AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿದ ಯುವಕನಿಗೆ ಥಳಿಸಿದ ಸ್ಥಳೀಯರು; ವಿಡಿಯೋ ವೈರಲ್

ಅಸಭ್ಯವಾಗಿ ವರ್ತಿಸಿದ ಯುವಕನ ಪ್ಯಾಂಟ್ ಬಿಚ್ಚಿ ಹೈವೆನಲ್ಲಿ ಮನಬಂದಂತೆ ಹಲ್ಲೆ ಮಾಡಿದ್ದಾರೆ. ಜಿಲ್ಲೆ ಜೇವರ್ಗಿ ತಾಲೂಕಿನ ಇಜೇರಿ ಬಳಿ ನಿನ್ನೆ (ಜೂನ್ 25) ಸಂಜೆ ಈ ಘಟನೆ ನಡೆದಿದೆ. ತಾಲೂಕಿನ ಹಾಲಬಾವಿ ಗ್ರಾಮದ ಮಲ್ಲಿಕಾರ್ಜುನ ಹಲ್ಲೆಗೊಳಗಾದ ಯುವಕ.

ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿದ ಯುವಕನಿಗೆ ಥಳಿಸಿದ ಸ್ಥಳೀಯರು; ವಿಡಿಯೋ ವೈರಲ್
ಯುವಕನಿಗೆ ಥಳಿಸಿದ ಸ್ಥಳೀಯರು
TV9 Web
| Edited By: sandhya thejappa|

Updated on: Jun 26, 2021 | 9:09 AM

Share

ಕಲಬುರಗಿ: ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪಕ್ಕೆ ಸಂಬಂಧಿಸಿ ಯುವಕನಿಗೆ ಸ್ಥಳೀಯರು ಹಿಗ್ಗಾಮುಗ್ಗ ಥಳಿಸಿದ್ದಾರೆ. ಜಿಲ್ಲೆಯ ಜೇವರ್ಗಿ ತಾಲೂಕಿನ ಇಜೇರಿ ಗ್ರಾಮದಲ್ಲಿ ಯುವಕನಿಗೆ ಹೊಡೆದಿದ್ದು, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಹನುಮಂತ ಎಂಬವವರ ತಾಯಿ ಜೊತೆ ಯುವಕನೊಬ್ಬ ಅಸಭ್ಯ ವರ್ತಿಸಿದ್ದ. ರೊಚ್ಚಿಗೆದ್ದ ಮಗ ಹನುಮಂತ ಮತ್ತು ಆತನ ಸ್ನೇಹಿತರು ಯುವನಿಗೆ ಹಲ್ಲೆ ಮಾಡಿದ್ದಾರೆ.

ಅಸಭ್ಯವಾಗಿ ವರ್ತಿಸಿದ ಯುವಕನ ಪ್ಯಾಂಟ್ ಬಿಚ್ಚಿ ಹೈವೆನಲ್ಲಿ ಮನಬಂದಂತೆ ಹಲ್ಲೆ ಮಾಡಿದ್ದಾರೆ. ಜಿಲ್ಲೆ ಜೇವರ್ಗಿ ತಾಲೂಕಿನ ಇಜೇರಿ ಬಳಿ ನಿನ್ನೆ (ಜೂನ್ 25) ಸಂಜೆ ಈ ಘಟನೆ ನಡೆದಿದೆ. ತಾಲೂಕಿನ ಹಾಲಬಾವಿ ಗ್ರಾಮದ ಮಲ್ಲಿಕಾರ್ಜುನ ಹಲ್ಲೆಗೊಳಗಾದ ಯುವಕ. ನಂತರ ಹಲ್ಲೆಗೊಳಗಾದ ಯುವಕನ ಸಂಬಂಧಿಕರು ಬಂದು ಹನುಮಂತ ಮತ್ತು ಆತನ ಸ್ನೇಹಿತರ ಮೇಲೆ ನಡೆಸಿದ್ದಾರೆ. ಸದ್ಯ ಅಸಭ್ಯವಾಗಿ ವರ್ತಿಸಿದ ಯುವಕನಿಗೆ ಜನರು ಹಿಗ್ಗಾಮುಗ್ಗ ಥಳಿಸಿದ್ದು, ಹಲ್ಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕೃಷಿ ಕೆಲಸಕ್ಕೆ ಹೋಗುತ್ತಿದ್ದ ಮಹಿಳೆಯರ ಜೊತೆ ಮಲ್ಲಿಕಾರ್ಜುನ ಅಸಭ್ಯವಾಗಿ ವರ್ತಿಸಿದ್ದನಂತೆ. ಈ ವಿಷಯ ತಿಳಿದ ಸ್ಥಳೀಯರು ಆತನಿಗೆ ಮನಸ್ಸಿಚ್ಚೆಯಂತೆ ಹೊಡೆದಿದ್ದಾರೆ. ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಎರಡೂ ಕಡೆಯವರು ದೂರನ್ನು ದಾಖಲಿಸಿದ್ದಾರೆ.

ಇದನ್ನೂ ಓದಿ

ಹಾಸನದಲ್ಲಿ ಬಾಲಕಿ ಜೊತೆ ಅಸಭ್ಯ ವರ್ತನೆ, ಸ್ಥಳೀಯರಿಂದ ಧರ್ಮದೇಟು

ಸ್ವಾತಂತ್ರ್ಯ ದಿನಾಚರಣೆಗೆ ಅಕ್ಷಯ್​ ಕುಮಾರ್​ ಕಡೆಯಿಂದ ಸಿಗಲಿದೆ ಗಿಫ್ಟ್​; ಲೀಕ್​ ಆಯ್ತು ಬಿಗ್​ ನ್ಯೂಸ್​

(Kalaburagi people beaten to Young Man for Misbehave with woman)

Follow Us
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!