಕದಿಯುತ್ತಿದ್ದರು. ಡಿಯೋ ಬೈಕ್, ಪಲ್ಸರ್, ಆಕ್ಸಿಸ್ ಬೈಕ್ ಸೇರಿ ಹಲವು ಬೈಕ್ ಕಳ್ಳತನ ಮಾಡುತ್ತಿದ್ದರು. ಒಟ್ಟು 7 ಬೈಕ್​​ ಸೇರಿ ಮೂವರು ಅಪ್ರಾಪ್ತ ಬಾಲಕರು ಪೊಲೀಸರು ಬಂಧಿಸಿದ್ದಾರೆ. ಮೂವರನ್ನು ಮಡಿವಾಳದ ಬಾಲಮಂದಿರಕ್ಕೆ ಕಳಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:34 pm, Sat, 25 May 24

Follow Us
Dattatraya Patil
Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ