ಸೆಕ್ಯುರಿಟಿ ಗಾರ್ಡ್​ನಿಂದ ಬಾತ್​​ ರೂಮ್​ನಲ್ಲಿದ್ದ ಮಹಿಳೆಯ ವಿಡಿಯೋ ರೆಕಾರ್ಡ್: ಕಂಬಕ್ಕೆ ಕಟ್ಟಿ ಥಳಿಸಿದ ಜನರು

ಕಲಬುರಗಿ ನಗರದ ರಾಮ ಮಂದಿರ ವೃತ್ತದ ಬಳಿಯಿರುವ ಅಪಾರ್ಟ್​​ಮೆಂಟ್​​​ನಲ್ಲಿ ಸೆಕ್ಯುರಿಟಿ ಗಾರ್ಡ್​​ನಿಂದ ಬಾತ್ ರೂಮ್​​ನಲ್ಲಿದ್ದ ಮಹಿಳೆಯ ವಿಡಿಯೋ ಮಾಡಿರುವಂತಹ ಘಟನೆ ನಡೆದಿದೆ. ಅಪಾರ್ಟ್​​ಮೆಂಟ್​ ಅಂಡರ್ ಗ್ರೌಂಡ್​​ನಲ್ಲಿರುವ ಕಂಬಕ್ಕೆ ಸೆಕ್ಯುರಿಟಿ ಗಾರ್ಡ್ ವಿಶ್ವನಾಥ್​​ ನನ್ನು ಕಟ್ಟಿ ಹಾಕಿ ಅಪಾರ್ಟ್​​ಮೆಂಟ್​ನ ನಿವಾಸಿಗಳು ಥಳಿಸಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. 

ಸೆಕ್ಯುರಿಟಿ ಗಾರ್ಡ್​ನಿಂದ ಬಾತ್​​ ರೂಮ್​ನಲ್ಲಿದ್ದ ಮಹಿಳೆಯ ವಿಡಿಯೋ ರೆಕಾರ್ಡ್: ಕಂಬಕ್ಕೆ ಕಟ್ಟಿ ಥಳಿಸಿದ ಜನರು
ಸೆಕ್ಯುರಿಟಿ ಗಾರ್ಡ್ ವಿಶ್ವನಾಥ್
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Apr 19, 2024 | 3:49 PM

ಕಲಬುರಗಿ, ಏಪ್ರಿಲ್​ 19: ಸೆಕ್ಯುರಿಟಿ ಗಾರ್ಡ್​​ನಿಂದ ಬಾತ್ ರೂಮ್​​ನಲ್ಲಿದ್ದ ಮಹಿಳೆಯ (woman) ವಿಡಿಯೋ (Video) ಮಾಡಿರುವಂತಹ ಘಟನೆ ನಗರದ ರಾಮ ಮಂದಿರ ವೃತ್ತದ ಬಳಿಯಿರುವ ಅಪಾರ್ಟ್​​ಮೆಂಟ್​​​ನಲ್ಲಿ ನಡೆದಿದೆ. ಅಪಾರ್ಟ್​​ಮೆಂಟ್​​​ನಲ್ಲಿ ಬಾಡಿಗೆಯಿದ್ದ ಮಹಿಳೆಯ ವಿಡಿಯೋವನ್ನು ಸೆಕ್ಯುರಿಟಿ ಗಾರ್ಡ್ ರೆಕಾರ್ಡ್ ವಿಶ್ವನಾಥ್ ಎಂಬಾತ ಮಾಡುತ್ತಿರುವುದನ್ನು ಗಮನಿಸಿದ ಮಹಿಳೆ, ತಕ್ಷಣ ಗಂಡನಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಕೂಡಲೇ ಅಪಾರ್ಟ್​​ಮೆಂಟ್​ಗೆ ಆಗಮಿಸಿದ ಮಹಿಳೆಯ ಗಂಡ ಸೆಕ್ಯುರಿಟಿ ಗಾರ್ಡ್​​ ನನ್ನು ಹಿಡಿದು ಥಳಿಸಿದ್ದಾರೆ.

ಅಪಾರ್ಟ್​​ಮೆಂಟ್​ ಅಂಡರ್ ಗ್ರೌಂಡ್​​ನಲ್ಲಿರುವ ಕಂಬಕ್ಕೆ ಸೆಕ್ಯುರಿಟಿ ಗಾರ್ಡ್ ವಿಶ್ವನಾಥ್​​ ನನ್ನು ಕಟ್ಟಿ ಹಾಕಿ ಅಪಾರ್ಟ್​​ಮೆಂಟ್​ನ ನಿವಾಸಿಗಳು ಥಳಿಸಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಸರಗಳ್ಳತನ, ಮನಗಳವು ಮಾಡುತ್ತಿದ್ದ 6 ಆರೋಪಿಗಳ ಬಂಧನ

ಬೆಂಗಳೂರು: ಸರಗಳ್ಳತನ, ಮನೆಗಳ್ಳತನ ಮಾಡುತ್ತಿದ್ದ ಅಕಾಶ್, ನಾಗೇಶ್, ಪ್ರಸನ್ನ, ಪುನೀತ್, ಶಿವಲಿಂಗ ಮತ್ತು ಪ್ರತಾಪ್​ನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರ ಬಳಿ ಇದ್ದ 10.82 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದ್ದು, ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಕುಶಾಲನಗರ: ಹಿಟ್ ಆ್ಯಂಡ್ ರನ್​ಗೆ ಬಿಜೆಪಿ ಕಾರ್ಯಕರ್ತ ಬಲಿ, ಒಬ್ಬನ ಬಂಧನ

ಹಲವು ವರ್ಷಗಳಿಂದ ತಲೆಮರಿಸಿಕೊಂಡಿದ್ದ ಐವರು ರೌಡಿಗಳನ್ನು ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಕೊಲೆ ಯತ್ನ, ಹಲ್ಲೆ ಸೇರಿ ಹಲವಾರು ಪ್ರಕಾರಣದಲ್ಲಿ ಆರೋಪಿಗಳು ಭಾಗಿಯಾಗಿದ್ದರು. ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರಿಸಿಕೊಂಡಿದ್ದರು.

ಇದನ್ನೂ ಓದಿ: ಗದಗ ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿದಂತೆ ಒಂದೇ ಕುಟುಂಬದ ನಾಲ್ವರ ಕೊಲೆ

ಸಿದ್ದಾಪುರ ಪೊಲೀಸರಿಂದ ಮಂಜುನಾಥ್ ಅಲಿಯಾಸ್ ಜಾನಿ, ಬನಶಂಕರಿ ಪೊಲೀಸರಿಂದ ಸೈಯದ್ ಅಲಿಯಾಸ್ ಸ್ಕೂಟರ್ ಜಾವಿದ್, ಸೈಯದ್ ಇಮ್ರಾನ್, ಬಲಿಂಗ್ ಅಲಿಯಾಸ್ ಅಸ್ಕರ್, ಮುಬಾರಕ್ ಅಲಿಯಾಸ್ ಬಾಬು, ಸೈಯದ್ ಅಲಿಯಾಸ್ ಕುರುಪಳ್ಳಿ ಬಂಧಿತರು. ಸದ್ಯ ಆರು ಜನರನ್ನು ನ್ಯಾಯಾಲಯದ ಮುಂದೆ ಪೊಲೀಸರು ಹಾಜರು ಪಡಿಸಿದ್ದಾರೆ.

ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ

ಬೆಂಗಳೂರಿನ ಹೊರಮಾವಿನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಕೊಲೆ ಮಾಡಿರುವಂತಹ ಘಟನೆ ನಡೆದಿದೆ. ಕೀರ್ತಿ ಅಲಿಯಾಸ್ ಕಿರಿಕ್ ಕೀರ್ತಿ (28) ಕೊಲೆಯಾದ ಯುವಕ. ಕೌಟುಂಬಿಕ‌ ಕಲಹದಿಂದ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ತಾಜಾ ಸುದ್ದಿ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ